Homeಅಂಕಣಗಳುಕರ್ನಾಟಕ ವಿಧಾನಸಭಾ ಕ್ಷೇತ್ರಗಳ ಸಮೀಕ್ಷೆ:ಕುಣಿಗಲ್: ಸಹೋದರರ ಪೈಪೋಟಿಯಲ್ಲಿ ಖಾತೆ ತೆರೆಯದ ಬಿಜೆಪಿ - ಈ ಬಾರಿ?

ಕುಣಿಗಲ್: ಸಹೋದರರ ಪೈಪೋಟಿಯಲ್ಲಿ ಖಾತೆ ತೆರೆಯದ ಬಿಜೆಪಿ – ಈ ಬಾರಿ?

- Advertisement -
- Advertisement -

ತುಮಕೂರು ಜಿಲ್ಲೆಗೆ ಸೇರಿರುವ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಕುಣಿಗಲ್ ವಿಧಾನಸಭಾ ಕ್ಷೇತ್ರದಲ್ಲಿ ಗೆಲುವಿಗಾಗಿ ಮೂರು ಮುಖ್ಯ ಪಕ್ಷಗಳ ಜೊತೆಗೆ ಕೆ.ಆರ್.ಎಸ್ ಮತ್ತು ಬಂಡಾಯ ಅಭ್ಯರ್ಥಿಗಳು ಶ್ರಮಿಸುತ್ತಿದ್ದಾರೆ. ಕ್ಷೇತ್ರದ ಸ್ಥಿತಿಗತಿ ಹೀಗಿದೆ.

ರಾಜಕೀಯ ಇತಿಹಾಸ

ಕುಣಿಗಲ್‌ನಲ್ಲಿ ಇದುವರೆಗೂ 15 ಚುನಾವಣೆಗಳು ನಡೆದಿವೆ. ಅದರಲ್ಲಿ ಕಾಂಗ್ರೆಸ್ ಪಕ್ಷ 10 ಬಾರಿ ಗೆದ್ದು ಬೀಗಿದೆ. ಜನತಾಪಕ್ಷ ಎರಡು ಬಾರಿ, ಜೆಡಿಎಸ್ ಎರಡು ಬಾರಿ ಜಯ ಕಂಡರೆ, ಪಕ್ಷೇತರ ಅಭ್ಯರ್ಥಿ ಒಮ್ಮೆ ಗೆಲುವು ದಾಖಲಿಸಿದ್ದಾರೆ. ಗಮನಿಸಬೇಕಾದ ಅಂಶವೆಂದರೆ ಇಲ್ಲಿ ಬಿಜೆಪಿ ಖಾತೆ ತೆರೆಯಲು ಇದುವರೆಗೂ ಸಾಧ್ಯವಾಗಿಲ್ಲ.

1952 ಮತ್ತು 1957 ರಲ್ಲಿ ಕಾಂಗ್ರೆಸ್ ಪಕ್ಷದ ಟಿ.ಎನ್ ಮೂಡಲಗಿರಿಗೌಡ ಗೆಲುವು ಸಾಧಿಸಿದರೆ, 1962ರಲ್ಲಿ ಪಕ್ಷೇತರ ಅಭ್ಯರ್ಥಿ ಅಂದಾನಯ್ಯ ಶಾಸಕರಾಗಿದ್ದರು. 1967ರಲ್ಲಿ ಕಾಂಗ್ರೆಸ್‌ನಿಂದ ಜಿ.ತಮ್ಮಣ್ಣ ಆರಿಸಿ ಬಂದರೆ 1972 ಮತ್ತು 1978 ರಲ್ಲಿ ಕಾಂಗ್ರೆಸ್‌ ಸೇರಿದ್ದ ಅಂದಾನಯ್ಯ ಜಯ ಕಂಡಿದ್ದರು.

1983 ಮತ್ತು 1985ರಲ್ಲಿ ಜನತಾ ಪಕ್ಷದ ವೈ.ಕೆ ರಾಮಯ್ಯ ಶಾಸಕರಾಗಿ ಆಯ್ಕೆಯಾಗಿದ್ದರು. 1989ರಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಲಕ್ಕಪ್ಪ ಆಯ್ಕೆಯಾಗಿದ್ದರು. 1994 ಮತ್ತು 1999ರಲ್ಲಿ ಎಸ್‌.ಪಿ ಮುದ್ದಹನುಮೇಗೌಡ ಕಾಂಗ್ರೆಸ್‌ನಿಂದ ಎರಡು ಬಾರಿ ಶಾಸಕರಾಗಿದ್ದರು. 2004ರಲ್ಲಿ ಜೆಡಿಎಸ್ ಅಭ್ಯರ್ಥಿ ಹೆಚ್.ನಿಂಗಪ್ಪ ಗೆಲುವು ಸಾಧಿಸಿದ್ದರು.

2008ರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಬಿ.ರಾಮಸ್ವಾಮಿಗೌಡ 48,160 ಮತಗಳನ್ನು ಪಡೆದು ಗೆಲುವು ಕಂಡಿದ್ದರು. ಬಿಜೆಪಿ ಅಭ್ಯರ್ಥಿ ಪಿಎಲ್‌ಡಿ ಬ್ಯಾಂಕ್ ರಾಜ್ಯ ಘಟಕದ ಅಧ್ಯಕ್ಷ ಡಿ.ಕೃಷ್ಣಕುಮಾರ್ 34,943 ಮತಗಳನ್ನು ಪಡೆದು ಸೋಲು ಅನುಭವಿಸಿದರು. ಅವರ ಸಹೋದರರಾದ ಜೆಡಿಎಸ್ ಅಭ್ಯರ್ಥಿ ಡಿ.ನಾಗರಾಜಯ್ಯ 32,545 ಮತಗಳನ್ನು ಪಡೆದು ಮೂರನೇ ಸ್ಥಾನಕ್ಕೆ ತಳ್ಳಲ್ಪಟ್ಟರು. ಸಹೋದರರಿಬ್ಬರ ಮತವಿಭಜನೆ ಕಾಂಗ್ರೆಸ್‌ಗೆ ಅನುಕೂಲವಾಗಿತ್ತು.

2013ರಲ್ಲಿ ಜೆಡಿಎಸ್‌ನ ಡಿ.ನಾಗರಾಜಯ್ಯ 44,575 ಮತಗಳನ್ನು ಪಡೆದು ಜಯ ದಾಖಲಿಸಿದರು. ಅವರ ಸಹೋದರ ಬಿಜೆಪಿ ಅಭ್ಯರ್ಥಿ ಡಿ.ಕೃಷ್ಣಕುಮಾರ್ 34,943 ಮತಗಳನ್ನು ಪಡೆದು ಎರಡನೇ ಸೋಲು ಕಂಡರು. ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಬಿ.ಬಿ.ರಾಮಸ್ವಾಮಿಗೌಡ 33,918 ಮತ ಪಡೆದು ಮೂರನೇ ಸ್ಥಾನ ಪಡೆದರೆ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿದ್ದ ಸಿ.ಎಂ.ರವಿಕಿರಣ್ 24,604 ಮತಗಳನ್ನು ಪಡೆದಿದ್ದರು. ಕಾಂಗ್ರೆಸ್‌ನಲ್ಲಿ ಬಂಡಾಯವೆದ್ದಿದ್ದು ಜೆಡಿಎಸ್ ಗೆಲುವಿಗೆ ಸಹಕಾರಿಯಾಯಿತು.

2018ರ ಚುನಾವಣೆಗೆ ವೇಳೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಯನ್ನು ಬದಲಿಸಿತು. ಬಿ.ಬಿ.ರಾಮಸ್ವಾಮಿಗೌಡರ ಬದಲಿಗೆ ಡಿ.ಕೆ ಶಿವಕುಮಾರ್ ಸಂಬಂಧಿ ಡಾ.ರಂಗನಾಥ್ ಕಣಕ್ಕಳಿದು 58,697 ಮತಗಳನ್ನು ಪಡೆದು ಶಾಸಕರಾದರು. ಬಿಜೆಪಿಯ ಡಿ.ಕೃಷ್ಣಕುಮಾರ್ 53,097 ಮತಗಳನ್ನು ಪಡೆದರೆ ಅವರ ಸಹೋದರ ಜೆಡಿಎಸ್‌ನ ಡಿ.ನಾಗರಾಜಯ್ಯ 44,476 ಮತಗಳನ್ನು ಪಡೆದರು.

ಅಂದಾಜು ಜಾತಿವಾರು ಮತಗಳು

ಕುಣಿಗಲ್‌ನಲ್ಲಿ ಅಂದಾಜು 2 ಲಕ್ಷದಷ್ಟು ಮತಗಳಿದ್ದು, ಒಕ್ಕಲಿಗ ಸಮುದಾಯದ ಮತಗಳು ಅತ್ಯಧಿಕ ಸಂಖ್ಯೆಯಲ್ಲಿದ್ದು ಮೂರು ಪಕ್ಷದ ಅಭ್ಯರ್ಥಿಗಳು ಒಕ್ಕಲಿಗರೇ ಆಗಿದ್ದಾರೆ.

ಒಕ್ಕಲಿಗರು: 85,000
ಪರಿಶಿಷ್ಟ ಜಾತಿ: 35,000
ಮುಸ್ಲಿಂ: 28,000
ತಿಗಳ: 8,000
ಕುರುಬರು 8,000
ಲಿಂಗಾಯತ 7,000
ಇತರೆ: 29,000

ಹಾಲಿ ಶಾಸಕ ರಂಗನಾಥ್‌ರವರಿಗೆ ಕಾಂಗ್ರೆಸ್ ಟಿಕೆಟ್

ಹಾಲಿ ಶಾಸಕ ಡಾ.ರಂಗನಾಥ್‌ರವರು ರಸ್ತೆ, ಕುಡಿಯುವ ನೀರಿನಂತಹ ಒಂದಷ್ಟು ಅಭಿವೃದ್ದಿ ಕೆಲಸ ಮಾಡಿದ್ದಾರೆ. ಒಂದಷ್ಟು ಅನುದಾನವನ್ನು ತಂದಿದ್ದಾರೆ. ಆದರೆ ತಮ್ಮ ಅನುಯಾಯಿಗಳಿಗೆ ಹೆಚ್ಚಿನ ಕೆಲಸ ಮಾಡಿಕೊಟ್ಟಿದ್ದಾರೆ ಎಂಬ ಆರೋಪ ಅವರ ಮೇಲಿದೆ. ಇಂತಹ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಮತ್ತೆ ಅವರಿಗೆ ಟಿಕೆಟ್ ನೀಡಿದೆ.

ಡಾ.ರಂಗನಾಥ್

ಕಾಂಗ್ರೆಸ್ ಟಿಕೆಟ್ ವಂಚಿತ ಮಾಜಿ ಶಾಸಕ ಬಿ.ಬಿ ರಾಮಸ್ವಾಮಿಗೌಡ ಬಂಡಾಯ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ಕಣದಲ್ಲಿ ಉಳಿದಿದ್ದಾರೆ.

ಬಿಜೆಪಿ ಟಿಕೆಟ್‌ ಡಿ.ಕೃಷ್ಣಕುಮಾರ್ ಪಾಲು

ಪಿಎಲ್‌ಡಿ ಬ್ಯಾಂಕ್ ರಾಜ್ಯ ಘಟಕದ ಅಧ್ಯಕ್ಷ ಡಿ.ಕೃಷ್ಣಕುಮಾರ್ ನಾಲ್ಕನೇ ಬಾರಿಗೆ ಬಿಜೆಪಿ ಅಭ್ಯರ್ಥಿಯಾಗುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ಮೂರು ಚುನಾವಣೆಯಲ್ಲಿ ಸತತ ಸೋಲು ಕಂಡಿರುವ ಅವರು ಇದು ಕೊನೆಯ ಚುನಾವಣೆ ಎಂದು ಟಿಕೆಟ್ ಪಡೆದಿದ್ದಾರೆ.

ಡಿ.ಕೃಷ್ಣಕುಮಾರ್

ಆದರೆ ಮಹಿಳೆಯರಿಗೆ ಬಾಗಿನ ಕೊಡುವುದು, ಬಾಡೂಟ ಹಾಕಿಸುವ ಕೆಲಸಗಳ ಮೂಲಕ ಬಿಜೆಪಿ ಟಿಕೆಟ್ ಬಯಸಿದ್ದ ಹಿಂದುತ್ವವಾದಿ ರಾಜೇಶ್ ಗೌಡರಿಗೆ ಟಿಕೆಟ್ ಸಿಗದ ಕಾರಣಕ್ಕೆ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಕೊನೆಗೆ ಬಿಜೆಪಿ ಮುಖಂಡರು ಅವರ ಮನವೊಲಿಸಿ ನಾಮಪತ್ರ ವಾಪಸ್ ಪಡೆಸಿದ್ದಾರೆ.

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದ ಎಸ್‌ಪಿ ಮುದ್ದಹನುಮೇಗೌಡರು ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಅವರಿಗೆ ಟಿಕೆಟ್ ಸಿಗುತ್ತದೆ ಎಂದೂ ಹೇಳಲಾಗುತ್ತಿತ್ತು. ಆದರೆ ಕೊನೆ ಕ್ಷಣದಲ್ಲಿ ಅವರು ಟಿಕೆಟ್ ವಂಚಿತರಾದರು. ಆಗ ಬಂಡಾಯವೆದ್ದು ಪಕ್ಷೇತರ ಸ್ಪರ್ಧೆ ಘೋಷಿಸಿದರು. ನಂತರ ಬಿಜೆಪಿಯ ಹಿರಿಯ ಮುಖಂಡರು ಅವರ ಮನವೊಲಿಸಿ 2024ರಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ನೀಡುವುದಾಗಿ ಭರವಸೆ ನೀಡಿ ಬಂಡಾಯ ಶಮನಗೊಳಿಸಲಾಗಿದೆ.

ಜೆಡಿಎಸ್‌ನಿಂದ ಡಿ.ನಾಗರಾಜಯ್ಯನವರ ಪುತ್ರ ಕಣಕ್ಕೆ

ಕೃಷ್ಣಕುಮಾರ್‌ರವರ ಅಣ್ಣ ಡಿ.ನಾಗರಾಜಯ್ಯನವರಿಗೆ ಜೆಡಿಎಸ್ ಟಿಕೆಟ್ ಘೋಷಿಸಿತ್ತು. 80 ವರ್ಷದ ಅವರು ತಮ್ಮ ಪುತ್ರನಿಗೆ ಟಿಕೆಟ್ ಧಾರೆಯೆರೆದರು. ಅವರ ಪುತ್ರ ಮಾಜಿ ಜಿ.ಪಂ ಅಧ್ಯಕ್ಷ ಡಾ.ಬಿ.ಎನ್ ರವಿ ಜೆಡಿಎಸ್ ಅಭ್ಯರ್ಥಿಯಾಗಿದ್ದಾರೆ.

ಡಾ ರವಿ ಬಿ.ಎನ್

ಜಾಣಗೆರೆ ರಘು: ಕರ್ನಾಟಕ ರಾಷ್ಟ್ರ ಸಮಿತಿ ಅಭ್ಯರ್ಥಿ

ಭ್ರಷ್ಟಾಚಾರದ ವಿರುದ್ಧ ರಾಜಿರಹಿತ ಹೋರಾಟ ನಡೆಸುತ್ತಿರುವ ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ಕಾರ್ಯದರ್ಶಿಯಾದ ರಘು ಜಾಣಗೆರೆಯವರು ಕೆಆರ್‌ಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಹತ್ತಾರು ವರ್ಷಗಳಿಂದ ಕ್ಷೇತ್ರದಲ್ಲಿ ದೌರ್ಜನ್ಯಕ್ಕೆ ಒಳಗಾದವರ ಪರವಾಗಿ ಅವರು ನಿರಂತರವಾಗಿ ದನಿ ಎತ್ತಿದ್ದಾರೆ. ಪೊಲೀಸರ ಅಕ್ರಮಗಳನ್ನು ಬಯಲಿಗೆಳೆದಿದ್ದಾರೆ. ಹಾಗಾಗಿ ಕ್ಷೇತ್ರದಲ್ಲಿ ಚಿರಪರಿಚಿತರಾಗಿರುವ ಅವರು ಈ ಬಾರಿ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿ ಕಣಕ್ಕಿಳಿದಿದ್ದಾರೆ.

ರಘು ಜಾಣಗೆರೆ

ಎಚ್.ಎ ಜಯರಾಮಯ್ಯ: ಆಮ್ ಆದ್ಮಿ ಪಕ್ಷ

ಕುಣಿಗಲ್‌ನಲ್ಲಿ ಆಮ್ ಆದ್ಮಿ ಪಕ್ಷವು ಸಹ ಸದ್ದು ಮಾಡುತ್ತಿದೆ. ಎಚ್.ಎ ಜಯರಾಮಯ್ಯ ಅಭ್ಯರ್ಥಿಯಾಗಿದ್ದು ಭರ್ಜರಿ ಪ್ರಚಾರದಲ್ಲಿ ನಿರತರಾಗಿದ್ದಾರೆ.

2023ರ ಸಾಧ್ಯತೆಗಳು 

ಬಿಜೆಪಿ ಮತ್ತು ಜೆಡಿಎಸ್‌ನಿಂದ ಕಳೆದ ಮೂರು ಚುನಾವಣೆಗಳಲ್ಲಿ ಸಹೋದರರು ಸ್ಪರ್ಧಿಸುತ್ತಿದ್ದರು. ಈ ಬಾರಿ ಅಪ್ಪ ಕೃಷ್ಣಕುಮಾರ್ ಮತ್ತು ಅಣ್ಣನ ಮಗ ಬಿ.ಎನ್ ರವಿ ನಡುವೆ ಸ್ಪರ್ಧೆ ಏರ್ಪಟ್ಟಿದೆ. ಮೂರು ಸೋಲಿನ ಅನುಕಂಪ ಹೊ೦ದಿರುವ ಡಿ.ಕೃಷ್ಣಕುಮಾರ್‌ರವರಿಗೆ ಗೆಲ್ಲಲು ಅವರ ಅಣ್ಣ ಅಡ್ಡಿಯಾಗಿದ್ದರು. ಈಗ ಅವರ ಪುತ್ರ ಕಣದಲ್ಲಿದ್ದಾರೆ. ಹಾಗಾಗಿ ಕುಣಿಗಲ್‌ನಲ್ಲಿ ಈ ಬಾರಿಯೂ ಬಿಜೆಪಿ ಖಾತೆ ತೆರೆಯುತ್ತದೆ ಎಂದು ಖಚಿತವಾಗಿ ಹೇಳಲು ಬರುವುದಿಲ್ಲ. ಕಾಂಗ್ರೆಸ್ ಬಂಡಾಯ ಎಷ್ಟರ ಮಟ್ಟಿಗೆ ಕೆಲಸ ಮಾಡುತ್ತದೆ ಎಂಬುದು ಇನ್ನೂ ನಿಗೂಢವಾಗಿದೆ. ಇದರ ನಡುವೆ ಕೆಆರ್‌ಎಸ್ ಪಕ್ಷದ ರಘು ಜಾಣಗೆರೆ ಮತ್ತು ಆಪ್‌ನ ಎಚ್.ಎ ಜಯರಾಮಯ್ಯ ಕೂಡ ಗಂಭೀರ ಸ್ಪರ್ಧೆಯೊಡ್ಡುತ್ತಿದ್ದಾರೆ. ಹಾಗಾಗಿ ಕುಣಿಗಲ್‌ನ ಫಲಿತಾಂಶ ಕುತೂಹಲ ಹುಟ್ಟಿಸಿದೆ.

ಇದನ್ನೂ ಓದಿ: ಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗಿನ ವಿ.ಸೋಮಣ್ಣ ಆಡಿಯೋ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...