Homeಮುಖಪುಟಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗಿನ ವಿ.ಸೋಮಣ್ಣ ಆಡಿಯೋ ವೈರಲ್

ಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗಿನ ವಿ.ಸೋಮಣ್ಣ ಆಡಿಯೋ ವೈರಲ್

- Advertisement -
- Advertisement -

ಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ ಎಂದು ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರಿಗೆ ಸಚಿವ ವಿ.ಸೋಮಣ್ಣನವರು ಫೋನ್ ಮಾಡಿ ಪದೇ ಪದೇ ಬೇಡಿಕೊಂಡಿರುವ ಆಡಿಯೋ ಒಂದು ವೈರಲ್ ಆಗುತ್ತಿದೆ.

ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ಸ್ವಕ್ಷೇತ್ರ ಗೋವಿಂದರಾಜನಗರ ಬದಲು ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಸಚಿವ ವಿ.ಸೋಮಣ್ಣನವರು ಒಂದು ಕ್ಷೇತ್ರದಲ್ಲಾದರೂ ಗೆಲುವು ಸಾಧಿಸಲು ಹರಸಾಹಸ ಪಡುತ್ತಿದ್ದಾರೆ. ಅದರ ಭಾಗವಾಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಉಪ್ಪಾರ ಸಮುದಾಯದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರ ನಾಮಪತ್ರ ಹಿಂತೆಗೆಸಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿದೆ.

ಸೋಮವಾರ ಮಧ್ಯಾಹ್ನ ಕರೆ ಮಾಡಿದ ಸೋಮಣ್ಣನವರು ಏಯ್ ನಾಮಪತ್ರ ವಾಪಸ್ ತಗೋ. ಆಮೇಲೆ ಬಾಕಿದ್ದು ನಿನಗೆ ಏನು ಬೇಕೊ ಮಾಡಿಕೊಡ್ತೀನಿ. ಏನಯ್ಯ ನೀನು ಯಾವನೋ ಮಾತು ಕೇಳಿಕೊಂಡು ನಾಮಪತ್ರ ಹಾಕಿದ್ದೀಯ ಎಂದು ಸೋಮಣ್ಣನವರು ಜೋರು ಮಾಡುವುದು ಆಡಿಯೋದಲ್ಲಿದೆ.

ನೀನು ನನಗೆ ಒಬ್ಬ ಹಳೆಯ ಸ್ನೇಹಿತ. ಅವನ್ಯಾವನೋ ತೊಟ್ಟಿ ನನ್ನ ಮಗನ ಮಾತು ಕೇಳೋಕೆ ಹೋಗಬೇಡ. ನಿನಗೆ ಬದುಕುವುದಕ್ಕೆ ಏನು ಬೇಕು ಎಲ್ಲವೂ ಮಾಡ್ತೀನಿ. ಮೊದ್ಲು ನಾಮಪತ್ರ ವಾಪಸ್ ತಗೋ ಆಮೇಲೆ ಬಾಕಿದ್ದು ನಾನು ಮಾತನಾಡುತ್ತೇನೆ. ನಿನ್ನ ಹಿತ ಕಾಪಾಡುವುದು ನನ್ನ, ಸುದೀಪಣ್ಣ ಮತ್ತು ಮರಮಕಲ್ ರವರ ಜವಾಬ್ದಾರಿ. ನಾನೀಗ ಉಪ್ಪಾರರ ದೇವಾಸ್ಥಾನದಲ್ಲಿ ಇದ್ದೀನಿ. ನಿನ್ನನ್ನು ಎಲ್ಲಿಗೆ ತಗೊಂಡು ಹೋಗಿ ಬಿಡಬೇಕು ಅಲ್ಲಿಗೆ ಬಿಡುತ್ತೇನೆ. ಮೊದಲು ವಾಪಸ್ ತಗೊ ನಿನಗೆ ಕೈ ಮುಗಿಯುತ್ತೇನೆ ಎಂದು ಸೋಮಣ್ಣನವರು ಹೇಳಿದ್ದಾರೆ.

ಮುಂದುವರೆದು, “ಇನ್ನೊಂದು ಗಂಟೆ ಮಾತ್ರ ಸಮಯವಿದೆ. ಅವನ್ಯಾವನೋ ಪೋಲಿ ನನ್ ಮಗನ ಮಾತು ಕೇಳ್ಕೊಂಡು ನಿಂತಿದ್ದೀಯ. ನೀನು ಮೊದಲು ವಾಪಸ್ ತಗೋ. ನಮ್ ಸರ್ಕಾರ ಬರುತ್ತದೆ. ನಿನಗೆ ಒಂದು ಗೂಟದ ಕಾರು ಬೇಕು, ನಾನು ಕೊಡಿಸ್ತೀನಿ ಎಂದು ಸೋಮಣ್ಣ ಹೇಳಿರುವುದು ದಾಖಲಾಗಿದೆ. ಇದೇ ಸಂದರ್ಭದಲ್ಲಿ ಸೋಮಣ್ಣನವರ ಫೋನ್‌ನಿಂದ ಮಾತನಾಡುವ ಮತ್ತೊಬ್ಬರು ಮಲ್ಲ, ಜಿ.ಟಿ ದೇವೇಗೌಡರ ಕೈಲಿ ಹೇಳಿಸ್ತೀನಿ. ನಾಮಪತ್ರ ವಾಪಸ್ ತಗೋ ಎನ್ನುತ್ತಾರೆ.

ಉಪ್ಪಾರರು ನೀವು. ನಾನು ಉಪ್ಪಾರರ ದೇವರ ಮುಂದೆ ನಿಂತಿದ್ದೀನಿ. ನೀನು ಯಾವನ ಮಾತು ಕೇಳಬೇಡ. ಮೊದ್ಲು ನಾಮಪತ್ರ ವಾಪಸ್ ತಗೊ. ಜಿ.ಟಿ ದೇವೇಗೌಡ ನಾವೆಲ್ಲ ಸ್ನೇಹಿತರು, ನಾನು ಮಾತನಾಡುತ್ತೇನೆ. ಪ್ಲೀಸ್ ತಗೋ ಎನ್ನುತ್ತಾರೆ.

ಇದನ್ನೂ ಓದಿ: ಶ್ರವಣಬೆಳಗೊಳ: ಖಾತೆ ತೆರೆಯದ ಬಿಜೆಪಿ – ಜೆಡಿಎಸ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಕಸರತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...