Homeಮುಖಪುಟಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ:...

ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ: ಶಿವಸುಂದರ್

- Advertisement -
- Advertisement -

ಮುಸ್ಲಿಂ ಮೀಸಲಾತಿ ರದ್ದಿನ ಆದೇಶ ಮೇ 9ರ ತನಕ ಜಾರಿ ಇಲ್ಲ, ಅಲ್ಲಿಯವರೆಗೆ 2002ರ ಆದೇಶವೇ ಜಾರಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಆದರೆ ಚುನಾವಣಾ ಕುತಂತ್ರಕ್ಕಾಗಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಬಿಜೆಪಿ ಸರ್ಕಾರ ಪದೇ ಪದೇ ಮುಂದೂಡುತ್ತಿದೆ ಎಂದು ಚಿಂತಕ ಶಿವಸುಂದರ್ ಅಭಿಪ್ರಾಯಪಟ್ಟಿದ್ದಾರೆ.

” ಸುಪ್ರೀಂ ನಲ್ಲಿ ಮುಸ್ಲಿಂ ಮೀಸಲಾತಿ ರದ್ದು ಆದೇಶದ ವಿಚಾರಣೆಯನ್ನು ಪದೇ ಪದೇ ಮುಂದೂಡಲು ಬಿಜೆಪಿ ಸರ್ಕಾರದ ಮಾಡುತ್ತಿರುವ ಮನವಿ ಚುನಾವಣಾ ಕುತಂತ್ರವಲ್ಲವೇ? ಇದು ಮುಸ್ಲಿಮರಿಗೂ, ಲಿಂಗಾಯತರಿಗೂ, ಒಕ್ಕಲಿಗರಿಗೂ ಕೂಡ ಮಾಡುತ್ತಿರುವ ವಂಚನೆಯಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

ಇಂದು ಕರ್ನಾಟಕದ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರ ತನ್ನ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು ಆದೇಶದ ಬಗ್ಗೆ ತನ್ನ ಅಫಿಡವಿಟ್ ಮಂಡಿಸಲು ಸುಪ್ರೀಂ ಕೋರ್ಟಿನಲ್ಲಿ ಮೇ 9ರ ತನಕ ಮತ್ತೊಂದು ಗಡುವು ಕೇಳಿದೆ. ಇದು ತನ್ನ ಅಸಾಂವಿಧಾನಿಕ ನಡೆಯನ್ನು ಸಮರ್ಥಿಸಿಕೊಳ್ಳಲಾಗದೆ ಬಿಜೆಪಿ ಸರ್ಕಾರ ಕೇಳಿದ ನಾಲ್ಕನೇ ವಿಸ್ತರಣೆ. ಮೇ 9 ರಂದೂ ಕೂಡ ಅದು ವಿಸ್ತರಣೆ ಕೇಳಿದರೆ ಸುಪ್ರೀಂ ಕೋರ್ಟಿನ ಬೇಸಿಗೆ ರಜಾ ಪ್ರಾರಂಭವಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ತಾನು ಲಿಂಗಾಯತ-ಒಕ್ಕಲಿಗರ ಪರವಾಗಿ ಮೀಸಲಾತಿ ಹೆಚ್ಚಿಸಿದ್ದೇನೆ ಎಂದು ಚುನಾವಣಾ ಪ್ರಚಾರ ಮಾಡುತ್ತಿರುವ ಬಿಜೆಪಿ ಸರ್ಕಾರ ಅದನ್ನು ಸುಪ್ರೀಂ ಕೋರ್ಟಿನಲ್ಲಿ ಏಕೆ ಸಮರ್ಥಿಸಿಕೊಳ್ಳಲು ಹಿಂದೆ ಮುಂದೆ ನೋಡುತ್ತಿದೆ? ಏಕೆಂದರೆ ಬಿಜೆಪಿ ಸರ್ಕಾರದ ಈ ಮೀಸಲಾತಿ ನೀತಿ ಅಸಾಂವಿಧಾನಿಕ, ಕಾನೂನು ಬಾಹಿರ. ಇದು ವಿಚಾರಣೆಗೆ ಬಂದರೆ ಬಿಜೆಪಿ ಆದೇಶ ಆದೇಶ ಸಿಂಧುವಾಗುವುದಿಲ್ಲ. ಆ ಆದೇಶವನ್ನು ಸುಪ್ರೀಂ ರದ್ದು ಮಾಡುತ್ತದೆ. ಆಗ ಚುನಾವಣೆಯಲ್ಲಿ ಬಿಜೆಪಿಗೆ ಮುಖಭಂಗವಾಗುತ್ತದೆ. ಆದ್ದರಿಂದಲೇ ಇಂದು ಮತ್ತೊಮ್ಮೆ ಮೇ 9 ರ ತನಕ ವಿಸ್ತರಣೆ ಕೇಳಿದೆ ಎಂದು ಅವರು ಹೇಳಿದ್ದಾರೆ.

ಏಕೆಂದರೆ ಮೇ 10 ಕ್ಕೆ ಚುನಾವಣಾ. ಮೇ 8 ಕ್ಕೆ ಚುನಾವಣಾ ಪ್ರಚಾರ ಮುಕ್ತಾಯ. ಸುಪ್ರೀಂನಲ್ಲಿ ಅಲ್ಲಿಯವರೆಗೆ ಗಡುವು ಪಡೆದುಕೊಂಡರೆ, ತಾವು ಮುಸ್ಲಿಂ ಮೀಸಲಾತಿ ರದ್ದು ಮಾಡಿ ಲಿಂಗಾಯತ -ಒಕ್ಕಲಿಗರಿಗೆ ಮೀಸಲಾತಿ ಹೆಚ್ಚಿಸಿದೆವು ಎಂದು ಸುಳ್ಳು ಪ್ರಚಾರ ಮಾಡುತ್ತಾ ಲಿಂಗಾಯತ ಮತ್ತು ಒಕ್ಕಲಿಗರಿಬ್ಬರಿಗೂ ವಂಚಿಸುತ್ತಿರಬಹುದು. ಈ ಚುನಾವಣಾ ಕುತಂತ್ರದ ಭಾಗವಾಗಿಯೇ ಬಿಜೆಪಿ ಸರ್ಕಾರ ಮೇ 9ರ ತನಕ ಗಡುವು ಕೇಳಿದೆ ಎಂದು ಶಿವಸುಂದರ್ ಹೇಳಿದ್ದಾರೆ.

ಇದಲ್ಲದೆ ವಿಚಾರಣೆಯಲ್ಲಿ ಮೇ 9 ರ ತನಕ ವಿಸ್ತರಣೆ ಕೇಳುವುದಾದರೆ ಅಲ್ಲಿಯತನಕ ತಡೆಯಾಜ್ಞೆ ಕೊಡಬೇಕು ಎಂದು ಅಹವಾಲುದಾರ ಪರ ವಕೀಲರು ಕೇಳಿದಾಗ: “ಅದರ ಅಗತ್ಯವಿಲ್ಲ. ನಾವು ಅಲ್ಲಿಯ ತನಕ ಹೊಸ ನೀತಿಯನ್ನು ಜಾರಿ ಮಾಡುವುದಿಲ್ಲ” ಎಂದಷ್ಟೇ ಸರ್ಕಾರಿ ವಕೀಲರು ಹೇಳಿದ್ದಾರೆ. ಆದರೆ ಅಹವಾಲುದಾರ ಪರ ವಕೀಲರು ಅಷ್ಟು ಸಾಲುವುದಿಲ್ಲ. ಬದಲಿಗೆ ಹೊಸ ನೀತಿ ಜಾರಿ ಮಾಡದಿರುವುದರ ಜೊತೆಗೆ 2002 ರಲ್ಲಿ ಜಾರಿಯಾದ ಹಳೆಯ ನೀತಿಯನ್ನೇ ಜಾರಿ ಮಾಡುತ್ತೇವೆ ಎಂದು ಸರ್ಕಾರ ಭರವಸೆ ಕೊಡಬೇಕು ಎಂದು ಬಲವಾಗಿ ವಾದಿಸಿದ್ದಾರೆ. ಅನಿವಾರ್ಯವಾಗಿ ಸರ್ಕಾರಿ ವಕೀಲರು ಅದನ್ನು ಒಪ್ಪಿಕೊಂಡಿದ್ದಾರೆ ಎಂದಿದ್ದಾರೆ.

ಹೀಗಾಗಿ ನ್ಯಾಯಾಧೀಶರು ಇವತ್ತಿನ ತಮ್ಮ ಆದೇಶದಲ್ಲಿ ಮುಂದಿನ ವಿಚಾರಣೆಯನ್ನು ಮೇ 9ಕ್ಕೆ ಮುಂದೂಡಿರುವುದರ ಜೊತೆಗೆ ಸರ್ಕಾರಿ ವಕೀಲರು ಮುಂದಿನ ವಿಚಾರಣೆಯ ತನಕ ಹೊಸ ನೀತಿಯನ್ನು ಜಾರಿ ಮಾಡದೆ ಹಳೆ ಆದೇಶವನ್ನೇ ಅರ್ಥಾತ್ ಮುಸ್ಲಿಮರಿಗೆ ಶೇ. 4ರ ಮೀಸಲಾತಿ ಆದೇಶವನ್ನೇ ಮೇ 9ರವರೆಗೆ ಮುಂದುವರೆಸುವುದಾಗಿ ಭರವಸೆ ಕೊಟ್ಟಿರುವುದನ್ನು ದಾಖಲಿಸಿದ್ದಾರೆ. ಅಂದರೆ ಬಿಜೆಪಿ ಸರ್ಕಾರದ ಮಾರ್ಚ್ 23 ರ ಮುಸ್ಲಿಂ ಮೀಸಲಾತಿ ರದ್ದಿನ ಆದೇಶಕ್ಕೆ ಸುಪ್ರೀಂಕೋರ್ಟು ಮೇ 9 ರತನಕ ತಡೆಯಾಜ್ಞೆಯನ್ನೇ ಕೊಟ್ಟಂತಾಗಿದೆ ಎಂದು ಅವರು ಹೇಳಿದ್ದಾರೆ.

ಆದರೆ ಹಾಗೆ ಒಪ್ಪಿಕೊಂಡರೆ ಚುನಾವಣೆಯಲ್ಲಿ ತಮ್ಮ ಮುಸ್ಲಿಂ ವಿರೋಧಿ ಪ್ರಚಾರಕ್ಕೆ ಪೆಟ್ಟು ಎಂದು ಬಿಜೆಪಿ ಮಾತುಗಳ ಕಸರತ್ತನ್ನು ಮಾಡುತ್ತಿದೆ. ಹೀಗಾಗಿ ಮಾರ್ಚ್ 23ರ ಮುಸ್ಲಿಂ ಮೀಸಲಾತಿ ರದ್ದು, ಅವರಿಂದ ಕಿತ್ತು ಲಿಂಗಾಯತ ಮತ್ತು ಒಕ್ಕಲಿಗರಿಗೆ ಹಂಚುವ ಬಿಜೆಪಿ ಸರ್ಕಾರದ ಆದೇಶ ಮೇ 9ರ ತನಕವಂತೂ ಜಾರಿಯಲ್ಲಿರುವುದಿಲ್ಲ. ಇದರ ಬಗ್ಗೆ ಬಿಜೆಪಿ ಏನೇ ಹೇಳಿದರೂ ಅದು ಸುಳ್ಳು ಪ್ರಚಾರವೇ ಆಗಿರುತ್ತದೆ. ಎಲ್ಲಕಿಂತ ಹೆಚ್ಚಾಗಿ ಬಿಜೆಪಿ ಸರ್ಕಾರ ಸುಪ್ರೀಂ ಕೋರ್ಟಿನಲ್ಲಿ ತನ್ನ ಈ ಕೋಮುವಾದಿ ಆದೇಶವನ್ನು ಸಮರ್ಥಿಸಿಕೊಳ್ಳಲು ಆಗುವುದಿಲ್ಲ ಎಂದು ಗೊತ್ತಾಗಿದೆ, ಹೀಗಾಗಿಯೇ ವಿಚಾರಣೆಯನ್ನು ಪದೇಪದೇ ಮುಂದೂಡುತ್ತಿದೆ. ಈಗಲಾದರೂ ಕರ್ನಾಟಕದ ಜನ ಬಿಜೆಪಿಯ ಈ ಕುತಂತ್ರಿ, ಕೋಮುವಾದಿ ಚುನಾವಣಾ ಪ್ರಚಾರಗಳನ್ನು ಅರ್ಥ ಮಾಡಿಕೊಳ್ಳುವರೇ ಎಂದು ಶಿವಸುಂದರ್ ಬರೆದಿದ್ದಾರೆ.

ಇದನ್ನೂ ಓದಿ: ಈ ಡಬಲ್‌ ಇಂಜಿನ್‌ ಸಂಘಪರಿವಾರದ ಸರ್ಕಾರವನ್ನು ಗುಜರಿಗೆ ಹಾಕಬೇಕಾಗಿದೆ: ದೇವನೂರ ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....