Homeಕರ್ನಾಟಕಸತ್ಯ ಹೇಳಿದ್ದಕ್ಕಾಗಿಯೇ ಬಸವಣ್ಣನವರ ಮೇಲೆ ಅಂದು ಆಕ್ರಮಣವಾಯಿತು: ರಾಹುಲ್ ಗಾಂಧಿ

ಸತ್ಯ ಹೇಳಿದ್ದಕ್ಕಾಗಿಯೇ ಬಸವಣ್ಣನವರ ಮೇಲೆ ಅಂದು ಆಕ್ರಮಣವಾಯಿತು: ರಾಹುಲ್ ಗಾಂಧಿ

- Advertisement -
- Advertisement -

ಸತ್ಯ ಹೇಳಿದ್ದಕ್ಕಾಗಿಯೇ ಅಂದು ಬಸವಣ್ಣನವರ ಮೇಲೆ ಆಕ್ರಮಣವಾಯಿತು. ಬೆದರಿಸುವ ಕೆಲಸ ಆಯಿತು. ಅದಕ್ಕೆ ಅವರು ಹಿಂಜರಿಯಲಿಲ್ಲ. ಸಮಾಜ‌ ಅವರನ್ನು ಹತ್ತು ಶತಮಾನಗಳ ನಂತರವೂ ಗೌರವಿಸುತ್ತದೆ” ಎಂದು ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಹೇಳಿದರು.

ಭಾನುವಾರ ಬಸವ ಜಯಂತಿ ನಿಮಿತ್ತ ಕೂಡಲಸಂಗಮದಲ್ಲಿ ಬಸವ ಧರ್ಮ ಪೀಠದಿಂದ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಮುಖಂಡ ರಾಹುಲ್‌ ಗಾಂಧಿ ವಿಭೂತಿ ಧರಿಸಿ ವೇದಿಕೆ ಮೇಲೆ ಬಂದು ಗಮನ ಸೆಳೆದರು. ಸಂಗಮೇಶ್ವರ ಹಾಗೂ ಬಸವಣ್ಣ ಐಕ್ಯಸ್ಥಳಕ್ಕೆ ಭೇಟಿ ನೀಡುವಾಗಲೇ ವಿಭೂತಿ ಧರಿಸಿದ್ದರು. ಸಂಗಮೇಶ್ವರನಿಗೆ ಆರತಿ ಬೆಳಗಿ ಬಸವಣ್ಣನಿಗೆ ನಮನ ಸಲ್ಲಿಸಿದರು.

ಇತ್ತಿಚೆಗೆ ಬಿಜೆಪಿ ತೊರೆದಿರುವ ಲಿಂಗಾಯತ ಸಮುದಾಯದ ಪ್ರಬಲ ನಾಯಕರಾದ ಜಗದೀಶ ಶೆಟ್ಟರ್‌ ಲಕ್ಷ್ಮಣ ಸವದಿ ಅವರನ್ನು ಕಾಂಗ್ರೆಸ್‌ಗೆ ಸೇರ್ಪಡೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಲಿಂಗಾಯತರಿಗೆ ಅನ್ಯಾಯ ಮಾಡುತ್ತಿದೆ ಎಂಬುದನ್ನು ಸಾರಿ ಹೇಳಿತು. ಬಸವ ಜಯಂತಿಗೆ ರಾಹುಲ್‌ ಗಾಂಧಿ ಅವರನ್ನು ಕರೆಯಿಸುವ ಮೂಲಕ ಲಿಂಗಾಯತ ಮತಗಳನ್ನು ಸೆಳೆಯಲು ಕಾಂಗ್ರೆಸ್‌ ಮುಂದಾಗಿದೆ. ಕಳೆದ ಚುನಾವಣೆಯಲ್ಲಿ ಪ್ರತ್ಯೇಕ ಲಿಂಗಾಯತ ಧರ್ಮದ ಮೂಲಕ ಬಿಜೆಪಿಯ ಬುಟ್ಟಿಯಲ್ಲಿದ್ದ ಲಿಂಗಾಯತ ಮತ ಸೆಳೆಯಲು ಕಾಂಗ್ರೆಸ್‌ ಯತ್ನಿಸಿತ್ತು. ಈ ಬಾರಿ ಬಸವ ಜಯಂತಿ ಕಾರ್ಯಕ್ರಮದಲ್ಲಿ ರಾಹುಲ್ ಗಾಂಧಿ ಅವರನ್ನು ಕರೆಯುವ ಮೂಲಕ ಮತ್ತೊಮ್ಮೆ ಯತ್ನಿಸಲು ಮುಂದಾಗಿದೆ.

ಈ ಕಾರ್ಯಕ್ರಮವನ್ನು ಬಸವ ಧರ್ಮ ಪೀಠ ಆಯೋಜಿಸಿತ್ತಾದರೂ ಎರಡು ದಿನಗಳಿಂದ ಕಾಂಗ್ರೆಸ್‌ ಮುಖಂಡರೇ ಇಲ್ಲಿ ಓಡಾಡುತ್ತಿದ್ದಾರೆ. ವೇದಿಕೆ ಮೇಲೆಯೂ ಕಾಂಗ್ರೆಸ್‌ ಮುಖಂಡರೇ ಇದ್ದರು. ಬಸವ ಧರ್ಮ ಪೀಠದ ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ನಾಯಕರೇ ಹೆಚ್ಚಾಗಿದ್ದರು ಎನ್ನುವುದು ವಿಶೇಷವಾಗಿದೆ.

ಈ ಬಸವ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ರಾಹುಲ್ ಗಾಂಧಿ, ”ಸತ್ಯ ಹೇಳಲು ಧೈರ್ಯಬೇಕು. ಅಂತಹ ಧೈರ್ಯತೋರಿದ ಬಸವಣ್ಣನವರು ವಿಶ್ವಕ್ಕೆ ಬೆಳಕಾಗಿದ್ದಾರೆ” ಎಂದು ಹೇಳಿದರು.

ಇದನ್ನೂ ಓದಿ: ರಾಹುಲ್ ಗಾಂಧಿಗೆ ಭಾರೀ ಹಿನ್ನೆಡೆ: ಶಿಕ್ಷೆ ತಡೆಗೆ ನ್ಯಾಯಾಲಯ ನಕಾರ; ಅನರ್ಹತೆ ಮುಂದುವರಿಕೆ

”ಈ ಸಮಾಜದಲ್ಲಿ ಅಂದು ಮೌಢ್ಯ, ಅಂಧ‌ಶ್ರದ್ಧೆ ತುಂಬಿದ್ದಾಗ ಬಸವಣ್ಣ ಸಮಾನತೆಗಾಗಿ ಶ್ರಮಿಸಿದರು. ಹಿಂದೂಸ್ತಾನದ ಪ್ರಜಾಪ್ರಭುತ್ವ ‌ವ್ಯವಸ್ಥೆಗೆ 12ನೇ ಶತಮಾನದಲ್ಲಿಯೇ ಅವರು ಅನುಭವ ಮಂಟಪ ಸ್ಥಾಪಿಸಿ ಭದ್ರ ಬುನಾದಿ ಹಾಕಿದ ಕೀರ್ತಿ ಬಸವಣ್ಣ ಅವರಿಗೆ ಸಲ್ಲುತ್ತದೆ” ಎಂದರು.

”ಅಂದು ಬಸವಣ್ಣನವರು ಹೋರಾಡಿದ ವಿಷಯಗಳಿಗಾಗಿ, ಇಂದು ಸ್ವಾಮೀಜಿಗಳೂ ಹೋರಾಟ ಮಾಡುತ್ತಿದ್ದಾರೆ” ಎಂದು ಶ್ಲಾಘಿಸಿದರು.

ಈ ವೇಳೆ ಗದುಗಿ‌ನ ತೋಂಟದಾರ್ಯ ಮಠದ ತೋಂಟದ ಸಿದ್ಧರಾಮ ಸ್ವಾಮೀಜಿ ಮಾತನಾಡಿ, ”ಅನುಭವ ಮಂಟಪದಲ್ಲಿ ಮಹಿಳೆಗೆ ಅವಕಾಶ‌ ನೀಡುವ ಮೂಲಕ‌ ಮಹಿಳೆಯರಿಗೆ ಮೊದಲ ಬಾರಿಗೆ ಧಾರ್ಮಿಕ ಸ್ವಾತಂತ್ರ್ಯ ಕಲ್ಪಿಸಿದ ಕೀರ್ತಿ ಬಸವಣ್ಣನಿಗೆ ಸಲ್ಲುತ್ತದೆ” ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಇಳಕಲ್‌ ವಿಜಯ ಮಹಾಂತೇಶ ಸಂಸ್ಥಾನ ಮಠದ ಗುರುಮಹಾಂತ ಸ್ವಾಮೀಜಿ, ವಿಜಯಪುರದ ವನಶ್ರೀ ಮಠದ ಜಯಬಸವ ಕುಮಾರ ಸ್ವಾಮೀಜಿ, ಅಥಣಿ ಗಚ್ಚಿನಮಠದ ಶಿವಬಸವ ಸ್ವಾಮೀಜಿ, ಯರನಾಳ ವಿರಕ್ತಮಠದ ಗುರುಸಂಗನಬಸವ ಸ್ವಾಮೀಜಿ, ಮಮದಾಪುರದ ವಿರಕ್ತಮಠದ ಅಭಿನವ ಮುರುಘೇಂದ್ರ ಸ್ವಾಮೀಜಿ, ಬಸವ ಧರ್ಮ ಪೀಠ ಮಹಾದೇಶ್ವರ ಸ್ವಾಮೀಜಿ, ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್‌, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಇದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...