Homeಮುಖಪುಟಕ್ರೀಡಾಪಟುಗಳ ಹೋರಾಟ ಬೆಂಬಲಿಸಲು ಪ್ರಿಯಾಂಕಾ ಗಾಂಧಿ ಕರೆ; ಕೇಂದ್ರದ ವಿರುದ್ಧ ವಾಗ್ದಾಳಿ

ಕ್ರೀಡಾಪಟುಗಳ ಹೋರಾಟ ಬೆಂಬಲಿಸಲು ಪ್ರಿಯಾಂಕಾ ಗಾಂಧಿ ಕರೆ; ಕೇಂದ್ರದ ವಿರುದ್ಧ ವಾಗ್ದಾಳಿ

- Advertisement -
- Advertisement -

ಭಾರತ ಕುಸ್ತಿ ಫೆಡರೇಷನ್ ಅಧ್ಯಕ್ಷ (ಡಬ್ಲ್ಯುಎಫ್‌ಐ), ಬಿಜೆಪಿಯ ಸಂಸದ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ಅವರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪ ಕೇಳಿಬಂದಿದ್ದು, ಅವರು ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ದೇಶದ ಪ್ರಮುಖ ಕುಸ್ತಿಪಟುಗಳು ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಆ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

ಕ್ರೀಡಾಪಟುಗಳು ದೇಶದ ಹೆಮ್ಮೆಯಾಗಿದ್ದು, ನಮ್ಮ ಸಹೋದರಿಯರನ್ನು ಬೆಂಬಲಿಸೋಣ ಎಂದು ಕರೆ ನೀಡಿರುವ ಪ್ರಿಯಾಂಕಾ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ”ಕ್ರೀಡಾಪಟುಗಳು ದೇಶದ ಮೌಲ್ಯ. ಅವರ ಬಗ್ಗೆ ದೇಶವೇಕೆ ಹೆಮ್ಮೆಪಡುತ್ತಿದೆ ಹೇಳಿ.. ಯಾಕೆಂದರೆ ಎಷ್ಟೇ ಕಷ್ಟಗಳು ಬಂದರೂ ಸಹಿಸಿಕೊಂಡು ದಣಿವರಿಯದೆ ದೇಶಕ್ಕೋಸ್ಕರ ದುಡಿದು ಪದಕಗಳನ್ನು ಗೆಲ್ಲುತ್ತಾರೆ. ಗೆದ್ದಾಗ ಅವರ ಗೆಲುವು ನಮ್ಮ ಗೆಲುವೇ ಎಂದು ದೇಶವೇ ಮುಗುಳ್ನಗುತ್ತದೆ.”

”ಮಹಿಳಾ ಆಟಗಾರತಿಯರ ಗೆಲುವು ದೊಡ್ಡದು. ಆ ಕ್ರೀಡಾಪಟುಗಳು ಈಗ ಸಂಸತ್ತಿನ ಎದುರುಗಡೆಯ ರಸ್ತೆಯಲ್ಲಿ ಕಣ್ಣೀರು ಸುರಿಸುತ್ತ ಕುಳಿತಿದ್ದಾಳೆ. ಈ ಹಿಂದೆಯೂ ಅವರ ಮೇಲೆ ನಡೆಯದ ಶೋಷಣೆ ವಿರುದ್ಧ ಅವರು ಪ್ರತಿಭಟಿಸಿದ್ದರು. ಈಗಲೂ ಪ್ರತಿಭಟಿಸುತ್ತಿದ್ದಾರೆ ಆದರೆ ಅವರ ಅಹವಾಲು ಆಲಿಸುವವರಿಲ್ಲ” ಎಂದಿದ್ದಾರೆ.

”ಸಧೃಡ ದೇಹ ಹೋಂದಿರುವ ಆ ಹೆಣ್ಣು ಮಕ್ಕಳು ಮುಗ್ದರು. ಆರೋಪಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ವಿಚಾರಣೆ ನಡೆಸುತ್ತಾರೆ ಎಂದು ಸರ್ಕಾರ ಹೇಳಿದಾಗ ಈ ಹುಡುಗಿಯರು ನಂಬಿದ್ದರು. ಆದರೆ ತನಿಖೆ ನಡೆಯಲಿಲ್ಲ ಇನ್ನು ಶಿಕ್ಷೆಯ ಪ್ರಶ್ನೆಯೇ ಉದ್ಭವಿಸಲಿಲ್ಲ. ಅಪರಾಧಿಗಳನ್ನು ರಕ್ಷಿಸಲು ಸರ್ಕಾರ ಬಯಸುತ್ತದೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಸಂಸದನ ಮೇಲೆ ಲೈಂಗಿಕ ಕಿರುಕುಳ ಆರೋಪ: #MeToo ಪ್ರತಿಭಟನೆಗೆ ‘ಎಲ್ಲಾ ಪಕ್ಷಗಳಿಗೂ ಸ್ವಾಗತ’ ಎಂದ ಕುಸ್ತಿಪಟುಗಳು

ಭಾರತ್ ಜೋಡೊ ಯಾತ್ರೆಯಲ್ಲಿ ಬಾಲಕಿಯ ನೋವನ್ನು ಆಲಿಸಿದ ವಿಪಕ್ಷ ನಾಯಕರನ್ನು ದೆಹಲಿ ಪೊಲೀಸರು ವಿಚಾರಣೆ ನಡೆಸಿದ್ದರು. ಆದರೆ ಅದೇ ಪೊಲೀಸರು ದೇಶದ ಗೌರವ ಹೆಚ್ಚಿಸುವ ಕ್ರೀಡಾಪಟುಗಳ ಬೇಡಿಕೆಯನ್ನು ನಿರ್ಲಕ್ಷಿಸಿದ್ದಾರೆ. ದೆಹಲಿ ಪೊಲೀಸರ ಮೇಲೆ ಯಾರ ಒತ್ತಡವಿದೆ? ಎಂದು ಪ್ರಶ್ನಿಸಿದ್ದಾರೆ.

”ಯಾವಾಗ ಪಕ್ಷ ಹಾಗೂ ಅದರ ನಾಯಕರ ದುರಹಂಕಾರ ಮಿತಿ ಮೀರುತ್ತದೆಯೋ ಆಗ ಅಂತಹ ದನಿಗಳನ್ನು ಹತ್ತಿಕ್ಕಲ್ಪಡುತ್ತವೆ. ಬನ್ನಿ ನಮ್ಮ ಸಹೋದರಿಯರನ್ನು ಬೆಂಬಲಿಸೋಣ. ದೇಶದ ಗೌರವದ ವಿಚಾರ ಇದಾಗಿದೆ” ಎಂದು ಪ್ರಿಯಾಂಕಾ ಗಾಂಧಿ ಮನವಿ ಮಾಡಿದ್ದಾರೆ.

ಪ್ರತಿಭಟನೆಯಲ್ಲಿ ಭಾಗಿಯಾಗಲು ಎಲ್ಲ ಪಕ್ಷಗಳಿಗೂ ಸ್ವಾಗತ ಎಂದ ಕ್ರೀಡಾಪಟುಗಳು

ಈ ಹಿಂದೆ ಜನವರಿಯಲ್ಲಿ ಇದು ‘ಕ್ರೀಡಾಪಟುಗಳ ಪ್ರತಿಭಟನೆ’ ಎಂದು ಎಡ ನಾಯಕಿ ವೃಂದಾ ಕಾರಟ್ ಅವರನ್ನು ಪ್ರತಿಭಟನಾಕಾರರು ವೇದಿಕೆಗೆ ಬಿಟ್ಟಿರಲಿಲ್ಲ. ಆದರೆ, ಈ ಬಾರಿ ನಾವು ಯಾರನ್ನೂ ತಿರಸ್ಕರಿಸುವುದಿಲ್ಲ, ತಮ್ಮ ಪ್ರತಿಭಟನೆಯನ್ನು ಬೆಂಬಲಿಸಲು ಬಯಸುವವರು ಬಂದು ಸೇರಬಹುದು. ಬಿಜೆಪಿ, ಕಾಂಗ್ರೆಸ್, ಎಎಪಿ, ಅಥವಾ ಯಾವುದೇ ಪಕ್ಷವಾಗಲಿ ನಮ್ಮ ಪ್ರತಿಭಟನೆಗೆ ಸೇರಲು ಎಲ್ಲಾ ಪಕ್ಷಗಳಿಗೆ ಸ್ವಾಗತವಿದೆ. ನಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ” ಎಂದು ಒಲಿಂಪಿಕ್ ಪದಕ ವಿಜೇತ ಬಜರಂಗ್ ಪುನಿಯಾ ಹೇಳಿದ್ದರು.

ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕ್ರೀಡಾಪಟುಗಳ ಪ್ರತಿಭಟನೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...