Homeಮುಖಪುಟಜನಪ್ರಿಯ ಯೂಟ್ಯೂಬರ್‌ ನಂದಿ ಮೇಲೆ ಬಿಜೆಪಿ ಮುಖಂಡರ ಹಲ್ಲೆ

ಜನಪ್ರಿಯ ಯೂಟ್ಯೂಬರ್‌ ನಂದಿ ಮೇಲೆ ಬಿಜೆಪಿ ಮುಖಂಡರ ಹಲ್ಲೆ

- Advertisement -
- Advertisement -

ತ್ರಿಪುರಾ ವ್ಲಾಗರ್ (ಯೂಟ್ಯೂಬರ್‌) ಬಾಪನ್ ನಂದಿ ಅವರ ಮೇಲೆ ಸ್ಥಳೀಯ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ಮುಖಂಡರು ಏಪ್ರಿಲ್ 22ರಂದು ಹಲ್ಲೆ ಮಾಡಿದ್ದಾರೆ.

“ಬಿಜೆಪಿ ನಾಯಕರೊಬ್ಬರು ಅವರ ಮೇಲಿನ ಹಲ್ಲೆಯನ್ನು ಚಿತ್ರೀಕರಿಸಿದ್ದಾರೆ ಮತ್ತು ಅದನ್ನು ಸಾಮಾಜಿಕ ಮಾಧ್ಯಮದಲ್ಲಿ ಬಿಡುಗಡೆ ಮಾಡಿದ್ದಾರೆ, ವಿಡಿಯೊ ನಂತರ ವೈರಲ್ ಆಗಿದೆ”.

ಜನಪ್ರಿಯ ವ್ಲಾಗರ್ ಆಗಿರುವ ನಂದಿಯವರು ಉದಯಪುರ ಮೂಲದವರು. ತ್ರಿಪುರಾದ ಖುಪಿಲಾಂಗ್ ಪ್ರದೇಶದಲ್ಲಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿ ಮುಖಂಡರೊಬ್ಬರು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ನಂದಿ ವಿರುದ್ಧ ದೂರು ದಾಖಲಿಸಿದ್ದಾರೆ ಎಂದು ‘ನ್ಯೂಸ್‌ಕ್ಲಿಕ್’ ವರದಿ ಮಾಡಿದೆ. ಇದರ ಬೆನ್ನಲ್ಲೇ ಪೊಲೀಸರು ವ್ಲಾಗರ್‌ನನ್ನು ವಿಚಾರಣೆಗೆ ಕರೆದಿದ್ದಾರೆ.

ಈ ಘಟನೆಯ ಬಳಿಕ ತ್ರಿಪುರಾದ ಅನೇಕ ನಾಗರಿಕರು ಸರ್ಕಾರದ ನಡೆಯನ್ನು ಪ್ರಶ್ನಿಸಿದ್ದಾರೆ. ನಂದಿಯವರು ಈದ್‌ನಲ್ಲಿ ವೀಡಿಯೊವನ್ನು ಮಾಡಿದ್ದಾರೆ, ಹಾಡನ್ನು ಸಹ ನಿರ್ಮಿಸಿದ್ದಾರೆ ಎಂದು ವರದಿಯಾಗಿದೆ. ಕೋಮುವಾದದ ಆಧಾರದ ಮೇಲೆ ಜನರು ವಿಭಜನೆಯಾಗದಂತೆ ಮತ್ತು ಸಾಮರಸ್ಯದಿಂದ ಈದ್ ಹಬ್ಬವನ್ನು ಆಚರಿಸುವಂತೆ ವೀಡಿಯೊ ಕರೆ ನೀಡಿದೆ.

ನ್ಯೂಸ್‌ಕ್ಲಿಕ್ ಜಾಲತಾಣವು ವಿಡಿಯೊ ಕುರಿತು ವರದಿ ಮಾಡಿತು. ಬಿಜೆಪಿ ನಾಯಕರು ನಂದಿಯವರನ್ನು ಬರಮಾಡಿಕೊಂಡಿದ್ದರು. ಬಿಜೆಪಿಯ ಮಹಿಳಾ ನಾಯಕಿಯೊಬ್ಬರು ನಂದಿಯವರ ಕೊರಳಪಟ್ಟಿ ಹಿಡಿದು ಥಳಿಸಿದ್ದಾರೆ. ಈದ್ ವಿಡಿಯೋದಲ್ಲಿ ಮುಸ್ಲಿಂ ಯುವಕನಂತೆ ನಟಿಸುವ ಮೂಲಕ ನಂದಿ ತನ್ನ ಹಿಂದೂ ಮೂಲವನ್ನು ಏಕೆ ಕೀಳಾಗಿ ಕಂಡಿದ್ದಾರೆ ಎಂದು ಆಕೆ ಪ್ರಶ್ನಿಸಿದ್ದಾರೆ. ಅವರ ಹಲ್ಲೆಯ ವಿಡಿಯೋ ಕೂಡ ಇದೀಗ ವೈರಲ್ ಆಗಿದೆ. ತಮ್ಮನ್ನು ಇತರರು ಸುತ್ತುವರೆದಿದ್ದಾಗ ತಮ್ಮನ್ನು ಬಿಟ್ಟುಬಿಡುವಂತೆ ನಂದಿ ಕೋರುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ.

ಈಸ್ಟ್‌ಮೋಜೋ ಜಾಲತಾಣ ನಂದಿಯವರ ಹೇಳಿಕೆಯನ್ನು ಉಲ್ಲೇಖಿಸಿದೆ. “ಪೂರ್ವ ಗೋಕುಲ್ ನಗರ ಪಂಚಾಯತ್‌ನ ಚುನಾಯಿತ ಉಪಮುಖ್ಯಸ್ಥರು ಕೆಲವು ಕೆಲಸದ ನಿಮಿತ್ತ ತಮ್ಮ ಸ್ಥಳಕ್ಕೆ ಭೇಟಿ ನೀಡಲು ನನ್ನನ್ನು ಕರೆದರು. ನಾವು ಒಬ್ಬರಿಗೊಬ್ಬರು ಗೊತ್ತಿದ್ದೆವು. ಸುಮಾರು 30 ರಿಂದ 40 ಯುವಕರು ನನಗಾಗಿ ಕಾಯುತ್ತಿದ್ದಾರೆ ಎಂದು ನಾನು ಅಲ್ಲಿಗೆ ಹೋದೆ” ಎಂದಿದ್ದಾರೆ.

“ಪಂಚಾಯತ್ ನಾಯಕ ನನಗೆ ಕಪಾಳಮೋಕ್ಷ ಮಾಡಿದನು, ಅಲ್ಲಿದ್ದ ಎಲ್ಲರ ಮುಂದೆ ಥಳಿಸಿದನು. ನನ್ನ ತಪ್ಪೇನು ಎಂದು ನಾನು ಕೇಳುತ್ತಲೇ ಇದ್ದೆ. ಆದರೆ ಯಾರೂ ನನ್ನ ಮಾತುಗಳನ್ನು ಆಲಿಸಲಿಲ್ಲ” ಎಂದು ಅವರು ಹೇಳಿದ್ದಾರೆ.

ಈದ್ ವಿಡಿಯೋದ ನಿರ್ಮಾಪಕ ನಾನಲ್ಲ ಎಂದೂ ನಂದಿ ಹೇಳಿದ್ದಾರೆ. ಇತರರಂತೆ ನಾನು ಅದರಲ್ಲಿ ಕೇವಲ ನಟಿಸಿದ್ದೇನೆ. ನನ್ನ ಕೆಲಸಕ್ಕಾಗಿ ಹಣ ನೀಡಿದ್ದಾರೆ. ತಮ್ಮ ವಿರುದ್ಧ ಏಕೆ ಪ್ರಕರಣ ದಾಖಲಿಸಲಾಗಿದೆ ಎಂಬುದು ಗೊತ್ತಿಲ್ಲ ಎಂದು ತಿಳಿಸಿದ್ದಾರೆ.

“ವಿಶ್ವ ಹಿಂದೂ ಪರಿಷತ್‌ನ ಆದೇಶದ ಮೇರೆಗೆ ವ್ಲಾಗರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ” ಎಂದು ಈಸ್ಟ್‌ಮೋಜೋ ವರದಿ ಮಾಡಿದೆ.

ಈದ್ ವೀಡಿಯೋದಲ್ಲಿ ನಟಿಸಿದ ಇತರ ಇಬ್ಬರಾದ ಉಮಾ ದೇಬನಾಥ್ ಮತ್ತು ಸ್ನೇಹಾ ಭೌಮಿಕ್ ತಮ್ಮ ಹೇಳಿಕೆಯನ್ನು ನೀಡಿದ್ದಾರೆ. ತಮ್ಮ ವೃತ್ತಿಯ ಭಾಗವಾಗಿ ಆ ವೀಡಿಯೊದಲ್ಲಿ ನಟಿಸುವುದು ಸಮಸ್ಯಾತ್ಮಕ ಎಂದು ನಾವು ಯಾವತ್ತೂ ಭಾವಿಸಿರಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಅವರು ಇತರ ನೆಟಿಜನ್‌ಗಳಂತೆ ನಂದಿಯವರಿಗೆ ಬೆಂಬಲವನ್ನು ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...