Homeಮುಖಪುಟಛತ್ತೀಸ್‌ಗಢದಲ್ಲಿ ಮಾವೋವಾದಿಗಳ ಅಟ್ಟಹಾಸ: ಬಾಂಬ್ ಸ್ಪೋಟಕ್ಕೆ 10 ಪೊಲೀಸರು ಬಲಿ

ಛತ್ತೀಸ್‌ಗಢದಲ್ಲಿ ಮಾವೋವಾದಿಗಳ ಅಟ್ಟಹಾಸ: ಬಾಂಬ್ ಸ್ಪೋಟಕ್ಕೆ 10 ಪೊಲೀಸರು ಬಲಿ

- Advertisement -
- Advertisement -

ಛತ್ತೀಸ್‌ಗಢದಲ್ಲಿ ನಕ್ಸಲರು ಮತ್ತೆ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಅವರ ಈ ದಾಳಿಯಲ್ಲಿ 10 ಪೊಲೀಸರು ಜೀವ ಕಳೆದುಕೊಂಡಿದ್ದಾರೆ. ಸುಧಾರಿತ ಸ್ಪೋಟಕ ಬಳಕೆ ಮಾಡಿಕೊಂಡು ಮಿನಿ ವ್ಯಾನ್‌ನಲ್ಲಿ ಸಂಚಾರ ನಡೆಸುತ್ತಿದ್ದ ಪೊಲೀಸರನ್ನು ಗುರಿಯಾಗಿಸಿಕೊಂಡು ಮಾವೋವಾದಿಗಳು ಈ ದಾಳಿ ನಡೆಸಿದ್ದಾರೆ.

ಛತ್ತೀಸ್‌ಗಢದ ದಾಂತೇವಾಡದಲ್ಲಿ ಬುಧವಾರ ಮಧ್ಯಾಹ್ನ ಮಾವೋವಾದಿಗಳು ಈ ಘಟನೆ ನಡೆದಿದೆ. ಚಾಲಕ ಸೇರಿದಂತೆ ಒಟ್ಟು 10 ಪೊಲೀಸ್ ಸಿಬ್ಬಂದಿ ಈ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರು ವಾಪಸ್ ಆಗುವಾಗ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಛತ್ತೀಸ್​ಗಢದ ರಾಜ್ಯ ಗುಪ್ತಚರ ಇಲಾಖೆ ಮಾಹಿತಿಯನ್ನು ಆಧರಿಸಿ ಪೊಲೀಸರು ಆ್ಯಂಟಿ ಮಾವೋಈಸ್ಟ್​ ಕಾರ್ಯಾಚರಣೆಯನ್ನು ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮೃತ ಪೊಲೀಸ್​ ಅಧಿಕಾರಿಗಳು ಜಿಲ್ಲಾ ಸಶಸ್ತ್ರ ಮೀಸಲು ಪಡೆ(DRG)ಗೆ ಸೇರಿದ್ದವರು ಎಂದು ತಿಳಿದು ಬಂದಿದೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಛತ್ತೀಸ್‌ಗಢದ ಮುಖ್ಯಮಂತ್ರಿಗಳು, ತಕ್ಷಣದ ನಕ್ಸಲರ ವಿರುದ್ಧ ಕಾರ್ಯಾಚರಣೆ ಆರಂಭಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಘಟನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿವರಣೆ ನೀಡಿದ್ದಾರೆ.

”ದಾಂತೇವಾಡದಲ್ಲಿ ಮಾವೋವಾದಿಗಳು ಅಡಗಿದ್ದಾರೆ ಎಂಬ ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಅವರ ವಿರುದ್ಧ ಕಾರ್ಯಾಚರಣೆ ನಡೆಸಲು ಪೊಲೀಸರು ತೆರಳಿದ್ದರು. ಅಲ್ಲಿಂದ ವಾಹನದಲ್ಲಿ ವಾಪಸ್ ಆಗುವಾಗ ಸುಧಾರಿತ ಸ್ಫೋಟಕಗಳನ್ನು ಬಳಸಿ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ” ಎಂದು ತಿಳಿಸಿದ್ದಾರೆ.

”ನಕ್ಸಲರು ಪೊಲೀಸ್ ವಾಹನವನ್ನು ಸ್ಫೋಟಗೊಳಿಸಿದ ಘಟನೆ ಅರನ್‌ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹುತಾತ್ಮ ಪೊಲೀಸರು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಗೆ ಸೇರಿದವರು. ಈ ಘಟನೆ ರಾಜಧಾನಿ ರಾಯ್‌ಪುರ್‌ನಿಂದ ಸುಮಾರು 450 ಕಿ. ಮೀ. ದೂರದಲ್ಲಿ ನಡೆದಿದೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಈ ಘಟನೆ ಬಗ್ಗೆ ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಅಮಿತ್ ಶಾ, ನಕ್ಸಲರ ವಿರುದ್ಧದ ಕಾರ್ಯಾಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ.

ಭೂಪೇಶ್ ಬಘೇಲ್ ಘಟನೆ ಕುರಿತು ಟ್ವೀಟ್ ಮಾಡಿದ್ದು, ”ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಪೊಲೀಸರ ವಾಹನವದ ಮೇಲೆ ಸುಧಾರಿತ ಸ್ಫೋಟಕಗಳನ್ನು ಬಳಸಿಕೊಂಡು ದಾಳಿ ನಡೆಸಲಾಗಿದೆ. ಇದು ಅತ್ಯಂತ ದುಃಖಕರ ಸುದ್ದಿಯಾಗಿದ್ದು ಮೃತರ ಕುಟುಂಬಸ್ಥರ ನೋವಿನಲ್ಲಿ ನಾವು ಭಾಗಿಯಾಗುತ್ತೇವೆ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಮುಖ್ಯಮಂತ್ರಿ ಭೂಪೇಶ್​ ಭಘೇಲ್​ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ”ದಾಂತೇವಾಡದಲ್ಲಿ ಛತ್ತೀಸ್‌ಗಢ ಪೊಲೀಸರ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ದಾಳಿಯಲ್ಲಿ ನಾವು ಕಳೆದುಕೊಂಡ ವೀರ ಯೋಧರಿಗೆ ನನ್ನ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರ ತ್ಯಾಗ ಸದಾ ಸ್ಮರಣೀಯ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು” ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದು,  ಘಟನೆ ಕುರಿತು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್‌ಬಾಗಲ್ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ನಕ್ಸಲಿಸಂ ಕೊನೆಗಾಣಿಸಲು ಕಾಂಗ್ರೆಸ್ ಸರಕಾರಗಳು ಸದಾ ಕ್ರಮಗಳನ್ನು ಕೈಗೊಂಡಿವೆ. ನಮ್ಮ ನಾಯಕರು ನಕ್ಸಲ್‌ರನ್ನು ನಿಗ್ರಹಿಸಲು ಶ್ರಮವಹಿಸಿದ್ದಾರೆ. ನಕ್ಸಲಿಸಂ ವಿರುದ್ಧ ನಾವು ಒಗ್ಗಟ್ಟಾಗಿದ್ದೇವೆ ಮತ್ತು ಅದರ ವಿರುದ್ಧ ಹೋರಾಟ ಮುಂದುವರಿಸುತ್ತೇವೆ” ಎಂದಿದ್ದಾರೆ.

”ಛತ್ತೀಸ್‌ಗಢದ ದಾಂತೇವಾಡದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಹೇಡಿಗಳ ದಾಳಿಯಲ್ಲಿ ನಮ್ಮ 10 ಡಿಆರ್‌ಜಿ ಜವಾನರು ಮತ್ತು ಚಾಲಕ ಹುತಾತ್ಮರಾಗಿರುವುದು ತೀವ್ರ ದುಃಖ ತಂದಿದೆ. ಆ ಧೀರರಿಗೆ ನಮನಗಳು. ನಾವು ದುಃಖತಪ್ತ ಕುಟುಂಬಗಳೊಂದಿಗೆ ಇದ್ದೇವೆ. ಛತ್ತೀಸ್‌ಗಢದಲ್ಲಿ ನಕ್ಸಲಿಸಂ ವಿರುದ್ಧದ ಹೋರಾಟ ಕೊನೆಯ ಹಂತದಲ್ಲಿದೆ, ಅದರಲ್ಲಿ ನಮ್ಮ ಸರ್ಕಾರ ಗೆಲ್ಲಲಿದೆ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

ಈ ಮಾವೋವಾದಿಗಳು ದೇಶದ ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಛತ್ತೀಸ್‌ಗಢದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಈ ಹಿಂದೆ ಹಲವು ಬಾರಿ ಪೊಲೀಸರ ಜೊತೆ ಗುಂಡಿನ ಚಕಮಕಿ ನಡೆಸಿದ್ದಾರೆ. ಈ ಬಾರಿ ಪೊಲೀಸ್​ ವಾಹನದ ಮೇಲೆಯೇ ಮಾವೋವಾದಿಗಳು ಬಾಂಬ್​ ದಾಳಿ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...