Homeಮುಖಪುಟ'ಬಿಜೆಪಿಯ ಸಾಗರೋತ್ತರ ಗೆಳೆಯರ ಬಳಗ'ದ ಸಂಸ್ಥಾಪಕನಿಂದ ಅತ್ಯಾಚಾರ: ತಪ್ಪಿತಸ್ಥ ಎಂದು ಘೋಷಿಸಿದ ಸಿಡ್ನಿ ನ್ಯಾಯಾಲಯ

‘ಬಿಜೆಪಿಯ ಸಾಗರೋತ್ತರ ಗೆಳೆಯರ ಬಳಗ’ದ ಸಂಸ್ಥಾಪಕನಿಂದ ಅತ್ಯಾಚಾರ: ತಪ್ಪಿತಸ್ಥ ಎಂದು ಘೋಷಿಸಿದ ಸಿಡ್ನಿ ನ್ಯಾಯಾಲಯ

- Advertisement -
- Advertisement -

ಬಿಜೆಪಿಯ ಓವರ್‌ಸೀಸ್ ಫ್ರೆಂಡ್ಸ್‌ನ (ಸಾಗರೋತ್ತರ ಸ್ನೇಹಿತರು) ಆಸ್ಟ್ರೇಲಿಯಾ ವಿಭಾಗದ ಸಂಸ್ಥಾಪಕರಲ್ಲಿ ಒಬ್ಬರಾದ ಬಾಲೇಶ್ ಧಂಖರ್ ಅವರು, ಸುಳ್ಳು ಉದ್ಯೋಗ ಜಾಹೀರಾತುಗಳ ಮೂಲಕ ಭೇಟಿಯಾಗಿ, ಐವರು ಮಹಿಳೆಯರಿಗೆ ಮಾದಕವಸ್ತು ನೀಡಿ ಅವರ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಸೋಮವಾರದಂದು ಸಿಡ್ನಿಯ ಡೌನಿಂಗ್ ಸೆಂಟರ್‌ನಲ್ಲಿರುವ ಜಿಲ್ಲಾ ನ್ಯಾಯಾಲಯದ ತೀರ್ಪುಗಾರರು ಆತನ ವಿರುದ್ಧದ 39 ಆರೋಪಗಳಲ್ಲಿ ಪ್ರತಿಯೊಂದನ್ನು ತಪ್ಪಿತಸ್ಥರೆಂದು ಘೋಷಿಸಿದ್ದಾರೆ ಎಂದು ದಿ ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ಅವರು 13 ಅತ್ಯಾಚಾರ ಪ್ರಕರಣಗಳು, 6 ಅತ್ಯಾಚಾರಕ್ಕೆ ಅನುಕೂಲವಾಗುವಂತೆ ಮಾದಕ ವಸ್ತುವನ್ನು ಉದ್ದೇಶಪೂರ್ವಕವಾಗಿ ಸೇವಿಸಿದ ಘಟನೆಗಳು, 17 ಸಂಬಂಧಿಸಿದ ವೀಡಿಯೊಗಳನ್ನು ಅನಧಿಕೃತವಾಗಿ ರೆಕಾರ್ಡ್ ಮಾಡಿದ ಘಟನೆಗಳು ಮತ್ತು 3 ಅಸಭ್ಯವಾಗಿ ಹಲ್ಲೆಯ ಘಟನೆಗಳಿಗೆ ಸಂಬಂಧಿಸಿದ ಆರೋಪಗಳನ್ನು ಎದುರಿಸಿದರು.

ಧಂಖರ್ ಮಹಿಳೆಯರಿಗೆ ವೈನ್ ಅಥವಾ ಐಸ್ ಕ್ರೀಂನಲ್ಲಿ ನಿದ್ರಾಮಾತ್ರೆ ಬೆರಸುತ್ತಿದ್ದನು. ಅವರು ಅದನ್ನು ಸೇವಿಸಿದ ಬಳಿಕ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾಗ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಪ್ರಾಸಿಕ್ಯೂಷನ್ ಹೇಳಿದೆ. ಅಲಾರಾಮ ಗಡಿಯಾರದ ಹಿಂದೆ ತನ್ನ ಫೋನ್ ಇಟ್ಟು, ತನ್ನ ಲೈಂಗಿಕ ಕ್ರಿಯೆಯ ವಿಡಿಯೋ ಚಿತ್ರಿಕರಿಸುತ್ತಿದ್ದನು.

ಪ್ರಕರಣದ ವಿಚಾರಣೆಯ ಸಮಯದಲ್ಲಿ, ತೀರ್ಪುಗಾರರು, ಆತನ ಲೈಂಗಿಕ ದೌರ್ಜನ್ಯದ ರೆಕಾರ್ಡಿಂಗ್‌ಗಳನ್ನು ವೀಕ್ಷಿಸಬೇಕಾಗಿತ್ತು. ಆ ವೀಡಿಯೊಗಳನ್ನು ವೀಕ್ಷಿಸಿದ ನಂತರ ಅವರು ಆಘಾತಕ್ಕೊಳಗಾದರು ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್ ವರದಿ ಮಾಡಿದೆ.

ಅಕ್ಟೋಬರ್ 2018 ರಲ್ಲಿ ಪೊಲೀಸರು ಧಂಖರ್ಸ್ ಸಿಬಿಡಿ ಅಪಾರ್ಟ್ಮೆಂಟ್ ಮೇಲೆ ದಾಳಿ ಮಾಡಿದಾಗ, ಡಜನ್‌ಗಟ್ಟಲೇ ವಿಡಿಯೋಗಳು ಸಿಕ್ಕಿವೆ. ಆ ವಿಡಿಯೋಗಳಲ್ಲಿ ಪ್ರಜ್ಞಾಹೀನರಾಗಿರುವ ಅಥವಾ ಹೆಣಗಾಡುತ್ತಿರುವ ಮಹಿಳೆಯರ ಲೈಂಗಿಕ ದೌರ್ಜನ್ಯದ ದೃಶ್ಯಗಳಿದ್ದವು. ಆ ವಿಡಿಯೊಗಳನ್ನು ಫೋಲ್ಡರ್‌ಗಳಾಗಿ ವಿಂಗಡಿಸಲಾಗಿದೆ, ಪ್ರತಿಯೊಂದನ್ನು ಕೊರಿಯನ್ ಮಹಿಳೆಯ ಹೆಸರಿನಲ್ಲಿ ಸೇವ್ ಮಾಡಲಾಗಿದೆ.

ಏತನ್ಮಧ್ಯೆ, 2018 ರಲ್ಲಿ ಧಂಖರ್ ಅವರು ಸಂಘಟನೆಗೆ ರಾಜೀನಾಮೆ ನೀಡಿದ್ದಾರೆ ಎಂದು ಬಿಜೆಪಿಯ ಆಸ್ಟ್ರೇಲಿಯಾ ಘಟಕ ಹೇಳಿದೆ. ”ಬಾಲೇಶ್ ಧನಕರ್ ಅವರು ಜುಲೈ 2018 ರಲ್ಲಿ OFBJP ಆಸ್ಟ್ರೇಲಿಯಾಕ್ಕೆ ರಾಜೀನಾಮೆ ನೀಡಿದ್ದಾರೆ. ನಾವು ಅವರ ಕ್ರಮಗಳನ್ನು ಬಲವಾಗಿ ಖಂಡಿಸುತ್ತೇವೆ ಮತ್ತು ಅವರು ಸಂಪೂರ್ಣ ಕಾನೂನು ಬಲವನ್ನು ಎದುರಿಸಬೇಕು” ಎಂದು ಸಂಘಟನೆ ಟ್ವೀಟ್ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...