Homeಮುಖಪುಟಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

ಅಪಾಯಕಾರಿ ಸ್ಥಳಾಂತರದಿಂದ ಚೀತಾಗಳ ಸಾವು ನಿರೀಕ್ಷಿತ: ದಕ್ಷಿಣ ಆಫ್ರಿಕಾ

- Advertisement -
- Advertisement -

ಅಪಾಯಕಾರಿ ಸ್ಥಳಾಂತರವಾದಾಗ ಚೀತಾಗಳ ಸಾವು ನಿರೀಕ್ಷಿತವಾಗಿದೆ ಎಂದು ದಕ್ಷಿಣ ಆಫ್ರಿಕಾದ ಅರಣ್ಯ, ಮೀನುಗಾರಿಕೆ ಮತ್ತು ಪರಿಸರ ಇಲಾಖೆ ಗುರುವಾರ ತಿಳಿಸಿದೆ.

ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನದಲ್ಲಿ ಎರಡು ಚಿರತೆಗಳ ಸಾವನಪ್ಪಿದ್ದು, ಈ ರೀತಿಯ ಯೋಜನೆಯಲ್ಲಿ ನಿರೀಕ್ಷಿತ ಮರಣ ದರವನ್ನು ಕಾಣಬಹುದು ಎಂದು ಸೌತ್ ಆಫ್ರಿಕಾ ಹೇಳಿದೆ.

ನಮೀಬಿಯಾದ ತಂದ ಸಶಾ ಎಂಬ ಚೀತಾ ಮೂತ್ರಪಿಂಡದ ಸೋಂಕಿನಿಂದ ಮಾರ್ಚ್ 27 ರಂದು ಸಾವನ್ನಪ್ಪಿತ್ತು. ಫೆಬ್ರವರಿಯಲ್ಲಿ ದಕ್ಷಿಣ ಆಫ್ರಿಕಾದಿಂದ ಸ್ಥಳಾಂತರಗೊಂಡ ಉದಯ್ ಎಂಬ ಎರಡನೇ ಚೀತಾ ಏಪ್ರಿಲ್ 23 ರಂದು ಸಾವನ್ನಪ್ಪಿತ್ತು. ಮಧ್ಯಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನವನಕ್ಕೆ ನಮೀಬಿಯಾ ಮತ್ತು ದಕ್ಷಿಣ ಆಫ್ರಿಕಾದಿಂದ ತಂದ 20 ಚಿರತೆಗಳಲ್ಲಿ ಅವು ಸೇರಿವೆ.

ಶವಪರೀಕ್ಷೆ ಮಾಹಿತಿ ಹೊರಬೀಳುವ ಹೊತ್ತಿನಲ್ಲಿ ದಕ್ಷಿಣ ಆಫ್ರಿಕಾ ಹೇಳಿಕೆ ನೀಡಿದೆ. “ಯಾವುದೇ ರೀತಿಯ ಸಾಂಕ್ರಾಮಿಕ ಕಾಯಿಲೆಯಿಂದ ಉದಯ್ ಸಾವನ್ನಪ್ಪಿರುವ ಯಾವುದೇ ಸೂಚನೆಯಿಲ್ಲ. ಇತರ ಯಾವುದೇ ಚೀತಾಗಳಲ್ಲಿ ಇದೇ ರೀತಿಯ ತೊಂದರೆ ಇಲ್ಲ” ಎಂದಿದೆ.

ಇದನ್ನೂ ಓದಿರಿ: ಕುನೋ: ಚೀತಾಗಳು ಒಳಗೆ, ಆದಿವಾಸಿಗಳು ಹೊರಕ್ಕೆ- ‘ಪರಿ’ ವರದಿ

“ಎಲ್ಲಾ ದಕ್ಷಿಣ ಆಫ್ರಿಕಾದ ಚಿರತೆಗಳು ವಿಶಾಲವಾದ ಪ್ರದೇಶದಲ್ಲಿವೆ. ಪ್ರತಿದಿನ ಎರಡು ಬಾರಿ ನಿಕಟವಾಗಿ ಅವುಗಳ ಮೇಲ್ವಿಚಾರಣೆ ಮಾಡಲಾಗುತ್ತದೆ” ಎಂದು ಹೇಳಿಕೆ ತಿಳಿಸಿದೆ. “ಅವುಗಳು ಅರಣ್ಯದಲ್ಲಿ ಬೆಳೆದ ಚೀತಾಗಳಾಗಿರುವುದರಿಂದ ಅವುಗಳ ನಡವಳಿಕೆ, ಚಲನವಲನಗಳು ಮತ್ತು ದೇಹದ ಸ್ಥಿತಿಯನ್ನು ದೂರದಿಂದ ಮೌಲ್ಯಮಾಪನ ಮಾಡಬೇಕು. ಅವುಗಳ ಆರೋಗ್ಯ ಸ್ಥಿತಿಯ ಬಗ್ಗೆ ನಿಖರವಾದ ಮಾಹಿತಿ ಪಡೆಯಲು ಸ್ಥಳದಲ್ಲಿಯೇ ತಂಡವನ್ನು ಇರಿಸಬೇಕು” ಎಂದು ಅಭಿಪ್ರಾಯಪಟ್ಟಿದೆ.

“ದೊಡ್ಡ ಮಾಂಸಾಹಾರಿ ಪ್ರಾಣಿಗಳನ್ನು (ಬೇರೊಂದು ಸ್ಥಳಕ್ಕೆ) ತರುವುದು ಅತ್ಯಂತ ಸಂಕೀರ್ಣ ಮತ್ತು ಅಂತರ್ಗತವಾಗಿ ಅಪಾಯಕಾರಿ ಕಾರ್ಯಾಚರಣೆಗಳಾಗಿವೆ. ಇದು ಯೋಜನೆಯ ನಿರ್ಣಾಯಕ ಹಂತವಾಗಿದೆ. ಚೀತಾಗಳನ್ನು ವಿಸ್ತಾರವಾದ ಪ್ರದೇಶದಲ್ಲಿ ಬಿಡುಗಡೆ ಮಾಡಲಾಗಿದ್ದು, ಅಲ್ಲಿ ಅವುಗಳ ದಿನನಿತ್ಯದ ಯೋಗಕ್ಷೇಮದ ಮೇಲೆ ಕಡಿಮೆ ನಿಯಂತ್ರಣವಿರುತ್ತದೆ. ಗಾಯ ಮತ್ತು ಮರಣದ ಅಪಾಯಗಳು ಹೆಚ್ಚಾಗುತ್ತವೆ ಮತ್ತು ಈ ಅಪಾಯಗಳನ್ನು ಯೋಜನೆಯಲ್ಲಿ ಒಳಗೊಳ್ಳಬೇಕು” ಎಂದು ತಿಳಿಸಿದೆ.

“ಹೊರಗೆ ಬಿಡಲಾದ ಅನೇಕ ಚೀತಾಗಳು ಕುನೋ ರಾಷ್ಟ್ರೀಯ ಉದ್ಯಾನವನದ ಗಡಿಯಿಂದ ತಪ್ಪಿಸಿಕೊಳ್ಳುತ್ತವೆ ಮತ್ತು ಮರು ಕರೆತರುವ ಪ್ರಕ್ರಿಯೆಯಲ್ಲಿ ಅಲ್ಪಾವಧಿಯ ಒತ್ತಡವನ್ನು ಎದುರಿಸಬೇಕಾಗುತ್ತದೆ” ಎಂದಿರುವ ಆಫ್ರಿಕಾ, “ಚೀತಾಗಳನ್ನು ಅವುಗಳ ಪ್ರದೇಶಕ್ಕೆ ಮತ್ತೆ ತಂದ ನಂತರ ಪರಿಸ್ಥಿತಿಯು ಸ್ಥಿರಗೊಳ್ಳುತ್ತದೆ” ಎಂದು ಹೇಳಿದೆ.

ಇದರ ನಡುವೆ ಫೋರೆನ್ಸಿಕ್ ವಿಜ್ಞಾನಿ ಸೇರಿದಂತೆ ಐದು ಸದಸ್ಯರ ತಂಡವು ನಡೆಸಿದ ಪ್ರಾಥಮಿಕ ಶವಪರೀಕ್ಷೆಯು ಹಲವು ವಿಚಾರಗಳನ್ನು ಬಿಚ್ಚಿಟ್ಟಿದೆ. ಕಾರ್ಡಿಯೋಪಲ್ಮನರಿ ವೈಫಲ್ಯದಿಂದ ಉದಯ್ ಚೀತಾ ಸಾವನ್ನಪ್ಪಿದೆ ಎಂದು ‘ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ.

ಆರು ವರ್ಷದ ಈ ಚೀತಾ ಬೊಟುಲಿಸಮ್‌ (ದೇಹದ ನರಗಳ ಮೇಲೆ ದಾಳಿ ಮಾಡುವ ವಿಷಕಾರಿ ಅಂಶದಿಂದ ಉಂಟಾದ ಅಪರೂಪದ ಆದರೆ ಗಂಭೀರವಾದ ಕಾಯಿಲೆ. ಇದರಿಂದ ಉಸಿರಾಟದ ತೊಂದರೆ, ಸ್ನಾಯು ಪಾರ್ಶ್ವವಾಯು ಸಂಭವಿಸುವುದು) ಕಾಯಿಲೆಗೆ ತುತ್ತಾಗಿರಬಹುದು ಎಂದು ಊಹಿಸಲಾಗಿದೆ.

“ಜಬಲ್ಪುರ್ ಸಂಸ್ಥೆಯು ಹೆಚ್ಚು ವಿವರವಾದ ಪರೀಕ್ಷೆಯನ್ನು ನಡೆಸುತ್ತದೆ, ಅದರ ನಂತರವೇ ಶ್ವಾಸಕೋಶದ ವೈಫಲ್ಯಕ್ಕೆ ಕಾರಣವೇನು ಎಂದು ನಾವು ತಿಳಿಯುತ್ತೇವೆ” ಎಂದು ಮಧ್ಯಪ್ರದೇಶದ ಮುಖ್ಯ ವನ್ಯಜೀವಿ ವಾರ್ಡನ್ ಜೆಎಸ್ ಚೌಹಾಣ್ ಅವರು ‘ದಿ ಇಂಡಿಯನ್ ಎಕ್ಸ್‌ಪ್ರೆಸ್‌’ಗೆ ತಿಳಿಸಿದ್ದಾರೆ.

ಚೀತಾ ಸ್ಥಳಾಂತರಕ್ಕೆ ಮಧ್ಯಪ್ರದೇಶ ಮನವಿ

ಮಧ್ಯಪ್ರದೇಶದ ಕುನೊ ಉದ್ಯಾನದಲ್ಲಿರುವ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಕೋರಿ ಮಧ್ಯ ಪ್ರದೇಶದ ಅರಣ್ಯ ಇಲಾಖೆ ಕೇಂದ್ರ ಸರ್ಕಾರಕ್ಕೆ ಇತ್ತೀಚೆಗೆ ಪತ್ರ ಬರೆದಿದೆ.

ಕುನೊ ಉದ್ಯಾನದಲ್ಲಿ ಕಳೆದ ಒಂದು ತಿಂಗಳ ಅಂತರದಲ್ಲೇ ಎರಡು ಚೀತಾ ಮೃತಪಟ್ಟಿವೆ. ಹೀಗಾಗಿ ಚೀತಾಗಳನ್ನು ಬೇರೆಡೆಗೆ ಸ್ಥಳಾಂತರಿಸುವಂತೆ ಇಲಾಖೆ ಕೇಳಿಕೊಂಡಿದೆ.

ಇದನ್ನೂ ಓದಿರಿ: ಚೀತಾಗಳನ್ನೇನೋ ತಂದಾಯಿತು; ಮುಂದಿನ ಪರಿಣಾಮ ಬಲ್ಲಿರೇನು? ಪರಿಸರತಜ್ಞರು ಹೇಳಿದ್ದೇನು?

‘ಪ್ರಾಜೆಕ್ಟ್‌ ಚೀತಾ’ ಅಡಿಯಲ್ಲಿ ಒಟ್ಟು 20 ಚೀತಾಗಳನ್ನು ಕುನೊ ಉದ್ಯಾನಕ್ಕೆ ಕರೆತರಲಾಗಿತ್ತು. ಎರಡು ತಂಡಗಳಲ್ಲಿ ನಮೀಬಿಯಾ (8) ಹಾಗೂ ದಕ್ಷಿಣ ಆಫ್ರಿಕಾದಿಂದ (12) ಚೀತಾಗಳನ್ನು ಕರೆತರಲಾಗಿತ್ತು. ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ (ಸೆ.17) ದಿನದಂದು ಮೊದಲ ತಂಡದಲ್ಲಿ ಚೀತಾಗಳು ಭಾರತಕ್ಕೆ ಬಂದಿದ್ದವು.

‘ಕುನೊ ಉದ್ಯಾನದಲ್ಲಿ ಚೀತಾಗಳಿಗೆ ಅಗತ್ಯವಾಗಿರುವ ಸೌಲಭ್ಯಗಳು ಇಲ್ಲ. ಚೀತಾಗಳ ಮೇಲೆ ನಿಗಾ ವಹಿಸಲು ಇಲ್ಲಿ ಸಿಬ್ಬಂದಿ ಕೊರತೆ ಇದೆ. ಚೀತಾಗಳಿಗೆ ಓಡಾಡಲು ಬೇಕಾದಷ್ಟು ಜಾಗವೂ ಇಲ್ಲ’ ಎಂದು ಹಿರಿಯ ಅರಣ್ಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ರಾಷ್ಟ್ರೀಯ ಹುಲಿ ಸಂರಕ್ಷಣೆ ಪ್ರಾಧಿಕಾರಕ್ಕೆ ಚೀತಾ ಗಳನ್ನು ಸ್ಥಳಾಂತರಿಸುವ ಬಗ್ಗೆ ಪತ್ರ ಬರೆಯಲಾಗಿದೆ ಎಂದು ಮಧ್ಯ ಪ್ರದೇಶದ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾ ಅಧಿಕಾರಿ ಜೆ.ಎಸ್. ಚೌಹಾಣ್‌ ತಿಳಿಸಿದ್ದಾರೆ.

‘ಕುನೊ ಉದ್ಯಾನವನಕ್ಕೆ ಚೀತಾಗಳು ಹೊಂದಿಕೊಳ್ಳದಿದ್ದರೆ ಅವುಗಳನ್ನು ರಾಜಸ್ಥಾನದ ಮುಕುಂದರಾ ಹಿಲ್ಸ್‌ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸುವ ಯೋಜನೆಯನ್ನು ಮಾಡಲಾಗಿತ್ತು’ ಎಂದು ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...