Homeಕರ್ನಾಟಕಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬುದನ್ನು ಧ್ವನಿಸಿತೇ ಪ್ರೀತಂಗೌಡರ ಭಾಷಣ?

ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬುದನ್ನು ಧ್ವನಿಸಿತೇ ಪ್ರೀತಂಗೌಡರ ಭಾಷಣ?

‘ರಾಜ್ಯದಲ್ಲಿ ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬ ಸೂಚನೆಯನ್ನು ಹಾಸನ ಶಾಸಕ ಪ್ರೀತಂಗೌಡ ನೀಡಿದ್ದಾರೆಯೇ?’

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಮಾತನಾಡಿದ್ದಾರೆ. ಜೆಡಿಎಸ್‌ಗೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ” ಎಂದು ಹಾಸನ ಬಿಜೆಪಿ ಶಾಸಕ ಪ್ರೀತಂಗೌಡ ಅವರು ಹೇಳಿಕೆ ನೀಡಿದ್ದು ರಾಜಕೀಯ ಚರ್ಚೆಗಳಿಗೆ ಅವಕಾಶ ನೀಡಿದೆ.

ಚುನಾವಣಾ ಪ್ರಚಾರದ ವೇಳೆ ಮಾತನಾಡಿರುವ ಪ್ರೀತಂ, “ನಿಮಗೆ ಅರ್ಥವಾಗಲಿ ಎಂದು ಬಿಡಿಸಿ, ಬಿಡಿಸಿ ಹೇಳುತ್ತಿದ್ದೇನೆ. ಜನತಾ ದಳಕ್ಕೆ ವೋಟ್ ಹಾಕಿದ್ರೂ ಬಿಜೆಪಿಗೆ ವೋಟ್ ಹಾಕಿದಂತೆ ಲೆಕ್ಕ. ದೇವೇಗೌಡ್ರು- ಮೋದಿ ಸಾಹೇಬ್ರು ಮಾತನಾಡಿಕೊಂಡಿದ್ದಾರೆ. ಯಾಕೆಂದರೆ ಅವರಿಗೆ ಬರೋದು 20-25 ಸೀಟ್‌. ನೀವು ಬೆಂಗಳೂರಿಗೆ ಹೋಗಬೇಕೆಂದರೆ ಮೈಸೂರು ಮೇಲೆ ಬೆಂಗಳೂರಿಗೆ ಹೋಗಬೇಡಿ. ಹಾಸನದಿಂದ ಬೆಳ್ಳೂರು ಕ್ರಾಸ್ ಮಾರ್ಗದಲ್ಲಿ ಹೋಗಿ ಅಂತ ಮಾತ್ರ ಹೇಳ್ತೀನಿ. ಮೈಸೂರಿಗೆ ಹೋಗಿ, ಬೆಂಗಳೂರಿಗೆ ಹೋಗ್ತೀನಿ ಅಂದ್ರೆ ನಿಮ್ಮಿಷ್ಟ. ಎಲ್ಲ ನದಿ ನೀರು ಹರಿಯೋದು ಸಮುದ್ರಕ್ಕೇನೆ. ನೀವು ಅವರಿಗೆ ವೋಟ್ ಹಾಕಿದ್ರೂ ಮತ್ತೆ ನಮ್ಮ ಹತ್ತಿರಕ್ಕೆ ಬರಬೇಕು. ಯೋಚನೆ ಮಾಡಿ” ಎಂದು ತಿಳಿಸಿದ್ದಾರೆ.

ಪ್ರೀತಂ ಅವರು ಮಾತನಾಡಿರುವ ವಿಡಿಯೊ ತುಣುಕು ವೈರಲ್ ಆಗುತ್ತಿದೆ. “ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಒಳ ಒಪ್ಪಂದವಾಗಿದೆಯೇ? ಬಿಜೆಪಿ ಬಹುಮತ ಪಡೆಯುವುದಿಲ್ಲವೇ?” ಎಂಬ ಚರ್ಚೆಗೆ ಇವರ ಹೇಳಿಕೆ ಅವಕಾಶ ನೀಡಿದೆ.

ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್‌, “ನಾವು ಪದೇ ಪದೇ ಹೇಳುತ್ತಿದ್ದೇವೆ. ಜೆಡಿಎಸ್‌ಗೆ ಮತ ಹಾಕಿದರೆ ಅದು ಬಿಜೆಪಿಗೆ ಹಾಕಿದಂತೆ. ಅದನ್ನೇ ಈಗ ಸ್ವತಃ ಬಿಜೆಪಿ ಶಾಸಕ ಪ್ರೀತಂ ಗೌಡರೂ ಅನುಮೋದಿಸಿದ್ದಾರೆ. ಮೋದಿ-ದೇವೇಗೌಡರ ಮಧ್ಯೆ ಈಗಾಗಲೇ ಮಾತುಕತೆಯೂ ಆಗಿದೆಯಂತೆ. ಬಿಜೆಪಿಯೊಂದಿಗೆ ಕೈ ಜೋಡಿಸಿರುವ ಜೆಡಿಎಸ್ ಬೆಂಬಲಿಸಬೇಡಿ. ಕಾಂಗ್ರೆಸ್‌ಗೆ ಮತ ನೀಡಿ” ಎಂದು ಮನವಿ ಮಾಡಿದೆ.

ಪ್ರೀತಂ ಗೌಡ ಹೇಳಿಕೆಯನ್ನು ಸ್ವಪಕ್ಷೀಯರೇ ಆದ ಸಚಿವ ಅಶ್ವತ್ ನಾರಾಯಣ ವಿರೋಧಿಸಿದ್ದಾರೆ. “ಯಾರೂ ಇಂತಹ ಹೇಳಿಕೆಗಳನ್ನ ನೀಡಬಾರದು. ಇದು ತಪ್ಪು ಸಂದೇಶವನ್ನು ರವಾನಿಸುತ್ತದೆ. ಜೆಡಿಎಸ್ ಅಥವಾ ಕಾಂಗ್ರೆಸ್ ಇಬ್ಬರೂ ಸಹ ಬಿಜೆಪಿ ಪ್ರತಿಸ್ಪರ್ಧಿಗಳು. ಮೋದಿ ಹೆಸರು ಹೇಳಿಕೊಂಡು ಈ ರೀತಿಯ ಹೇಳಿಕೆ ಕೊಡುವುದು ಸರಿಯಲ್ಲ” ಎಂದು ಟೀಕಿಸಿದ್ದಾರೆ.

“ಚುನಾವಣೆ ಕುರಿತು ಮಾತನಾಡಿ, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಜನರ ಬೇಡಿಕೆ, ಆಶೋತ್ತರಗಳನ್ನು ಈಡೇರಿಸುವ ನಿಟ್ಟಿನಲ್ಲಿ ಚುನಾವಣೆ ನಡೆಯುತ್ತೆ. ಇದರಲ್ಲಿ ಎಲ್ಲರೂ ಭಾಗಿಯಾಗುತ್ತಾರೆ. ನಾವು ಮಾಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಜನತೆಗೆ ತಿಳಿಸುತ್ತೇವೆ” ಎಂದಿದ್ದಾರೆ.

ಬಿಜೆಪಿ ಟಿಕೆಟ್ ಪಡೆದಿರುವ ಪ್ರೀತಂ ಗೌಡ ಮತ್ತು ಜೆಡಿಎಸ್‌ ಅಭ್ಯರ್ಥಿ ಸ್ವರೂಪ್ ಪ್ರಕಾಶ್ ಅವರ ಪ್ರತಿಕ್ರಿಯೆ ಪಡೆಯಲು ‘ನಾನುಗೌರಿ.ಕಾಂ’ ಸಂಪರ್ಕಿಸಿದೆ. ಆದರೆ ಇಬ್ಬರೂ ಪ್ರತಿಕ್ರಿಯೆಗೆ ಲಭ್ಯವಾಗಿಲ್ಲ.

ರಾಜ್ಯದಲ್ಲಿ ಈ ಬಾರಿ ಕಾಂಗ್ರೆಸ್ ಬಹುತಮ ಪಡೆಯಲಿದೆ ಅಥವಾ ದೊಡ್ಡ ಪಕ್ಷವಾಗಿ ಹೊಮ್ಮಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಹೇಳುತ್ತಿವೆ. ಬಿಜೆಪಿ ಬಹುಮತ ಪಡೆಯುವುದಿಲ್ಲ ಎಂಬ ಸೂಚನೆಯನ್ನು ಸಮೀಕ್ಷೆಗಳು ಹೇಳುತ್ತಿರುವಾಗ ಪ್ರೀತಂ ಹೇಳಿಕೆ ಸಂಚಲನ ಮೂಡಿಸಿದೆ.

‘ಈದಿನ’ ಮಾಧ್ಯಮ ಮಾಡಿರುವ ಮೆಗಾ ಸರ್ವೇ ಗುರುವಾರ ಪ್ರಕಟವಾಗಿದ್ದು, ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದಿದೆ. 132ರಿಂದ 140 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ. ಬಿಜೆಪಿಗೆ 57- 65 ಸ್ಥಾನ, ಜೆಡಿಎಸ್‌ಗೆ 19-25 ಸ್ಥಾನ, ಇತರರು 1-5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದಿದೆ ಸರ್ವೇ.

ಎಬಿಪಿ ಸಿ–ವೋಟರ್ ಸಮೀಕ್ಷೆ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್‌ಗೆ ನಿಚ್ಚಳ ಬಹುಮತ ಸಿಗಲಿದೆ ಎಂದು ಹೇಳಲಾಗಿದೆ. ಕಾಂಗ್ರೆಸ್‌ ಪಕ್ಷ 115 – 127 ಸ್ಥಾನಗಳಲ್ಲಿ ಗೆಲುವು ಸಾಧಿಸಬಹುದು ಎಂದು ಹೇಳಲಾಗಿದೆ. ಆಡಳಿತರೂಢ ಬಿಜೆಪಿ 68 – 80 ಸ್ಥಾನಗಳನ್ನು ಗೆಲ್ಲಬಹುದು, ಪ್ರಾದೇಶಿಕ ಪಕ್ಷವಾದ ಜೆಡಿಎಸ್‌ 23 – 35 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಸಿ–ವೋಟರ್ ಸಮೀಕ್ಷೆ ಹೇಳುತ್ತಿದೆ.

ಇದನ್ನೂ ಓದಿರಿ: ‘ಸೋನಿಯಾ ಗಾಂಧಿ ವಿಷಕನ್ಯೆ, ರಾಹುಲ್ ಒಬ್ಬ ಹುಚ್ಚ’ ಎಂದು ನಾಲಿಗೆ ಹರಿಬಿಟ್ಟ ಯತ್ನಾಳ್: ಕಾಂಗ್ರೆಸ್ ಖಂಡನೆ

‘ಟಿವಿ9 ಕನ್ನಡ ಸಿವೋಟರ್’ ಸಮೀಕ್ಷೆಯ ವರದಿ ಪ್ರಕಾರ, ಕಾಂಗ್ರೆಸ್ ಪಕ್ಷವು 106 ರಿಂದ 116 ಸ್ಥಾನ ಗಳಿಸುವ ಸಾಧ್ಯತೆ ಇದೆ. ಆಡಳಿತಾರೂಢ ಬಿಜೆಪಿ 79ರಿಂದ 89 ಸ್ಥಾನ ಪಡೆಯುವ ನಿರೀಕ್ಷೆ ಇದೆ. ಜೆಡಿಎಸ್​​ಗೆ 24 ರಿಂದ 34 ಸ್ಥಾನ ದೊರೆತರೆ ಇತರರು 0ಯಿಂದ 5 ಕ್ಷೇತ್ರಗಳಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆ.

ಜನ್‌ ಕೀ ಬಾತ್‌ ಸಮೀಕ್ಷೆಯ ಪ್ರಕಾರ ಬಿಜೆಪಿ 98ರಿಂದ 109 ಸ್ಥಾನಗಳನ್ನು ಗಳಿಸಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಪ್ರತಿಪಕ್ಷ ಕಾಂಗ್ರೆಸ್‌ 89ರಿಂದ 97 ಸ್ಥಾನಗಳೊಂದಿಗೆ 2ನೇ ಅತಿದೊಡ್ಡ ಪಕ್ಷ ಎನಿಸಿಕೊಳ್ಳಲಿದೆ. ಜೆಡಿಎಸ್‌ 25ರಿಂದ 29 ಸ್ಥಾನಗಳನ್ನಷ್ಟೇ ಗಳಿಸಲಿದೆ. ಇತರರು ಕೇವಲ 1 ಸ್ಥಾನ ಪಡೆಯಲಿದ್ದಾರೆ. 224 ಸದಸ್ಯ ಬಲದ ವಿಧಾನಸಭೆಯಲ್ಲಿ ಯಾವುದೇ ಪಕ್ಷ ಬಹುಮತ ಪಡೆಯಬೇಕಿದ್ದರೆ ಕನಿಷ್ಠ 113 ಸ್ಥಾನ ಗಳಿಸಬೇಕಿದ್ದು, ಈ ಬಾರಿ ಆ ಸಾಧ್ಯತೆ ಕಂಡುಬರುತ್ತಿಲ್ಲ ಎಂದು ಸಮೀಕ್ಷೆ ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...