Homeಮುಖಪುಟಕುಸ್ತಿಪಟುಗಳ ಪ್ರತಿಭಟನೆ ದೇಶಕ್ಕೆ ಕಳಂಕ ಎಂದ ಪಿಟಿ ಉಷಾ: ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ಕುಸ್ತಿಪಟುಗಳ ಪ್ರತಿಭಟನೆ ದೇಶಕ್ಕೆ ಕಳಂಕ ಎಂದ ಪಿಟಿ ಉಷಾ: ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಶನ್‌ ಅಧ್ಯಕ್ಷ ಹಾಗೂ ಬಿಜೆಪಿ ಸಂಸದರಾಗಿರುವ ಬ್ರಿಜ್‌ಭೂಷಣ್‌ ಸಿಂಗ್‌ ವಿರುದ್ಧ ಲೈಂಗಿಕ ಕಿರುಕುಳ, ಬೆದರಿಕೆ ಆರೋಪ ಮಾಡಿ, ಅವರ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ನಡೆ ಬಗ್ಗೆ ಭಾರತೀಯ ಒಲಿಂಪಿಕ್ಸ್‌ ಸಂಸ್ಥೆ(ಐಒಎ) ಅಧ್ಯಕ್ಷೆ ಪಿ.ಟಿ. ಉಷಾ ಟೀಕಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಪಿಟಿ ಉಷಾ, ”ಕುಸ್ತಿಪಟುಗಳು ದೆಹಲಿಯಲ್ಲಿ ಸಾರ್ವಜನಿಕ ಪ್ರತಿಭಟನೆಗೆ ಕುಳಿತುಕೊಳ್ಳಲು ನಿರ್ಧರಿಸುವ ಮುನ್ನ ತಾವು ಮಾಡಿದ ಆರೋಪಗಳನ್ನು ಪರಿಶೀಲಿಸುವ ಸಮಿತಿಯ ವರದಿ ಹೊರಬರುವವರೆಗು ಕಾಯಬೇಕಿತ್ತು. ಅದಕ್ಕೂ ಮುನ್ನ ಪ್ರತಿಭಟನೆಗೆ ಇಳಿದಿರುವುದು ಅಶಿಸ್ತಿನ ನಡೆಯಾಗಿದೆ ಎಂದು ಹೇಳಿದ್ದಾರೆ.

ಈ ಆಟಗಾರರು ಬೀದಿಗಿಳಿದು ಪ್ರತಿಭಟನೆ ಮಾಡಬಾರದಿತ್ತು. ಕನಿಷ್ಠ ಸಮಿತಿಯ ವರದಿ ಬರುವವರೆಗಾದರೂ ಕಾಯಬೇಕಿತ್ತು. ಕುಸ್ತಿಪಟುಗಳ ಪ್ರತಿಭಟನೆಯಿಂದಾಗಿ ದೇಶದ ಘನತೆಗೆ ಧಕ್ಕೆಯಾಗುತ್ತಿದೆ. ಇದು ನಕಾರಾತ್ಮಕ ಧೋರಣೆ ಎಂದಿದ್ದಾರೆ.

ಲೈಂಗಿಕ ಕಿರುಕುಳದ ವಿರುದ್ಧ ಪ್ರತಿಭಟೆನೆ ನಡೆಸುತ್ತಿರುವುದನ್ನು ಟೀಕಿಸಿರುವ ಪಿಟಿ ಉಷಾ ಮೇಲೆ ಸಾಮಾಜಿಕ ಮಾಧ್ಯಮದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ.

ಇದನ್ನೂ ಓದಿ: ಪಿಟಿ ಉಷಾ ಮಹಿಳೆಯಾಗಿ ನಮ್ಮ ಪ್ರತಿಭಟನೆಗೆ ಬೆಂಬಲ ನೀಡದಿರುವುದು ನೋವಾಗಿದೆ: ಕುಸ್ತಿಪಟು ಸಾಕ್ಷಿ ಮಲಿಕ್

ಭಾರತೀಯ ಒಲಿಂಪಿಕ್ ಅಸೋಸಿಯೇಷನ್ ​​(ಐಒಎ) ಅಧ್ಯಕ್ಷೆ ಪಿಟಿ ಉಷಾ ಕುಸ್ತಿಪಟುಗಳ ವಿರುದ್ಧ ತೀವ್ರವಾಗಿ ಟೀಕಿಸಿದ ಒಂದು ದಿನದ ನಂತರ ಒಲಂಪಿಕ್ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಅವರು ಟ್ವೀಟ್ ಮಾಡಿದ್ದಾರೆ.

”ನಮ್ಮ ಕ್ರೀಡಾಪಟುಗಳು ನ್ಯಾಯಕ್ಕಾಗಿ ಬೀದಿಗಿಳಿದಿರುವುದನ್ನು ನೋಡುವುದು ನನಗೆ ನೋವುಂಟುಮಾಡುತ್ತದೆ. ಅವರು ನಮ್ಮ ಮಹಾನ್ ರಾಷ್ಟ್ರವನ್ನು ಪ್ರತಿನಿಧಿಸಲು ಮತ್ತು ನಮಗೆ ಹೆಮ್ಮೆ ತರಲು ಶ್ರಮಿಸಿದ್ದಾರೆ. ರಾಷ್ಟ್ರವಾಗಿ, ಪ್ರತಿಯೊಬ್ಬ ವ್ಯಕ್ತಿಯ ಸಮಗ್ರತೆ ಮತ್ತು ಘನತೆಯನ್ನು ಕಾಪಾಡುವ ಜವಾಬ್ದಾರರು, ಇದು ಎಂದಿಗೂ ಸಂಭವಿಸಬಾರದು” ಎಂದು ಅಭಿಪ್ರಾಯ ಹೊರ ಹಾಕಿದ್ದಾರೆ.

”ಇದೊಂದು ಸೂಕ್ಷ್ಮ ವಿಷಯವಾಗಿದ್ದು, ನಿಷ್ಪಕ್ಷಪಾತ ಮತ್ತು ಪಾರದರ್ಶಕ ರೀತಿಯಲ್ಲಿ ವ್ಯವಹರಿಸಬೇಕು. ನ್ಯಾಯ ಒದಗಿಸಲು ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.

”ಪ್ರೀತಿಯ ಪಿಟಿ ಉಷಾ ಅವರೇ, ನಿಮ್ಮ ಸಹ ಕ್ರೀಡಾಪಟುಗಳು ಪುನರಾವರ್ತಿತ ಮತ್ತು ಅನಪೇಕ್ಷಿತ ಲೈಂಗಿಕ ಕಿರುಕುಳದ ಬಗ್ಗೆ ಆರೋಪಿಸಿ ಪ್ರತಿಭಟನೆ ಮಾಡುವುದನ್ನು ಅವಹೇಳನ ಮಾಡುವುದು ನಿಮಗೆ ವ್ಯಕ್ತಿತ್ವಕ್ಕೆ ಸರಿಯಾದುದಲ್ಲ. ಅವರ ಹಕ್ಕುಗಳಿಗಾಗಿ ಅವರು ಪ್ರತಿಭಟಿಸುತ್ತಿದ್ದಾರೆ. ಅದು “ರಾಷ್ಟ್ರದ ಇಮೇಜ್ ಅನ್ನು ಕಳಂಕಗೊಳಿಸುವುದಿಲ್ಲ”. ಅವರ ಕಳವಳಗಳನ್ನು ನಿರ್ಲಕ್ಷಿಸುವುದು – ಅವುಗಳನ್ನು ಕೇಳುವ ಬದಲು, ಅವುಗಳನ್ನು ತನಿಖೆ ಮಾಡುವುದು ಮತ್ತು ಕ್ರಮ ಕೈಗೊಳ್ಳುವ ಕೆಲಸ ಮಾಡಬೇಕು” ಎಂದು ಕಾಂಗ್ರೆಸ್ ನಾಯಕ ಶಶಿ ತರೂರು ಟ್ವೀಟ್ ಮಾಡಿದ್ದಾರೆ.

ಪಿಟಿ ಉಷಾ ಅವರ ಹೇಳಿಕೆ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಿರಿಯ ಪತ್ರಕರ್ತ ರಾಜಾರಾಂ ತಲ್ಲೂರು ಅವರು ನಿಮ್ಮಿಂದ ಇದನ್ನು ನಿರೀಕ್ಷಿಸಿರಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ”ನಾನು ಇವತ್ತು ಪಯ್ಯೋಳಿ ಎಕ್ಸ್‌ಪ್ರೆಸ್ ಅಭಿಮಾನಿ ಎಂಬ ನನ್ನ ಇಷ್ಟದ ಹಣೆಪಟ್ಟಿಯನ್ನು ಕಳಚಿಕೊಂಡಿದ್ದೇನೆ” ಎಂದಿದ್ದಾರೆ.

”ದೇಶಕ್ಕೆ ಕೀರ್ತಿ ತಂದ ಕುಸ್ತಿ ಪಟು ಹೆಣ್ಣುಮಕ್ಕಳು, ತಮ್ಮ ಮೇಲೆ ನಡೆದಿರುವ ದೌರ್ಜನ್ಯದ ವಿರುದ್ಧ ಹೋರಾಟಕ್ಕೆ ಸಹಾಯ ಕೊಡಿ ಎಂದು ದಿಲ್ಲಿಯಲ್ಲಿ ಧರಣಿ ಹಮ್ಮಿಕೊಂಡು ಅಂಗಲಾಚಿ ಕುಳಿತಿರುವಾಗ, ಮೊದಲು ಬಂದು ಅವರ ಅಹವಾಲು ಕೇಳಬೇಕಿದ್ದ ಭಾರತ ಒಲಿಂಪಿಕ್ ಅಸೋಸಿಯೇಷನ್‌ನ ಹೊಸ ಅಧ್ಯಕ್ಷೆ ಪಿ ಟಿ ಉಷಾ ಅವರು, ಈ ಹೆಣ್ಣುಮಕ್ಕಳು ದೇಶದ ಮರ್ಯಾದೆಗೆ ಧಕ್ಕೆ ತರುತ್ತಿದ್ದಾರೆ ಎಂದು ಹರಿಹಾಯ್ದಿದ್ದಾರೆ. ಇದು ಅತ್ಯಂತ ಶೋಚನೀಯ ಸ್ಥಿತಿ” ಎಂದು ಹೇಳಿದ್ದಾರೆ.

”ಐದಾರು ತಿಂಗಳ ಹಿಂದೆ ಇದೇ ಪಿ ಟಿ ಉಷಾ ಅವರು ತಮ್ಮ ಅಕಾಡೆಮಿಯಲ್ಲಿ ಭೂವಿವಾದವೊಂದು ಸೃಷ್ಟಿ ಆಗಿದ್ದಾಗ (ಅದರ ಒಳಸುಳಿಗಳು ಏನಿವೆ ನನಗೆ ಅರಿವಿಲ್ಲ), ತಾವೇ ಸ್ವತಃ ಮಾಧ್ಯಮಗಳ ಎದುರು ಬಂದು ತಮ್ಮ ಸಂಸ್ಥೆಯ ದಯನೀಯ ಸ್ಥಿತಿಯ ಬಗ್ಗೆ ಅಲವತ್ತುಕೊಂಡದ್ದು ರಾಷ್ಟ್ರೀಯ ಸುದ್ದಿ ಆಗಿತ್ತು. ಹಾಗಾಗಿ, ಒಂದು ಸಮಸ್ಯೆ ಎದುರಾದಾಗ, ಅದನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿದರೆ ಪರಿಹಾರ ಸಿಗಬಹುದೆಂಬ ಪೂರ್ವೋದಾಹರಣೆ ಹಾಕಿಕೊಟ್ಟ ಹಿರಿಯಕ್ಕ ಅವರೇ, ಈಗ ಅದನ್ನೇ ಅನುಸರಿಸಿದ ಕಿರಿಯ ಕ್ರೀಡಾಪಟುಗಳ ಮೇಲೆ ಹರಿಹಾಯುವುದು ಖಂಡಿತಕ್ಕೂ ಭಾರತದ ಕ್ರೀಡಾಜಗತ್ತಿನ ನೈತಿಕ ಸ್ಥೈರ್ಯಕ್ಕೆ ಮರ್ಮಾಘಾತ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

”ಈಗ ಸ್ವತಃ ರಾಜ್ಯಸಭಾ ಸದಸ್ಯರಾಗಿ, ಒಲಿಂಪಿಕ್ ಅಸೋಸಿಯೇಷನ್‌ನ ಅಧ್ಯಕ್ಷೆಯಾಗಿ ಉಷಾ ಅವರಿಗೆ ತೀರಿಸಲು ಸಾಕಷ್ಟು ದೊಡ್ಡ ಋಣದ ಹೊರೆ ಇರಬಹುದು. ಆದರೆ, ಅದನ್ನು ತೀರಿಸಲು, ಈ ಕ್ರೀಡಾಪಟುಗಳ ಮೇಲೆ ಆಗಿರುವ ಲೈಂಗಿಕ ದೌರ್ಜನ್ಯದ ಪರೋಕ್ಷ ಸಮರ್ಥನೆಗೆ ಇಳಿಯುವ ಮೂಲಕ ಪಿ ಟಿ ಉಷಾ, ತಮ್ಮ ಜಾಗತಿಕ ಮಟ್ಟದ ಕ್ರೀಡಾಸಾಧನೆಗಳ ಸಾಮಾಜಿಕ ಔನ್ನತ್ಯವನ್ನು ರಾಜಕೀಯದ ಕೆಸರು ರಾಡಿಯಲ್ಲಿ ಮುಳುಗಿಸಿ ಸಣ್ಣವರಾಗಿದ್ದಾರೆ. ಆ ಹೆಣ್ಣುಮಕ್ಕಳ ದೂರನ್ನು ಕನಿಷ್ಠ ಏನೆಂದು ಕೇಳುವ ನೈತಿಕತೆಯನ್ನು ಅವರು ಉಳಿಸಿಕೊಳ್ಳಬೇಕಾಗಿತ್ತು. ತುಂಬಾ ಬೇಸರದಿಂದ ಇದನ್ನು ದಾಖಲಿಸುತ್ತಿದ್ದೇನೆ” ಎಂದು ತಲ್ಲೂರು ಅವರು ಬರೆದುಕೊಂಡಿದ್ದಾರೆ.

ಮಹೇಂದ್ರ ಹಿಪ್ಪರಗಿ ಎನ್ನುವವರು ಸಾಮಾಜಿಕ ಮಾಧ್ಯಮ ಫೇಸ್‌ಬುಕ್ ನಲ್ಲಿ ಈ ಬಗ್ಗೆ ಪೋಸ್ಟ್ ಮಾಡಿದ್ದು, ”ದಿಲ್ಲಿ ಬೀದಿಯಲ್ಲಿ ದೇಶಕ್ಕೆ ಕೀರ್ತಿ ತಂದ ಕುಸ್ತಿಪಟು ಹೆಣ್ಣು ಮಕ್ಕಳು ತಮ್ಮ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯಕ್ಕೆ ನ್ಯಾಯ ಒದಗಿಸಿ ಎಂದು ಅಂಗಲಾಚಿ ಕುಳಿತಿರುವಾಗ ಸ್ವತಃ ಕ್ರೀಡಾಪಟು, ಭಾರತ ಒಲಿಂಪಿಕ್ ಅಸೋಸಿಯೇಷನ್‌ನ ಅಧ್ಯಕ್ಷೆ ಇವೆಲ್ಲಕ್ಕಿಂತ ಮುಖ್ಯವಾಗಿ ತಾನೊಬ್ಬ ಹೆಣ್ಣು ಮಗಳಾಗಿ ಎಲ್ಲರಿಗಿಂತ ಮೊದಲು ಬಂದು ಅವರ ಅಹವಾಲು ಕೇಳಬೇಕಿತ್ತು. ಆದರೆ ಪಿ ಟಿ ಉಷಾ ಧರಣಿ ನಿರತ ಈ ಹೆಣ್ಣು ಮಕ್ಕಳು ದೇಶದ ಮರ್ಯಾದೆಗೆ ಧಕ್ಕೆ ತರುತ್ತಿದ್ದಾರೆ ಎನ್ನುತ್ತಿದ್ದಾಳಲ್ಲ ಈಕೆ ನಿಜವಾಗಿಯೂ ಮನುಷ್ಯಳಾ…?” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...