Homeಮುಖಪುಟಇದುವರೆಗೂ ಬಿಜೆಪಿ ಖಾತೆ ತೆರೆಯಲಾಗದ ಕ್ಷೇತ್ರಗಳಿವು: ಕಾರಣವೇನು?

ಇದುವರೆಗೂ ಬಿಜೆಪಿ ಖಾತೆ ತೆರೆಯಲಾಗದ ಕ್ಷೇತ್ರಗಳಿವು: ಕಾರಣವೇನು?

53 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಒಮ್ಮೆ ಮಾತ್ರ ಖಾತೆ ತೆರೆದಿದೆ. ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳೂ ಸಾಕಷ್ಟಿವೆ.

- Advertisement -
- Advertisement -

ಬಿಜೆಪಿ ಪಕ್ಷವು ಪ್ರಪಂಚದ ಅತ್ಯಂತ ದೊಡ್ಡ ಪಕ್ಷ ಎಂದು ಹೇಳಿಕೊಂಡಿದೆ. 2014 ಮತ್ತು 2019ರ ಲೋಕಸಭಾ ಚುನಾವಣೆಗಳಲ್ಲಿ ಗೆದ್ದು ಕೇಂದ್ರದಲ್ಲಿ ಅಧಿಕಾರ ಹಿಡಿದಿದೆ. ಆದರೂ ದಕ್ಷಿಣದ ರಾಜ್ಯಗಳಲ್ಲಿ ಅದು ಪೂರ್ಣ ಬಹುಮತದಿಂದ ಗೆದ್ದು ಅಧಿಕಾರ ಹಿಡಿಯಲು ಸಾಧ್ಯವಾಗಿಲ್ಲ. ಗೋವಾ ಮತ್ತು ಕರ್ನಾಟಕದಲ್ಲಿ ಅಲ್ಪ ಸ್ವಲ್ಪ ಅಧಿಕಾರ ನಡೆಸಿದರೂ ಕೂಡ ಕೇರಳ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಅದು ಅಧಿಕಾರದ ಹತ್ತಿರಕ್ಕೂ ಸುಳಿಯಲು ಸಾಧ್ಯವಾಗಿಲ್ಲ. ಏಕೆಂದರೆ ದಕ್ಷಿಣದ ಜನ ಅಷ್ಟು ಸುಲಭಕ್ಕೆ ಬಿಜೆಪಿಯ ರಾಷ್ಟ್ರೀಯತೆ ಮತ್ತು ಹಿಂದುತ್ವ ಸಿದ್ದಾಂತಗಳನ್ನು ಒಪ್ಪುವುದಿಲ್ಲ ಎಂಬುದು ಸಾಬೀತಾಗಿದೆ.

ಇನ್ನೂ ಕರ್ನಾಟಕದಲ್ಲಿ ಬಿಜೆಪಿ 1983ರಲ್ಲಿ 18 ಸೀಟು ಗೆದ್ದು ಜನತಾಪಕ್ಷಕ್ಕೆ ಬೆಂಬಲ ನೀಡಿತ್ತು. ಆದರೆ ಅದು ಪದೇ ಪದೇ ತೊಂದರೆ ಕೊಡುತ್ತಿದೆ ಎಂದು ಆರೋಪಿಸಿ 1985ರಲ್ಲಿ ಸರ್ಕಾರ ವಿಸರ್ಜಿಸಿ ಮತ್ತೆ ಚುನಾವಣೆ ಎದುರಿಸಿ ಸ್ವತಂತ್ರವಾಗಿ ಜನತಾಪಕ್ಷ ಅಧಿಕಾರ ಹಿಡಿದಿತ್ತು. ಆ ನಂತರ 2004ರಲ್ಲಿ 79 ಸ್ಥಾನ ಗೆದ್ದರೂ ಪ್ರತಿಪಕ್ಷದಲ್ಲಿ ಕೂರಬೇಕಾಗಿತ್ತು. 2006ರಲ್ಲಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ಸೂಚಿಸುವ ಮೂಲಕ ಅಧಿಕಾರದಲ್ಲಿತ್ತು. ಆದರೆ ಕುಮಾರಸ್ವಾಮಿಯವರು ಕೊಟ್ಟ ಮಾತಿನಂತೆ ಅಧಿಕಾರ ಹಸ್ತಾಂತರಿಸದೇ ಸರ್ಕಾರ ವಿಸರ್ಜಿಸಿದರು. ಇದರಿಂದ ಯಡಿಯೂರಪ್ಪನವರ ಮೇಲಿನ ಅನುಕಂಪದಿಂದ 2008ರಲ್ಲಿ ಬಿಜೆಪಿ 110 ಸ್ಥಾನ ಗೆದ್ದಿತ್ತು. ಆದರೂ ಬಹುಮತಕ್ಕೆ 03 ಸೀಟುಗಳ ಕೊರತೆಯಿತ್ತು. ಆಗ ಯಡಿಯೂರಪ್ಪನವರು ಆಪರೇಷನ್ ಕಮಲ ನಡೆಸಿ ಅಧಿಕಾರಕ್ಕೆ ಬಂದರು.

ಇನ್ನು 2013ರಲ್ಲಿ ಬಿಜೆಪಿ 40 ಸ್ಥಾನಗಳಿಗೆ ಕುಸಿದಿತ್ತು. 2018ರಲ್ಲಿ 104 ಸ್ಥಾನ ಗೆದ್ದರೂ ಸರಳ ಬಹುಮತ ಸಿಗದೇ ವಿರೋಧ ಪಕ್ಷವಾಗಿತ್ತು. ಆದರೆ 2019ರಲ್ಲಿ ಮತ್ತೆ ಆಪರೇ‍ಷನ್ ಕಮಲ ನಡೆಸಿ ಕಾಂಗ್ರೆಸ್-ಜೆಡಿಎಸ್‌ ಸಮ್ಮಿಶ್ರ ಸರ್ಕಾರವನ್ನು ಕೆಡವಿ ಅಧಿಕಾರಕ್ಕೆ ಬಂದಿದೆ. ಇಷ್ಟೆಲ್ಲ ಆದರೂ ಬಿಜೆಪಿ ಕರ್ನಾಟಕ ಸುಮಾರು 44 ಕ್ಷೇತ್ರಗಳಲ್ಲಿ ಒಮ್ಮೆಯೂ ಗೆದ್ದು ಖಾತೆ ತೆರೆಯಲು ಸಾಧ್ಯವಾಗಿಲ್ಲ. ಅಲ್ಲದೆ 53 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಒಮ್ಮೆ ಮಾತ್ರ ಖಾತೆ ತೆರೆದಿದೆ. ಅಂತಹ ಕ್ಷೇತ್ರಗಳ ಪಟ್ಟಿ ಇಲ್ಲಿದೆ.

ಒಮ್ಮೆಯೂ ಗೆಲ್ಲಲಾಗದ ಕ್ಷೇತ್ರಗಳು

  1. ಮಂಡ್ಯ
  2. ಮದ್ದೂರು
  3. ಮೇಲುಕೋಟೆ
  4. ಶ್ರೀರಂಗಪಟ್ಟಣ
  5. ನಾಗಮಂಗಲ
  6. ಮಳವಳ್ಳಿ
  7. ಕುಣಿಗಲ್
  8. ಗುಬ್ಬಿ
  9. ಮಧುಗಿರಿ
  10. ಕೊರಟಗೆರೆ
  11. ಪಾವಗಡ
  12. ಚಿಂತಾಮಣಿ
  13. ಶಿಡ್ಲಘಟ್ಟ
  14. ಬಾಗೇಪಲ್ಲಿ
  15. ಗೌರಿಬಿದನೂರು
  16. ಮುಳಬಾಗಿಲು
  17. ಶ್ರೀನಿವಾಸಪುರ
  18. ಕೋಲಾರ
  19. ದೇವನಹಳ್ಳಿ
  20. ಹೆಚ್.ಡಿ ಕೋಟೆ
  21. ಹನೂರು
  22. ವರುಣ
  23. ಚಾಮುಂಡೇಶ್ವರಿ
  24. ಹೊಳೆನರಸೀಪುರ
  25. ಶ್ರವಣಬೆಳಗೊಳ
  26. ಅಫ್ಜಲಪುರ
  27. ಗುರುಮಠಕಲ್
  28. ಬೀದರ್ ದಕ್ಷಿಣ
  29. ಹಳಿಯಾಳ
  30. ದಾವಣಗೆರೆ ದಕ್ಷಿಣ
  31. ಶಹಾಪುರ
  32. ಮಾನ್ವಿ
  33. ಸಿಂಧನೂರು
  34. ಯಮಕನಮರಡಿ
  35. ಸಂಡೂರು
  36. ಭದ್ರಾವತಿ
  37. ಬ್ಯಾಟರಾಯಪುರ
  38. ಪುಲಿಕೇಶಿನಗರ
  39. ವಿಜಯನಗರ
  40. ಸರ್ವಜ್ಞನಗರ
  41. ಬಿಟಿಎಂ ಲೇಔಟ್
  42. ಗಾಂಧಿನಗರ
  43. ರಾಮನಗರ
  44. ಕನಕಪುರ

ಇಷ್ಟು ಕ್ಷೇತ್ರಗಳಲ್ಲಿ ಒಮ್ಮೆಯೂ ಬಿಜೆಪಿ ಖಾತೆ ತೆರೆಯಲು ಸಾಧ್ಯವಾಗಿಲ್ಲ. ಇವುಗಳಲ್ಲಿ ಬಹುತೇಕ ಹಳೇ ಮೈಸೂರು ಪ್ರಾಂತ್ಯದ ಕ್ಷೇತ್ರಗಳಾಗಿವೆ. ಇಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಇದೆ ಹೊರತು ಬಿಜೆಪಿಗೆ ಮೂರನೇ ಸ್ಥಾನ. ಬಿಜೆಪಿಗೆ ಲಿಂಗಾಯತ ಸಮುದಾಯ ಕೆಲವೊಮ್ಮೆ ಹೆಚ್ಚಿನ ಬೆಂಬಲ ನೀಡಿದೆ. ಆದರೆ ಹಳೇ ಮೈಸೂರು ಪ್ರಾಂತ್ಯದಲ್ಲಿ ಲಿಂಗಾಯತರ ಪ್ರಾಬಲ್ಯವಿಲ್ಲ. ಅದು ಕೂಡ ಬಿಜೆಪಿ ಸೋಲಿಗೆ ಒಂದು ಕಾರಣವಾಗಿದೆ.

ಬಿಜೆಪಿ ಒಮ್ಮೆ ಮಾತ್ರ ಗೆಲುವು ಕಂಡ ಕ್ಷೇತ್ರಗಳಿವು

  1. ಕೆ.ಆರ್ ಪೇಟೆ (2019 ಉಪ)
  2. ನರಸಿಂಹರಾಜ (1994)
  3. ಚನ್ನಪಟ್ಟಣ (2011 ಉಪ)
  4. ಮಾಗಡಿ (1994)
  5. ಶಾಂತಿನಗರ (2004)
  6. ಚಾಮರಾಜ ಪೇಟೆ (1994)
  7. ಮಹಾಲಕ್ಷ್ಮೀ ಲೇಔಟ್ (2019 ಉಪ)
  8. ಗೋವಿಂದರಾಜನಗರ (2018)
  9. ಅರಕಲಗೂಡು (1999)
  10. ಅರಸೀಕೆರೆ (2004)
  11. ಬೇಲೂರು (1999)
  12. ಗದಗ (2008)
  13. ಮುದ್ದೇಬಿಹಾಳ (2018)
  14. ಬಬಲೇಶ್ವರ (1999)
  15. ನಾಗಠಾಣ (2008)
  16. ಇಂಡಿ (2008)
  17. ಯಾದಗಿರಿ (2018)
  18. ಲಿಂಗಸಗೂರು (2008)
  19. ಬೆಳಗಾವಿ ಉತ್ತರ (2018)
  20. ಗೋಕಾಕ್ (2019 ಉಪ)
  21. ಆಳಂದ (2018)
  22. ಹುಮ್ನಾಬಾದ್ (1999)
  23. ಚಿಂಚೋಳ್ಳಿ (2008)
  24. ಕಂಪ್ಲಿ (2008)
  25. ಹಡಗಲಿ (2008)
  26. ಹಗರಿಬೊಮ್ಮನಹಳ್ಳಿ (2008)
  27. ಕುಂದಗೋಳ (2008)
  28. ಹರಿಹರ (2008)
  29. ಮೂಡಬಿದರೆ (2018)
  30. ಮಂಗಳೂರು ನಗರ (1994)
  31. ಶಿರಾ (2020 ಉಪಚುನಾವಣೆ)
  32. ಮೊಳಕಾಲ್ಮೂರು (2018)
  33. ಹಿರಿಯೂರು (2018)
  34. ಹೊಸದುರ್ಗ (2018)
  35. ಚಿಕ್ಕೋಡಿ (2004)
  36. ಕುಡಚಿ (2018)
  37. ಚಿಕ್ಕಬಳ್ಳಾಪುರ (2019 ಉಪ)
  38. ನೆಲಮಂಗಲ (2008)
  39. ಹೊಸಕೋಟೆ (2008)
  40. ದೊಡ್ಡಬಳ್ಳಾಪುರ (1999)
  41. ಚಾಮರಾಜನಗರ (1999)
  42. ನಂಜನಗೂಡು (2018)
  43. ಕೊಳ್ಳೇಗಾಲ (2009 ಉಪ)
  44. ಟಿ.ನರಸೀಪುರ (1999)
  45. ಗುಂಡ್ಲುಪೇಟೆ (2018)
  46. ಬಂಗಾರಪೇಟೆ (2011 ಉಪ)
  47. ಕೊಪ್ಪಳ (2011 ಉಪ)
  48. ಮಸ್ಕಿ (2008)
  49. ಪಿರಿಯಾಪಟ್ಟಣ (1999)
  50. ಚಿತ್ತಾಪುರ (2008)
  51. ಜೇವರ್ಗಿ (2008)
  52. ಕಲಬುರಗಿ ಉತ್ತರ (2004)
  53. ಖಾನಪುರ (2008)

ಈ 53 ಕ್ಷೇತ್ರಗಳಲ್ಲಿ ಹತ್ತಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಉಪ ಚುನಾವಣೆಗಳಲ್ಲಿ ಬಿಜೆಪಿ ಗೆದ್ದಿದೆ. ಆಪರೇಷನ್ ಕಮಲ ಕಾರಣಕ್ಕಾಗಿ ನಡೆದ ಚುನಾವಣೆಗಳೇ ಹೆಚ್ಚಾಗಿವೆ. ಇನ್ನು 2008ರಲ್ಲಿ ಯಡಿಯೂರಪ್ಪನವರಿಗೆ ಸಿಎಂ ಸ್ಥಾನ ಕೊಡದೇ ಮೋಸ ಮಾಡಲಾಯಿತು ಎಂಬ ಅನುಕಂಪದಿಂದ ಬಹಳಷ್ಟು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದು ಬಂದಿತ್ತು.

ಇದನ್ನೂ ಓದಿ: ಮುಸ್ಲಿಮರಿಗೆ ಒಂದೂ ಟಿಕೆಟ್ ನೀಡದ ಬಿಜೆಪಿ: ಜೆಡಿಎಸ್‌ನ 22, ಕಾಂಗ್ರೆಸ್ 15 ಅಭ್ಯರ್ಥಿಗಳ ವಿವರ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...