Homeಮುಖಪುಟ'ಬಿಜೆಪಿಯ ಸಾಗರೋತ್ತರ ಗೆಳೆಯರ ಬಳಗ'ದ ಸಂಸ್ಥಾಪಕನಿಂದ ಅತ್ಯಾಚಾರ: ತಪ್ಪಿತಸ್ಥ ಎಂದು ಘೋಷಿಸಿದ ಸಿಡ್ನಿ ನ್ಯಾಯಾಲಯ

‘ಬಿಜೆಪಿಯ ಸಾಗರೋತ್ತರ ಗೆಳೆಯರ ಬಳಗ’ದ ಸಂಸ್ಥಾಪಕನಿಂದ ಅತ್ಯಾಚಾರ: ತಪ್ಪಿತಸ್ಥ ಎಂದು ಘೋಷಿಸಿದ ಸಿಡ್ನಿ ನ್ಯಾಯಾಲಯ

- Advertisement -
- Advertisement -

ಬಿಜೆಪಿಯ ಓವರ್‌ಸೀಸ್ ಫ್ರೆಂಡ್ಸ್‌ನ (ಸಾಗರೋತ್ತರ ಸ್ನೇಹಿತರು) ಆಸ್ಟ್ರೇಲಿಯಾ ವಿಭಾಗದ ಸಂಸ್ಥಾಪಕರಲ್ಲಿ ಒಬ್ಬರಾದ ಬಾಲೇಶ್ ಧಂಖರ್ ಅವರು, ಸುಳ್ಳು ಉದ್ಯೋಗ ಜಾಹೀರಾತುಗಳ ಮೂಲಕ ಭೇಟಿಯಾಗಿ, ಐವರು ಮಹಿಳೆಯರಿಗೆ ಮಾದಕವಸ್ತು ನೀಡಿ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಸೋಮವಾರದಂದು ಸಿಡ್ನಿಯ ಡೌನಿಂಗ್ ಸೆಂಟರ್‌ನಲ್ಲಿರುವ ಜಿಲ್ಲಾ ನ್ಯಾಯಾಲಯದ ತೀರ್ಪುಗಾರರು ಆತನ ವಿರುದ್ಧದ 39 ಆರೋಪಗಳಲ್ಲಿ ಪ್ರತಿಯೊಂದನ್ನು ತಪ್ಪಿತಸ್ಥರೆಂದು ಘೋಷಿಸಿದ್ದಾರೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ಅವರು 13 ಅತ್ಯಾಚಾರ ಪ್ರಕರಣಗಳು, 6 ಅತ್ಯಾಚಾರಕ್ಕೆ ಅನುಕೂಲವಾಗುವಂತೆ ಮಾದಕ ವಸ್ತುವನ್ನು ಉದ್ದೇಶಪೂರ್ವಕವಾಗಿ ಸೇವಿಸಿದ ಘಟನೆಗಳು, 17 ಸಂಬಂಧಿಸಿದ ವೀಡಿಯೊಗಳನ್ನು ಅನಧಿಕೃತವಾಗಿ ರೆಕಾರ್ಡ್ ಮಾಡಿದ ಘಟನೆಗಳು ಮತ್ತು 3 ಅಸಭ್ಯವಾಗಿ ಹಲ್ಲೆಯ ಘಟನೆಗಳಿಗೆ ಸಂಬಂಧಿಸಿದ ಆರೋಪಗಳನ್ನು ಎದುರಿಸಿದರು.

ಧಂಖರ್ ಮಹಿಳೆಯರಿಗೆ ವೈನ್ ಅಥವಾ ಐಸ್ ಕ್ರೀಂನಲ್ಲಿ ನಿದ್ರಾಮಾತ್ರೆ ಬೆರಸುತ್ತಿದ್ದನು. ಅವರು ಅದನ್ನು ಸೇವಿಸಿದ ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. ಅಲಾರಾಮ ಗಡಿಯಾರದ ಹಿಂದೆ ತನ್ನ ಫೋನ್ ಇಟ್ಟು, ತನ್ನ ಲೈಂಗಿಕ ಕ್ರಿಯೆಯ ವಿಡಿಯೋ ಚಿತ್ರಿಕರಿಸುತ್ತಿದ್ದನು.

ಪ್ರಕರಣದ ವಿಚಾರಣೆಯ ಸಮಯದಲ್ಲಿ, ತೀರ್ಪುಗಾರರು, ಆತನ ಲೈಂಗಿಕ ದೌರ್ಜನ್ಯದ ರೆಕಾರ್ಡಿಂಗ್‌ಗಳನ್ನು ವೀಕ್ಷಿಸಬೇಕಾಗಿತ್ತು. ಆ ವೀಡಿಯೊಗಳನ್ನು ವೀಕ್ಷಿಸಿದ ನಂತರ ಅವರು ಆಘಾತಕ್ಕೊಳಗಾದರು ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ಅಕ್ಟೋಬರ್ 2018 ರಲ್ಲಿ ಪೊಲೀಸರು ಧಂಖರ್ಸ್ ಸಿಬಿಡಿ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿದಾಗ, ಡಜನ್‌ಗಟ್ಟಲೇ ವಿಡಿಯೋಗಳು ಸಿಕ್ಕಿವೆ. ಆ ವಿಡಿಯೋಗಳಲ್ಲಿ ಪ್ರಜ್ಞಾಹೀನರಾಗಿರುವ ಅಥವಾ ಹೆಣಗಾಡುತ್ತಿರುವ ಮಹಿಳೆಯರ ಲೈಂಗಿಕ ದೌರ್ಜನ್ಯದ ದೃಶ್ಯಗಳಿದ್ದವು. ಆ ವಿಡಿಯೊಗಳನ್ನು ಫೋಲ್ಡರ್‌ಗಳಾಗಿ ವಿಂಗಡಿಸಲಾಗಿದೆ, ಪ್ರತಿಯೊಂದನ್ನು ಕೊರಿಯನ್ ಮಹಿಳೆಯ ಹೆಸರಿನಲ್ಲಿ ಸೇವ್ ಮಾಡಲಾಗಿದೆ.

ಏತನ್ಮಧ್ಯೆ, 2018 ರಲ್ಲಿ ಧಂಖರ್ ಅವರು ಸಂಘಟನೆಗೆ ರಾಜೀನಾಮೆ ನೀಡಿದ್ದಾರೆ ಎಂದು ಬಿಜೆಪಿಯ ಆಸ್ಟ್ರೇಲಿಯಾ ಘಟಕ ಹೇಳಿದೆ. ”ಬಾಲೇಶ್ ಧನಕರ್ ಅವರು ಜುಲೈ 2018 ರಲ್ಲಿ OFBJP ಆಸ್ಟ್ರೇಲಿಯಾಕ್ಕೆ ರಾಜೀನಾಮೆ ನೀಡಿದ್ದಾರೆ. ನಾವು ಅವರ ಕ್ರಮಗಳನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ಅವರು ಸಂಪೂರ್ಣ ಕಾನೂನು ಬಲವನ್ನು ಎದುರಿಸಬೇಕು” ಎಂದು ಸಂಘಟನೆ ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...