Homeಮುಖಪುಟಐಐಟಿ ಮದ್ರಾಸ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆ*ಹತ್ಯೆ; ವರ್ಷದಲ್ಲಿ ನಾಲ್ಕನೇ ಪ್ರಕರಣ

ಐಐಟಿ ಮದ್ರಾಸ್‌ನಲ್ಲಿ ಮತ್ತೊಬ್ಬ ವಿದ್ಯಾರ್ಥಿ ಆ*ಹತ್ಯೆ; ವರ್ಷದಲ್ಲಿ ನಾಲ್ಕನೇ ಪ್ರಕರಣ

- Advertisement -
- Advertisement -

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಐಐಟಿ) ಮದ್ರಾಸ್‌ನಲ್ಲಿ ಪದವಿಪೂರ್ವ ವಿದ್ಯಾರ್ಥಿಯೊಬ್ಬ ಶುಕ್ರವಾರ ತನ್ನ ಹಾಸ್ಟೆಲ್ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ಫೆಬ್ರವರಿಯಿಂದ ಇಲ್ಲಿಯವರೆಗೆ ಸದರಿ ಸಂಸ್ಥೆಯಲ್ಲಿ ಘಟಿಸಿರುವ ನಾಲ್ಕನೇ ಪ್ರಕರಣ ಇದಾಗಿದೆ ಎಂದು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಥಮ ಮಾಹಿತಿ ವರದಿ ದಾಖಲಿಸಿಕೊಂಡಿದ್ದು, ಡೆತ್‌ನೋಟ್‌ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

“ಹಿಂದಿನ ಮೂರು ಪ್ರಕರಣಗಳಲ್ಲಿಯೂ ಸಹ ವಿದ್ಯಾರ್ಥಿಗಳು ಡೆತ್‌ನೋಟ್‌ಗಳನ್ನು ಬಿಟ್ಟು ಹೋಗಿದ್ದಾರೆ” ಎಂದು ತನಿಖಾಧಿಕಾರಿಯೊಬ್ಬರು ‘ಹಿಂದೂಸ್ತಾನ್ ಟೈಮ್ಸ್‌’ಗೆ ತಿಳಿಸಿದ್ದಾರೆ.

ಈ ವರ್ಷ ಐಐಟಿ-ಮದ್ರಾಸ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ನಾಲ್ಕನೇ ವಿದ್ಯಾರ್ಥಿ ಪ್ರಕರಣ ಇದಾಗಿದೆ. 2018ರಿಂದ 11 ಪ್ರಕರಣಗಳು ಇಲ್ಲಿ ಘಟಿಸಿವೆ. ಮಾರ್ಚ್ 31ರಂದು ಸಂಶೋಧನಾ ವಿದ್ಯಾರ್ಥಿ ಸಚಿನ್ ಕುಮಾರ್ ಜೈನ್ ಅವರು ತಮ್ಮ ವಾಟ್ಸ್‌ಅಪ್‌ನಲ್ಲಿ “ನನ್ನನ್ನು ಕ್ಷಮಿಸಿ, ಸರಿಯಾಗಿಲ್ಲ. ಸಾಕು” ಎಂದು ಅಪ್‌ಡೇಟ್‌ ಮಾಡಿ ಸಾವಿಗೆ ಶರಣಾಗಿದ್ದರು.

ಮಾರ್ಚ್ 14 ರಂದು ಇನ್ಸ್‌ಟಿಟ್ಯೂಟ್‌ನಲ್ಲಿ ಮೂರನೇ ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದನು. ಫೆಬ್ರವರಿ 13ರಂದು, ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ವಿಭಾಗದ ಎರಡನೇ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿ ತನ್ನ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದನು.

ಐಐಟಿ-ಮದ್ರಾಸ್ ಶುಕ್ರವಾರ ತನ್ನ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, “ವಿದ್ಯಾರ್ಥಿಯು ತನ್ನ ಹಾಸ್ಟೆಲ್ ಕೋಣೆಯಲ್ಲಿ ಮಧ್ಯಾಹ್ನ ನಿಧನರಾಗಿದ್ದಾರೆಂದು ಹಂಚಿಕೊಳ್ಳಲು ದುಃಖವಾಗುತ್ತಿದೆ” ಎಂದಿದೆ.

“ಸಂಸ್ಥೆಯು ತನ್ನದೇ ಆದ ಒಬ್ಬರನ್ನು ಕಳೆದುಕೊಂಡಿದೆ ಮತ್ತು ವೃತ್ತಿಪರ ಸಮುದಾಯವು ಉತ್ತಮ ವಿದ್ಯಾರ್ಥಿಯನ್ನು ಕಳೆದುಕೊಂಡಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ” ಎಂದು ತಿಳಿಸಿದೆ.

“ಪೋಷಕರಿಗೆ ಮಾಹಿತಿ ನೀಡಲಾಗಿದೆ. ಐಐಟಿ ಮದ್ರಾಸ್, ಒತ್ತಡದಲ್ಲಿರುವ ವಿದ್ಯಾರ್ಥಿಗಳನ್ನು ಪೂರ್ವಭಾವಿಯಾಗಿ ಗುರುತಿಸಲು ಮತ್ತು ಸಹಾಯ ಮಾಡಲು ಸಾಧ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ನಾವು ಈ ಕ್ರಮಗಳನ್ನು ಹೆಚ್ಚಿಸಲು ಮುಂದಾಗಿದ್ದೇವೆ” ಎಂದು ಹೇಳಿದೆ.

ಸಂಸ್ಥೆಯು ‘ಹ್ಯಾಪಿನೆಸ್‌ ವೆಬ್‌ಸೈಟ್’ ಅನ್ನು ಪ್ರಾರಂಭಿಸಿದೆ ಮತ್ತು ವಿದ್ಯಾರ್ಥಿಗಳ ಕ್ಷೇಮವನ್ನು ವಿಚಾರಿಸುತ್ತಿದೆ ಎಂದು ಐಐಟಿ-ಎಂ ನಿರ್ದೇಶಕ ವಿ ಕಾಮಕೋಟಿ ಹೇಳಿದ ಒಂದು ದಿನದ ನಂತರ ಈ ಘಟನೆ ನಡೆದಿದೆ.

“ಕೋವಿಡ್ -19ರ ನಂತರ ಕ್ಯಾಂಪಸ್ ಅನ್ನು ಪುನಾರಂಭಿಸಿದಾಗ, ನಮಗೆ ನಾವು ಊಹಿಸಲಾಧ್ಯವಾದಂತಹ ಸಂಖ್ಯೆಯ ದುರದೃಷ್ಟಕರ ಘಟನೆಗಳು ಎದುರಾಗಿವೆ” ಎಂದು ಐಐಟಿ-ಮದ್ರಾಸ್‌ನ 64ನೇ ಇನ್‌ಸ್ಟಿಟ್ಯೂಟ್‌ ದಿನದಂದು ಕಾಮಕೋಟಿ ಹೇಳಿದ್ದರು.

“ವಿದ್ಯಾರ್ಥಿಗಳನ್ನು, ವಿಶೇಷವಾಗಿ ಖಿನ್ನತೆಗೆ ಒಳಗಾದ ಅಥವಾ ಒತ್ತಡಕ್ಕೊಳಗಾದವರನ್ನು ಮೇಲ್ವಿಚಾರಣೆ ಮಾಡಲು ವ್ಯವಸ್ಥೆಯನ್ನು ರೂಪಿಸಬೇಕು. ಈ ವಿಚಾರವಾಗಿ ಶಿಕ್ಷಣ ಸಚಿವಾಲಯ ಕ್ರಮ ವಹಿಸುವಲ್ಲಿ ವಿಫಲವಾಗಿದೆ” ಎಂದು ಹಲವಾರು ಐಐಟಿ ಹಳೆಯ ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ಐಐಟಿ ಬಾಂಬೆ ದಲಿತ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ; ಸಹಪಾಠಿಯ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...