Homeಮುಖಪುಟಮಹಿಳೆ ಮೇಲೆ ಹಲ್ಲೆ, ಕಿರುಕುಳ ಆರೋಪ; ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಎಫ್‌ಐಆರ್‌

ಮಹಿಳೆ ಮೇಲೆ ಹಲ್ಲೆ, ಕಿರುಕುಳ ಆರೋಪ; ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ವಿರುದ್ಧ ಎಫ್‌ಐಆರ್‌

- Advertisement -
- Advertisement -

ಭಾರತೀಯ ಯುವ ಕಾಂಗ್ರೆಸ್ ಮುಖ್ಯಸ್ಥ ಬಿ.ವಿ.ಶ್ರೀನಿವಾಸ್ ಅವರು ಮಹಿಳೆ ಮೇಲೆ ಹಲ್ಲೆ ಮತ್ತು ಕಿರುಕುಳ ನೀಡಿದ್ದಾರೆಂಬ ಆರೋಪದ ಮೇಲೆ ಅಸ್ಸಾಂ ಪೊಲೀಸರು ಶನಿವಾರ ಪ್ರಕರಣ ದಾಖಲಿಸಿದ್ದಾರೆ.

ಅಸ್ಸಾಂ ರಾಜ್ಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಅಂಗಿತಾ ದತ್ತಾ ಅವರು ನೀಡಿದ ದೂರಿನ ಅನ್ವಯ ಎಫ್‌ಐಆರ್‌ ದಾಖಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

ಕಿರುಕುಳ, ಹಲ್ಲೆ ಮತ್ತು ಮಹಿಳೆಯ ನಮ್ರತೆಯನ್ನು ಆಕ್ರೋಶಗೊಳಿಸುವ ಉದ್ದೇಶದಿಂದ ಪದ ಬಳಕೆ ಅಥವಾ ಸನ್ನೆ ಮಾಡಿರುವ ಆರೋಪದ ಮೇಲೆ ಭಾರತೀಯ ದಂಡ ಸಂಹಿತೆಯ ಸೆಕ್ಷನ್‌ಗಳ ಅಡಿಯಲ್ಲಿ ದಿಸ್ಪುರ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

ಶ್ರೀನಿವಾಸ್ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯಿದೆಯ ಸೆಕ್ಷನ್ 67ರ ಅಡಿಯಲ್ಲಿಯೂ ಆರೋಪ ಮಾಡಲಾಗಿದೆ. ಎಲೆಕ್ಟ್ರಾನಿಕ್ ವಸ್ತುವಿನ ಮೂಲಕ ಅಶ್ಲೀಲ ಸಂಗತಿಯನ್ನು ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದನ್ನು ಈ ಸೆಕ್ಷನ್‌ ಶಿಕ್ಷಿಸುತ್ತದೆ.

“ಶ್ರೀನಿವಾಸ್ ನನಗೆ ಮಾನಸಿಕ ಕಿರುಕುಳ ನೀಡಿದ್ದಾರೆ, ಆರು ತಿಂಗಳ ಕಾಲ ನನ್ನ ವಿರುದ್ಧ ತಾರತಮ್ಯ ಎಸಗಿದ್ದಾರೆ. ನನಗೆ ಮೌನವಾಗಿರಲು ಹೇಳಲಾಯಿತು. ನನ್ನ ಆರೋಪಗಳ ಬಗ್ಗೆ ಯಾವುದೇ ತನಿಖೆಯನ್ನು ಪ್ರಾರಂಭಿಸಲಿಲ್ಲ” ಎಂದು ದತ್ತಾ ಏಪ್ರಿಲ್ 18 ರಂದು ದೂರಿದ್ದಾರೆ.

ಪಕ್ಷ ವಿರೋಧಿ ಚಟುವಟಿಕೆಗಳನ್ನು ನಡೆಸಲಾಗಿದೆ ಎಂದು ದತ್ತಾ ಅವರನ್ನು ಆರು ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾ ಮಾಡಲಾಯಿತು.

ಶ್ರೀನಿವಾಸ್ ಅವರು ಆರೋಪಗಳನ್ನು ನಿರಾಕರಿಸಿದ್ದಾರೆ. ಏಪ್ರಿಲ್ 18 ರಂದು ದತ್ತಾ ಅವರಿಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. “ನನ್ನ ವಿರುದ್ಧ ಸಂಪೂರ್ಣವಾಗಿ ಅಸಂಸದೀಯ, ಅಮಾನವೀಯ, ಮಾನಹಾನಿಕರ, ದುರುದ್ದೇಶಪೂರಿತ ಪದಗಳನ್ನು ದತ್ತಾ” ಬಳಸಿದ್ದಾರೆ ಎಂದು ಪ್ರತಿಕ್ರಿಯಿಸಿದ್ದಾರೆ.

“ನೀವು [ದತ್ತಾ] ಅಸ್ಸಾಂನ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೀರಿ ಮತ್ತು ಕಾಂಗ್ರೆಸ್ ಪಕ್ಷವನ್ನು ತೊರೆಯುವ ವಾತಾವರಣವನ್ನು ಸೃಷ್ಟಿಸಲು ನೀವು ಈ ಅಪಪ್ರಚಾರ, ಮಾನಹಾನಿ ಮಾಡುವ ಕಸರತ್ತನ್ನು ನಡೆಸುತ್ತಿದ್ದೀರಿ ಎಂದು ಖಚಿತವಾಗಿ ತಿಳಿದುಬಂದಿದೆ. ಬಿಜೆಪಿಗೆ ಸೇರಿಕೊಳ್ಳಿ” ಎಂದು ನೋಟಿಸ್‌ನಲ್ಲಿ ಸೂಚಿಸಲಾಗಿದೆ.

“ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ ಎಂದು ಹೇಳಿಕೊಳ್ಳುವವರು ನನ್ನ ಮನೆ ಮತ್ತು ಕಚೇರಿಯಲ್ಲಿ ಕ್ಲೋಸ್-ಸರ್ಕ್ಯೂಟ್ ಟೆಲಿವಿಷನ್ ದೃಶ್ಯಗಳನ್ನು ಪರಿಶೀಲಿಸಬೇಕು” ಎಂದು ದತ್ತಾ ಸವಾಲು ಹಾಕಿದ್ದಾರೆ.

“ಇದು ನನ್ನ ರಾಜಕೀಯ ಜೀವನದ ಅಂತ್ಯಕ್ಕೆ ಕಾರಣವಾಗಬಹುದು ಎಂದು ಪ್ರಾಮಾಣಿಕವಾಗಿ ನನಗೆ ತಿಳಿದಿದೆ” ಎಂದು ಅವರು ಟ್ವಿಟರ್‌ನಲ್ಲಿ ಬರೆದುಕೊಂಡಿದ್ದಾರೆ. “ಇದು ನಾನು ತೆರಬೇಕಾದ ದಂಡವಾಗಿದ್ದರೆ ಹಾಗೆಯೇ ಆಗಲಿ” ಎಂದು ತಿಳಿಸಿದ್ದಾರೆ.

ಉಚ್ಚಾಟನೆಯ ಬಗ್ಗೆ ಪ್ರತಿಕ್ರಿಯಿಸಿದ ಭಾರತೀಯ ಜನತಾ ಪಕ್ಷದ ನಾಯಕ ಅಮಿತ್ ಮಾಳವಿಯಾ, ಇದು ಕಾಂಗ್ರೆಸ್‌ನ ಮಹಿಳಾ ಸಬಲೀಕರಣದ ಮಾದರಿಗೆ ಉದಾಹರಣೆಯಾಗಿದೆ ಎಂದು ಟೀಕಿಸಿದ್ದಾರೆ.

ಕಿರುಕುಳ ಆರೋಪ ಮಾಡಿದ ಮಹಿಳೆಯ ಕುಂದುಕೊರತೆಗಳನ್ನು ಆಲಿಸಲು ವೇದಿಕೆ ಕಲ್ಪಿಸುವ ಬದಲು ಅವರನ್ನು ವಜಾಗೊಳಿಸಿದ್ದಾರೆ. ಅಂಕಿತಾ ದತ್ತಾ ಅವರನ್ನು ಕಾಂಗ್ರೆಸ್‌ನಿಂದ ತೆಗೆದುಹಾಕಿರುವ ರೀತಿ ಮಹಿಳೆಯರಿಗೆ ಸ್ಫೂರ್ತಿಯನ್ನು ತರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿರಿ: ವಿಡಿಯೊ ತಿರುಚಲಾಗಿದೆ, ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿಲ್ಲ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...