Homeಕರ್ನಾಟಕಶಿವಮೊಗ್ಗ: ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ; ಸಾಮಾಜಿಕ ಮಾಧ್ಯಮದಲ್ಲಿ ಖಂಡನೆ

ಶಿವಮೊಗ್ಗ: ಬಿಜೆಪಿ ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ; ಸಾಮಾಜಿಕ ಮಾಧ್ಯಮದಲ್ಲಿ ಖಂಡನೆ

- Advertisement -
- Advertisement -

ಶಿವಮೊಗ್ಗದ ಎನ್ ಇಎಸ್ ಮೈದಾನದಲ್ಲಿ  ಇಂದು (ಗುರುವಾರ) ಮಧ್ಯಾಹ್ನ ಮಾಜಿ ಐಪಿಎಸ್ ಅಧಿಕಾರಿ ಅಣ್ಣಾಮಲೈ ನೇತೃತ್ವದಲ್ಲಿ ಬಿಜೆಪಿಯಿಂದ ಆಯೋಜಿಸಿದ್ದ ತಮಿಳು ಬಾಂಧವರ ಸಮಾವೇಶದಲ್ಲಿ ಧ್ವನಿವರ್ಧಕದಲ್ಲಿ ತಮಿಳುನಾಡು ನಾಡಗೀತೆಯನ್ನು ಹಾಕಿ ಗೌರವ ಸಲ್ಲಿಸಲಾಗುತ್ತಿತ್ತು. ಈ ವೇಳೆ ಶಾಸಕ ಕೆಎಸ್ ಈಶ್ವರಪ್ಪ ಅದನ್ನು ಅರ್ಧಕ್ಕೆ ತಡೆದು ಕರ್ನಾಟಕದ ನಾಡಗೀತೆ ಹಾಕಿಸಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ಸಹ ಉಸ್ತುವಾರಿಯಾಗಿರುವ ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಅಣ್ಣಾಮಲೈ ನೇತೃತ್ವದಲ್ಲಿ ನಡೆಯುತ್ತಿರುವ ಕಾರಣಕ್ಕೆ ಮತ್ತು ಅಲ್ಲಿ ನೆರೆದಿರುವವರೆಲ್ಲರೂ ತಮಿಳರು ಆಗಿದ್ದರಿಂದ ಅವರ ಮತ ಸೆಳೆಯಲು ಕಾರ್ಯಕ್ರಮದಲ್ಲಿ ತಮಿಳುನಾಡು ನಾಡಗೀತೆ ಹಾಕಲಾಗಿತ್ತು. ಈ ಕಾರ್ಯಕ್ರಮದಲ್ಲಿ ಈಶ್ವರಪ್ಪ ಹಾಗೂ ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಎನ್. ಚನ್ನಬಸಪ್ಪ (ಚನ್ನಿ) ಕೂಡ ಪಾಲ್ಗೊಂಡಿದ್ದರು.

ಸಮಾವೇಶ ಆರಂಭವಾಗುತ್ತಿದ್ದಂತೆಯೇ ಸಂಘಟಕರು ಈಗ ತಮಿಳು ನಾಡಗೀತೆ ಆರಂಭವಾಗಲಿದೆ. ಎಲ್ಲರೂ ಎದ್ದು ನಿಂತುಕೊಳ್ಳಿ ಎಂದು ಮನವಿ ಮಾಡಿದರು. ಆಗ ಸಮಾವೇಶದಲ್ಲಿ ನೆರೆದವರ ಜೊತೆ ವೇದಿಕೆಯಲ್ಲಿದ್ದ ಈಶ್ವರಪ್ಪ ಸೇರಿದಂತೆ ಎಲ್ಲರೂ ಎದ್ದು ನಿಂತು ತಮಿಳುನಾಡು ನಾಡಗೀತೆಗೆ ಗೌರವ ಸಲ್ಲಿಸುತ್ತಿದ್ದರು.

ಈ ವೇಳೆ ಇದ್ದಕ್ಕಿದ್ದಂತೆ ಆಸನದ ಬಳಿಯಿಂದ ಡಯಾಸ್ ನತ್ತ ಬಂದ ಈಶ್ವರಪ್ಪ, ನಾಡಗೀತೆ ನಿಲ್ಲಿಸುವಂತೆ ಸಂಘಟಕರಿಗೆ ಸೂಚಿಸಿದರು. ಕರ್ನಾಟಕದ ನಾಡಗೀತೆ ಹಾಕಿಸಿದರು. ನಂತರ ವೇದಿಕೆಯಲ್ಲಿದ್ದ ಗಣ್ಯರು ಕನ್ನಡದ ನಾಡಗೀತೆಗೆ ಗೌರವ ಸಲ್ಲಿಸಿದರು.

ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ”ಮೇಕೆದಾಟು ವಿಚಾರದಲ್ಲಿ ಕರ್ನಾಟಕದ ವಿರುದ್ಧದ ನಿಲುವು ಹೊಂದಿದ್ದ ಅಣ್ಣಾಮಲೈ ಅವರನ್ನು ಕರ್ನಾಟಕದ ಚುನಾವಣಾ ಉಸ್ತುವಾರಿಯಾಗಿ ನೇಮಿಸುವ ಮೂಲಕ ಬಿಜೆಪಿ ಕನ್ನಡಿಗರ ಸ್ವಾಭಿಮಾನವನ್ನು ಅಣಕವಾಡಿದೆ. ಈಗ ಅಣ್ಣಾಮಲೈ ಮೆಚ್ಚಿಸಲು ಕರ್ನಾಟಕದ ನಾಡಗೀತೆಯ ಬದಲು ತಮಿಳುನಾಡಿನ ನಾಡಗೀತೆ ಹಾಡಲಾಗಿದೆ. ಬಿಜೆಪಿ ಕನ್ನಡಿಗರ ಸ್ವಾಭಿಮಾನ ಕೆಣಕುತ್ತಿರುವುದೇಕೆ?” ಎಂದು ಕಿಡಿಕಾರಿದೆ.

ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲೂ ಆಕ್ರೋಶ ವ್ಯಕ್ತವಾಗುತ್ತಿದೆ. ಪತ್ರಕರ್ತ ದಿನೇಶ್ ಕುಮಾರ್ ಅವರು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿದ್ದು, ”ಅಣ್ಣಾಮಲೈ ಶಿವಮೊಗ್ಗದ ಬಿಜೆಪಿ ಪ್ರಚಾರ ಸಭೆಯಲ್ಲಿ ತಮಿಳು ನಾಡಗೀತೆ ಹಾಡಿಸಿ ಸುದ್ದಿಯಾಗಿದ್ದಾನೆ. ಮೊದಲೇ ಏಟಿನ ಮೇಲೆ ಏಟು ತಿಂದಿರುವ ರಾಜ್ಯ ಬಿಜೆಪಿ‌ ತಲೆ ಮೇಲೆ ಸುತ್ತಿಗೆಯಲ್ಲಿ ಬಾರಿಸಿದ್ದಾನೆ. ಇಷ್ಟೇ ಅಲ್ಲ, ಈತ ಕರ್ನಾಟಕದಲ್ಲಿ ಇರುವವರೆಗೆ ಒಂದಲ್ಲ ಒಂದು ತರಲೆ ಮಾಡುತ್ತಲೇ ಇರುತ್ತಾನೆ. ಅದಂತೂ ನಿಜ” ಎಂದು ಬರೆದಿದ್ದಾರೆ.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಈ ಬಗ್ಗೆ ಟ್ವೀಟ್ ಮಾಡಿದ್ದು, ”ಅಪ್ಪಟ ಕನ್ನಡಿಗರ ನಾಡು ಶಿವಮೊಗ್ಗ ಕುವೆಂಪು ಅವರ ನಾಡಿನಲ್ಲಿ ತಮಿಳು ನಾಡಗೀತೆ… ಈಗ ಚುನಾವಣಾ ಸಮಯ ವೋಟ್ ಗಾಗಿ ಏನ್ ಬೇಕೋ ಅದನ್ನು ಮಾಡಿ…” ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...