Homeಕರ್ನಾಟಕವರುಣದಲ್ಲಿ ಸೋಮಣ್ಣ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ: ಸಿದ್ದರಾಮಯ್ಯ ಪ್ರತಿಕ್ರಿಯೆ

ವರುಣದಲ್ಲಿ ಸೋಮಣ್ಣ ಪ್ರಚಾರಕ್ಕೆ ಅಡ್ಡಿಪಡಿಸಿದ್ದು ಸರಿಯಲ್ಲ: ಸಿದ್ದರಾಮಯ್ಯ ಪ್ರತಿಕ್ರಿಯೆ

- Advertisement -
- Advertisement -

ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ವಿ.ಸೋಮಣ್ಣ ಐದು ದಿನಗಳ ಕಾಲ ಪ್ರಚಾರ ಹಮ್ಮಿಕೊಂಡಿದ್ದು, ಮೊದಲ ದಿನವೇ ಕೆಲವು ಯುವಕರು ಸಿದ್ದರಾಮಯ್ಯನವರಿಗೆ ಜೈಕಾರ ಕೂಗಿ, ಬಿಜೆಪಿಗೆ ಧಿಕ್ಕಾರ ಎನ್ನುತ್ತಾ ಸೋಮಣ್ಣನವರಿಗೆ ಘೇರಾವ್ ಹಾಕಿರುವ ಘಟನೆ ಕ್ಷೇತ್ರದ ಭುಗತಹಳ್ಳಿಯಲ್ಲಿ ನಡೆದಿದೆ. ಈ ಬಗ್ಗೆ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ವರುಣಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿ.ಸೋಮಣ್ಣ ಅವರ ಚುನಾವಣಾ ಪ್ರಚಾರಕ್ಕೆ ಕೆಲವರು ಅಡ್ಡಿಪಡಿಸುತ್ತಿರುವುದು ವರದಿಯಾಗಿದೆ. ಇದನ್ನು ನಮ್ಮ‌ ಪಕ್ಷದ ಕಾರ್ಯಕರ್ತರು ಇಲ್ಲವೇ ಬೇರೆಯವರು ಮಾಡಿದ್ದರೆ ಅದು ಸರಿ ಅಲ್ಲ. ಎಲ್ಲ ಅಭ್ಯರ್ಥಿಗಳಿಗೂ ಮುಕ್ತ ಪ್ರಚಾರಕ್ಕೆ ಅವಕಾಶ ಮಾಡಿಕೊಡಬೇಕು” ಎಂದಿದ್ದಾರೆ.

”ಪ್ರಜಾಪ್ರಭುತ್ವ ವ್ಯವಸ್ಥೆಯಡಿ ನಡೆಯುವ ಚುನಾವಣೆಯಲ್ಲಿ ಪ್ರತಿಯೊಬ್ಬ ಅಭ್ಯರ್ಥಿಗೂ ಪ್ರಚಾರ ಮಾಡಲು ಅವಕಾಶ ಇದೆ. ಅದಕ್ಕೆ ಅಡ್ಡಿ ಪಡಿಸಬಾರದು. ಅಂತಿಮವಾಗಿ ಮತದಾರರು ತಮ್ಮ ಆಯ್ಕೆಯನ್ನು ತಾವೇ ನಿರ್ಧರಿಸುತ್ತಾರೆ” ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಏನಿದು ಘಟನೆ:

ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಾಷಣ ಮಾಡುತ್ತಿದ್ದ ವೇಳೆ ಯುವಕನೋರ್ವ, ಸಚಿವ ಸೋಮಣ್ಣ ಅವರಿಗೆ ಪ್ರಶ್ನೆ ಕೇಳಿದ್ದಾನೆ. ಭಾಷಣ ಮುಗಿಯುವವರೆಗೂ ಕಾಯುವಂತೆ ಸೋಮಣ್ಣ ಸೂಚನೆ ನೀಡಿದ್ದರು. ಬಳಿಕ ಸೋಮಣ್ಣನವರ ಭಾಷಣ ಮುಗಿಯುತ್ತಿದ್ದಂತೆ ಸಿದ್ದರಾಮಯ್ಯ ಪರ ಘೋಷಣೆ ಕೂಗಲಾಗಿದೆ. ಮತ್ತೊಂದು ಯುವಕರ ಗುಂಪು ಬಿಜೆಪಿ ಮತ್ತು ಸೋಮಣ್ಣನವರ ಪರ ಘೋಷಣೆ ಕೂಗಿದೆ. ಹೀಗಾಗಿ ಭುಗತಹಳ್ಳಿಯಲ್ಲಿ ಪ್ರಚಾರವನ್ನು ಕೈಬಿಟ್ಟು ಸೋಮಣ್ಣನವರು ಬೇರೊಂದು ಗ್ರಾಮಕ್ಕೆ ತೆರಳಿದರು.

ಇದನ್ನೂ ಓದಿ: ವರುಣಾ: ಸೋಮಣ್ಣನವರಿಗೆ ಘೇರಾವ್, ಸಿದ್ದರಾಮಯ್ಯನವರಿಗೆ ಜೈಕಾರ

ವರುಣದಲ್ಲಿ ಬಿಜೆಪಿ ಅಭ್ಯರ್ಥಿ ಪರ ಪ್ರಚಾರಕ್ಕೆ ಹೋದವರಿಗೂ ಪ್ರತಿಭಟನೆಯ ಬಿಸಿ

ಈ ಹಿಂದೆ ಏಪ್ರಿಲ್ 18ರಂದು ಸಹ ಸೋಮಣ್ಣ ವರುಣಾ ಕ್ಷೇತ್ರದ ಲಲಿತಾದ್ರಿಪುರದಲ್ಲಿ ಪ್ರಚಾರಕ್ಕೆ ಬಂದಿದ್ದ ವೇಳೆ ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದರು. ಕ್ಷೇತ್ರದಲ್ಲಿ ಏನು ಅಭಿವೃದ್ಧಿ ಮಾಡಿದ್ದೀರಿ ಎಂದು ಮತ ಕೇಳಲು ಬಂದಿದ್ದೀರಿ ಎಂದು ಪ್ರಶ್ನಿಸಿ ಗಲಾಟೆ ಮಾಡಿದ್ದರು. ಮೈಸೂರು ಕೊಡಗು ಬಿಜೆಪಿ ಸಂಸದ ಸಂಸದ ಪ್ರತಾಪ್ ಸಿಂಹ ಅವರಿಗೂ ಪ್ರತಿಭಟನೆಯ ಬಿಸಿ ತಟ್ಟಿತ್ತು. ಯುವಕನೋರ್ವ ತರಾಟೆಗೆ ತೆಗೆದುಕೊಂಡಿರುವ ವಿಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ಭಾರೀ ವೈರಲ್ ಆಗಿತ್ತು.

ಗುರುವಾರ ಸಂಸದ ಪ್ರತಾಪ್ ಸಿಂಹ್ ಅವರು ಕುಪ್ಯ ಗ್ರಾಮದಲ್ಲಿ ಪ್ರಚಾರಕ್ಕೆ ತೆರಳಿದ್ದರು. ಈ ವೇಳೆ ಗ್ರಾಮಸ್ಥರು ಅವರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದರು. ಅವರ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ಪ್ರತಾಪ ಸಿಂಹ ಕಕ್ಕಾಬಿಕ್ಕಿಯಾಗಿ ನಿಂತಿರುವ ವಿಡಿಯೋ, ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡಿದೆ.

”ನಾವು ಬಂದಿರುವುದೇ ಸಂವಿಧಾನ ಬದಲಾಯಿಸುವುದಕ್ಕೆ ಎಂದು ಬಿಜೆಪಿಯವರು ಹೇಳಿದ್ದೀರಿ. ಸಂವಿಧಾನ ರಚಿಸಿದ ಅಂಬೇಡ್ಕರ್ ಅಭಿಮಾನಿಗಳಾದ ನಾವು ನಿಮ್ಮನ್ನು ಹೇಗೆ ಬೆಂಬಲಿಸುವುದು?” ಎಂದು ಗ್ರಾಮಸ್ಥರು ಕೇಳಿದ್ದರು.

”ಡಾ.ಎಚ್.ಸಿ.ಮಹದೇವಪ್ಪ ಅವರಿಗೆ ನಿಮ್ಮದೇ ಸರ್ಕಾರವಿದ್ದಾಗ ರಸ್ತೆರಾಜ ಎಂದು ಬಿರುದು ಕೊಟ್ಟಿದ್ರಿ. ಈಗ ಮೈಸೂರು- ಬೆಂಗಳೂರು ದಶಪಥ ಹೆದ್ದಾರಿ ನಿರ್ಮಾಣವಾದ ಮೇಲೆ ಅವರ ವಿರುದ್ಧವೇ ಆರೋಪ ಮಾಡುತ್ತಿದ್ದೀರಿ ಇದು ಸರಿಯೇ?” ಎಂದು ಕೇಳಿ ತರಾಟೆಗೆ ತೆಗೆದುಕೊಂಡಿದ್ದರು.

”ಸಂಸದ ವಿ.ಶ್ರೀನಿವಾಸ ಪ್ರಸಾದ್ ಈವರೆಗೂ ನಮ್ಮೂರಿಗೆ ಬಂದೇ ಇಲ್ಲ” ಎಂದೂ ದೂರಿದ್ದರು.

ಪ್ರತಾಪ್ ಸಿಂಹ ಅವರು ಈ ಹಿಂದೆ ಸಿದ್ದರಾಮಯ್ಯ ವಿರುದ್ಧ ನೀಡಿದ್ದ ಹೇಳಿಕೆಗಳ ಬಗ್ಗೆಯೇ ಪ್ರಶ್ನೆ ಮಾಡಿದ ಗ್ರಾಮಸ್ಥರು, ”ಸಿದ್ದರಾಮಯ್ಯ ಮೈಸೂರಿಗೆ ನೀಡಿರುವ ಕೊಡುಗೆ ಏನು ಎಂದೆಲ್ಲಾ ಕೇಳಿದ್ದೀರಿ. ಅವರ ಪಕ್ಕ ಹೋಗಿ ಕುಳಿತುಕೊಳ್ಳಿ ಆಗ ಎಲ್ಲವೂ ನಿಮಗೆ ಗೊತ್ತಾಗುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದರು.

”ಅಕ್ಕಿ ಮೋದಿಯದು, ಚೀಲ ಸಿದ್ದರಾಮಯ್ಯ ಅವರದ್ದು ಎಂದು ಆರೋಪಿಸುತ್ತೀರಲ್ಲಾ ನೀವೇನು ಕೊಡುಗೆ ಕೊಟ್ಟಿದ್ದೀರಿ? ನಿಮ್ಮ ಸರ್ಕಾರದಲ್ಲಿ ಪ್ರತಿ ವ್ಯಕ್ತಿಗೆ 10 ಕೆ.ಜಿ. ಅಕ್ಕಿ ಕೊಡುತ್ತಿಲ್ಲವೇಕೆ? ಅಡುಗೆ ಅನಿಲ ಸಿಲಿಂಡರ್ ಬೆಲೆ ಇಷ್ಟೊಂದು ಜಾಸ್ತಿಯಾಗಿದೆಯಲ್ಲ ಏಕೆ?” ಎಂದು ಪ್ರಶ್ನಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...