Homeಕರ್ನಾಟಕಕೊಳ್ಳೇಗಾಲ: ನಾಮಪತ್ರ ಹಿಂಪಡೆದ ಬಿಎಸ್‌ಪಿ ಅಭ್ಯರ್ಥಿ, ಕಾಂಗ್ರೆಸ್‌ಗೆ ಬೆಂಬಲ

ಕೊಳ್ಳೇಗಾಲ: ನಾಮಪತ್ರ ಹಿಂಪಡೆದ ಬಿಎಸ್‌ಪಿ ಅಭ್ಯರ್ಥಿ, ಕಾಂಗ್ರೆಸ್‌ಗೆ ಬೆಂಬಲ

- Advertisement -
- Advertisement -

ರಾಜ್ಯ ವಿಧಾನಸಭೆಯ ಚುನಾವಣೆ ದಿನದಿಂದ ದಿನಕ್ಕೆ ಕಾವು ಪಡೆಯುತ್ತಿದ್ದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದ ಇಂದು (ಏಪ್ರಿಲ್‌ 24) ಅನೇಕ ಬಂಡಾಯ ಅಭ್ಯರ್ಥಿಗಳು ನಾಮಪತ್ರ ವಾಪಸ್ ಪಡೆದಿದ್ದಾರೆ. ವಿಶೇಷವಾಗಿ ಬಿಎಸ್‌ಪಿ ಪ್ರಬಲವಾಗಿರುವ ಕೊಳ್ಳೇಗಾಲ ಕ್ಷೇತ್ರದಲ್ಲಿ ಪಕ್ಷದಿಂದ ನಾಮಪತ್ರ ಸಲ್ಲಿಸಿದ್ದ ರೇಖಾ ನಾಗರಾಜ್‌ ಅವರೂ ಉಮೇದುವಾರಿಕೆ ವಾಪಸ್‌ ಪಡೆದಿದ್ದಾರೆ.

ಬಹುಜನ ಚಳವಳಿಯ ಮೂಲಕ ಮುಂಚೂಣಿಗೆ ಬಂದು ಬಹಳ ಕಾಲ ಬಿಎಸ್‌ಪಿಯಲ್ಲೇ ಇದ್ದ ಎನ್‌.ಮಹೇಶ್ ಅವರು ಹಲವು ಸೋಲುಗಳ ಬಳಿಕ 2018ರಲ್ಲಿ ಗೆಲುವು ಪಡೆದಿದ್ದರು. ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಸಚಿವರಾಗಿಯೂ ಕೆಲಸ ಮಾಡಿದ್ದರು. ಆದರೆ ಆಪರೇಷನ್ ಕಮಲದ ಸಂದರ್ಭದಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದರು. ಪಕ್ಷದಿಂದ ಉಚ್ಚಾಟನೆ ಮಾಡಿದ ಬಳಿಕ ಬಿಜೆಪಿ ಸೇರಿಕೊಂಡಿದ್ದರು.

ಬಿಎಸ್‌ಪಿ ವರಿಷ್ಠರ ಇಚ್ಛೆಗೆ ವಿರುದ್ಧವಾಗಿ ಮಹೇಶ್‌ ನಡೆದುಕೊಂಡರೆಂಬ ಆರೋಪಗಳು ಈಗಲೂ ಇವೆ. ಹೀಗಾಗಿ ಮಹೇಶ್ ಅವರನ್ನು ಸೋಲಿಸುವ ಉದ್ದೇಶವನ್ನು ಹೊಂದಿರುವ ಬಿಎಸ್‌ಪಿ ವರಿಷ್ಠರು, ಕೊಳ್ಳೇಗಾಲ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದಾರೆಂದು ಮೂಲಗಳು ಹೇಳಿವೆ.

ಎನ್‌.ಮಹೇಶ್‌ ದೂರವಾದ ಬಳಿಕ ಕ್ಷೇತ್ರದಲ್ಲಿ ಪಕ್ಷದ ಹಿಡಿತ ಕೊಂಚ ಕಡಿಮೆಯಾದಂತೆ ಕಂಡು ಬಂದರೂ, ಕಾರ್ಯಕರ್ತರು ದೊಡ್ಡ ಸಂಖ್ಯೆಯಲ್ಲಿಯೇ ಇದ್ದಾರೆ. ಪಕ್ಷದ ರಾಜ್ಯ ಕಾರ್ಯದರ್ಶಿ ಕಮಲ್‌ ನಾಗರಾಜು ಹಾಗೂ ಅವರ ಪತ್ನಿ ರೇಖಾ ನಾಮಪತ್ರ ಸಲ್ಲಿಸಿದ್ದರು. ಕಮಲ್‌ ನಾಮಪತ್ರ ತಿರಸ್ಕೃತವಾಗಿತ್ತು. ಆದರೆ ರೇಖಾ ಉಮೇದುವಾರಿಕೆ ಕ್ರಮಬದ್ಧವಾಗಿತ್ತು.

ದಿಢೀರ್‌ ಬೆಳವಣಿಗೆಯಲ್ಲಿ ರೇಖಾ ಸೋಮವಾರ ನಾಮಪತ್ರ ವಾಪಸ್‌ ಪಡೆದಿದ್ದಾರೆ.

“ಪಕ್ಷದ ವರಿಷ್ಠರು ಕೊಳ್ಳೇಗಾಲ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ನಿರ್ಧರಿಸಿದ್ದಾರೆ. ಪಕ್ಷಕ್ಕೆ ಮೋಸ ಮಾಡಿರುವ ಎನ್‌.ಮಹೇಶ್‌ ಅವರನ್ನು ಸೋಲಿಸುವ ಗುರಿಯೊಂದಿಗೆ ನಿರ್ಧಾರ ಕೈಗೊಳ್ಳಲಾಗಿದೆ. ಹೀಗಾಗಿ ಬಿಎಸ್‌ಪಿ ನಾಮಪತ್ರ ವಾಪಸ್ ಪಡೆಯಲು ಸೂಚಿಸಿದ್ದರು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಎ.ಆರ್‌.ಕೃಷ್ಣಮೂರ್ತಿಯವರನ್ನು ಬಿಎಸ್‌ಪಿ ಬೆಂಬಲಿಸಲಿದೆ” ಎಂದು ರೇಖಾ ನಾಗರಾಜ್ ತಿಳಿಸಿದ್ದಾರೆ.

ಇದನ್ನೂ ಓದಿರಿ: ಇದುವರೆಗೂ ಬಿಜೆಪಿ ಖಾತೆ ತೆರೆಯಲಾಗದ ಕ್ಷೇತ್ರಗಳಿವು: ಕಾರಣವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...