Homeಕರ್ನಾಟಕಬಿಜೆಪಿಯಲ್ಲಿಯೇ ಗುಲಾಮರಾಗಿ ಇರಬೇಕಿತ್ತಾ?: ಶೆಟ್ಟರ್‌ ವಾಗ್ದಾಳಿ

ಬಿಜೆಪಿಯಲ್ಲಿಯೇ ಗುಲಾಮರಾಗಿ ಇರಬೇಕಿತ್ತಾ?: ಶೆಟ್ಟರ್‌ ವಾಗ್ದಾಳಿ

ಲಿಂಗಾಯತ ನಾಯಕರ ಮೇಲೆ ಲಿಂಗಾಯತ ನಾಯಕರನ್ನು ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ

- Advertisement -
- Advertisement -

“ನಾನು ಬಿಜೆಪಿಯಲ್ಲೇ ಗುಲಾಮನಾಗಿ ಇರಬೇಕಿತ್ತಾ?” ಎಂದು ಕೇಳುವ ಮೂಲಕ ಮಾಜಿ ಮುಖ್ಯಮಂತ್ರಿ, ಪ್ರಭಾವಿ ಲಿಂಗಾಯತ ನಾಯಕರಾದ ಜಗದೀಶ್‌ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಅವರು ಬಿಜೆಪಿ ಹೈಕಮಾಂಡ್ ವಿರುದ್ಧ ಹರಿಹಾಯ್ದಿದ್ದಾರೆ. “6 ಸಲ ಶಾಸಕನಾಗಿ ಆಯ್ಕೆಯಾಗಿದ್ದೇನೆ. ದೊಡ್ಡ ನಾಯಕನಾಗಿ ಬೆಳೆದಿದ್ದೇನೆ. ಇಷ್ಟು ವರ್ಷಗಳ ಕಾಲ ರಾಜಕೀಯದಲ್ಲಿ ಇದ್ದ ನನ್ನನ್ನು ಒಂದು ಕ್ಷಣದಲ್ಲಿ ಹೊಸಕಿಹಾಕಿದರೆ ಸುಮ್ಮನೆ ಇರಬೇಕಾ? ಗುಲಾಮನ ರೀತಿಯಲ್ಲಿ ಇರಬೇಕಾ?” ಎಂದು ಪ್ರಶ್ನಿಸಿದ್ದಾರೆ.

“ನನಗೆ ಏಕೆ ಟಿಕೆಟ್‌ ನಿರಾಕರಿಸಲಾಯಿತು ಎನ್ನುವುದನ್ನು ಇದುವರೆಗೆ ಹೇಳಿಲ್ಲ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕೂಡ ಏನೂ ಹೇಳಿಲ್ಲ. ಹೇಳಿದ್ದರೆ ಪಕ್ಷ ಬಿಡುತ್ತಿರಲಿಲ್ಲ” ಎಂದು ತಿಳಿಸಿದ್ದಾರೆ.

“ಜಗದೀಶ್ ಶೆಟ್ಟರ್ ಒಬ್ಬ ಬಡಪಾಯಿ, ಇಷ್ಟೊಂದು ಪ್ರಹಾರ ಯಾಕೆ ಎಂಬುವುದು ಗೊತ್ತಾಗುತ್ತಿಲ್ಲ. ಕೇಂದ್ರ, ರಾಜ್ಯ ನಾಯಕರು ಬಂದು ಶೆಟ್ಟರ ಅವರನ್ನು ಏನೇ ಆಗಲಿ ಸೋಲಿಸಬೇಕು ಎನ್ನುತ್ತಿದ್ದಾರೆ. ಲಿಂಗಾಯತ ನಾಯಕರ ಮೂಲಕ ನನ್ನ ವಿರುದ್ಧ ಮಾತನಾಡಿಸುತ್ತಿದ್ದಾರೆ. ಒಡೆದು ಆಳುವ ಕುತಂತ್ರವನ್ನು ಜನರು ನೋಡುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ನಾನು ಕೇಂದ್ರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಷ್ಟೇ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ ಶಾ, ಬಿ.ಎಸ್.ಯಡಿಯೂರಪ್ಪ, ಸ್ಮೃತಿ ಇರಾನಿ ಸೇರಿದಂತೆ ಎಲ್ಲರೂ ಶೆಟ್ಟರ ಅವರನ್ನು ಸೋಲಿಸಬೇಕು ಎಂದು ಹೇಳುತ್ತಿದ್ದಾರೆ. ಬಡಪಾಯಿ ಶೆಟ್ಟರ ಮೇಲೆ ಯಾಕೆ ಇಷ್ಟೊಂದು ಪ್ರಹಾರ ಗೊತ್ತಾಗುತ್ತಿಲ್ಲ. ಈ ಬೆಳೆವಣಿಗೆಯನ್ನು ಕ್ಷೇತ್ರದ ಜನರು ಗಮನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಬಿಜೆಪಿಯಲ್ಲಿ ಸಿದ್ದಾಂತ ಉಳಿದಿದೆಯೇ. ಸೈದ್ಧಾಂತಿಕ ವಿರೋಧಿಗಳನ್ನು ಆಪರೇಷನ್ ಕಮಲದ ಮೂಲಕ ಕರೆದುಕೊಂಡು ಸರಕಾರ ರಚನೆ ಮಾಡಲಿಲ್ಲವೆ? ಸಿದ್ಧಾಂತಿಕ ವಿರೋಧಿಗಳಿಗೆ ಟಿಕೆಟ್ ನೀಡಿಲ್ಲವೆ?” ಎಂದು ಖಾರವಾಗಿ ಟೀಕಿಸಿದ್ದಾರೆ.

“ರೌಡಿ ಶೀಟರ್, ಸಿಡಿ ಸಚಿವರು, ಶಾಸಕರಿಗೆ ಟಿಕೆಟ್ ನೀಡಿದ್ದಾರೆ. ನನ್ನ ಸ್ವಾಭಿಮಾನಕ್ಕೆ ಧಕ್ಷೆಯಾಗಿ ಪಕ್ಷ ತೊರೆದಿದ್ದೇನೆ ಹೊರತು ಅಧಿಕಾರ ಲಾಲಸೆಗಲ್ಲ. ಈಗ ಪಕ್ಷದ ಸೈದ್ಧಾಂತಿಕ ವಿರೋಧ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಪಕ್ಷದಲ್ಲಿ ಸಿದ್ದಾಂತ ಉಳಿದಿದೆಯೇ ಎಂಬುವುದನ್ನು ಮೊದಲು ನೋಡಿಕೊಳ್ಳಿ” ಎಂದು ಸವಾಲು ಹಾಕಿದ್ದಾರೆ.

“ನನ್ನ, ನನ್ನಂತಹ ಹಾಗೂ ಪಕ್ಷದ ಪರಿಸ್ಥಿತಿಗೆ ಬಿ.ಎಲ್. ಸಂತೋಷ ಕಾರಣ ಎಂದು ಟೀಕೆ ಮಾಡಿದ್ದೆ. ಆದರೆ ಇದಕ್ಕೆ ಪ್ರತಿಯಾಗಿ ಅವರೇ ಟೀಕೆ ಮಾಡಬೇಕಿತ್ತು. ಆದರೆ ಯಡಿಯೂರಪ್ಪ ಅವರ ಮೂಲಕ ವಿರುದ್ಧ ಮಾತನಾಡಿಸುತ್ತಿದ್ದಾರೆ. ಒಬ್ಬ ಲಿಂಗಾಯತ ನಾಯಕನ ಮೇಲೆ ಲಿಂಗಾಯತ ನಾಯಕರನ್ನು ಹತ್ತಿಕ್ಕುವ ಕಲಸ ಪಕ್ಷ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ‘ಈದಿನ’ ಮಾಧ್ಯಮದ ಚುನಾವಣಾ ಮೆಗಾ ಸರ್ವೇ; ಬೊಮ್ಮಾಯಿ ಬೇಡ ಎಂದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...