Homeಮುಖಪುಟಮಹಿಳೆಯರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ? ಇಲ್ಲಿದೆ ಡೀಟೈಲ್ಸ್

ಮಹಿಳೆಯರಿಗೆ ಟಿಕೆಟ್: ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ? ಇಲ್ಲಿದೆ ಡೀಟೈಲ್ಸ್

- Advertisement -
- Advertisement -

ಆಕಾಸದ ಅರ್ಧ ನಕ್ಷತ್ರಗಳು ನಾವು, ಸಿಡಿದರೆ ಬೆಂಕಿಯ ಕಿಡಿಗಳಾಗುವೆವು – ಇದು ಮಹಿಳಾ ಚಳವಳಿಯ ಜನಪ್ರಿಯ ಘೋಷಣೆ. ರಾಜ್ಯದ ಜನಸಂಖ್ಯೆಯಲ್ಲಿ ಅರ್ಧದಷ್ಟಿರುವ ಮಹಿಳೆಯರಿಗೆ ಯಾವ ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ ಎಂಬ ಅಂಕಿ ಅಂಶಗಳನ್ನು ನೋಡಿದರೆ ನಿರಾಸೆ ಕಾಡುತ್ತದೆ. ಏಕೆಂದರೆ ಮಹಿಳೆಯರಿಗೆ ಟಿಕೆಟ್ ನೀಡಲು ಮೂರು ಪ್ರಮುಖ ಪಕ್ಷಗಳು ಹಿಂದೇಟು ಹಾಕಿವೆ. ಇನ್ನು ಆಮ್ ಆದ್ಮಿ ಪಕ್ಷ 20 ಮಹಿಳೆಯರಿಗೆ ಟಿಕೆಟ್ ನೀಡುವ ಮೂಲಕ ಇರುವ ಪಕ್ಷಗಳಲ್ಲಿಯೇ ಉತ್ತರ ಸಾಧನೆ ಮಾಡಿದೆ. ಯಾವ್ಯಾವ ಪಕ್ಷಗಳು ಎಷ್ಟೆಷ್ಟು ಟಿಕೆಟ್ ನೀಡಿವೆ ಎಂಬುದರ ಡೀಟೈಲ್ಸ್ ಇಲ್ಲಿದೆ.

ಬಿಜೆಪಿ: 11

ಅಧಿಕಾರದಲ್ಲಿರುವ ಬಿಜೆಪಿ ಪಕ್ಷವು 224 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಅದರಲ್ಲಿ 11 ಮಹಿಳೆಯರಿಗೆ ಟಿಕೆಟ್ ನೀಡಿದೆ.

  1. ನಿಪ್ಪಾಣಿ: ಶಶಿಕಲಾ ಜೊಲ್ಲೆ
  2. ಸವದತ್ತಿ ಯಲ್ಲಮ್ಮ: ರತ್ನ ವಿಶ್ವನಾಥ್‌ ಮಾಮನಿ
  3. ಗುರುಮಠಕಲ್: ಲಲಿತಾ ಅನಾಪುರ್‌
  4. ಕೊಪ್ಪಳ: ಮಂಜುಳಾ ಅಮರೇಶ್‌ ಕರಡಿ
  5. ಕಾರವಾರ : ರೂಪಾಲಿ ನಾಯ್ಕ್‌
  6. ಹಿರಿಯೂರು: ಪೂರ್ಣಿಮಾ ಶ್ರೀನಿವಾಸ್‌
  7. ಕೆಜಿಎಫ್: ಅಶ್ವಿನಿ ಸಂಪಂಗಿ
  8. ಮಹದೇವಪುರ: ಮಂಜುಳಾ ಅರವಿಂದ್‌ ಲಿಂಬಾವಳಿ
  9. ನಾಗಮಂಗಲ: ಸುಧಾ ಶಿವರಾಮೇಗೌಡ
  10. ಪುತ್ತೂರು: ಆಶಾ ತಿಮ್ಮಪ್ಪ
  11. ಸುಳ್ಯ : ಭಾಗೀರಥಿ ಮುರುಳ್ಯ

ಕಾಂಗ್ರೆಸ್: 11

ಪ್ರತಿಪಕ್ಷ ಕಾಂಗ್ರೆಸ್ 223 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು ಅದರಲ್ಲಿ 11 ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡಿದೆ.

  1. ಬೆಳಗಾವಿ ಗ್ರಾಮೀಣ: ಲಕ್ಷ್ಮೀ ಹೆಬ್ಬಾಳ್ಕರ್
  2. ಬೆಳಗಾವಿ ದಕ್ಷಿಣ: ಪ್ರಭಾವತಿ ಮಾಸ್ತಮರ್ಡಿ
  3. ಖಾನಪುರ: ಅಂಜಲಿ ನಿಂಬಾಳ್ಕರ್
  4. ಗುಲ್ಬರ್ಗ ಉತ್ತರ: ಕನೀಝ್‌ ಪತಿಮಾ
  5. ದೇವದುರ್ಗ: ಶ್ರೀದೇವಿ ಆರ್.ನಾಯಕ್
  6. ಶಿರಹಟ್ಟಿ: ಸುಜಾತ ಎನ್ ದೊಡ್ಡಮನಿ
  7. ಕುಂದಗೋಳ: ಕುಸುಮವತಿ ಶಿವಳ್ಳಿ
  8. ಮೂಡಿಗೆರೆ: ನಯನ ಜ್ಯೋತಿ
  9. ಕೆಜಿಎಫ್: ರೂಪಕಲಾ ಎಂ.
  10. ರಾಜರಾಜೇಶ್ವರಿ ನಗರ: ಎಚ್.ಕುಸುಮಾ
  11. ಜಯನಗರ: ಸೌಮ್ಯ ರೆಡ್ಡಿ
Photo Courtesy: Feminism in India

ಜೆಡಿಎಸ್ – 13

ಮತ್ತೊಂದು ಪ್ರತಿಪಕ್ಷ ಜೆಡಿಎಸ್ 208 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 13 ಮಹಿಳೆಯರಿಗೆ ಟಿಕೆಟ್ ನೀಡಿದೆ.

  1. ಕಿತ್ತೂರು: ಅಶ್ವಿನಿ ಪೂಜೇರ್
  2. ಸಿಂದಗಿ: ವಿಶಾಲಾಕ್ಷಿ ಶಿವಾನಂದ
  3. ಆಳಂದ: ಮಹೇಶ್ವರಿ ವಾಲೆ
  4. ದೇವದುರ್ಗ: ಕರೆಮ್ಮಾ ಜಿ ನಾಯಕ್
  5. ಕಾರವಾರ: ಚೈತ್ರಾ ಕೋಟಕಾರ್
  6. ಬ್ಯಾಡಗಿ: ಸುನೀತಾ ಎಂ ಪೂಜಾರ್
  7. ಶಿವಮೊಗ್ಗ ಗ್ರಾಮೀಣ: ಶಾರಾದ ಪೂರ್ಯ ನಾಯಕ್
  8. ಭದ್ರಾವತಿ: ಶಾರದ ಅಪ್ಪಾಜಿಗೌಡ
  9. ಕಾಪು: ಸಬೀನಾ ಸಮದ್
  10. ಪುಲಿಕೇಶಿನಗರ: ಅನುರಾಧ
  11. ಮೂಡಬಿದರೆ: ಅಮರಶ್ರೀ
  12. ಮಂಗಳೂರು ನಗರ ದಕ್ಷಿಣ: ಸುಮತಿ ಹೆಗಡೆ
  13. ಪುತ್ತೂರು: ದಿವ್ಯಾಪ್ರಭಾ

ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು 199 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 13 ಮಹಿಳೆಯರಿಗೆ ಟಿಕೆಟ್ ನೀಡಿದೆ.

ಆಮ್ ಆದ್ಮಿ ಪಕ್ಷವು 212 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದು 20 ಮಹಿಳೆಯರಿಗೆ ಟಿಕೆಟ್ ನೀಡಿದೆ. ಆ ಮೂಲಕ ಅತಿ ಹೆಚ್ಚು ಮಹಿಳೆಯರಿಗೆ ಟಿಕೆಟ್ ನೀಡಿದ ಪಕ್ಷ ಎನಿಸಿಕೊಂಡಿದೆ.

ಇದನ್ನೂ ಓದಿ: ವರುಣಾ: ಸೋಮಣ್ಣನವರಿಗೆ ಘೇರಾವ್, ಸಿದ್ದರಾಮಯ್ಯನವರಿಗೆ ಜೈಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...