Homeಮುಖಪುಟದಾರಿತಪ್ಪಿಸುವ ಜಾಹೀರಾತು ಹಿಂಪಡೆಯುವಂತೆ ಬೌರ್ನ್‌ವಿಟಾ ಸಂಸ್ಥೆಗೆ ಮಕ್ಕಳ ಆಯೋಗ ನೋಟಿಸ್

ದಾರಿತಪ್ಪಿಸುವ ಜಾಹೀರಾತು ಹಿಂಪಡೆಯುವಂತೆ ಬೌರ್ನ್‌ವಿಟಾ ಸಂಸ್ಥೆಗೆ ಮಕ್ಕಳ ಆಯೋಗ ನೋಟಿಸ್

- Advertisement -
- Advertisement -

ತಪ್ಪುದಾರಿಗೆಳೆಯುವ ಜಾಹೀರಾತುಗಳು, ಪ್ಯಾಕೇಜಿಂಗ್ ಮತ್ತು ಲೇಬಲ್‌ಗಳನ್ನು ಹಿಂತೆಗೆದುಕೊಳ್ಳಬೇಕು ಎಂದು ಬೌರ್ನ್‌ವಿಟಾವನ್ನು ತಯಾರಿಸುವ ಮೊಂಡೆಲೆಜ್ ಇಂಟರ್‌ನ್ಯಾಶನಲ್ ಇಂಡಿಯಾಗೆ ಮಕ್ಕಳ ಹಕ್ಕುಗಳ ರಕ್ಷಣಾ ರಾಷ್ಟ್ರೀಯ ಆಯೋಗ ನೋಟಿಸ್ ನೀಡಿದೆ.

ಈ ಆರೋಗ್ಯ ಪಾನೀಯದಲ್ಲಿ ಹೆಚ್ಚಿನ ಸಕ್ಕರೆ ಅಂಶವಿದೆ ಎಂಬ ಆರೋಪ ಬಂದ ಹಿನ್ನೆಲೆಯಲ್ಲಿ ಆಯೋಗ ಈ ಸೂಚನೆಯನ್ನು ಬೌರ್ನ್‌‌ವಿಟಾ ಸಂಸ್ಥೆಗೆ ನೀಡಿದೆ.

“ನಿಮ್ಮ ಕಂಪನಿಯು ತಯಾರಿಸಿದ ಉತ್ಪನ್ನವು ಪ್ಯಾಕೇಜಿಂಗ್ ಮತ್ತು ಜಾಹೀರಾತುಗಳ ಮೂಲಕ ಗ್ರಾಹಕರನ್ನು ದಾರಿತಪ್ಪಿಸುತ್ತಿದೆ ಎಂಬುದನ್ನು ಆಯೋಗ ಗಮನಿಸುತ್ತಿದೆ” ಎಂದು ಮಕ್ಕಳ ಹಕ್ಕುಗಳ ಸಂಸ್ಥೆಯು ಏಪ್ರಿಲ್ 21ರ ನೋಟೀಸ್‌ನಲ್ಲಿ ತಿಳಿಸಿದೆ.

“ನಿಮ್ಮ ಉತ್ಪನ್ನದ ಲೇಬಲಿಂಗ್, ಪ್ಯಾಕೇಜಿಂಗ್, ಪ್ರದರ್ಶನ ಮತ್ತು ಜಾಹೀರಾತುಗಳನ್ನು ಆಯೋಗವು ಗಮನಿಸುತ್ತದೆ. ನೀವು ಮಾಡುತ್ತಿರುವ ಪ್ರತಿಪಾದನೆಗಳು ಸಾಮಾನ್ಯ ಜನರನ್ನು ತಪ್ಪುದಾರಿಗೆಳೆಯುವಂತಿವೆ” ಎಂದು ಎಚ್ಚರಿಸಿದೆ.

ಮಕ್ಕಳ ಬೆಳವಣಿಗೆಯನ್ನು ಹೆಚ್ಚಿಸುವ ಆರೋಗ್ಯ ಪಾನೀಯವಾಗಿ ಬೌರ್ನ್‌ವಿಟಾವನ್ನು ಮೊಂಡೆಲೆಜ್ ಇಂಟರ್‌ನ್ಯಾಶನಲ್ ಇಂಡಿಯಾ ಕಂಪನಿ ಪ್ರಚಾರ ಮಾಡುತ್ತಿದೆ ಎಂದು ಆರೋಪಿಸಿ ದೂರು ಸ್ವೀಕರಿಸಲಾಗಿದೆ ಎಂದಿರುವ ಆಯೋಗ, “ಇದು ಹೆಚ್ಚಿನ ಶೇಕಡಾವಾರು ಸಕ್ಕರೆ ಮತ್ತು ಇತರ ಪದಾರ್ಥಗಳನ್ನು ಹೊಂದಿದ್ದು, ಅದು ಮಕ್ಕಳ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ” ಎಂಬ ಆರೋಪವನ್ನು ಪ್ರಸ್ತಾಪಿಸಿದೆ.

ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯರಾಗಿರುವ ರೇವಂತ್ ಹಿಮತ್ಸಿಂಕಾ ಎಂಬವರು ವಿಡಿಯೊವೊಂದನ್ನು ಹಂಚಿಕೊಂಡಿದ್ದರು. “ಮಕ್ಕಳ ಪಾನೀಯವೆಂದೇ ಜನಪ್ರಿಯತೆ ಗಳಿಸಿರುವ ಇದರಲ್ಲಿ ಹೆಚ್ಚಿನ ಸಕ್ಕರೆ ಅಂಶವಿದೆ. ಇದನ್ನು ಸೇವಿಸುವುದರಿಂದ ಮಧುಮೇಹ ಮತ್ತು ಕ್ಯಾನ್ಸರ್‌ ಬರಬಹುದು” ಎಂದು ವಿಡಿಯೊದಲ್ಲಿ ಆರೋಪಿಸಿದ್ದರು. ನಂತರ ವಿವಾದವು ಭುಗಿಲೆದ್ದಿದೆ. ಈ ವೀಡಿಯೊವನ್ನು ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ, ಇದಕ್ಕೆ 12 ಮಿಲಿಯನ್ ವೀವ್ಸ್‌ ಬಂದಿವೆ.

ಆದರೆ ಏಪ್ರಿಲ್ 13 ರಂದು ಮೊಂಡೆಲೆಜ್ ಇಂಡಿಯಾವು ಕಾನೂನು ಕ್ರಮ ಕೈಗೊಳ್ಳುವುದಾಗಿ ಸೂಚನೆಯನ್ನು ನೀಡಿದ ನಂತರ ಹಿಮತ್ಸಿಂಕಾ ಅವರು ವೀಡಿಯೊವನ್ನು ಡಿಲೀಟ್ ಮಾಡಿದ್ದಾರೆ ಎಂದು ‘ದಿ ಹಿಂದೂ’ ವರದಿ ಮಾಡಿದೆ. ಅವರ ಟ್ವಿಟರ್ ಹ್ಯಾಂಡಲ್ ಅನ್ನೂ ಅಮಾನತುಗೊಳಿಸಲಾಗಿದೆ.

ವೀಡಿಯೊದಲ್ಲಿ ಮಾಡಿರುವ ಆರೋಪಗಳನ್ನು ಬೌರ್ನ್‌ವಿಟಾ ಸಂಸ್ಥೆ ನಿರಾಕರಿಸಿದೆ. ಬಳಕೆಗೆ ಅನುಮೋದಿಸಲಾದ ಪದಾರ್ಥಗಳನ್ನು ಉಪಯೋಗಿಸಿ, ವೈಜ್ಞಾನಿಕವಾಗಿ ವಿನ್ಯಾಸಗೊಳಿಸಿದ ಸೂತ್ರವನ್ನು ಆಧರಿಸಿ ಬೋರ್ನ್‌ವಿಟಾವನ್ನು ತಯಾರಿಸಲಾಗುತ್ತಿದೆ ಎಂದು ಸ್ಪಷ್ಟನೆ ನೀಡಿದೆ.

“ಪ್ರತಿ 20 ಗ್ರಾಂ ಬೌರ್ನ್‌ವಿಟಾ ಸೇವೆಯು 7.5 ಗ್ರಾಂ ಸಕ್ಕರೆಯನ್ನು ಹೊಂದಿರುತ್ತದೆ, ಇದು ಸರಿಸುಮಾರು ಒಂದೂವರೆ ಟೀ ಚಮಚಗಳಷ್ಟು ಇರುತ್ತದೆ” ಎಂದು ಅದು ಹೇಳಿಕೆಯಲ್ಲಿ ತಿಳಿಸಲಾಗಿದೆ. “ಮಕ್ಕಳಿಗೆ ದಿನನಿತ್ಯ ಶಿಫಾರಸು ಮಾಡಲಾದ ಸಕ್ಕರೆ ಸೇವನೆಯ ಮಿತಿಗಿಂತ ಕಡಿಮೆ ಇದೆ” ಎಂದು ಸ್ಪಷ್ಟಪಡಿಸಲಾಗಿದೆ.

ಶುಕ್ರವಾರ ಆಯೋಗ ನೀಡಿರುವ ನೋಟೀಸ್‌ನಲ್ಲಿ, “ಭಾರತೀಯ ಆಹಾರ ಸುರಕ್ಷತೆ, ಗುಣಮಟ್ಟ ಪ್ರಾಧಿಕಾರ ಮತ್ತು ಗ್ರಾಹಕ ಸಂರಕ್ಷಣಾ ಕಾಯಿದೆಯ ಪ್ರಕಾರ ಕಡ್ಡಾಯವಾಗಿ ಮಾಹಿತಿಯನ್ನು ಬಹಿರಂಗಪಡಿಸಬೇಕಾಗುತ್ತದೆ. ಆದರೆ ಸಂಸ್ಥೆಯ ಉತ್ಪನ್ನಗಳು ಈ ವಿಚಾರದಲ್ಲಿ ವಿಫಲವಾಗಿವೆ” ಎಂದು ತಿಳಿಸಿರುವುದಾಗಿ ‘ದಿ ಹಿಂದೂ’ ವರದಿ ಮಾಡಿದೆ.

ಇದನ್ನೂ ಓದಿರಿ: ಒಳಮೀಸಲಾತಿ ಜಾರಿ ಎಂದು ಸುಳ್ಳು ಜಾಹೀರಾತು ನೀಡದಿರಿ: ಹೋರಾಟ ಸಮಿತಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...