Homeಮುಖಪುಟಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗಿನ ವಿ.ಸೋಮಣ್ಣ ಆಡಿಯೋ ವೈರಲ್

ಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ: ಚಾಮರಾಜನಗರ ಜೆಡಿಎಸ್ ಅಭ್ಯರ್ಥಿಯೊಂದಿಗಿನ ವಿ.ಸೋಮಣ್ಣ ಆಡಿಯೋ ವೈರಲ್

- Advertisement -
- Advertisement -

ಗೂಟದ ಕಾರು ಕೊಡ್ತೀವಿ ನಾಮಪತ್ರ ವಾಪಸ್ ತಗೋ ಎಂದು ಚಾಮರಾಜನಗರ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರಿಗೆ ಸಚಿವ ವಿ.ಸೋಮಣ್ಣನವರು ಫೋನ್ ಮಾಡಿ ಪದೇ ಪದೇ ಬೇಡಿಕೊಂಡಿರುವ ಆಡಿಯೋ ಒಂದು ವೈರಲ್ ಆಗುತ್ತಿದೆ.

ಬಿಜೆಪಿ ಹೈಕಮಾಂಡ್ ಆದೇಶದ ಮೇರೆಗೆ ಸ್ವಕ್ಷೇತ್ರ ಗೋವಿಂದರಾಜನಗರ ಬದಲು ಚಾಮರಾಜನಗರ ಮತ್ತು ವರುಣಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿರುವ ಸಚಿವ ವಿ.ಸೋಮಣ್ಣನವರು ಒಂದು ಕ್ಷೇತ್ರದಲ್ಲಾದರೂ ಗೆಲುವು ಸಾಧಿಸಲು ಹರಸಾಹಸ ಪಡುತ್ತಿದ್ದಾರೆ. ಅದರ ಭಾಗವಾಗಿ ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಉಪ್ಪಾರ ಸಮುದಾಯದ ಜೆಡಿಎಸ್ ಅಭ್ಯರ್ಥಿ ಮಲ್ಲಿಕಾರ್ಜುನಸ್ವಾಮಿಯವರ ನಾಮಪತ್ರ ಹಿಂತೆಗೆಸಲು ಪ್ರಯತ್ನಿಸಿರುವುದು ಬೆಳಕಿಗೆ ಬಂದಿದೆ.

ಸೋಮವಾರ ಮಧ್ಯಾಹ್ನ ಕರೆ ಮಾಡಿದ ಸೋಮಣ್ಣನವರು ಏಯ್ ನಾಮಪತ್ರ ವಾಪಸ್ ತಗೋ. ಆಮೇಲೆ ಬಾಕಿದ್ದು ನಿನಗೆ ಏನು ಬೇಕೊ ಮಾಡಿಕೊಡ್ತೀನಿ. ಏನಯ್ಯ ನೀನು ಯಾವನೋ ಮಾತು ಕೇಳಿಕೊಂಡು ನಾಮಪತ್ರ ಹಾಕಿದ್ದೀಯ ಎಂದು ಸೋಮಣ್ಣನವರು ಜೋರು ಮಾಡುವುದು ಆಡಿಯೋದಲ್ಲಿದೆ.

ನೀನು ನನಗೆ ಒಬ್ಬ ಹಳೆಯ ಸ್ನೇಹಿತ. ಅವನ್ಯಾವನೋ ತೊಟ್ಟಿ ನನ್ನ ಮಗನ ಮಾತು ಕೇಳೋಕೆ ಹೋಗಬೇಡ. ನಿನಗೆ ಬದುಕುವುದಕ್ಕೆ ಏನು ಬೇಕು ಎಲ್ಲವೂ ಮಾಡ್ತೀನಿ. ಮೊದ್ಲು ನಾಮಪತ್ರ ವಾಪಸ್ ತಗೋ ಆಮೇಲೆ ಬಾಕಿದ್ದು ನಾನು ಮಾತನಾಡುತ್ತೇನೆ. ನಿನ್ನ ಹಿತ ಕಾಪಾಡುವುದು ನನ್ನ, ಸುದೀಪಣ್ಣ ಮತ್ತು ಮರಮಕಲ್ ರವರ ಜವಾಬ್ದಾರಿ. ನಾನೀಗ ಉಪ್ಪಾರರ ದೇವಾಸ್ಥಾನದಲ್ಲಿ ಇದ್ದೀನಿ. ನಿನ್ನನ್ನು ಎಲ್ಲಿಗೆ ತಗೊಂಡು ಹೋಗಿ ಬಿಡಬೇಕು ಅಲ್ಲಿಗೆ ಬಿಡುತ್ತೇನೆ. ಮೊದಲು ವಾಪಸ್ ತಗೊ ನಿನಗೆ ಕೈ ಮುಗಿಯುತ್ತೇನೆ ಎಂದು ಸೋಮಣ್ಣನವರು ಹೇಳಿದ್ದಾರೆ.

ಮುಂದುವರೆದು, “ಇನ್ನೊಂದು ಗಂಟೆ ಮಾತ್ರ ಸಮಯವಿದೆ. ಅವನ್ಯಾವನೋ ಪೋಲಿ ನನ್ ಮಗನ ಮಾತು ಕೇಳ್ಕೊಂಡು ನಿಂತಿದ್ದೀಯ. ನೀನು ಮೊದಲು ವಾಪಸ್ ತಗೋ. ನಮ್ ಸರ್ಕಾರ ಬರುತ್ತದೆ. ನಿನಗೆ ಒಂದು ಗೂಟದ ಕಾರು ಬೇಕು, ನಾನು ಕೊಡಿಸ್ತೀನಿ ಎಂದು ಸೋಮಣ್ಣ ಹೇಳಿರುವುದು ದಾಖಲಾಗಿದೆ. ಇದೇ ಸಂದರ್ಭದಲ್ಲಿ ಸೋಮಣ್ಣನವರ ಫೋನ್‌ನಿಂದ ಮಾತನಾಡುವ ಮತ್ತೊಬ್ಬರು ಮಲ್ಲ, ಜಿ.ಟಿ ದೇವೇಗೌಡರ ಕೈಲಿ ಹೇಳಿಸ್ತೀನಿ. ನಾಮಪತ್ರ ವಾಪಸ್ ತಗೋ ಎನ್ನುತ್ತಾರೆ.

ಉಪ್ಪಾರರು ನೀವು. ನಾನು ಉಪ್ಪಾರರ ದೇವರ ಮುಂದೆ ನಿಂತಿದ್ದೀನಿ. ನೀನು ಯಾವನ ಮಾತು ಕೇಳಬೇಡ. ಮೊದ್ಲು ನಾಮಪತ್ರ ವಾಪಸ್ ತಗೊ. ಜಿ.ಟಿ ದೇವೇಗೌಡ ನಾವೆಲ್ಲ ಸ್ನೇಹಿತರು, ನಾನು ಮಾತನಾಡುತ್ತೇನೆ. ಪ್ಲೀಸ್ ತಗೋ ಎನ್ನುತ್ತಾರೆ.

ಇದನ್ನೂ ಓದಿ: ಶ್ರವಣಬೆಳಗೊಳ: ಖಾತೆ ತೆರೆಯದ ಬಿಜೆಪಿ – ಜೆಡಿಎಸ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕಲು ಕಾಂಗ್ರೆಸ್ ಕಸರತ್ತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...