Homeಕರ್ನಾಟಕಬಿಜೆಪಿಯಲ್ಲಿಯೇ ಗುಲಾಮರಾಗಿ ಇರಬೇಕಿತ್ತಾ?: ಶೆಟ್ಟರ್‌ ವಾಗ್ದಾಳಿ

ಬಿಜೆಪಿಯಲ್ಲಿಯೇ ಗುಲಾಮರಾಗಿ ಇರಬೇಕಿತ್ತಾ?: ಶೆಟ್ಟರ್‌ ವಾಗ್ದಾಳಿ

ಲಿಂಗಾಯತ ನಾಯಕರ ಮೇಲೆ ಲಿಂಗಾಯತ ನಾಯಕರನ್ನು ಹತ್ತಿಕ್ಕುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಆರೋಪಿಸಿದ್ದಾರೆ

- Advertisement -
- Advertisement -

“ನಾನು ಬಿಜೆಪಿಯಲ್ಲೇ ಗುಲಾಮನಾಗಿ ಇರಬೇಕಿತ್ತಾ?” ಎಂದು ಕೇಳುವ ಮೂಲಕ ಮಾಜಿ ಮುಖ್ಯಮಂತ್ರಿ, ಪ್ರಭಾವಿ ಲಿಂಗಾಯತ ನಾಯಕರಾದ ಜಗದೀಶ್‌ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿರುವ ಅವರು ಬಿಜೆಪಿ ಹೈಕಮಾಂಡ್ ವಿರುದ್ಧ ಹರಿಹಾಯ್ದಿದ್ದಾರೆ. “6 ಸಲ ಶಾಸಕನಾಗಿ ಆಯ್ಕೆಯಾಗಿದ್ದೇನೆ. ದೊಡ್ಡ ನಾಯಕನಾಗಿ ಬೆಳೆದಿದ್ದೇನೆ. ಇಷ್ಟು ವರ್ಷಗಳ ಕಾಲ ರಾಜಕೀಯದಲ್ಲಿ ಇದ್ದ ನನ್ನನ್ನು ಒಂದು ಕ್ಷಣದಲ್ಲಿ ಹೊಸಕಿಹಾಕಿದರೆ ಸುಮ್ಮನೆ ಇರಬೇಕಾ? ಗುಲಾಮನ ರೀತಿಯಲ್ಲಿ ಇರಬೇಕಾ?” ಎಂದು ಪ್ರಶ್ನಿಸಿದ್ದಾರೆ.

“ನನಗೆ ಏಕೆ ಟಿಕೆಟ್‌ ನಿರಾಕರಿಸಲಾಯಿತು ಎನ್ನುವುದನ್ನು ಇದುವರೆಗೆ ಹೇಳಿಲ್ಲ. ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಕೂಡ ಏನೂ ಹೇಳಿಲ್ಲ. ಹೇಳಿದ್ದರೆ ಪಕ್ಷ ಬಿಡುತ್ತಿರಲಿಲ್ಲ” ಎಂದು ತಿಳಿಸಿದ್ದಾರೆ.

“ಜಗದೀಶ್ ಶೆಟ್ಟರ್ ಒಬ್ಬ ಬಡಪಾಯಿ, ಇಷ್ಟೊಂದು ಪ್ರಹಾರ ಯಾಕೆ ಎಂಬುವುದು ಗೊತ್ತಾಗುತ್ತಿಲ್ಲ. ಕೇಂದ್ರ, ರಾಜ್ಯ ನಾಯಕರು ಬಂದು ಶೆಟ್ಟರ ಅವರನ್ನು ಏನೇ ಆಗಲಿ ಸೋಲಿಸಬೇಕು ಎನ್ನುತ್ತಿದ್ದಾರೆ. ಲಿಂಗಾಯತ ನಾಯಕರ ಮೂಲಕ ನನ್ನ ವಿರುದ್ಧ ಮಾತನಾಡಿಸುತ್ತಿದ್ದಾರೆ. ಒಡೆದು ಆಳುವ ಕುತಂತ್ರವನ್ನು ಜನರು ನೋಡುತ್ತಿದ್ದಾರೆ” ಎಂದು ಅಭಿಪ್ರಾಯಪಟ್ಟಿದ್ದಾರೆ.

“ನಾನು ಕೇಂದ್ರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಷ್ಟೇ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಅಮಿತ ಶಾ, ಬಿ.ಎಸ್.ಯಡಿಯೂರಪ್ಪ, ಸ್ಮೃತಿ ಇರಾನಿ ಸೇರಿದಂತೆ ಎಲ್ಲರೂ ಶೆಟ್ಟರ ಅವರನ್ನು ಸೋಲಿಸಬೇಕು ಎಂದು ಹೇಳುತ್ತಿದ್ದಾರೆ. ಬಡಪಾಯಿ ಶೆಟ್ಟರ ಮೇಲೆ ಯಾಕೆ ಇಷ್ಟೊಂದು ಪ್ರಹಾರ ಗೊತ್ತಾಗುತ್ತಿಲ್ಲ. ಈ ಬೆಳೆವಣಿಗೆಯನ್ನು ಕ್ಷೇತ್ರದ ಜನರು ಗಮನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಬಿಜೆಪಿಯಲ್ಲಿ ಸಿದ್ದಾಂತ ಉಳಿದಿದೆಯೇ. ಸೈದ್ಧಾಂತಿಕ ವಿರೋಧಿಗಳನ್ನು ಆಪರೇಷನ್ ಕಮಲದ ಮೂಲಕ ಕರೆದುಕೊಂಡು ಸರಕಾರ ರಚನೆ ಮಾಡಲಿಲ್ಲವೆ? ಸಿದ್ಧಾಂತಿಕ ವಿರೋಧಿಗಳಿಗೆ ಟಿಕೆಟ್ ನೀಡಿಲ್ಲವೆ?” ಎಂದು ಖಾರವಾಗಿ ಟೀಕಿಸಿದ್ದಾರೆ.

“ರೌಡಿ ಶೀಟರ್, ಸಿಡಿ ಸಚಿವರು, ಶಾಸಕರಿಗೆ ಟಿಕೆಟ್ ನೀಡಿದ್ದಾರೆ. ನನ್ನ ಸ್ವಾಭಿಮಾನಕ್ಕೆ ಧಕ್ಷೆಯಾಗಿ ಪಕ್ಷ ತೊರೆದಿದ್ದೇನೆ ಹೊರತು ಅಧಿಕಾರ ಲಾಲಸೆಗಲ್ಲ. ಈಗ ಪಕ್ಷದ ಸೈದ್ಧಾಂತಿಕ ವಿರೋಧ ಕಾಂಗ್ರೆಸ್ ಪಕ್ಷಕ್ಕೆ ಸೇರಿದ್ದಾರೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಪಕ್ಷದಲ್ಲಿ ಸಿದ್ದಾಂತ ಉಳಿದಿದೆಯೇ ಎಂಬುವುದನ್ನು ಮೊದಲು ನೋಡಿಕೊಳ್ಳಿ” ಎಂದು ಸವಾಲು ಹಾಕಿದ್ದಾರೆ.

“ನನ್ನ, ನನ್ನಂತಹ ಹಾಗೂ ಪಕ್ಷದ ಪರಿಸ್ಥಿತಿಗೆ ಬಿ.ಎಲ್. ಸಂತೋಷ ಕಾರಣ ಎಂದು ಟೀಕೆ ಮಾಡಿದ್ದೆ. ಆದರೆ ಇದಕ್ಕೆ ಪ್ರತಿಯಾಗಿ ಅವರೇ ಟೀಕೆ ಮಾಡಬೇಕಿತ್ತು. ಆದರೆ ಯಡಿಯೂರಪ್ಪ ಅವರ ಮೂಲಕ ವಿರುದ್ಧ ಮಾತನಾಡಿಸುತ್ತಿದ್ದಾರೆ. ಒಬ್ಬ ಲಿಂಗಾಯತ ನಾಯಕನ ಮೇಲೆ ಲಿಂಗಾಯತ ನಾಯಕರನ್ನು ಹತ್ತಿಕ್ಕುವ ಕಲಸ ಪಕ್ಷ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿರಿ: ‘ಈದಿನ’ ಮಾಧ್ಯಮದ ಚುನಾವಣಾ ಮೆಗಾ ಸರ್ವೇ; ಬೊಮ್ಮಾಯಿ ಬೇಡ ಎಂದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...