Homeಮುಖಪುಟವಾಟ್ಸ್‌ಅಪ್‌ ವಂಚನೆ ಜಾಲ: ನಾಲ್ವರು ಖದೀಮರು ಅರೆಸ್ಟ್‌

ವಾಟ್ಸ್‌ಅಪ್‌ ವಂಚನೆ ಜಾಲ: ನಾಲ್ವರು ಖದೀಮರು ಅರೆಸ್ಟ್‌

ಯೂಟ್ಯೂಬ್‌ ವಿಡಿಯೊ ಲೈಕ್ ಮಾಡಿದರೆ ದುಡ್ಡುಕೊಡುತ್ತೇವೆ ಎನ್ನುವ ಸಂದೇಶಗಳ ಕುರಿತು ಎಚ್ಚರವಿರಲಿ!

- Advertisement -
- Advertisement -

ಯೂಟ್ಯೂಬ್ ವಿಡಿಯೋಗಳನ್ನು ಲೈಕ್ ಮಾಡಿದರೆ ದುಡ್ದು ಕೊಡುತ್ತೇವೆ, ಹೂಡಿಕೆ ಮಾಡಿದರೆ ಹೆಚ್ಚಿನ ಆದಾಯ ಸಿಗುತ್ತದೆ ಎಂಬ ಭರವಸೆ ನೀಡಿ ವಾಟ್ಸ್‌ಅಪ್‌ ಮೂಲಕ ದೇಶಾದ್ಯಂತ ಜನರನ್ನು ವಂಚಿಸುತ್ತಿದ್ದ ಗ್ಯಾಂಗ್‌ನ ನಾಲ್ವರನ್ನು ಮುಂಬೈನ ಚುನಭಟ್ಟಿ ಪೊಲೀಸರು ಬಂಧಿಸಿದ್ದಾರೆ.

“ಅರೆಕಾಲಿಕ ಉದ್ಯೋಗದ ಆಫರ್‌ ಬಂದಿತ್ತು, ಯೂಟ್ಯೂಬ್ ವಿಡಿಯೊಗಳನ್ನು ಲೈಕ್‌ ಮಾಡಿದರೆ ಹಣ ಕೊಡುವುದಾಗಿ ಹೇಳಿದ್ದರು” ಎಂದು ಮಾರ್ಚ್‌ನಲ್ಲಿ ದಾಖಲಾದ ದೂರಿನಲ್ಲಿ ಮಹಿಳೆಯೊಬ್ಬರು ವಿವರಿಸಿದ್ದಾರೆ.

ಮೆಸೇಜ್‌ ಕಳಿಸಿದವರು ಈ ಮಹಿಳೆಗೆ ಟೆಲಿಗ್ರಾಮ್‌ ಗ್ರೂಪ್‌ಗೆ ಸೇರಿಕೊಳ್ಳಲು ಸೂಚಿಸಿದ್ದರು. ಜೊತೆಗೆ ಈ ಮಹಿಳೆಗೆ ಲಿಂಕ್‌ ಕಳುಹಿಸಿದ್ದರು. ಸದರಿ ಮಹಿಳೆಯು ಲಿಂಕ್ ಕ್ಲಿಕ್ ಮಾಡಿದಾಗ, ಅದು ಮತ್ತೊಂದು ವೆಬ್‌ಸೈಟ್‌ಗೆ ಕರೆದೊಯ್ಯಿತು. ಬ್ಯಾಂಕ್ ವಿವರಗಳನ್ನು ಮತ್ತು ಖಾತೆಗೆ ಲಿಂಕ್ ಮಾಡಲಾದ ಮೊಬೈಲ್ ಸಂಖ್ಯೆಯನ್ನು ನೀಡುವಂತೆ ಆ ವೆಬ್‌ಸೈಟ್‌ನಲ್ಲಿ ಸೂಚಿಸಲಾಗಿತ್ತು.

“ಮಹಿಳೆಗೆ ಕಳುಹಿಸಲಾದ ಯೂಟ್ಯೂಬ್ ವೀಡಿಯೊ ಲೈಕ್‌ ಮಾಡಿದ್ದಕ್ಕೆ ಪ್ರತಿ ಲೈಕ್‌ಗೆ 150 ರೂ. ನೀಡಲಾಯಿತು” ಎಂದು ವಲಯ 6ರ ಡಿಸಿಪಿ ಹೇಮರಾಜ್ ರಜಪೂತ್ ಮಾಹಿತಿ ನೀಡಿದ್ದಾರೆ.

“ನೀವು ರೂ. 1,300 ಗಳಿಸಿದ್ದೀರಿ. 7,500 ರೂ. ಹಣವನ್ನು ನಿಮ್ಮ ಬ್ಯಾಂಕ್ ಖಾತೆಗೆ ಡೆಬಿಟ್ ಮಾಡಲಾಗುತ್ತದೆ ಎಂಬ ಸಂದೇಶಗಳನ್ನು ಆರೋಪಿಗಳು ಕಳುಹಿಸಿದ್ದರು. ನಂತರ ಆರೋಪಿಗಳು ರೂ. 12,000 ನಂತರ 25,000 ಮತ್ತು ರೂ. 50,000 ಹೂಡಿಕೆ ಮಾಡಲು ಹೇಳಿದರು. ಹೆಚ್ಚಿನ ಆದಾಯದ ಭರವಸೆ ನೀಡಿದರು, ಆದರೆ ಮಹಿಳೆಯು 4.3 ಲಕ್ಷ ರೂ. ನಷ್ಟ ಅನುಭವಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಹೀಗೆಯೇ ಮೋಸಹೋದ ಇನ್ನು ಮೂವರನ್ನು ಚುನಭಟ್ಟಿ ಪೊಲೀಸ್ ಠಾಣೆಯ ಸೈಬರ್ ಸೆಲ್, ತನಿಖೆಯ ಸಮಯದಲ್ಲಿ ಪತ್ತೆ ಹಚ್ಚಿದೆ. ಘಾಟ್ಕೋಪರ್‌ನ ಪಂತ್ ನಗರ, ಮಾಟುಂಗಾ ಮತ್ತು ಚುನಾಭಟ್ಟಿಯಲ್ಲಿ ಮೋಸಹೋದ ವ್ಯಕ್ತಿಗಳನ್ನು ಗುರುತಿಸಲಾಗಿದೆ.

ಪೋನ್‌ ಕರೆಗಳ ವಿವರ, ಐಪಿ ವಿಳಾಸ ಮತ್ತು ಹಣವನ್ನು ವರ್ಗಾಯಿಸಿದ ಬ್ಯಾಂಕ್ ಖಾತೆಗಳ ವಿವರಗಳನ್ನು ಬೆನ್ನು ಹತ್ತಿದ ಪೊಲೀಸರು, ಪಿಯೂಸ್ ಸೋನಿ, ರಾಜ್‌ಕುಮಾರ್ ಸೋನಿ, ಅರ್ಜುನ್ ಸೋನಿ ಮತ್ತು 17 ವರ್ಷದ ಯುವಕನನ್ನು ರಾಜಸ್ಥಾನದ ಅಲ್ವಾರ್‌ನಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. 30 ಫೋನುಗಳು ಮತ್ತು 30 ಸಿಮ್ ಕಾರ್ಡ್‌ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 97 ಲಕ್ಷ ರೂ.ಗಳೊಂದಿಗೆ 24 ಬ್ಯಾಂಕ್ ಖಾತೆಗಳನ್ನು ಸ್ಥಗಿತಗೊಳಿಸಿದ್ದಾರೆ.

ವಾಟ್ಸ್‌ಅಪ್‌ ಮೂಲಕ ಹೇಗೆ ವಂಚಿಸುತ್ತಾರೆ?

ಸಾಮಾಜಿಕ ಮಾಧ್ಯಮಗಳನ್ನು ಬಳಸಿ ವಂಚನೆ ಮಾಡುವವರ ಸಂಖ್ಯೆಗೇನೂ ಕಡಿಮೆಯಿಲ್ಲ. ಈ ವಂಚನೆಯ ಜಾಲಗಳು ಕಾಲಕಾಲಕ್ಕೆ ಹೊಸ ಹೊಸ ರೂಪದಲ್ಲಿ ಬರುತ್ತವೆ. ಈಗ ಯೂಟ್ಯೂಬ್‌ ವಿಡಿಯೊ ಲೈಕ್ ಮಾಡಿದರೆ ಹಣ ನೀಡುತ್ತೇವೆ ಎಂಬ ಆಮಿಷದೊಂದಿಗೆ ವಂಚನೆಯ ಜಾಲ ಹಬ್ಬುತ್ತಿದೆ.

ಉದ್ಯೋಗ ಕಡಿತದಿಂದಲೋ ಅಥವಾ ಉದ್ಯೋಗವಕಾಶಗಳಿಲ್ಲದೆಯೋ ತೊಂದರೆ ಸಿಲುಕಿರುವವರು ಈ ವಂಚನೆಗೆ ಬಲಿಯಾಗುತ್ತಿದ್ದಾರೆ. ಯೂಟ್ಯೂಬ್‌ನಲ್ಲಿ ವಿಡಿಯೊವನ್ನು ಲೈಕ್ ಮಾಡಿದರೆ, ತಲಾ ಒಂದು ಲೈಕ್‌ಗೆ 50 ರೂಪಾಯಿ ನೀಡುತ್ತೇವೆ ಎಂಬ ಆಮಿಷದೊಂದಿಗೆ ಸ್ಕ್ಯಾಮರ್‌ಗಳು (ವಂಚಕರು) ನಿಮ್ಮನ್ನು ಸಂಪರ್ಕಿಸುತ್ತಾರೆ, ಈ ಕುರಿತು ಎಚ್ಚರ ವಹಿಸಬೇಕಿದೆ. ಇಲ್ಲವಾದರೆ ನಿಮ್ಮ ಬ್ಯಾಂಕ್ ಬ್ಯಾಲೆನ್ಸ್‌ ಗೋತಾ ಹೊಡೆಯುವ ಸಾಧ್ಯತೆ ಹೆಚ್ಚಿದೆ. ಈ ಕುರಿತು ‘ದಿ ಎಕನಾಮಿಕ್ ಟೈಮ್ಸ್‌’ ವರದಿ ಮಾಡಿದೆ.

ದಿನಕ್ಕೆ ರೂ. 5000ವರೆಗೆ ನೀವು ಗಳಿಸಬಹುದು ಎಂಬ ಆಮಿಷದೊಂದಿಗೆ ವಾಟ್ಸ್‌ಅಪ್‌, ಲಿಂಕ್ಡ್‌ಇನ್‌ ಮತ್ತು ಫೇಸ್‌ಬುಕ್‌ನಂತಹ ಸಾಮಾಜಿಕ ಮಾಧ್ಯಮಗಳ ಮೂಲಕ ವಂಚಕರು ನಿಮ್ಮನ್ನು ಸಂಪರ್ಕಿಸುತ್ತಾರೆ. ಪಾವತಿಯನ್ನು ಮುಂದುವರಿಸಲು, ಅವರು ಆಗಾಗ್ಗೆ ವೈಯಕ್ತಿಕ ಮಾಹಿತಿಯನ್ನು ನೀಡುವಂತೆ ಕೋರುತ್ತಾರೆ. ಸಾಂದರ್ಭಿಕವಾಗಿ ನಿಮ್ಮೊಂದಿಗೆ ವ್ಯವಹರಿಸುತ್ತಾ ಅಸ್ತಿತ್ವದಲ್ಲಿಯೇ ಇಲ್ಲದಿರುವ ಉದ್ಯೋಗಕ್ಕೆ ಪ್ರವೇಶ ಪಡೆಯುವಂತೆ ಅವರು ನಿಮ್ಮನ್ನು ಕಾಡಲಾರಂಭಿಸುತ್ತಾರೆ.

ಈ ವಂಚಕರು ಹೇಗೆ ಕಾರ್ಯನಿರ್ವಹಿಸುತ್ತಾರೆ?

ಕೆಲವೇ ಕೆಲವರಿಗೆ ಉದ್ಯೋಗವಕಾಶಗಳಿವೆ ಎಂಬ ಮಾಹಿತಿಯೊಂದಿಗೆ ವಂಚಕರು ನಿಮಗೆ ಸಂದೇಶ ಕಳುಹಿಸುವ ಮೂಲಕ ಸಂಪರ್ಕ ಸಾಧಿಸುತ್ತಾರೆ. ನಿಮ್ಮ ಉದ್ಯೋಗವನ್ನು ಕಾಯ್ದಿರಿಸಲು ನೀವು ಪ್ರತಿಕ್ರಿಯಿಸಬೇಕಾಗುತ್ತದೆ.

ಬಲಿಪಶುವಾಗಲಿರುವ ವ್ಯಕ್ತಿ, “ಏನು ಕೆಲಸ?” ಎಂದು ಕೇಳಿದಾಗ, “ನೀವು ಇಲ್ಲಿ ಮಾಡಬೇಕಾಗಿರುವ ಕೆಲಸವಿಷ್ಟೇ. ಯೂಟ್ಯೂಬ್‌ನಲ್ಲಿ ವೀಡಿಯೊಗಳನ್ನು ಲೈಕ್ ಮಾಡಬೇಕು. ನೀವು ಲೈಕ್ ಮಾಡಿದ ಪ್ರತಿ ವಿಡಿಯೊಗೆ ರೂ. ಐವತ್ತು ರೂಪಾಯಿ ಪಾವತಿಸುತ್ತೇವೆ” ಎಂದು ವಂಚಕರು ತಿಳಿಸುತ್ತಾರೆ.

ಈ ಮಾದರಿಯಲ್ಲಿ ನಿಮಗೆ ಸಂದೇಶ ಬರುತ್ತವೆ

ನಕಲಿ ಖಾತೆಗಳ ಮೂಲಕ ಬೋಟ್ ಫಾರ್ಮ್‌ಗಳನ್ನು ಬಳಸಿಕೊಂಡು ನಕಲಿ ಯೂಟ್ಯೂಬ್‌ ಲೈಕ್‌ಗಳನ್ನು ಸೃಷ್ಟಿಸುವುದು ಈ ವಂಚಕರ ವ್ಯವಹಾರ ಮಾದರಿಯಾಗಿದೆ. ಆದರೆ, ಈ ಮಾಹಿತಿಯ ಕೊರತೆಯಿಂದ ಜನರು ತೊಂದರೆಗೆ ಸಿಲುಕಿಕೊಳ್ಳುತ್ತಾರೆ.

ಜಾಗತಿಕ ಸಾಮಾಜಿಕ ಮಾಧ್ಯಮ ಅಥವಾ ಇಂಟರ್ನೆಟ್ ಕಂಪನಿಯಲ್ಲಿ ನಮ್ಮ ಕೆಲಸ ನಡೆಯುತ್ತಿದೆ ಎಂದು ನಿಮ್ಮನ್ನು ನಂಬಿಸಲು ಈ ವಂಚಕರು ಪ್ರಯತ್ನಿಸುತ್ತಾರೆ.

ಹೀಗೆ ನಿಮ್ಮನ್ನು ಸಂಪರ್ಕಿಸಿದವರು 150 ರೂಪಾಯಿಯಂತಹ ಸಣ್ಣ ಮೊತ್ತವನ್ನು ಮೊದಲು ನಿಮಗೆ ನೀಡುತ್ತಾರೆ. “ಮೂರು ಕಾರ್ಯಗಳನ್ನು ಪೂರ್ಣಗೊಳಿಸುವುದಕ್ಕಾಗಿ” ಈ ಹಣವನ್ನು ನಿಮಗೆ ಪಾವತಿಸಿರುತ್ತಾರೆ. ಅವರು ನಿಮಗೆ ಮೂರು ಯೂಟ್ಯೂಬ್‌ ವೀಡಿಯೊಗಳ ಲಿಂಕ್‌ಗಳನ್ನು ಕಳುಹಿಸುತ್ತಾರೆ, ಅವುಗಳನ್ನು ಲೈಕ್‌ ಮಾಡುವಂತೆ ಕೇಳುತ್ತಾರೆ. ನಂತರ ನೀವು ಲೈಕ್‌ ಮಾಡಿರುವ ಸಾಕ್ಷಿಗಾಗಿ ಸ್ಕ್ರೀನ್‌ಶಾಟ್ ಕಳುಹಿಸುವಂತೆ ತಿಳಿಸುತ್ತಾರೆ.

ಈ ಸ್ಕ್ಯಾಮ್‌ ನಂತರದಲ್ಲಿ ಎರಡನೇ ಹಂತಕ್ಕೆ ಹೋಗುತ್ತದೆ. ಇಲ್ಲಿಂದ ನೀವು ತೊಂದರೆ ಸಿಲುಕಿಕೊಳ್ಳಲು ಆರಂಭಿಸುತ್ತೀರಿ. “ನಿಮಗೆ ಹಣ ವರ್ಗಾವಣೆ ಮಾಡಲು ತೊಂದರೆಯಾಗುತ್ತಿದೆ” ಎಂಬ ಉತ್ತರವನ್ನು ಅವರು ನೀಡುತ್ತಾರೆ. ನಿಮಗೆ ಹಣ ವರ್ಗಾಯಿಸಲು ಸುಲಭವಾಗುವಂತೆ ಅಪ್ಲಿಕೇಷನ್‌ ಒಂದನ್ನು ಡೌನ್‌ಲೋಡ್ ಮಾಡಿಕೊಳ್ಳಲು ನಿಮ್ಮಲ್ಲಿ ತಿಳಿಸುತ್ತಾರೆ.

ಈ ಅಪ್ಲಿಕೇಷನ್‌ ಇದೆಯಲ್ಲ- ಅದರ ಮೂಲಕ ನಿಮ್ಮ ಮೊಬೈಲ್‌ ಅಥವಾ ಇನ್ನ್ಯಾವುದೇ ಡಿವೈಸ್‌ ಒಳಗೆ ಈ ವಂಚಕರು ಸುಲಭವಾಗಿ ಪ್ರವೇಶಿಸುತ್ತಾರೆ. ಇದು ಒಂದು ರೀತಿಯಲ್ಲಿ ಮಾಲ್‌ವೇರ್‌ ಸಾಫ್ಟ್‌ವೇರ್‌ ಆಗಿದೆ. ನಿಮಗೆ ಹಣವನ್ನು ಪಾವತಿಸುವ ಕನ್ಫರ್ಮೇಷನ್‌ಗಾಗಿ ಒಂದು ರೂಪಾಯಿ ಕಳಿಹಿಸಲು ಸೂಚಿಸುತ್ತಾರೆ. ಈ ಹಣ ಪಡೆಯುವುದು ಪರಿಶೀಲನೆಗಾಗಿಯಷ್ಟೇ ಎಂದು ನಂಬಿಸುತ್ತಾರೆ. ನೀವಿಷ್ಟು ಮಾಡಿದರೆ ಸಾಕು, ನಿಮ್ಮ ಒಟಿಪಿಗಳಿಗೆ, ಇಮೇಲ್‌ಗೆ, ಬ್ಯಾಂಕ್‌ ಖಾತೆ ಮತ್ತು ಕ್ರೆಡಿಟ್ ಕಾರ್ಡ್‌ಗೆ ಸಂಪೂರ್ಣವಾಗಿ ಪ್ರವೇಶವನ್ನು ಅವರು ಪಡೆಯುತ್ತಾರೆ. ನಿಮ್ಮ ಖಾತೆಯಲ್ಲಿರುವ ಹಣವೆಲ್ಲ ಖೋತಾ ಹೊಡೆಯುತ್ತದೆ.

ಇದನ್ನೂ ಓದಿರಿ: ‘ಎದ್ದೇಳು ಕರ್ನಾಟಕ’ ಅಭಿಯಾನಕ್ಕೆ ಕರೆ; ವಾಟ್ಸ್‌ಅಪ್‌ ಮೂಲಕ ಸಂಪರ್ಕಿಸಲು ಮನವಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...