ರಾಜ್ಯ ಕಾಂಗ್ರೆಸ್ ಪಕ್ಷವು ತನ್ನ ಐದನೇ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದು, ಈ ಚುನಾವಣೆಯಲ್ಲಿ ಮಹಿಳಾ ಮತದಾರರನ್ನು ಸೆಳೆಯಲು ಯತ್ನಿಸಿದೆ. ಈಗಾಗಲೇ ನಾಲ್ಕು ಗ್ಯಾರಂಟಿಗಳನ್ನು ಕಾಂಗ್ರೆಸ್ ಘೋಷಿಸಿತ್ತು.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲ ಮಹಿಳೆಯರಿಗೆ ಸರ್ಕಾರಿ ಬಸ್ಗಳಲ್ಲಿ ಸಂಪೂರ್ಣ ಉಚಿತ ಪ್ರಯಾಣ ಮಾಡಲು ಯೋಜನೆ ಜಾರಿಗೆ ಜಾರಿಗೊಳಿಸಲಾಗುವುದು ಎಂದಿದೆ. ಆ ಮೂಲಕ ರಾಜ್ಯದಲ್ಲಿರುವ 2,63,98,483 ಮಹಿಳಾ ಮತದಾರರನ್ನು ತನ್ನತ್ತ ಸೆಳೆದುಕೊಳ್ಳಲು ಯೋಜನೆ ರೂಪಿಸಿದೆ.
ಇದು ಮಹಿಳೆಯರಿಗಾಗಿಯೇ ಘೋಷಿಸಿರುವ ಕಾಂಗ್ರೆಸ್ನ ಎರಡನೇ ದೊಡ್ಡ ಯೋಜನೆಯಾಗಿದೆ. ಈ ಮೊದಲು ಕಾಂಗ್ರೆಸ್ ಪ್ರಿಯಾಂಕಾ ಗಾಂಧಿ ವಾದ್ರಾ ನೇತೃತ್ವದಲ್ಲಿ ಗೃಹ ಲಕ್ಷ್ಮಿ ಯೋಜನೆಯನ್ನು ಘೋಷಿಸಿತ್ತು.
ಇಂದು (ಏ 27) ಮಂಗಳೂರಿನಲ್ಲಿ ಐದನೇ ಗ್ಯಾರಂಟಿ ಯೋಜನೆ ಘೋಷಿಸಿದ ರಾಹುಲ್ ಗಾಂಧಿ, “ನಮ್ಮ ಮನೆ ಮಹಿಳೆಯರ ಹುಂಡಿ ಡಬ್ಬಿಗಳಿಂದ ರಾಜ್ಯದ 40% ಸರ್ಕಾರ ಹಣ ಕದ್ದಿದೆ. ಇದನ್ನು ನಾವು ಮರಳಿ ಈ ಯೋಜನೆ ರೂಪದಲ್ಲಿ ಕೊಡಿಸುತ್ತಿದ್ದೇವೆ. ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ಮೊದಲ ಕ್ಯಾಬಿನೆಟ್ನಲ್ಲೇ ಇದನ್ನು ಘೋಷಿಸುತ್ತೇವೆ” ಎಂದು ಹೇಳಿದ್ದಾರೆ.
ಕರ್ನಾಟಕದ ಜನತೆಗೆ ನಮ್ಮ 5ನೇ ಭರವಸೆ..
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾದ ತಕ್ಷಣ ಮಹಿಳೆಯರಿಗೆ ಬಸ್ ಪ್ರಯಾಣ ಉಚಿತ!
– @RahulGandhi #ಕಾಂಗ್ರೆಸ್_ಬರಲಿದೆ_ಪ್ರಗತಿ_ತರಲಿದೆ pic.twitter.com/baniUWFypL— Karnataka Congress (@INCKarnataka) April 27, 2023
ಇದೇ ವೇಳೆ ಪ್ರಧಾನಿ ಮೋದಿಯವರಿಗೆ ಸವಾಲೆಸೆದ ರಾಹುಲ್ ಗಾಂಧಿ, “ಮೋದಿಜಿ, ನಾವು ನಾಲ್ಕು ಭರವಸೆ ಈಡೇರಿಸುತ್ತೇವೆ. ನೀವು ದೇಶದಲ್ಲಿ ಇದನ್ನು ಈಡೇರಿಸುತ್ತೀರಾ” ಎಂದು ಪ್ರಶ್ನಿಸಿದ್ದಾರೆ.
ಪದವೀಧರ ನಿರುದ್ಯೋಗಿಗಳಿಗೆ ಪ್ರತಿ ತಿಂಗಳು 3,000 ರೂಪಾಯಿ ನಿರುದ್ಯೋಗ ಭತ್ಯೆ (ಯುವನಿಧಿ), ಪ್ರತಿ ಮನೆಗೆ 200 ಯೂನಿಟ್ ಉಚಿತ ವಿದ್ಯುತ್, ಪ್ರತಿ ಕುಟುಂಬದ ಓರ್ವ ಮಹಿಳೆಗೆ ಮಾಸಿಕ 2000 ರೂ. (ಗೃಹಲಕ್ಷ್ಮಿ) ಮತ್ತು ಪ್ರತಿ ತಿಂಗಳು ಒಬ್ಬ ವ್ಯಕ್ತಿಗೆ ತಲಾ 10 ಕೆ.ಜಿ. ಅಕ್ಕಿ (ಅನ್ನಭಾಗ್ಯ ಮುಂದುವರಿಕೆ) ಎಂಬ ಘೋಷಣೆಗಳನ್ನು ಕಾಂಗ್ರೆಸ್ ಮಾಡಿತ್ತು. ಐದನೇ ಯೋಜನೆಯನ್ನು ಈಗ ಪ್ರಕಟಿಸಿದೆ.
ಇದನ್ನೂ ಓದಿರಿ: 10 ಕೆ.ಜಿ. ಅಕ್ಕಿ ಗ್ಯಾರಂಟಿ ಘೋಷಿಸಿದ ಕಾಂಗ್ರೆಸ್: ಬಿಜೆಪಿಯ ನಿದ್ದೆಗೆಡಿಸಿದೆಯೇ ‘ಅನ್ನಭಾಗ್ಯ?’
Namma congress