Homeಮುಖಪುಟದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಕೈಬಿಟ್ಟ ಬಿಜೆಪಿ ಸರ್ಕಾರ

ದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಕೈಬಿಟ್ಟ ಬಿಜೆಪಿ ಸರ್ಕಾರ

ಬಿಜೆಪಿ ಸರ್ಕಾರದ ಈ ನಡೆಯಿಂದ ಸುಮಾರು 1000ಕ್ಕೂ ಹೆಚ್ಚು ಬಲಪಂಥೀಯ ಕಾರ್ಯಕರ್ತರು ಕಾನೂನಿನ ಕುಣಿಕೆಯಿಂದ ಪಾರಾಗಿದ್ದು, ಅವರಲ್ಲಿ ಕೆಲ ಬಿಜೆಪಿ ಸಂಸದರು ಮತ್ತು ಶಾಸಕರು ಸೇರಿದ್ದಾರೆ.

- Advertisement -
- Advertisement -

ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಈ ನಾಲ್ಕು ವರ್ಷಗಳಲ್ಲಿ ಏಳು ಪ್ರತ್ಯೇಕ ಆದೇಶಗಳ ಮೂಲಕ ದ್ವೇಷಭಾಷಣ, ಕೋಮು ಹಿಂಸೆ ಸೇರಿ 385 ಪ್ರಕರಣಗಳನ್ನು ಹಿಂಪಡೆದಿದೆ ಎಂದು ತಿಳಿದುಬಂದಿದೆ. ಅವುಗಳಲ್ಲಿ 182 ದ್ವೇಷ ಭಾಷಣ, ಕೋಮು ಹಿಂಸೆ, ಮತೀಯ ಗೂಂಡಾಗಿರಿ ಪ್ರಕರಣಗಳು ಸೇರಿರುವುದು ಆತಂಕಕ್ಕೆ ಎಡೆ ಮಾಡಿದೆ.

ಬಿ.ಎಸ್ ಯಡಿಯೂರಪ್ಪನವರು ಸಿ.ಎಂ ಆಗಿದ್ದ ಮತ್ತು ಬಸವರಾಜ ಬೊಮ್ಮಾಯಿ ಗೃಹ ಸಚಿವರಾಗಿದ್ದ ಫೆಬ್ರವರಿ 11, 2020ರಿಂದ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿರುವ, ಆರಗ ಜ್ಞಾನೇಂದ್ರ ಗೃಹ ಸಚಿವರಾಗಿರುವ ಫೆಬ್ರವರಿ 28, 2023ರ ನಡುವಿನ ಅವಧಿಯಲ್ಲಿ ಏಳು ಪತ್ಯೇಕ ಆದೇಶಗಳ ಮೂಲಕ 385 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂದು ಆರ್‌ಟಿಐ ಮಾಹಿತಿ ಆದರಿಸಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಬಿಜೆಪಿ ಸರ್ಕಾರದ ಈ ನಡೆಯಿಂದ ಸುಮಾರು 1000ಕ್ಕೂ ಹೆಚ್ಚು ಬಲಪಂಥೀಯ ಕಾರ್ಯಕರ್ತರು ಕಾನೂನಿನ ಕುಣಿಕೆಯಿಂದ ಪಾರಾಗಿದ್ದು, ಅವರಲ್ಲಿ ಕೆಲ ಬಿಜೆಪಿ ಸಂಸದರು ಮತ್ತು ಶಾಸಕರು ಸೇರಿದ್ದಾರೆ ಎನ್ನಲಾಗಿದೆ.

ಈ ರೀತಿ ಪ್ರಕರಣಗಳನ್ನು ವಾಪಸ್ ಪಡೆಯಬೇಕಾದರೆ ಗೃಹ ಸಚಿವರಿಂದ ಶಿಫಾರಸ್ಸಿನ ಮೇರೆಗೆ ರಾಜ್ಯ ಸಚಿವ ಸಂಪುಟ ಮತ್ತು ಸಚಿವ ಸಂಪುಟದ ಉಪ ಸಮಿತಿ ಅನುಮತಿ ನೀಡಬೇಕಿರುತ್ತದೆ. 2013 ರಿಂದ 2018ರ ಅವಧಿಯಲ್ಲಿ ದಾಖಲಾಗಿದ್ದ ಸುಮಾರು 182 ಕೋಮು ಹಿಂಸೆ ಪ್ರಕರಣಗಳನ್ನು ಬಿಜೆಪಿ ಸರ್ಕಾರ ಕೈಬಿಟ್ಟಿದೆ.

ಈಗ ಸರ್ಕಾರ ಕೈಬಿಟ್ಟಿರುವ ಪ್ರಕರಣಗಳಲ್ಲಿ ಸುಮಾರು 45 ಪ್ರಕರಣಗಳು ಉತ್ತರ ಕನ್ನಡ ಜಿಲ್ಲೆಗೆ ಸಂಬಂಧಿಸಿವೆ. ಪರೇಶ್ ಮೇಸ್ತಾ ಎಂಬ ಯುವಕನ ಸಾವಿನ ಸಂದರ್ಭದಲ್ಲಿ ಬಲಪಂಥೀಯ ಕಾರ್ಯಕರ್ತರು ಕೋಮು ಗಲಭೆಗಳನ್ನು ಹುಟ್ಟು ಹಾಕಿದ್ದರು. ಮುಸ್ಲಿಮರ ಅಂಗಡಿಗಳಿಗೆ ಬೆಂಕಿ ಹಚ್ಚುವುದು, ಲೂಟಿ ಮಾಡುವುದು ಸೇರಿ 45 ಪ್ರಕರಣಗಳಲ್ಲಿ 300 ಆರೋಪಿಗಳನ್ನು ಗುರುತಿಸಲಾಗಿತ್ತು. ಅದರಲ್ಲಿ 66 ಜನ ಕೊಲೆಯತ್ನದ ಪ್ರಕರಣ ಎದುರಿಸುತ್ತಿದ್ದರು. ಆದರೆ ನಂತರ ಪರೇಶ್ ಮೇಸ್ತನ ಕೊಲೆ ಆಕಸ್ಮಿಕ ಎಂದು ಸಿಬಿಐ ತನಿಖೆ ನಡೆಸಿ ವರದಿ ಸಲ್ಲಿಸಿತ್ತು. ಈಗ ಆ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗಿದೆ.

ಮೈಸೂರು ಸಂಸದ ಪ್ರತಾಪ್ ಸಿಂಹ ಮತ್ತು ಶಾಸಕ ಎಂ.ಪಿ ರೇಣುಕಾಚಾರ್ಯರವರ ಮೇಲಿನ ಪ್ರಕರಣಗಳನ್ನು ಸಹ ಕೈಬಿಡಲಾಗಿದೆ.

ಬಸವರಾಜ ಬೊಮ್ಮಾಯಿಯವರು ಗೃಹ ಸಚಿವರಾಗಿದ್ದ ವೇಳೆ ಆಗಸ್ಟ್ 13, 2020ರಂದು ಉಡುಪಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ “ಹಲವು ಗಲಭೆಗಳಲ್ಲಿ ಭಾಗಿಯಾಗಿ ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿರುವ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ ಎದುರು ನೋಡ್ರಿ ನಿಮ್ಮ ಮೇಲೆ ಯಾವುದೇ ಕೇಸು ಇದ್ದರೂ ತೆಗೆದು ಹಾಕುತ್ತೇವೆ” ಎಂದು ಹೇಳಿದ್ದರು. ಆ ವಿಡಿಯೋವನ್ನು ನಾನುಗೌರಿ.ಕಾಂ ಬಯಲಿಗೆಳೆದಿತ್ತು.

ಈ ವಿಡಿಯೋ ವೈರಲ್ ಆಗುತ್ತದ್ದಂತೆ ಯೂಟರ್ನ್ ಹೊಡೆದಿದ್ದ ಬೊಮ್ಮಾಯಿಯವರು, “ವಿಶ್ವ ಹಿಂದೂ ಪರಿಷತ್ ಮುಖಂಡರ ಮೇಲಿನ ಯಾವುದೇ ಕೇಸ್ ಇದ್ದರೂ ತೆಗೆದುಹಾಕ್ತೀವಿ ಎಂದು ನಾನು ಹೇಳಿಲ್ಲ. ಅವರು ಮನವಿ ಕೊಟ್ಟು ಅನ್ಯಾಯ ಸರಿಪಡಿಸಿ ಎಂದು ಹೇಳಿದ್ದಾರೆ. ಹಾಗಾಗಿ ಯಾರಿಗೆ ಅನ್ಯಾಯವಾದರೂ ಅದನ್ನು ಸರಿಪಡಿಸುವ ಕೆಲಸ ನನ್ನದು” ಎಂದಿದ್ದರು. ಆದರೆ ಈಗ ಆರ್‌ಟಿಐ ದಾಖಲೆಗಳ ಪ್ರಕಾರ ಬಲಪಂಥೀಯ ಕಾರ್ಯಕರ್ತರ ಮೇಲಿನ 385 ಪ್ರಕರಣಗಳನ್ನು ತೆಗೆದು ಹಾಕಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: ವಿವಾದಾತ್ಮಕ ವಿಡಿಯೋ: ಗಲಭೆಗಳಲ್ಲಿ ಭಾಗಿಯಾದ ಆರೋಪಿಗೆ ʼಎಲ್ಲಾ ಕೇಸು ತೆಗೆದು ಹಾಕುತ್ತೇವೆʼ ಎಂದ ಗೃಹ ಸಚಿವರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...