Homeಮುಖಪುಟಪುಲ್ವಾಮ ದಾಳಿ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಗೌವರ್ನರ್ ಸತ್ಯಪಾಲ್ ಮಲಿಕ್‌ಗೆ ಸಿಬಿಐ ನೋಟಿಸ್

ಪುಲ್ವಾಮ ದಾಳಿ ಕುರಿತು ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಾಜಿ ಗೌವರ್ನರ್ ಸತ್ಯಪಾಲ್ ಮಲಿಕ್‌ಗೆ ಸಿಬಿಐ ನೋಟಿಸ್

- Advertisement -
- Advertisement -

ಮೋದಿ ಸರ್ಕಾರದ ಅಸಮರ್ಥತೆಯಿಂದ 2019ರ ಫೆಬ್ರವರಿಯಲ್ಲಿ ಪುಲ್ವಾಮ ದಾಳಿ ನಡೆದು 40 ಭಾರತೀಯ ಸೈನಿಕರು ಹುತಾತ್ಮರಾಗಬೇಕಾಯಿತು ಎಂದು ಸಂದರ್ಶನವೊಂದರಲ್ಲಿ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್‌ಗೆ ಇದೀಗ ಸಿಬಿಐ ನೋಟಿಸ್ ಜಾರಿ ಮಾಡಿದೆ.

ಕೈಗಾರಿಕೋದ್ಯಮಿ ಅನಿಲ್ ಅಂಬಾನಿ ಅವರ ರಿಲಯನ್ಸ್ ಜನರಲ್ ಇನ್ಶೂರೆನ್ಸ್ ಭ್ರಷ್ಟಾಚಾರ ಆರೋಪದ ಪ್ರಕರಣದಲ್ಲಿ ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಸತ್ಯಪಾಲ್ ಮಲಿಕ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ವಿಚಾರಣೆಗೆ ಕರೆದಿದೆ.

ಕೆಲವು ಸ್ಪಷ್ಟೀಕರಣಗಳಿಗಾಗಿ ಸಿಬಿಐ ನನ್ನನ್ನು ಕರೆದಿದೆ. ಅವರು ನನ್ನಿಂದ ಕೆಲವು ಸ್ಪಷ್ಟೀಕರಣಗಳನ್ನು ಬಯಸುತ್ತಿದ್ದಾರೆ ಹಾಗಾಗಿ ನನ್ನ ಉಪಸ್ಥಿತಿಯನ್ನು ಅವರು ಬಯಸುತ್ತಿದ್ದಾರೆ. ಆದರೆ ನಾನು ಈಗ ರಾಜಸ್ಥಾನಕ್ಕೆ ಹೋಗುತ್ತಿದ್ದೇನೆ ಹಾಗಾಗಿ ನಾನು ಅವರಿಗೆ ಏಪ್ರಿಲ್ 27 ರಿಂದ 29 ರವರೆಗೆ ದಿನಾಂಕಗಳನ್ನು ನೀಡಿದ್ದೇನೆ” ಎಂದು ಮಲಿಕ್ ಪಿಟಿಐಗೆ ತಿಳಿಸಿದ್ದಾರೆ.

ಮಲಿಕ್ ಅವರು 2018ರಲ್ಲಿ ಜಮ್ಮು ಮತ್ತು ಕಾಶ್ಮೀರದ ಗವರ್ನರ್ ಆಗಿದ್ದಾಗ ವಿಮಾ ಕಂಪನಿಯ ಒಪ್ಪಂದವನ್ನು ರದ್ದುಗೊಳಿಸಿದ್ದರು.

ಮಲಿಕ್ ಅವರು ಇತ್ತಿಚೆಗೆ ದಿ ವೈರ್ ಸಂದರ್ಶನದಲ್ಲಿ, ವಿಮಾ ಯೋಜನೆಯಲ್ಲಿ ವಂಚನೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಆ ನಂತರ ಸಿಬಿಐ ಕ್ರಮ ಬಂದಿತು. ಆಪಾದಿತ ಹಗರಣದ ಕುರಿತು ಅವರಿಂದ ಹೆಚ್ಚಿನ ಮಾಹಿತಿ ಪಡೆಯಲು ಸಿಬಿಐ ಬಯಸಿದೆ ಎಂದು ಮೂಲಗಳು ತಿಳಿಸಿವೆ.

ದಿ ವೈರ್ ಸಂದರ್ಶನದಲ್ಲಿ ಸತ್ಯಪಾಲ್ ಹೇಳಿದ್ದೇನು?

ಭ್ರಷ್ಟಾಚಾರದ ವಿಷಯದ ಕುರಿತು ಮಾತನಾಡಿದ ಅವರು, “ಹೈಡ್ರೋ ಎಲೆಕ್ಟ್ರಿಕ್ ಯೋಜನೆ ಮತ್ತು ರಿಲಯೆನ್ಸ್ ಇನ್ಸೂರೆನ್ಸ್ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿ ಆರ್‌ಎಸ್‌ಎಸ್‌ ಮುಖಂಡ ರಾಮ್ ಮಾಧವ್ ಬಂದಿದ್ದರು. ಆ ಯೋಜನೆಗಳಿಗೆ ಸಹಿ ಹಾಕಿದ್ದರೆ ನನಗೆ 300 ಕೋಟಿ ಸಿಗುತ್ತದೆ ಎಂದು ಜನ ಮಾತನಾಡುತ್ತಿದ್ದರು. ಆದರೆ ನಾನು ಆ ತಪ್ಪು ಕೆಲಸ ಮಾಡಲಿಲ್ಲ. ರಾಮ್ ಮಾಧವ್ ಎಷ್ಟೇ ಪ್ರಯತ್ನ ಪಟ್ಟರೂ ನಾನು ಆ ಯೋಜನೆಗಳನ್ನು ಜಾರಿಗೊಳಿಸಲಿಲ್ಲ ಎಂದಿದ್ದರು.

ಅದೇ ರೀತಿ ಗೋವಾದ ರಾಜ್ಯಪಾಲನಾಗಿದ್ದಾಗ ಅಲ್ಲಿನ ಭ್ರಷ್ಟಾಚಾರಗಳ ಕುರಿತು ಪ್ರಧಾನಿ ಮೋದಿಯವರಿಗೆ ದೂರು ನೀಡಿದ್ದೆ. ಅವುಗಳನ್ನು ಸರಿಪಡಿಸುವ ಬದಲು ನಿರ್ಲಕ್ಷ್ಯ ಮಾಡಿದ್ದಲ್ಲದೆ ನನ್ನನ್ನು ಗೋವಾದ ರಾಜ್ಯಪಾಲ ಸ್ಥಾನದಿಂದ ಕಿತ್ತು ಮೇಘಾಲಯಕ್ಕೆ ಕಳಿಸಿದರು. ಪ್ರಧಾನಿಯವರ ಸುತ್ತಲಿನ ಜನರು ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಮತ್ತು ಆಗಾಗ್ಗೆ ಪ್ರಧಾನಿ ಕಚೇರಿಯ ಹೆಸರನ್ನು ಬಳಸಿಕೊಳ್ಳುತ್ತಿದ್ದಾರೆ. ಇದೆಲ್ಲವನ್ನೂ ಮೋದಿಯವರ ಗಮನಕ್ಕೆ ತಂದಿದ್ದೇನೆ, ಆದರೆ ಪ್ರಧಾನಿ ಕಾಳಜಿ ತೋರುತ್ತಿಲ್ಲ. ಹಾಗಾಗಿ ನಾನು ಖಚಿತವಾಗಿ ಹೇಳಬಲ್ಲೆ ಭ್ರಷ್ಟಾಚಾರ ಕುರಿತು ನರೇಂದ್ರ ಮೋದಿಯವರಿಗೆ ಹೆಚ್ಚಿನ ದ್ವೇಷವಿಲ್ಲ ಎಂದು ಸತ್ಯಪಾಲ್ ಮಲಿಕ್ ಹೇಳಿದ್ದರು.

ಪುಲ್ವಾಮ ದಾಳಿ ಬಗ್ಗೆ ಸ್ಪೋಟಕ ಮಾಹಿತಿ ಬಿಚ್ಚಿಟ್ಟಿದ್ದ ಸತ್ಯಪಾಲ್

”ಪುಲ್ವಾಮಾದಲ್ಲಿ ಸಿಆರ್‌ಪಿಎಫ್ ಬೆಂಗಾವಲು ಪಡೆಯ ಮೇಲಿನ ದಾಳಿಯು ಭಾರತೀಯ ಗುಪ್ತಚರ ಇಲಾಖೆಯ ಬಹುದೊಡ್ಡ ವೈಫಲ್ಯ ಮತ್ತು ನಿರ್ದಿಷ್ಟವಾಗಿ ಗೃಹ ಸಚಿವಾಲಯದ ಅಸಮರ್ಥತೆಯ ಪರಿಣಾಮವಾಗಿದೆ. ಆಗ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು. ಸಿಆರ್‌ಪಿಎಫ್ ತನ್ನ ಜವಾನರನ್ನು ಸಾಗಿಸಲು ವಿಮಾನವನ್ನು ಕೇಳಿತ್ತು. ಆದರೆ ಕೇಂದ್ರ ಗೃಹ ಸಚಿವಾಲಯ ಅದನ್ನು ನಿರಾಕರಿಸಿತು” ಎಂದು ಮಲಿಕ್ ದೂರಿದ್ದಾರೆ.

ಸತ್ಯ ಪಾಲ್ ಮಲಿಕ್ ಪುಲ್ವಾಮ ದಾಳಿ ನಡೆದಾಗ ಮತ್ತು ಆರ್ಟಿಕಲ್ 370 ಅನ್ನು ಕಿತ್ತು ಹಾಕಿದ ಸಂದರ್ಭದಲ್ಲಿ ಜಮ್ಮು ಕಾಶ್ಮೀರದ ರಾಜ್ಯಪಾಲರಾಗಿದ್ದರು. ನಂತರ ಗೋವಾದ ರಾಜ್ಯಪಾಲರಾಗಿದ್ದ ಅವರು, ಆನಂತರ 2022ರವರೆಗೆ ಮೇಘಾಲಯದ ರಾಜ್ಯಪಾಲರಾಗಿದ್ದರು. ಮೋದಿ ಸರ್ಕಾರ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸಿದಾಗ ಅದನ್ನು ಕಟು ಶಬ್ದಗಳಲ್ಲಿ ಟೀಕಿಸಿದ್ದರು. ಅಲ್ಲದೇ ಆರ್‌ಎಸ್‌ಎಸ್‌ ಭಾರೀ ಭ್ರಷ್ಟಾಚಾರ ನಡೆಸುತ್ತದೆ ಎಂದು ಆರೋಪಿಸಿದ್ದರು

ದಾಳಿ ನಡೆದ ದಿನ ಸಂಜೆಯೇ ಪ್ರಧಾನಿ ಮೋದಿಯವರಿಗೆ ಈ ವೈಫಲ್ಯಗಳ ಬಗ್ಗೆ ತಿಳಿಸಿದೆ. ನಮ್ಮ ತಪ್ಪಿನಿಂದಾಗಿ 40 ಸೈನಿಕರು ಪ್ರಾಣ ಕಳೆದುಕೊಳ್ಳಬೇಕಾಯಿತು ಎಂದು ವಿವರಿಸಿದೆ. ಆದರೆ ಅವರು ಯಾರಿಗೂ ಹೇಳಬೇಡಿ, ಸುಮ್ಮನಿದ್ದುಬಿಡಿ ಎಂದರು. ಎನ್‌ಎಸ್‌ಎ ಅಜಿತ್ ದೋವಲ್ ಕೂಡ ನನ್ನ ಬಾಯಿ ಮುಚ್ಚಿಸಿದರು. ಆಗ ನನಗೆ ತಕ್ಷಣವೇ ಅರ್ಥವಾಯಿತು, ಅವರ ಉದ್ದೇಶ ಪಾಕಿಸ್ತಾನದ ಮೇಲೆ ದೋಷಾರೋಪ ಮಾಡಿ ಚುನಾವಣೆಯಲ್ಲಿ ಸರ್ಕಾರ ಮತ್ತು ಬಿಜೆಪಿಗೆ ಲಾಭ ಪಡೆಯುವುದಾಗಿತ್ತು ಎಂದು ಸತ್ಯಪಾಲ್ ಮಲಿಕ್ ಸಂದರ್ಶನದಲ್ಲಿ ಹೇಳಿದ್ದಾರೆ.

ಪುಲ್ವಾಮಾ ಘಟನೆಯಲ್ಲಿ 300 ಕೆಜಿ ಆರ್‌ಡಿಎಕ್ಸ್ ಸ್ಫೋಟಕಗಳನ್ನು ಹೊತ್ತ ಕಾರು ಪಾಕಿಸ್ತಾನದಿಂದ ಬಂದಿದ್ದು, ಜಮ್ಮು ಮತ್ತು ಕಾಶ್ಮೀರದ ರಸ್ತೆಗಳು ಮತ್ತು ಹಳ್ಳಿಗಳಲ್ಲಿ 10-15 ದಿನಗಳ ಕಾಲ ಯಾರಿಗೂ ಗೊತ್ತಾಗದಂತೆ ಮತ್ತು ಯಾರಿಗೂ ತಿಳಿಯದಂತೆ ಸಂಚರಿಸುತ್ತಿತ್ತು ಎಂದರೆ ಇದು ಗಂಭೀರ ಗುಪ್ತಚರ ವೈಫಲ್ಯ ಅಲ್ಲವೇ ಎಂದಿದ್ದಾರೆ.

ಭ್ರಷ್ಟಾಚಾರದ ವಿಷಯಕ ಕುರಿತು ಮಾತನಾಡಿದ ಅವರು, “ಹೈಡ್ರೋ ಎಲೆಕ್ಟ್ರಿಕ್ ಯೋಜನೆ ಮತ್ತು ರಿಲಯೆನ್ಸ್ ಇನ್ಸೂರೆನ್ಸ್ ಯೋಜನೆಗೆ ಅನುಮತಿ ಪಡೆಯಲು ಬಿಜೆಪಿ ಆರ್‌ಎಸ್‌ಎಸ್‌ ಮುಖಂಡ ರಾಮ್ ಮಾಧವ್ ಬಂದಿದ್ದರು. ಆ ಯೋಜನೆಗಳಿಗೆ ಸಹಿ ಹಾಕಿದ್ದರೆ ನನಗೆ 300 ಕೋಟಿ ಸಿಗುತ್ತದೆ ಎಂದು ಜನ ಮಾತನಾಡುತ್ತಿದ್ದರು. ಆದರೆ ನಾನು ಆ ತಪ್ಪು ಕೆಲಸ ಮಾಡಲಿಲ್ಲ. ರಾಮ್ ಮಾಧವ್ ಎಷ್ಟೇ ಪ್ರಯತ್ನ ಪಟ್ಟರೂ ನಾನು ಆ ಯೋಜನೆಗಳನ್ನು ಜಾರಿಗೊಳಿಸಲಿಲ್ಲ ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...