Homeಕರ್ನಾಟಕಯುಪಿ ಮಾದರಿ ಬಗ್ಗೆ ಕರ್ನಾಟಕದಲ್ಲಿ ಪ್ರಸ್ತಾಪಿಸುವುದೇ ಹಾಸ್ಯಾಸ್ಪದ: ಆದಿತ್ಯನಾಥ್ ಹೇಳಿಕೆಗೆ ಸಿದ್ದರಾಮಯ್ಯ ಲೇವಡಿ

ಯುಪಿ ಮಾದರಿ ಬಗ್ಗೆ ಕರ್ನಾಟಕದಲ್ಲಿ ಪ್ರಸ್ತಾಪಿಸುವುದೇ ಹಾಸ್ಯಾಸ್ಪದ: ಆದಿತ್ಯನಾಥ್ ಹೇಳಿಕೆಗೆ ಸಿದ್ದರಾಮಯ್ಯ ಲೇವಡಿ

- Advertisement -
- Advertisement -

ಕರ್ನಾಟಕ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಪ್ರಚಾರ ನಡೆಸಲು ಬಂದಿರುವ ಯೋಗಿ ಆದಿತ್ಯನಾಥ್‌ರವರು ಉತ್ತರ ಪ್ರದೇಶದ ಮಾದರಿ ಬಗ್ಗೆ ಕರ್ನಾಟಕದಲ್ಲಿ ಪ್ರಸ್ತಾಪಿಸಿರುವುದು ಹಾಸ್ಯಾಸ್ಪದ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

”ಕೇಂದ್ರ ಸರ್ಕಾರದ ದಾಖಲೆಗಳ ಪ್ರಕಾರ ಉತ್ತರಪ್ರದೇಶದಲ್ಲಿ ಆರು ವರ್ಷದ ಒಳಗಿನ ಮಕ್ಕಳ ಅನಿಮಿಯಾ ಪ್ರಮಾಣ 2016ರಲ್ಲಿ ಶೇ. 63.2 ರಷ್ಟಿತ್ತು. ಈಗ ಶೇ. 66.4 ಕ್ಕೆ ಹೆಚ್ಚಿಸಿ ಮಕ್ಕಳನ್ನು ರೋಗಗ್ರಸ್ತ ಮಾಡಿದ್ದು ಯೋಗಿ ಸಾಧನೆ. ಎಲ್ಲ ರಾಜ್ಯಗಳಲ್ಲಿ ಜನರ ಜೀವಿತಾವಧಿ ಹೆಚ್ಚುತ್ತಿದ್ದರೆ ಉತ್ತರಪ್ರದೇಶದಲ್ಲಿ ಕುಸಿಯುತ್ತಿರುವುದು ಮಾದರಿಯೇ?” ಎಂದು ಟೀಕಿಸಿದ್ದಾರೆ.

“ಅದಿತ್ಯನಾಥ್ ಅವರು ಉತ್ತರ ಪ್ರದೇಶದಲ್ಲಿ ಮುಖ್ಯಮಂತ್ರಿಯಾದ ಬಳಿಕ  ಅಂತಹ ಗಮನಾರ್ಹವಾದ ಬದಲಾವಣೆಗಳೇನು ಆಗಿಲ್ಲ. ಉತ್ತರ ಪ್ರದೇಶದಲ್ಲಿನ ಬಡತನ, ನಿರುದ್ಯೋಗ, ಹಿಂಸಾಚಾರದಲ್ಲಿ ದೇಶದಲ್ಲಿಯೇ ಕುಖ್ಯಾತಿ ಪಡೆದಿರುವುದೇಕೆ?” ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

2016ರಲ್ಲಿ ಉತ್ತರ ಪ್ರದೇಶದ ಮಹಿಳೆಯರ ಸರಾಸರಿ ಜೀವಿತಾವಧಿ 68.5 ವರ್ಷ ದಷ್ಟಿತ್ತು. 2019ರಲ್ಲಿ ಅದು ಶೇ.66.2 ವರ್ಷದಷ್ಟಕ್ಕೆ ಕುಸಿದಿದೆ. ಎಲ್ಲಾ ರಾಜ್ಯಗಳ ಜನರ ಜೀವಿತಾವಧಿ ಹೆಚ್ಚುತ್ತಿದ್ದರೆ ಉತ್ತರ ಪ್ರದೇಶದಲ್ಲಿ ಕುಸಿಯುತ್ತಿದೆ. ಇದೇ ಅಲ್ಲವೆ ಆದಿತ್ಯನಾಥ್ ಮಾದರಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ತಲಾವಾರು ವಿದ್ಯುತ್‌ ಲಭ್ಯತೆಯು ಕರ್ನಾಟಕದಲ್ಲಿ 1,184 ಕಿಲೋವ್ಯಾಟ್‌ಗಳಷ್ಟಿದ್ದರೆ, ಉತ್ತರ ಪ್ರದೇಶದಲ್ಲಿ ಕೇವಲ 642 ಕಿಲೋವ್ಯಾಟ್‌ಗಳಷ್ಟಿದೆ. ಆದಿತ್ಯನಾಥರು ಮುಖ್ಯಮಂತ್ರಿಯಾದ ಮೇಲೆ ಗಮನಾರ್ಹ ಬದಲಾವಣೆಯೇನೂ ಸಂಭವಿಸಿಲ್ಲ. ಅಭಿವೃದ್ಧಿಗೂ ವಿದ್ಯುತ್‌ ಬಳಕೆಗೂ ಸಂಬಂಧವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: ಮೀಸಲಾತಿ ಮಿತಿ ಶೇ.75ಕ್ಕೆ ಏರಿಸಲು ಕಾಂಗ್ರೆಸ್ ಬದ್ಧ: ಸಿದ್ದರಾಮಯ್ಯ ಘೋಷಣೆ

2021ರ ದಾಖಲೆಗಳ ಪ್ರಕಾರ ಉತ್ತರ ಪ್ರದೇಶದಲ್ಲಿ 3,012 ತಜ್ಞ ವೈದ್ಯರ ಹುದ್ದೆಗಳು ಮಂಜೂರಾಗಿದ್ದರೆ, ಕೆಲಸ ಮಾಡುತ್ತಿರುವವರು ಕೇವಲ 872 ಜನ ಮಾತ್ರ. 2,030 ಹುದ್ದೆಗಳು ಖಾಲಿ ಇವೆ. ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೆಲಸ ಮಾಡಬೇಕಾದ ವೈದ್ಯರ 1,355 ಹುದ್ದೆಗಳು ಖಾಲಿ ಇವೆ. ಜನರ ಆರೋಗ್ಯ ಸುಧಾರಿಸದೆ ರಾಜ್ಯವನ್ನು ಅಭಿವೃದ್ಧಿ ಮಾಡುವುದು ಹೇಗೆ? ಎಂದು ಅವರು ಪ್ರಶ್ನಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...