Homeಮುಖಪುಟಐಐಟಿ ಮದ್ರಾಸ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆ*ಹತ್ಯೆ; ವರ್ಷದಲ್ಲಿ ನಾಲ್ಕನೇ ಪ್ರಕರಣ

ಐಐಟಿ ಮದ್ರಾಸ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆ*ಹತ್ಯೆ; ವರ್ಷದಲ್ಲಿ ನಾಲ್ಕನೇ ಪ್ರಕರಣ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮದ್ರಾಸ್‌ನಲ್ಲಿ ಪದವಿಪೂರ್ವ ವಿದ್ಯಾರ್ಥಿಯೊಬ್ಬ ಶುಕ್ರವಾರ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಫೆಬ್ರವರಿಯಿಂದ ಇಲ್ಲಿಯವರೆಗೆ ಸದರಿ ಸಂಸ್ಥೆಯಲ್ಲಿ ಘಟಿಸಿರುವ ನಾಲ್ಕನೇ ಪ್ರಕರಣ ಇದಾಗಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ಮಾಹಿತಿ ವರದಿ ದಾಖಲಿಸಿಕೊಂಡಿದ್ದು, ಡೆತ್‌ನೋಟ್‌ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಹಿಂದಿನ ಮೂರು ಪ್ರಕರಣಗಳಲ್ಲಿಯೂ ಸಹ ವಿದ್ಯಾರ್ಥಿಗಳು ಡೆತ್‌ನೋಟ್‌ಗಳನ್ನು ಬಿಟ್ಟು ಹೋಗಿದ್ದಾರೆ” ಎಂದು ತನಿಖಾಧಿಕಾರಿಯೊಬ್ಬರು ‘ಹಿಂದೂಸ್ತಾನ್ ಟೈಮ್ಸ್‌’ಗೆ ತಿಳಿಸಿದ್ದಾರೆ.

ಈ ವರ್ಷ ಐಐಟಿ-ಮದ್ರಾಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ನಾಲ್ಕನೇ ವಿದ್ಯಾರ್ಥಿ ಪ್ರಕರಣ ಇದಾಗಿದೆ. 2018ರಿಂದ 11 ಪ್ರಕರಣಗಳು ಇಲ್ಲಿ ಘಟಿಸಿವೆ. ಮಾರ್ಚ್ 31ರಂದು ಸಂಶೋಧನಾ ವಿದ್ಯಾರ್ಥಿ ಸಚಿನ್ ಕುಮಾರ್ ಜೈನ್ ಅವರು ತಮ್ಮ ವಾಟ್ಸ್‌ಅಪ್‌ನಲ್ಲಿ “ನನ್ನನ್ನು ಕ್ಷಮಿಸಿ, ಸರಿಯಾಗಿಲ್ಲ. ಸಾಕು” ಎಂದು ಅಪ್‌ಡೇಟ್‌ ಮಾಡಿ ಸಾವಿಗೆ ಶರಣಾಗಿದ್ದರು.

ಮಾರ್ಚ್ 14 ರಂದು ಇನ್ಸ್‌ಟಿಟ್ಯೂಟ್‌ನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಫೆಬ್ರವರಿ 13ರಂದು, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ತನ್ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದನು.

ಐಐಟಿ-ಮದ್ರಾಸ್ ಶುಕ್ರವಾರ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ವಿದ್ಯಾರ್ಥಿಯು ತನ್ನ ಹಾಸ್ಟೆಲ್ ಕೋಣೆಯಲ್ಲಿ ಮಧ್ಯಾಹ್ನ ನಿಧನರಾಗಿದ್ದಾರೆಂದು ಹಂಚಿಕೊಳ್ಳಲು ದುಃಖವಾಗುತ್ತಿದೆ” ಎಂದಿದೆ.

“ಸಂಸ್ಥೆಯು ತನ್ನದೇ ಆದ ಒಬ್ಬರನ್ನು ಕಳೆದುಕೊಂಡಿದೆ ಮತ್ತು ವೃತ್ತಿಪರ ಸಮುದಾಯವು ಉತ್ತಮ ವಿದ್ಯಾರ್ಥಿಯನ್ನು ಕಳೆದುಕೊಂಡಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ತಿಳಿಸಿದೆ.

“ಪೋಷಕರಿಗೆ ಮಾಹಿತಿ ನೀಡಲಾಗಿದೆ. ಐಐಟಿ ಮದ್ರಾಸ್, ಒತ್ತಡದಲ್ಲಿರುವ ವಿದ್ಯಾರ್ಥಿಗಳನ್ನು ಪೂರ್ವಭಾವಿಯಾಗಿ ಗುರುತಿಸಲು ಮತ್ತು ಸಹಾಯ ಮಾಡಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ನಾವು ಈ ಕ್ರಮಗಳನ್ನು ಹೆಚ್ಚಿಸಲು ಮುಂದಾಗಿದ್ದೇವೆ” ಎಂದು ಹೇಳಿದೆ.

ಸಂಸ್ಥೆಯು ‘ಹ್ಯಾಪಿನೆಸ್‌ ವೆಬ್‌ಸೈಟ್’ ಅನ್ನು ಪ್ರಾರಂಭಿಸಿದೆ ಮತ್ತು ವಿದ್ಯಾರ್ಥಿಗಳ ಕ್ಷೇಮವನ್ನು ವಿಚಾರಿಸುತ್ತಿದೆ ಎಂದು ಐಐಟಿ-ಎಂ ನಿರ್ದೇಶಕ ವಿ ಕಾಮಕೋಟಿ ಹೇಳಿದ ಒಂದು ದಿನದ ನಂತರ ಈ ಘಟನೆ ನಡೆದಿದೆ.

“ಕೋವಿಡ್ -19ರ ನಂತರ ಕ್ಯಾಂಪಸ್ ಅನ್ನು ಪುನಾರಂಭಿಸಿದಾಗ, ನಮಗೆ ನಾವು ಊಹಿಸಲಾಧ್ಯವಾದಂತಹ ಸಂಖ್ಯೆಯ ದುರದೃಷ್ಟಕರ ಘಟನೆಗಳು ಎದುರಾಗಿವೆ” ಎಂದು ಐಐಟಿ-ಮದ್ರಾಸ್‌ನ 64ನೇ ಇನ್‌ಸ್ಟಿಟ್ಯೂಟ್‌ ದಿನದಂದು ಕಾಮಕೋಟಿ ಹೇಳಿದ್ದರು.

“ವಿದ್ಯಾರ್ಥಿಗಳನ್ನು, ವಿಶೇಷವಾಗಿ ಖಿನ್ನತೆಗೆ ಒಳಗಾದ ಅಥವಾ ಒತ್ತಡಕ್ಕೊಳಗಾದವರನ್ನು ಮೇಲ್ವಿಚಾರಣೆ ಮಾಡಲು ವ್ಯವಸ್ಥೆಯನ್ನು ರೂಪಿಸಬೇಕು. ಈ ವಿಚಾರವಾಗಿ ಶಿಕ್ಷಣ ಸಚಿವಾಲಯ ಕ್ರಮ ವಹಿಸುವಲ್ಲಿ ವಿಫಲವಾಗಿದೆ” ಎಂದು ಹಲವಾರು ಐಐಟಿ ಹಳೆಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...