Homeಮುಖಪುಟಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

ಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

- Advertisement -
- Advertisement -

ಅಪಾಯಕಾರಿ ಸ್ಥಳಾಂತರವಾದಾಗ ಚೀತಾಗಳ ಸಾವು ನಿರೀಕ್ಷಿತವಾಗಿದೆ ಎಂದು ದಕ್ಷಿಣ ಆಫ್ರಿಕಾದ ಅರಣ್ಯ, ಮೀನುಗಾರಿಕೆ ಮತ್ತು ಪರಿಸರ ಇಲಾಖೆ ಗುರುವಾರ ತಿಳಿಸಿದೆ.

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚಿರತೆಗಳ ಸಾವನಪ್ಪಿದ್ದು, ಈ ರೀತಿಯ ಯೋಜನೆಯಲ್ಲಿ ನಿರೀಕ್ಷಿತ ಮರಣ ದರವನ್ನು ಕಾಣಬಹುದು ಎಂದು ಸೌತ್ ಆಫ್ರಿಕಾ ಹೇಳಿದೆ.

ನಮೀಬಿಯಾದ ತಂದ ಸಶಾ ಎಂಬ ಚೀತಾ ಮೂತ್ರಪಿಂಡದ ಸೋಂಕಿನಿಂದ ಮಾರ್ಚ್ 27 ರಂದು ಸಾವನ್ನಪ್ಪಿತ್ತು. ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಸ್ಥಳಾಂತರಗೊಂಡ ಉದಯ್ ಎಂಬ ಎರಡನೇ ಚೀತಾ ಏಪ್ರಿಲ್ 23 ರಂದು ಸಾವನ್ನಪ್ಪಿತ್ತು. ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ತಂದ 20 ಚಿರತೆಗಳಲ್ಲಿ ಅವು ಸೇರಿವೆ.

ಶವಪರೀಕ್ಷೆ ಮಾಹಿತಿ ಹೊರಬೀಳುವ ಹೊತ್ತಿನಲ್ಲಿ ದಕ್ಷಿಣ ಆಫ್ರಿಕಾ ಹೇಳಿಕೆ ನೀಡಿದೆ. “ಯಾವುದೇ ರೀತಿಯ ಸಾಂಕ್ರಾಮಿಕ ಕಾಯಿಲೆಯಿಂದ ಉದಯ್ ಸಾವನ್ನಪ್ಪಿರುವ ಯಾವುದೇ ಸೂಚನೆಯಿಲ್ಲ. ಇತರ ಯಾವುದೇ ಚೀತಾಗಳಲ್ಲಿ ಇದೇ ರೀತಿಯ ತೊಂದರೆ ಇಲ್ಲ” ಎಂದಿದೆ.

ಇದನ್ನೂ ಓದಿರಿ: ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

“ಎಲ್ಲಾ ದಕ್ಷಿಣ ಆಫ್ರಿಕಾದ ಚಿರತೆಗಳು ವಿಶಾಲವಾದ ಪ್ರದೇಶದಲ್ಲಿವೆ. ಪ್ರತಿದಿನ ಎರಡು ಬಾರಿ ನಿಕಟವಾಗಿ ಅವುಗಳ ಮೇಲ್ವಿಚಾರಣೆ ಮಾಡಲಾಗುತ್ತದೆ” ಎಂದು ಹೇಳಿಕೆ ತಿಳಿಸಿದೆ. “ಅವುಗಳು ಅರಣ್ಯದಲ್ಲಿ ಬೆಳೆದ ಚೀತಾಗಳಾಗಿರುವುದರಿಂದ ಅವುಗಳ ನಡವಳಿಕೆ, ಚಲನವಲನಗಳು ಮತ್ತು ದೇಹದ ಸ್ಥಿತಿಯನ್ನು ದೂರದಿಂದ ಮೌಲ್ಯಮಾಪನ ಮಾಡಬೇಕು. ಅವುಗಳ ಆರೋಗ್ಯ ಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ಪಡೆಯಲು ಸ್ಥಳದಲ್ಲಿಯೇ ತಂಡವನ್ನು ಇರಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

“ದೊಡ್ಡ ಮಾಂಸಾಹಾರಿ ಪ್ರಾಣಿಗಳನ್ನು (ಬೇರೊಂದು ಸ್ಥಳಕ್ಕೆ) ತರುವುದು ಅತ್ಯಂತ ಸಂಕೀರ್ಣ ಮತ್ತು ಅಂತರ್ಗತವಾಗಿ ಅಪಾಯಕಾರಿ ಕಾರ್ಯಾಚರಣೆಗಳಾಗಿವೆ. ಇದು ಯೋಜನೆಯ ನಿರ್ಣಾಯಕ ಹಂತವಾಗಿದೆ. ಚೀತಾಗಳನ್ನು ವಿಸ್ತಾರವಾದ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಲ್ಲಿ ಅವುಗಳ ದಿನನಿತ್ಯದ ಯೋಗಕ್ಷೇಮದ ಮೇಲೆ ಕಡಿಮೆ ನಿಯಂತ್ರಣವಿರುತ್ತದೆ. ಗಾಯ ಮತ್ತು ಮರಣದ ಅಪಾಯಗಳು ಹೆಚ್ಚಾಗುತ್ತವೆ ಮತ್ತು ಈ ಅಪಾಯಗಳನ್ನು ಯೋಜನೆಯಲ್ಲಿ ಒಳಗೊಳ್ಳಬೇಕು” ಎಂದು ತಿಳಿಸಿದೆ.

“ಹೊರಗೆ ಬಿಡಲಾದ ಅನೇಕ ಚೀತಾಗಳು ಕುನೋ ರಾಷ್ಟ್ರೀಯ ಉದ್ಯಾನವನದ ಗಡಿಯಿಂದ ತಪ್ಪಿಸಿಕೊಳ್ಳುತ್ತವೆ ಮತ್ತು ಮರು ಕರೆತರುವ ಪ್ರಕ್ರಿಯೆಯಲ್ಲಿ ಅಲ್ಪಾವಧಿಯ ಒತ್ತಡವನ್ನು ಎದುರಿಸಬೇಕಾಗುತ್ತದೆ” ಎಂದಿರುವ ಆಫ್ರಿಕಾ, “ಚೀತಾಗಳನ್ನು ಅವುಗಳ ಪ್ರದೇಶಕ್ಕೆ ಮತ್ತೆ ತಂದ ನಂತರ ಪರಿಸ್ಥಿತಿಯು ಸ್ಥಿರಗೊಳ್ಳುತ್ತದೆ” ಎಂದು ಹೇಳಿದೆ.

ಇದರ ನಡುವೆ ಫೋರೆನ್ಸಿಕ್ ವಿಜ್ಞಾನಿ ಸೇರಿದಂತೆ ಐದು ಸದಸ್ಯರ ತಂಡವು ನಡೆಸಿದ ಪ್ರಾಥಮಿಕ ಶವಪರೀಕ್ಷೆಯು ಹಲವು ವಿಚಾರಗಳನ್ನು ಬಿಚ್ಚಿಟ್ಟಿದೆ. ಕಾರ್ಡಿಯೋಪಲ್ಮನರಿ ವೈಫಲ್ಯದಿಂದ ಉದಯ್ ಚೀತಾ ಸಾವನ್ನಪ್ಪಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಆರು ವರ್ಷದ ಈ ಚೀತಾ ಬೊಟುಲಿಸಮ್‌ (ದೇಹದ ನರಗಳ ಮೇಲೆ ದಾಳಿ ಮಾಡುವ ವಿಷಕಾರಿ ಅಂಶದಿಂದ ಉಂಟಾದ ಅಪರೂಪದ ಆದರೆ ಗಂಭೀರವಾದ ಕಾಯಿಲೆ. ಇದರಿಂದ ಉಸಿರಾಟದ ತೊಂದರೆ, ಸ್ನಾಯು ಪಾರ್ಶ್ವವಾಯು ಸಂಭವಿಸುವುದು) ಕಾಯಿಲೆಗೆ ತುತ್ತಾಗಿರಬಹುದು ಎಂದು ಊಹಿಸಲಾಗಿದೆ.

“ಜಬಲ್ಪುರ್ ಸಂಸ್ಥೆಯು ಹೆಚ್ಚು ವಿವರವಾದ ಪರೀಕ್ಷೆಯನ್ನು ನಡೆಸುತ್ತದೆ, ಅದರ ನಂತರವೇ ಶ್ವಾಸಕೋಶದ ವೈಫಲ್ಯಕ್ಕೆ ಕಾರಣವೇನು ಎಂದು ನಾವು ತಿಳಿಯುತ್ತೇವೆ” ಎಂದು ಮಧ್ಯಪ್ರದೇಶದ ಮುಖ್ಯ ವನ್ಯಜೀವಿ ವಾರ್ಡನ್ ಜೆಎಸ್ ಚೌಹಾಣ್ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಚೀತಾ ಸ್ಥಳಾಂತರಕ್ಕೆ ಮಧ್ಯಪ್ರದೇಶ ಮನವಿ

ಮಧ್ಯಪ್ರದೇಶದ ಕುನೊ ಉದ್ಯಾನದಲ್ಲಿರುವ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಮಧ್ಯ ಪ್ರದೇಶದ ಅರಣ್ಯ ಇಲಾಖೆ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದೆ.

ಕುನೊ ಉದ್ಯಾನದಲ್ಲಿ ಕಳೆದ ಒಂದು ತಿಂಗಳ ಅಂತರದಲ್ಲೇ ಎರಡು ಚೀತಾ ಮೃತಪಟ್ಟಿವೆ. ಹೀಗಾಗಿ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಇಲಾಖೆ ಕೇಳಿಕೊಂಡಿದೆ.

ಇದನ್ನೂ ಓದಿರಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

‘ಪ್ರಾಜೆಕ್ಟ್‌ ಚೀತಾ’ ಅಡಿಯಲ್ಲಿ ಒಟ್ಟು 20 ಚೀತಾಗಳನ್ನು ಕುನೊ ಉದ್ಯಾನಕ್ಕೆ ಕರೆತರಲಾಗಿತ್ತು. ಎರಡು ತಂಡಗಳಲ್ಲಿ ನಮೀಬಿಯಾ (8) ಹಾಗೂ ದಕ್ಷಿಣ ಆಫ್ರಿಕಾದಿಂದ (12) ಚೀತಾಗಳನ್ನು ಕರೆತರಲಾಗಿತ್ತು. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ (ಸೆ.17) ದಿನದಂದು ಮೊದಲ ತಂಡದಲ್ಲಿ ಚೀತಾಗಳು ಭಾರತಕ್ಕೆ ಬಂದಿದ್ದವು.

‘ಕುನೊ ಉದ್ಯಾನದಲ್ಲಿ ಚೀತಾಗಳಿಗೆ ಅಗತ್ಯವಾಗಿರುವ ಸೌಲಭ್ಯಗಳು ಇಲ್ಲ. ಚೀತಾಗಳ ಮೇಲೆ ನಿಗಾ ವಹಿಸಲು ಇಲ್ಲಿ ಸಿಬ್ಬಂದಿ ಕೊರತೆ ಇದೆ. ಚೀತಾಗಳಿಗೆ ಓಡಾಡಲು ಬೇಕಾದಷ್ಟು ಜಾಗವೂ ಇಲ್ಲ’ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರಕ್ಕೆ ಚೀತಾ ಗಳನ್ನು ಸ್ಥಳಾಂತರಿಸುವ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಮಧ್ಯ ಪ್ರದೇಶದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಜೆ.ಎಸ್. ಚೌಹಾಣ್‌ ತಿಳಿಸಿದ್ದಾರೆ.

‘ಕುನೊ ಉದ್ಯಾನವನಕ್ಕೆ ಚೀತಾಗಳು ಹೊಂದಿಕೊಳ್ಳದಿದ್ದರೆ ಅವುಗಳನ್ನು ರಾಜಸ್ಥಾನದ ಮುಕುಂದರಾ ಹಿಲ್ಸ್‌ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಮಾಡಲಾಗಿತ್ತು’ ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...