Homeಕರ್ನಾಟಕಬಿಜೆಪಿಯಲ್ಲಿಯೇ ಗುಲಾಮರಾಗಿ ಇರಬೇಕಿತ್ತಾ?: ಶೆಟ್ಟರ್‌ ವಾಗ್ದಾಳಿ

ಬಿಜೆಪಿಯಲ್ಲಿಯೇ ಗುಲಾಮರಾಗಿ ಇರಬೇಕಿತ್ತಾ?: ಶೆಟ್ಟರ್‌ ವಾಗ್ದಾಳಿ

ಲಿಂಗಾಯತ ನಾಯಕರ ಮೇಲೆ ಲಿಂಗಾಯತ ನಾಯಕರನ್ನು ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ

- Advertisement -
- Advertisement -

“ನಾನು ಬಿಜೆಪಿಯಲ್ಲೇ ಗುಲಾಮನಾಗಿ ಇರಬೇಕಿತ್ತಾ?” ಎಂದು ಕೇಳುವ ಮೂಲಕ ಮಾಜಿ ಮುಖ್ಯಮಂತ್ರಿ, ಪ್ರಭಾವಿ ಲಿಂಗಾಯತ ನಾಯಕರಾದ ಜಗದೀಶ್‌ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಅವರು ಬಿಜೆಪಿ ಹೈಕಮಾಂಡ್ ವಿರುದ್ಧ ಹರಿಹಾಯ್ದಿದ್ದಾರೆ. “6 ಸಲ ಶಾಸಕನಾಗಿ ಆಯ್ಕೆಯಾಗಿದ್ದೇನೆ. ದೊಡ್ಡ ನಾಯಕನಾಗಿ ಬೆಳೆದಿದ್ದೇನೆ. ಇಷ್ಟು ವರ್ಷಗಳ ಕಾಲ ರಾಜಕೀಯದಲ್ಲಿ ಇದ್ದ ನನ್ನನ್ನು ಒಂದು ಕ್ಷಣದಲ್ಲಿ ಹೊಸಕಿಹಾಕಿದರೆ ಸುಮ್ಮನೆ ಇರಬೇಕಾ? ಗುಲಾಮನ ರೀತಿಯಲ್ಲಿ ಇರಬೇಕಾ?” ಎಂದು ಪ್ರಶ್ನಿಸಿದ್ದಾರೆ.

“ನನಗೆ ಏಕೆ ಟಿಕೆಟ್‌ ನಿರಾಕರಿಸಲಾಯಿತು ಎನ್ನುವುದನ್ನು ಇದುವರೆಗೆ ಹೇಳಿಲ್ಲ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕೂಡ ಏನೂ ಹೇಳಿಲ್ಲ. ಹೇಳಿದ್ದರೆ ಪಕ್ಷ ಬಿಡುತ್ತಿರಲಿಲ್ಲ” ಎಂದು ತಿಳಿಸಿದ್ದಾರೆ.

“ಜಗದೀಶ್ ಶೆಟ್ಟರ್ ಒಬ್ಬ ಬಡಪಾಯಿ, ಇಷ್ಟೊಂದು ಪ್ರಹಾರ ಯಾಕೆ ಎಂಬುವುದು ಗೊತ್ತಾಗುತ್ತಿಲ್ಲ. ಕೇಂದ್ರ, ರಾಜ್ಯ ನಾಯಕರು ಬಂದು ಶೆಟ್ಟರ ಅವರನ್ನು ಏನೇ ಆಗಲಿ ಸೋಲಿಸಬೇಕು ಎನ್ನುತ್ತಿದ್ದಾರೆ. ಲಿಂಗಾಯತ ನಾಯಕರ ಮೂಲಕ ನನ್ನ ವಿರುದ್ಧ ಮಾತನಾಡಿಸುತ್ತಿದ್ದಾರೆ. ಒಡೆದು ಆಳುವ ಕುತಂತ್ರವನ್ನು ಜನರು ನೋಡುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ನಾನು ಕೇಂದ್ರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಷ್ಟೇ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ ಶಾ, ಬಿ.ಎಸ್.ಯಡಿಯೂರಪ್ಪ, ಸ್ಮೃತಿ ಇರಾನಿ ಸೇರಿದಂತೆ ಎಲ್ಲರೂ ಶೆಟ್ಟರ ಅವರನ್ನು ಸೋಲಿಸಬೇಕು ಎಂದು ಹೇಳುತ್ತಿದ್ದಾರೆ. ಬಡಪಾಯಿ ಶೆಟ್ಟರ ಮೇಲೆ ಯಾಕೆ ಇಷ್ಟೊಂದು ಪ್ರಹಾರ ಗೊತ್ತಾಗುತ್ತಿಲ್ಲ. ಈ ಬೆಳೆವಣಿಗೆಯನ್ನು ಕ್ಷೇತ್ರದ ಜನರು ಗಮನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಬಿಜೆಪಿಯಲ್ಲಿ ಸಿದ್ದಾಂತ ಉಳಿದಿದೆಯೇ. ಸೈದ್ಧಾಂತಿಕ ವಿರೋಧಿಗಳನ್ನು ಆಪರೇಷನ್ ಕಮಲದ ಮೂಲಕ ಕರೆದುಕೊಂಡು ಸರಕಾರ ರಚನೆ ಮಾಡಲಿಲ್ಲವೆ? ಸಿದ್ಧಾಂತಿಕ ವಿರೋಧಿಗಳಿಗೆ ಟಿಕೆಟ್ ನೀಡಿಲ್ಲವೆ?” ಎಂದು ಖಾರವಾಗಿ ಟೀಕಿಸಿದ್ದಾರೆ.

“ರೌಡಿ ಶೀಟರ್, ಸಿಡಿ ಸಚಿವರು, ಶಾಸಕರಿಗೆ ಟಿಕೆಟ್ ನೀಡಿದ್ದಾರೆ. ನನ್ನ ಸ್ವಾಭಿಮಾನಕ್ಕೆ ಧಕ್ಷೆಯಾಗಿ ಪಕ್ಷ ತೊರೆದಿದ್ದೇನೆ ಹೊರತು ಅಧಿಕಾರ ಲಾಲಸೆಗಲ್ಲ. ಈಗ ಪಕ್ಷದ ಸೈದ್ಧಾಂತಿಕ ವಿರೋಧ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಪಕ್ಷದಲ್ಲಿ ಸಿದ್ದಾಂತ ಉಳಿದಿದೆಯೇ ಎಂಬುವುದನ್ನು ಮೊದಲು ನೋಡಿಕೊಳ್ಳಿ” ಎಂದು ಸವಾಲು ಹಾಕಿದ್ದಾರೆ.

“ನನ್ನ, ನನ್ನಂತಹ ಹಾಗೂ ಪಕ್ಷದ ಪರಿಸ್ಥಿತಿಗೆ ಬಿ.ಎಲ್. ಸಂತೋಷ ಕಾರಣ ಎಂದು ಟೀಕೆ ಮಾಡಿದ್ದೆ. ಆದರೆ ಇದಕ್ಕೆ ಪ್ರತಿಯಾಗಿ ಅವರೇ ಟೀಕೆ ಮಾಡಬೇಕಿತ್ತು. ಆದರೆ ಯಡಿಯೂರಪ್ಪ ಅವರ ಮೂಲಕ ವಿರುದ್ಧ ಮಾತನಾಡಿಸುತ್ತಿದ್ದಾರೆ. ಒಬ್ಬ ಲಿಂಗಾಯತ ನಾಯಕನ ಮೇಲೆ ಲಿಂಗಾಯತ ನಾಯಕರನ್ನು ಹತ್ತಿಕ್ಕುವ ಕಲಸ ಪಕ್ಷ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ‘ಈದಿನ’ ಮಾಧ್ಯಮದ ಚುನಾವಣಾ ಮೆಗಾ ಸರ್ವೇ; ಬೊಮ್ಮಾಯಿ ಬೇಡ ಎಂದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...