Homeಕರ್ನಾಟಕಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬುದನ್ನು ಧ್ವನಿಸಿತೇ ಪ್ರೀತಂಗೌಡರ ಭಾಷಣ?

ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬುದನ್ನು ಧ್ವನಿಸಿತೇ ಪ್ರೀತಂಗೌಡರ ಭಾಷಣ?

‘ರಾಜ್ಯದಲ್ಲಿ ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬ ಸೂಚನೆಯನ್ನು ಹಾಸನ ಶಾಸಕ ಪ್ರೀತಂಗೌಡ ನೀಡಿದ್ದಾರೆಯೇ?’

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮಾತನಾಡಿದ್ದಾರೆ. ಜೆಡಿಎಸ್‌ಗೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ” ಎಂದು ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಅವರು ಹೇಳಿಕೆ ನೀಡಿದ್ದು ರಾಜಕೀಯ ಚರ್ಚೆಗಳಿಗೆ ಅವಕಾಶ ನೀಡಿದೆ.

ಚುನಾವಣಾ ಪ್ರಚಾರದ ವೇಳೆ ಮಾತನಾಡಿರುವ ಪ್ರೀತಂ, “ನಿಮಗೆ ಅರ್ಥವಾಗಲಿ ಎಂದು ಬಿಡಿಸಿ, ಬಿಡಿಸಿ ಹೇಳುತ್ತಿದ್ದೇನೆ. ಜನತಾ ದಳಕ್ಕೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ ಲೆಕ್ಕ. ದೇವೇಗೌಡ್ರು- ಮೋದಿ ಸಾಹೇಬ್ರು ಮಾತನಾಡಿಕೊಂಡಿದ್ದಾರೆ. ಯಾಕೆಂದರೆ ಅವರಿಗೆ ಬರೋದು 20-25 ಸೀಟ್‌. ನೀವು ಬೆಂಗಳೂರಿಗೆ ಹೋಗಬೇಕೆಂದರೆ ಮೈಸೂರು ಮೇಲೆ ಬೆಂಗಳೂರಿಗೆ ಹೋಗಬೇಡಿ. ಹಾಸನದಿಂದ ಬೆಳ್ಳೂರು ಕ್ರಾಸ್ ಮಾರ್ಗದಲ್ಲಿ ಹೋಗಿ ಅಂತ ಮಾತ್ರ ಹೇಳ್ತೀನಿ. ಮೈಸೂರಿಗೆ ಹೋಗಿ, ಬೆಂಗಳೂರಿಗೆ ಹೋಗ್ತೀನಿ ಅಂದ್ರೆ ನಿಮ್ಮಿಷ್ಟ. ಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ. ನೀವು ಅವರಿಗೆ ವೋಟ್ ಹಾಕಿದ್ರೂ ಮತ್ತೆ ನಮ್ಮ ಹತ್ತಿರಕ್ಕೆ ಬರಬೇಕು. ಯೋಚನೆ ಮಾಡಿ” ಎಂದು ತಿಳಿಸಿದ್ದಾರೆ.

ಪ್ರೀತಂ ಅವರು ಮಾತನಾಡಿರುವ ವಿಡಿಯೊ ತುಣುಕು ವೈರಲ್ ಆಗುತ್ತಿದೆ. “ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆಯೇ? ಬಿಜೆಪಿ ಬಹುಮತ ಪಡೆಯುವುದಿಲ್ಲವೇ?” ಎಂಬ ಚರ್ಚೆಗೆ ಇವರ ಹೇಳಿಕೆ ಅವಕಾಶ ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್‌, “ನಾವು ಪದೇ ಪದೇ ಹೇಳುತ್ತಿದ್ದೇವೆ. ಜೆಡಿಎಸ್‌ಗೆ ಮತ ಹಾಕಿದರೆ ಅದು ಬಿಜೆಪಿಗೆ ಹಾಕಿದಂತೆ. ಅದನ್ನೇ ಈಗ ಸ್ವತಃ ಬಿಜೆಪಿ ಶಾಸಕ ಪ್ರೀತಂ ಗೌಡರೂ ಅನುಮೋದಿಸಿದ್ದಾರೆ. ಮೋದಿ-ದೇವೇಗೌಡರ ಮಧ್ಯೆ ಈಗಾಗಲೇ ಮಾತುಕತೆಯೂ ಆಗಿದೆಯಂತೆ. ಬಿಜೆಪಿಯೊಂದಿಗೆ ಕೈ ಜೋಡಿಸಿರುವ ಜೆಡಿಎಸ್ ಬೆಂಬಲಿಸಬೇಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಮನವಿ ಮಾಡಿದೆ.

ಪ್ರೀತಂ ಗೌಡ ಹೇಳಿಕೆಯನ್ನು ಸ್ವಪಕ್ಷೀಯರೇ ಆದ ಸಚಿವ ಅಶ್ವತ್ ನಾರಾಯಣ ವಿರೋಧಿಸಿದ್ದಾರೆ. “ಯಾರೂ ಇಂತಹ ಹೇಳಿಕೆಗಳನ್ನ ನೀಡಬಾರದು. ಇದು ತಪ್ಪು ಸಂದೇಶವನ್ನು ರವಾನಿಸುತ್ತದೆ. ಜೆಡಿಎಸ್ ಅಥವಾ ಕಾಂಗ್ರೆಸ್ ಇಬ್ಬರೂ ಸಹ ಬಿಜೆಪಿ ಪ್ರತಿಸ್ಪರ್ಧಿಗಳು. ಮೋದಿ ಹೆಸರು ಹೇಳಿಕೊಂಡು ಈ ರೀತಿಯ ಹೇಳಿಕೆ ಕೊಡುವುದು ಸರಿಯಲ್ಲ” ಎಂದು ಟೀಕಿಸಿದ್ದಾರೆ.

“ಚುನಾವಣೆ ಕುರಿತು ಮಾತನಾಡಿ, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಜನರ ಬೇಡಿಕೆ, ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಚುನಾವಣೆ ನಡೆಯುತ್ತೆ. ಇದರಲ್ಲಿ ಎಲ್ಲರೂ ಭಾಗಿಯಾಗುತ್ತಾರೆ. ನಾವು ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಜನತೆಗೆ ತಿಳಿಸುತ್ತೇವೆ” ಎಂದಿದ್ದಾರೆ.

ಬಿಜೆಪಿ ಟಿಕೆಟ್ ಪಡೆದಿರುವ ಪ್ರೀತಂ ಗೌಡ ಮತ್ತು ಜೆಡಿಎಸ್‌ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಅವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಸಂಪರ್ಕಿಸಿದೆ. ಆದರೆ ಇಬ್ಬರೂ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಬಹುತಮ ಪಡೆಯಲಿದೆ ಅಥವಾ ದೊಡ್ಡ ಪಕ್ಷವಾಗಿ ಹೊಮ್ಮಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳುತ್ತಿವೆ. ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬ ಸೂಚನೆಯನ್ನು ಸಮೀಕ್ಷೆಗಳು ಹೇಳುತ್ತಿರುವಾಗ ಪ್ರೀತಂ ಹೇಳಿಕೆ ಸಂಚಲನ ಮೂಡಿಸಿದೆ.

‘ಈದಿನ’ ಮಾಧ್ಯಮ ಮಾಡಿರುವ ಮೆಗಾ ಸರ್ವೇ ಗುರುವಾರ ಪ್ರಕಟವಾಗಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದಿದೆ. 132ರಿಂದ 140 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ. ಬಿಜೆಪಿಗೆ 57- 65 ಸ್ಥಾನ, ಜೆಡಿಎಸ್‌ಗೆ 19-25 ಸ್ಥಾನ, ಇತರರು 1-5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದಿದೆ ಸರ್ವೇ.

ಎಬಿಪಿ ಸಿ–ವೋಟರ್ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿಚ್ಚಳ ಬಹುಮತ ಸಿಗಲಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಪಕ್ಷ 115 – 127 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಲಾಗಿದೆ. ಆಡಳಿತರೂಢ ಬಿಜೆಪಿ 68 – 80 ಸ್ಥಾನಗಳನ್ನು ಗೆಲ್ಲಬಹುದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ 23 – 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಿ–ವೋಟರ್ ಸಮೀಕ್ಷೆ ಹೇಳುತ್ತಿದೆ.

ಇದನ್ನೂ ಓದಿರಿ: ‘ಸೋನಿಯಾ ಗಾಂಧಿ ವಿಷಕನ್ಯೆ, ರಾಹುಲ್ ಒಬ್ಬ ಹುಚ್ಚ’ ಎಂದು ನಾಲಿಗೆ ಹರಿಬಿಟ್ಟ ಯತ್ನಾಳ್: ಕಾಂಗ್ರೆಸ್ ಖಂಡನೆ

‘ಟಿವಿ9 ಕನ್ನಡ ಸಿವೋಟರ್’ ಸಮೀಕ್ಷೆಯ ವರದಿ ಪ್ರಕಾರ, ಕಾಂಗ್ರೆಸ್ ಪಕ್ಷವು 106 ರಿಂದ 116 ಸ್ಥಾನ ಗಳಿಸುವ ಸಾಧ್ಯತೆ ಇದೆ. ಆಡಳಿತಾರೂಢ ಬಿಜೆಪಿ 79ರಿಂದ 89 ಸ್ಥಾನ ಪಡೆಯುವ ನಿರೀಕ್ಷೆ ಇದೆ. ಜೆಡಿಎಸ್​​ಗೆ 24 ರಿಂದ 34 ಸ್ಥಾನ ದೊರೆತರೆ ಇತರರು 0ಯಿಂದ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ.

ಜನ್‌ ಕೀ ಬಾತ್‌ ಸಮೀಕ್ಷೆಯ ಪ್ರಕಾರ ಬಿಜೆಪಿ 98ರಿಂದ 109 ಸ್ಥಾನಗಳನ್ನು ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಪ್ರತಿಪಕ್ಷ ಕಾಂಗ್ರೆಸ್‌ 89ರಿಂದ 97 ಸ್ಥಾನಗಳೊಂದಿಗೆ 2ನೇ ಅತಿದೊಡ್ಡ ಪಕ್ಷ ಎನಿಸಿಕೊಳ್ಳಲಿದೆ. ಜೆಡಿಎಸ್‌ 25ರಿಂದ 29 ಸ್ಥಾನಗಳನ್ನಷ್ಟೇ ಗಳಿಸಲಿದೆ. ಇತರರು ಕೇವಲ 1 ಸ್ಥಾನ ಪಡೆಯಲಿದ್ದಾರೆ. 224 ಸದಸ್ಯ ಬಲದ ವಿಧಾನಸಭೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆಯಬೇಕಿದ್ದರೆ ಕನಿಷ್ಠ 113 ಸ್ಥಾನ ಗಳಿಸಬೇಕಿದ್ದು, ಈ ಬಾರಿ ಆ ಸಾಧ್ಯತೆ ಕಂಡುಬರುತ್ತಿಲ್ಲ ಎಂದು ಸಮೀಕ್ಷೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...