Homeಮುಖಪುಟಛತ್ತೀಸ್‌ಗಢದಲ್ಲಿ ಮಾವೋವಾದಿಗಳ ಅಟ್ಟಹಾಸ: ಬಾಂಬ್ ಸ್ಪೋಟಕ್ಕೆ 10 ಪೊಲೀಸರು ಬಲಿ

ಛತ್ತೀಸ್‌ಗಢದಲ್ಲಿ ಮಾವೋವಾದಿಗಳ ಅಟ್ಟಹಾಸ: ಬಾಂಬ್ ಸ್ಪೋಟಕ್ಕೆ 10 ಪೊಲೀಸರು ಬಲಿ

- Advertisement -
- Advertisement -

ಛತ್ತೀಸ್‌ಗಢದಲ್ಲಿ ನಕ್ಸಲರು ಮತ್ತೆ ತಮ್ಮ ಅಟ್ಟಹಾಸ ಮೆರೆದಿದ್ದಾರೆ. ಅವರ ಈ ದಾಳಿಯಲ್ಲಿ 10 ಪೊಲೀಸರು ಜೀವ ಕಳೆದುಕೊಂಡಿದ್ದಾರೆ. ಸುಧಾರಿತ ಸ್ಪೋಟಕ ಬಳಕೆ ಮಾಡಿಕೊಂಡು ಮಿನಿ ವ್ಯಾನ್‌ನಲ್ಲಿ ಸಂಚಾರ ನಡೆಸುತ್ತಿದ್ದ ಪೊಲೀಸರನ್ನು ಗುರಿಯಾಗಿಸಿಕೊಂಡು ಮಾವೋವಾದಿಗಳು ಈ ದಾಳಿ ನಡೆಸಿದ್ದಾರೆ.

ಛತ್ತೀಸ್‌ಗಢದ ದಾಂತೇವಾಡದಲ್ಲಿ ಬುಧವಾರ ಮಧ್ಯಾಹ್ನ ಮಾವೋವಾದಿಗಳು ಈ ಘಟನೆ ನಡೆದಿದೆ. ಚಾಲಕ ಸೇರಿದಂತೆ ಒಟ್ಟು 10 ಪೊಲೀಸ್ ಸಿಬ್ಬಂದಿ ಈ ದಾಳಿಯಲ್ಲಿ ಹುತಾತ್ಮರಾಗಿದ್ದಾರೆ. ಮಾವೋವಾದಿಗಳ ವಿರುದ್ಧದ ಕಾರ್ಯಾಚರಣೆಗೆ ತೆರಳಿದ್ದ ಪೊಲೀಸರು ವಾಪಸ್ ಆಗುವಾಗ ಈ ದಾಳಿ ನಡೆಸಲಾಗಿದೆ ಎಂದು ತಿಳಿದುಬಂದಿದೆ.

ಛತ್ತೀಸ್​ಗಢದ ರಾಜ್ಯ ಗುಪ್ತಚರ ಇಲಾಖೆ ಮಾಹಿತಿಯನ್ನು ಆಧರಿಸಿ ಪೊಲೀಸರು ಆ್ಯಂಟಿ ಮಾವೋಈಸ್ಟ್​ ಕಾರ್ಯಾಚರಣೆಯನ್ನು ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮೃತ ಪೊಲೀಸ್​ ಅಧಿಕಾರಿಗಳು ಜಿಲ್ಲಾ ಸಶಸ್ತ್ರ ಮೀಸಲು ಪಡೆ(DRG)ಗೆ ಸೇರಿದ್ದವರು ಎಂದು ತಿಳಿದು ಬಂದಿದೆ.

ಈ ಘಟನೆ ಬಗ್ಗೆ ಪ್ರತಿಕ್ರಿಯಿಸಿದ ಛತ್ತೀಸ್‌ಗಢದ ಮುಖ್ಯಮಂತ್ರಿಗಳು, ತಕ್ಷಣದ ನಕ್ಸಲರ ವಿರುದ್ಧ ಕಾರ್ಯಾಚರಣೆ ಆರಂಭಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ. ಅಲ್ಲದೇ ಘಟನೆ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ವಿವರಣೆ ನೀಡಿದ್ದಾರೆ.

”ದಾಂತೇವಾಡದಲ್ಲಿ ಮಾವೋವಾದಿಗಳು ಅಡಗಿದ್ದಾರೆ ಎಂಬ ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ಆಧರಿಸಿ ಅವರ ವಿರುದ್ಧ ಕಾರ್ಯಾಚರಣೆ ನಡೆಸಲು ಪೊಲೀಸರು ತೆರಳಿದ್ದರು. ಅಲ್ಲಿಂದ ವಾಹನದಲ್ಲಿ ವಾಪಸ್ ಆಗುವಾಗ ಸುಧಾರಿತ ಸ್ಫೋಟಕಗಳನ್ನು ಬಳಸಿ ವಾಹನವನ್ನು ನಕ್ಸಲರು ಸ್ಫೋಟಿಸಿದ್ದಾರೆ” ಎಂದು ತಿಳಿಸಿದ್ದಾರೆ.

”ನಕ್ಸಲರು ಪೊಲೀಸ್ ವಾಹನವನ್ನು ಸ್ಫೋಟಗೊಳಿಸಿದ ಘಟನೆ ಅರನ್‌ಪುರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹುತಾತ್ಮ ಪೊಲೀಸರು ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ)ಗೆ ಸೇರಿದವರು. ಈ ಘಟನೆ ರಾಜಧಾನಿ ರಾಯ್‌ಪುರ್‌ನಿಂದ ಸುಮಾರು 450 ಕಿ. ಮೀ. ದೂರದಲ್ಲಿ ನಡೆದಿದೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನು ಈ ಘಟನೆ ಬಗ್ಗೆ ಮಾಹಿತಿ ಪಡೆದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಜೊತೆ ಮಾತುಕತೆ ನಡೆಸಿದರು. ಈ ವೇಳೆ ಅಮಿತ್ ಶಾ, ನಕ್ಸಲರ ವಿರುದ್ಧದ ಕಾರ್ಯಾಚರಣೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ಅವರು ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿದ್ದಾರೆ.

ಭೂಪೇಶ್ ಬಘೇಲ್ ಘಟನೆ ಕುರಿತು ಟ್ವೀಟ್ ಮಾಡಿದ್ದು, ”ನಕ್ಸಲರ ವಿರುದ್ಧದ ಕಾರ್ಯಾಚರಣೆ ಮುಗಿಸಿಕೊಂಡು ವಾಪಸ್ ಆಗುತ್ತಿದ್ದ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ಪೊಲೀಸರ ವಾಹನವದ ಮೇಲೆ ಸುಧಾರಿತ ಸ್ಫೋಟಕಗಳನ್ನು ಬಳಸಿಕೊಂಡು ದಾಳಿ ನಡೆಸಲಾಗಿದೆ. ಇದು ಅತ್ಯಂತ ದುಃಖಕರ ಸುದ್ದಿಯಾಗಿದ್ದು ಮೃತರ ಕುಟುಂಬಸ್ಥರ ನೋವಿನಲ್ಲಿ ನಾವು ಭಾಗಿಯಾಗುತ್ತೇವೆ ಅವರ ಆತ್ಮಕ್ಕೆ ಶಾಂತಿ ಸಿಗಲಿ” ಎಂದು ಮುಖ್ಯಮಂತ್ರಿ ಭೂಪೇಶ್​ ಭಘೇಲ್​ ಸಂತಾಪ ಸೂಚಿಸಿದ್ದಾರೆ.

ಈ ಬಗ್ಗೆ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ”ದಾಂತೇವಾಡದಲ್ಲಿ ಛತ್ತೀಸ್‌ಗಢ ಪೊಲೀಸರ ಮೇಲೆ ನಡೆದ ದಾಳಿಯನ್ನು ಬಲವಾಗಿ ಖಂಡಿಸುತ್ತೇನೆ. ದಾಳಿಯಲ್ಲಿ ನಾವು ಕಳೆದುಕೊಂಡ ವೀರ ಯೋಧರಿಗೆ ನನ್ನ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಅವರ ತ್ಯಾಗ ಸದಾ ಸ್ಮರಣೀಯ. ಮೃತರ ಕುಟುಂಬಗಳಿಗೆ ನನ್ನ ಸಂತಾಪಗಳು” ಎಂದು ಹೇಳಿದ್ದಾರೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಟ್ವೀಟ್ ಮಾಡಿದ್ದು,  ಘಟನೆ ಕುರಿತು ಛತ್ತೀಸ್‌ಗಢದ ಮುಖ್ಯಮಂತ್ರಿ ಭೂಪೇಶ್‌ಬಾಗಲ್ ಜೊತೆ ದೂರವಾಣಿಯಲ್ಲಿ ಮಾತನಾಡಿದ್ದೇನೆ. ನಕ್ಸಲಿಸಂ ಕೊನೆಗಾಣಿಸಲು ಕಾಂಗ್ರೆಸ್ ಸರಕಾರಗಳು ಸದಾ ಕ್ರಮಗಳನ್ನು ಕೈಗೊಂಡಿವೆ. ನಮ್ಮ ನಾಯಕರು ನಕ್ಸಲ್‌ರನ್ನು ನಿಗ್ರಹಿಸಲು ಶ್ರಮವಹಿಸಿದ್ದಾರೆ. ನಕ್ಸಲಿಸಂ ವಿರುದ್ಧ ನಾವು ಒಗ್ಗಟ್ಟಾಗಿದ್ದೇವೆ ಮತ್ತು ಅದರ ವಿರುದ್ಧ ಹೋರಾಟ ಮುಂದುವರಿಸುತ್ತೇವೆ” ಎಂದಿದ್ದಾರೆ.

”ಛತ್ತೀಸ್‌ಗಢದ ದಾಂತೇವಾಡದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಹೇಡಿಗಳ ದಾಳಿಯಲ್ಲಿ ನಮ್ಮ 10 ಡಿಆರ್‌ಜಿ ಜವಾನರು ಮತ್ತು ಚಾಲಕ ಹುತಾತ್ಮರಾಗಿರುವುದು ತೀವ್ರ ದುಃಖ ತಂದಿದೆ. ಆ ಧೀರರಿಗೆ ನಮನಗಳು. ನಾವು ದುಃಖತಪ್ತ ಕುಟುಂಬಗಳೊಂದಿಗೆ ಇದ್ದೇವೆ. ಛತ್ತೀಸ್‌ಗಢದಲ್ಲಿ ನಕ್ಸಲಿಸಂ ವಿರುದ್ಧದ ಹೋರಾಟ ಕೊನೆಯ ಹಂತದಲ್ಲಿದೆ, ಅದರಲ್ಲಿ ನಮ್ಮ ಸರ್ಕಾರ ಗೆಲ್ಲಲಿದೆ” ಎಂದು ಖರ್ಗೆ ಟ್ವೀಟ್ ಮಾಡಿದ್ದಾರೆ.

ಈ ಮಾವೋವಾದಿಗಳು ದೇಶದ ಇತರ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಛತ್ತೀಸ್‌ಗಢದಲ್ಲಿ ಹೆಚ್ಚು ಸಕ್ರಿಯರಾಗಿದ್ದಾರೆ. ಈ ಹಿಂದೆ ಹಲವು ಬಾರಿ ಪೊಲೀಸರ ಜೊತೆ ಗುಂಡಿನ ಚಕಮಕಿ ನಡೆಸಿದ್ದಾರೆ. ಈ ಬಾರಿ ಪೊಲೀಸ್​ ವಾಹನದ ಮೇಲೆಯೇ ಮಾವೋವಾದಿಗಳು ಬಾಂಬ್​ ದಾಳಿ ನಡೆಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...