Homeಕರ್ನಾಟಕವಿಡಿಯೊ ತಿರುಚಲಾಗಿದೆ, ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿಲ್ಲ: ಸಿದ್ದರಾಮಯ್ಯ

ವಿಡಿಯೊ ತಿರುಚಲಾಗಿದೆ, ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿಲ್ಲ: ಸಿದ್ದರಾಮಯ್ಯ

- Advertisement -
- Advertisement -

“ಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ಪಷ್ಟಪಡಿಸಿದ್ದಾರೆ.

ವಿಡಿಯೊವೊಂದನ್ನು ಹಂಚಿಕೊಂಡಿರುವ ರಾಜ್ಯ ಬಿಜೆಪಿ, “ಈ ಹಿಂದೆ ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಯತ್ನಿಸಿದ ಸಿದ್ದರಾಮಯ್ಯ, ಈಗ ಆ ಸಮುದಾಯದವರೆಲ್ಲ ಭ್ರಷ್ಟರು, ರಾಜ್ಯವನ್ನು ಹಾಳುಗೆಡವುವವರು ಎಂಬ ಸಂವೇದನಾರಹಿತ ದ್ವೇಷಪೂರಿತ ಹೇಳಿಕೆ ನೀಡಿರುವುದು ಅಕ್ಷಮ್ಯ. ಜಗದ್ಗುರು ಬಸವಣ್ಣನ ಆದರ್ಶ ಪಾಲಿಸುವ 7 ಕೋಟಿ ಕನ್ನಡಿಗರು, ಅವರನ್ನು ಎಂದಿಗೂ ಕ್ಷಮಿಸುವುದಿಲ್ಲ” ಎಂದು ಆರೋಪಿಸಿದೆ.

ಇದಕ್ಕೆ ಸ್ಪಷ್ಟನೆಯನ್ನು ನೀಡಿರುವ ಸಿದ್ದರಾಮಯ್ಯನವರು, “ಚುನಾವಣಾ ಲಾಭ ಪಡೆಯುವ ಇಂಥ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ” ಎಂದು ಭರವಸೆ ವ್ಯಕ್ತಪಡಿಸಿದ್ದಾರೆ.

“ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸುವಾಗ ಬಿಜೆಪಿಯವರು ಲಿಂಗಾಯತ ಅಸ್ತ್ರವನ್ನು ಪ್ರಯೋಗ ಮಾಡುತ್ತಿದ್ದಾರೆ, ಬಸವರಾಜ ಬೊಮ್ಮಾಯಿ ಅವರೊಬ್ಬ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಯೇ ಇಲ್ಲ. ಅದೆಲ್ಲ ಬಿಜೆಪಿಯವರ ಸೃಷ್ಟಿಸಿದ ಸುಳ್ಳುಗಳಷ್ಟೆ” ಎಂದು ತಿಳಿಸಿದ್ದಾರೆ.

“ವೀರೇಂದ್ರ ಪಾಟೀಲರು, ನಿಜಲಿಂಗಪ್ಪನವರು, ಜೆ.ಹೆಚ್ ಪಟೇಲರು, ಬಿ.ಡಿ ಜತ್ತಿ, ಎಸ್.ಆರ್ ಕಂಠಿ ಇಂಥ ಅನೇಕ ಪ್ರಾಮಾಣಿಕ ಮುಖ್ಯಮಂತ್ರಿಗಳನ್ನು ಲಿಂಗಾಯತ ಸಮುದಾಯ ಈ ನಾಡಿಗೆ ನೀಡಿದೆ. ಈ ಎಲ್ಲಾ ನಾಯಕರ ಬಗೆಗೆ ನನಗೆ ವಿಶೇಷ ಪ್ರೀತಿ, ಅಭಿಮಾನವಿದೆ” ಎಂದು ಹೇಳಿದ್ದಾರೆ.

“ವೀರಶೈವ – ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಹೆಚ್ಚು ಟಿಕೇಟನ್ನು ಅವರಿಗೆ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಿದ್ದರೆ, ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52 – 53 ಕ್ಷೇತ್ರಗಳಲ್ಲಿ ಟಿಕೇಟ್ ನೀಡಿದ್ದೇವೆ” ಎಂದಿದ್ದಾರೆ.

“ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡುಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ಅದು ಅವರ ಪಕ್ಷದ ವಿಚಾರ. ಅದಕ್ಕೆ ನಮ್ಮ ತಕರಾರಿಲ್ಲ” ಎಂದು ಸ್ಪಷ್ಟನೆ ನೀಡಿದ್ದಾರೆ.

ಇದನ್ನೂ ಓದಿರಿ: ಸಿದ್ದರಾಮಯ್ಯನವರನ್ನು ಮುಗಿಸಲು ಹುನ್ನಾರ ನಡೆದಿದೆ: ಬೊಮ್ಮಾಯಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...