Homeಕರ್ನಾಟಕವೀಸಾ ರದ್ದು ಪ್ರಕರಣ: ಕೇಂದ್ರದ ಕ್ರಮಕ್ಕೆ ಹೈಕೋರ್ಟ್ ತಡೆ; ನಟ ಚೇತನ್‌ಗೆ ಬಿಗ್ ರಿಲೀಫ್

ವೀಸಾ ರದ್ದು ಪ್ರಕರಣ: ಕೇಂದ್ರದ ಕ್ರಮಕ್ಕೆ ಹೈಕೋರ್ಟ್ ತಡೆ; ನಟ ಚೇತನ್‌ಗೆ ಬಿಗ್ ರಿಲೀಫ್

- Advertisement -
- Advertisement -

ನಟ ಚೇತನ್​ ಅಹಿಂಸಾ ಇತ್ತಿಚೇಗೆ ಹಿಂದುತ್ವವಾದದ ಸುಳ್ಳುಗಳ ಬಗ್ಗೆ ಟ್ವೀಟ್ ಮಾಡಿ, ಜೈಲಿಗೆ ಹೋಗಿಬಂದಿದ್ದರು. ಇದಾದ ಕೆಲವೇ ದಿನಗಳಲ್ಲಿ ಚೇತನ್​ ಅವರ ಓವರ್ಸೀಸ್ ಸಿಟಿಜನ್ ಆಫ್ ಇಂಡಿಯಾ (ಒಸಿಐ) ಕಾರ್ಡ್ ಅನ್ನು ರದ್ದು ಮಾಡುವುದಾಗಿ ಕೇಂದ್ರ ಸರ್ಕಾರ ನೋಟಿಸ್​ ನೀಡಿತ್ತು. ಆದರೆ ಈಗ ಈ ವಿಚಾರದಲ್ಲಿ ಚೇತನ್​ ಅವರಿಗೆ ರಿಲೀಫ್​ ಸಿಕ್ಕಿದೆ.

ಕೇಂದ್ರದ ನೋಟಿಸ್ ವಿರುದ್ಧ ಚೇತನ್ ಅವರು, ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾ. ಎಂ. ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು, ”ಜೂನ್​ 2ರವರೆಗೆ ನಟ ಚೇತನ್ ವಿರುದ್ಧ ಕ್ರಮ ಬೇಡ ಎಂದು ಆದೇಶ ನೀಡಿದೆ.

ಕೇಂದ್ರ ಸರ್ಕಾರ ಚೇತನ್ ಅವರನ್ನು ಗಡಿಪಾರು ಮಾಡಲು ಮುಂದಾಗಿತ್ತು. 2018ರಲ್ಲಿ ಅವರಿಗೆ ಓವರ್ಸೀಸ್ ಸಿಟಿಜನ್ ಆಫ್ ಇಂಡಿಯಾ ಕಾರ್ಡ್ ನೀಡಲಾಗಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಅವರ ಸೋಶಿಯಲ್​ ಮೀಡಿಯಾ ಪೋಸ್ಟ್​ ಮತ್ತು ಸಾರ್ವಜನಿಕ ಹೇಳಿಕೆಗಳು ವಿವಾದ ಹುಟ್ಟುಹಾಕಿದ್ದರಿಂದ ಕೇಂದ್ರ ಸರ್ಕಾರವು ಒಸಿಐ ಮಾನ್ಯತೆ ರದ್ದು ಮಾಡಿತ್ತು. ಆದರೆ ಕೇಂದ್ರದ ಕ್ರಮಕ್ಕೆ ಇದೀಗ ಹೈಕೋರ್ಟ್​ ತಡೆ ನೀಡಿದೆ.

ಇದನ್ನೂ ಓದಿ: ನಟ ಚೇತನ್ ವೀಸಾ ರದ್ದು: ಸರ್ಕಾರದ ನಡೆ ವಿರುದ್ಧ ನಟ ಕಿಶೋರ್ ಪೋಸ್ಟ್

ಚೇತನ್‌ ಅವರ ಮೇಲೆ, ಸಮುದಾಯಗಳ ನಡುವೆ ದ್ವೇ‍ಷ ಮೂಡಿಸುವ ಯತ್ನ, ಭಾರತ ವಿರೋಧಿ ಚಟುವಟಿಕೆ ಮುಂತಾದ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ನೋಟಿಸ್ ನೀಡಿತ್ತು. ಆ ಬಳಿಕ ಚೇತನ್​ ಕೂಡ ಅವರ ಪ್ರಶ್ನೆಗಳಿಗೆ ಉತ್ತರ ನೀಡಿದ್ದರು. ಆದರೆ ಚೇತನ್ ನೀಡಿದ್ದ ಉತ್ತರ ಸಮಾಧಾನಕರವಾಗಿಲ್ಲ ಎಂಬ ಕಾರಣವನ್ನು ನೀಡಿ ಕೇಂದ್ರ ಸರ್ಕಾರವು ಒಸಿಐ ಕಾರ್ಡ್ ರದ್ದುಪಡಿಸಿತ್ತು.

ಚೇತನ್ ವಾದ ಆಲಿಸದೇ ಕ್ರಮ ಕೈಗೊಂಡಿದ್ದು ಸರಿಯಲ್ಲ ಎಂದು ಅವರ ಪರ ವಕೀಲರು ವಾದಿಸಿದ್ದಾರೆ. ಮತ್ತೊಂದೆಡೆ ಎಎಜಿ ಅರುಣ್ ಶ್ಯಾಮ್, ಎಎಸ್​​ಜಿ ಶಾಂತಿಭೂಷಣ್ ಅವರು, ”ಚೇತನ್​ ಅವರು ನ್ಯಾಯಾಂಗದ ವಿರುದ್ಧವೂ ಆಕ್ಷೇಪಾರ್ಹ ಹೇಳಿಕೆ ನೀಡಿರುವುದರಿಂದ ಕೇಂದ್ರದ ಕ್ರಮಕ್ಕೆ ತಡೆ ನೀಡಬಾರದು” ಎಂದು ವಾದ ಮಾಡಿದರು. ಆದರೆ ಅಂತಿಮವಾಗಿ ಚೇತನ್​ ಅವರಿಗೆ ನ್ಯಾಯಾಲಯ ಷರತ್ತು ಬದ್ಧ ರಿಲೀಫ್​ ನೀಡಿದೆ. ನ್ಯಾಯಾಂಗದ ಬಗ್ಗೆ ಚೇತನ್ ಟ್ವೀಟ್ ಮಾಡುವಂತಿಲ್ಲ. ವಿಚಾರಣೆಗೆ ಬಾಕಿಯಿರುವ ಕೇಸ್​​ಗಳ ಬಗ್ಗೆ ಕೂಡ ಅವರು ಪೋಸ್ಟ್ ಮಾಡುವಂತಿಲ್ಲ ಎಂದು ಷರತ್ತು ವಿಧಿಸಿ ಕೇಂದ್ರದ ಆದೇಶಕ್ಕೆ ತಡೆ ನೀಡಿ ಹೈಕೋರ್ಟ್​ ಆದೇಶ ಹೊರಡಿಸಿದೆ.

ಚೇತನ್ ಅಂಹಿಸಾ ಪರ ಪೋಸ್ಟ್ ಮಾಡಿದ್ದ ನಟ ಕಿಶೋರ್:

ನಟ ಕಿಶೋರ್ ತಮ್ಮ ಇನ್ ಸ್ಟಾಗ್ರಾಮ್‌ನಲ್ಲಿ ಧೀರ್ಘ ಬಹರದ ಪೋಸ್ಟ್ ಹಂಚಿಕೊಂಡಿದ್ದಾರೆ. ”ಹಿಂದುತ್ವ ಎನ್ನುವ ಪದ ವರ್ತಮಾನದ ರಾಜಕೀಯ ಪರಿಸ್ಥಿತಿಯಲ್ಲಿ ಹಿಂದೂ ಧರ್ಮ ಅಲ್ಲ. ನಿಜವಾದ ಹಿಂದೂ ಧರ್ಮ, ಸಕಲರನ್ನೂ ಒಳಗೊಂಡ ವಸುಧೆಯೇ ಒಂದು ಕುಟುಂಬವೆಂದು ನೋಡುವ ವಿಶಾಲ ಮನಸ್ಥಿತಿ ಇರುವಂತಹದ್ದು. ಆದರೆ ‘ಹಿಂದುತ್ವ’ ಎನ್ನುವ ಪದ ಬಳಕೆಯಾಗುತ್ತಿರುವುದು ಒಂದು ಪಕ್ಷದ, ಒಂದು ಸಂಘದ, ಅಧಿಕಾರಕ್ಕಾಗಿ ಒಡೆದಾಳುವ, ಪರದ್ವೇಷದ, ಮೂಲಭೂತವಾದಿ ವೈದಿಕ ಸಂಪ್ರದಾಯದ ಸಂಕುಚಿತ ಪರಿಕಲ್ಪನೆಯಾಗಿಯಷ್ಟೇ. ಹಾಗಾಗಿ ಈ ಜೀವ ವಿರೋಧಿ ರಾಜಕೀಯದ ಟೀಕೆಯಿಂದ ಹಿಂದೂಗಳಿಗೆಲ್ಲರಿಗೂ ಅಪಮಾನವಾಯಿತೇ ಎನ್ನುವುದು ಎಷ್ಟು ಉಚಿತ?? ಹಾಗೆ ಅವಮಾನ ಪಡಲೇಬೇಕೆಂದರೆ ವೈದಿಕ ಪರಂಪರೆ ಇಂದಿಗೂ ಪ್ರತಿಪಾದಿಸುತ್ತಿರುವ ನಮ್ಮಲ್ಲೇ ಇರುವ ಜಾತಿ ಪದ್ಧತಿ, ಅಸ್ಪೃಶ್ಯತೆ, ಲಿಂಗ ಬೇಧ ಇವುಗಳಿಂದಲ್ಲವೇ?. ಆ ನಿಟ್ಟಿನಲ್ಲಿ ನಮ್ಮನ್ನು ನಾವು ತಿದ್ದಿಕೊಂಡು ಹಿಂದೂ ಧರ್ಮವನ್ನು ಎಲ್ಲರಿಗೂ ಮಾದರಿಯಾಗಿಸಬೇಕಲ್ಲವೇ?. ನಮ್ಮ ತಪ್ಪುಗಳನ್ನು ಎತ್ತಿ ತೋರಿಸುವ ನಮ್ಮದೇ ಜನರನ್ನು ನಿಂದಿಸುವ, ಆರೋಪಿಸುವ, ಜೈಲಿಗೆ ಹಾಕುವ ಅಥವಾ ಗಡಿಪಾರು ಮಾಡುವ ಅತಿರೇಕಕ್ಕೆ ಹೋಗುವ ಬದಲು?” ಎಂದು ತಿಳಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗ್ರಾಮೀಣ ಭಾಗದ ಶಾಲಾ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ 7.5% ಮೀಸಲಾತಿ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಗ್ರಾಮೀಣ ಹಾಗೂ ಬಡ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ಕನಸಿಗೆ ಬಲ ತುಂಬುವ ನಿಟ್ಟಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಶೇಕಡಾ 7.5 ರಷ್ಟು ಮೀಸಲಾತಿ ಕಲ್ಪಿಸುವುದಾಗಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ಪಶ್ಚಿಮ ಬಂಗಾಳದ ಪ್ರವಾಸೋದ್ಯಮ ಜಾಹೀರಾತಿನಲ್ಲಿ ಐಫೆಲ್ ಟವರ್, ಈಜಿಪ್ಟ್ ಪಿರಮಿಡ್: ಆದರೆ ಬಂಗಾಳವೇ ನಾಪತ್ತೆ!

ಪಶ್ಚಿಮ ಬಂಗಾಳವನ್ನು ಜಾಗತಿಕ ಪ್ರವಾಸೋದ್ಯಮ ಭೂಪಟದಲ್ಲಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಿಡುಗಡೆ ಮಾಡಲಾದ ರಾಜ್ಯದ ಹೊಸ ಪ್ರವಾಸೋದ್ಯಮ ಜಾಹೀರಾತು ಈಗ ತೀವ್ರ ಟೀಕೆ ಹಾಗೂ ಅಪಹಾಸ್ಯಕ್ಕೆ ಈಡಾಗಿದೆ. ಈ ಜಾಹೀರಾತನ್ನು ಒಮ್ಮೆ ಗಮನಿಸಿದರೆ...

ಅಮೆರಿಕದಲ್ಲಿ ಮೋಹನ್‌ ಭಾಗವತ್ ಸೌಹಾರ್ದತೆ ಮಾತು; ಮಹಾರಾಷ್ಟ್ರದ ಗಾರ್ಬಾ-ದಾಂಡಿಯಾ ಕಾರ್ಯಕ್ರಮಗಳಲ್ಲಿ ಮುಸ್ಲಿಮರಿಗೆ ನಿಷೇಧ ಹೇರಿದ ವಿಎಚ್‌ಪಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರು ನ್ಯೂಯಾರ್ಕ್‌ನಲ್ಲಿ ಮಾಡಿದ ಭಾಷಣದಲ್ಲಿ ಧಾರ್ಮಿಕ ಸೌಹಾರ್ದತೆ, ಪರಸ್ಪರ ಗೌರವ ಮತ್ತು ಪ್ರತಿಯೊಂದು ಸಮುದಾಯದ ಗುರುತಿನ ರಕ್ಷಣೆ ಕುರಿತು ಮಾತನಾಡಿದ ಕೆಲವೇ ದಿನಗಳ...

ಸೈಬರ್ ವಂಚನೆಗೊಳಗಾದ ಸಂತ್ರಸ್ತರಿಗೆ ನೆರವು: ಕರ್ನಾಟಕದಲ್ಲಿ ಶೀಘ್ರವೇ ‘ಇ-ಶೂನ್ಯ ಎಫ್‌ಐಆರ್’ ಜಾರಿ

ಸೈಬರ್ ವಂಚನೆಗೊಳಗಾದ ಸಂತ್ರಸ್ತರು ಇನ್ನು ಮುಂದೆ ದೂರು ದಾಖಲಿಸಲು ಪೊಲೀಸ್ ಠಾಣೆಗಳಿಗೆ ಅಲೆಯಬೇಕಿಲ್ಲ. ಸೈಬರ್ ಅಪರಾಧ ಪ್ರಕರಣಗಳ ಎಫ್‌ಐಆರ್ ದಾಖಲಾತಿಯನ್ನು ಚುರುಕುಗೊಳಿಸುವ ಹಾಗೂ ಜನಸ್ನೇಹಿಯಾಗಿಸುವ ಉದ್ದೇಶದಿಂದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ...

ತಲೆ ಮರೆಸಿಕೊಂಡಿದ್ದ ಸ್ವತಂತ್ರ ಭಾರದ್ವಾಜ್‌ ಅರೆಸ್ಟ್ : ಪೋಕ್ಸೋ ಅಡಿ ಮತ್ತೊಂದು ಪ್ರಕರಣ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈನಲ್ಲಿ ನಡೆದ ಸಿಜೆಪಿ ಪ್ರತಿಭಟನೆ ವೇಳೆ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಝಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪ ಹೊತ್ತಿರುವ ಹಿಂದುತ್ವ ಸೋಶಿಯಲ್ ಮೀಡಿಯಾ 'ಇನ್‌ಫ್ಲುಯೆನ್ಸರ್' ಸ್ವತಂತ್ರ...

ಆರ್‌ಎಸ್ಎಸ್ ಬೆಂಬಲಿತ ಗುಂಪುಗಳಿಂದ ದೇಣಿಗೆ ಸ್ವೀಕರಿಸದಿರಲು ಅಮೆರಿಕದ ರಾಜಕಾರಣಿಗಳಿಂದ ಪ್ರತಿಜ್ಞೆ

ಅಮೆರಿಕದ ಸುಮಾರು 90 ಜನಪ್ರತಿನಿಧಿಗಳು ಮತ್ತು ರಾಜಕೀಯ ಅಭ್ಯರ್ಥಿಗಳು ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ (RSS) ಬೆಂಬಲಿತ ಗುಂಪುಗಳಿಂದ ರಾಜಕೀಯ ದೇಣಿಗೆಗಳನ್ನು ಸ್ವೀಕರಿಸುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ. ಹಿಂದುತ್ವ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್...

KPSC ಪರೀಕ್ಷಾ ಅಕ್ರಮ: ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ರಾಜಕೀಯ ಪಕ್ಷ ನೋಡದೆ ನಿರ್ದಾಕ್ಷಿಣ್ಯ ಕ್ರಮ – ಸಚಿವ ಪ್ರಿಯಾಂಕ್ ಖರ್ಗೆ

ಕೆಪಿಎಸ್‌ಸಿ (KPSC) ಪರೀಕ್ಷಾ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿದ್ದು, ಇದರಲ್ಲಿ ಭಾಗಿಯಾಗಿರುವ ಯಾರನ್ನೇ ಆಗಲಿ ರಕ್ಷಿಸುವ ಪ್ರಶ್ನೆಯೇ ಇಲ್ಲ. ಆರೋಪಿಗಳು ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅಥವಾ ಯಾವುದೇ ರಾಜಕೀಯ ಪಕ್ಷಕ್ಕೆ...

ಉತ್ತರ ಪ್ರದೇಶ: ಸಹಾರನ್‌ಪುರ ಕಲೆಕ್ಟರೇಟ್ ಮಸೀದಿ ಧ್ವಂಸ, ‘ಬುಲ್ಡೋಜರ್ ರಾಜಕಾರಣ’ಕ್ಕೆ ವಿಪಕ್ಷಗಳಿಂದ ಖಂಡನೆ!

ಸಹಾರನ್‌ಪುರ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಸಹಾರನ್‌ಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿದ್ದ ಮಸೀದಿಯನ್ನು ಶನಿವಾರ (ಸೆಪ್ಟೆಂಬರ್ 5) ಮುಂಜಾನೆ ಭಾರಿ ಪೊಲೀಸ್ ಭದ್ರತೆಯೊಂದಿಗೆ ಬುಲ್ಡೋಜರ್ ಬಳಸಿ ಧ್ವಂಸಗೊಳಿಸಲಾಗಿದೆ. ಈ ಕಾರ್ಯಾಚರಣೆಗೆ ವ್ಯಾಪಕ ಆಕ್ರೋಶ...

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ...