Homeಕರ್ನಾಟಕ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

- Advertisement -
- Advertisement -

ಕನ್ನಡದ ‘ಈದಿನ’ ಸುದ್ದಿ ಜಾಲತಾಣ ಮಾಡಿರುವ ಚುನಾವಣಾಪೂರ್ವ ಸಮೀಕ್ಷೆಯನ್ನು ರಾಜಕೀಯ ವಿಶ್ಲೇಷಕ ಮತ್ತು ಸಮೀಕ್ಷಾ ತಜ್ಞರಾದ ಪ್ರೊ.ಯೋಗೇಂದ್ರ ಯಾದವ್ ಹಂಚಿಕೊಂಡಿರುವುದು ಟ್ವೀಟ್‌ ವಾರ್‌ಗೆ ಕಾರಣವಾಗಿದೆ.

ಸುಮಾರು 41 ಸಾವಿರ ಜನರನ್ನು ಮಾತನಾಡಿಸಿ ಮಾಡಲಾಗಿದೆ ಎನ್ನಲಾಗಿರುವ ಸರ್ವೇಯು ಕಾಂಗ್ರೆಸ್‌ಗೆ ಸ್ಪಷ್ಟಬಹುಮತವನ್ನು ನೀಡಿದೆ.

132ರಿಂದ 140 ಸ್ಥಾನಗಳನ್ನು ಕಾಂಗ್ರೆಸ್ ಪಡೆಯಲಿದೆ, ಬಿಜೆಪಿಗೆ 57- 65 ಸ್ಥಾನ, ಜೆಡಿಎಸ್‌ಗೆ 19-25 ಸ್ಥಾನ, ಇತರರು 1-5 ಸ್ಥಾನಗಳನ್ನು ಪಡೆಯಲಿದ್ದಾರೆ ಎಂದು ಸರ್ವೇ ಹೇಳಿದೆ. ಉತ್ತರ ಕರ್ನಾಟಕದಲ್ಲಿ ಮಿಕ್ಕವರನ್ನು ಕಾಂಗ್ರೆಸ್‌ ಗುಡಿಸಿ ಹಾಕಲಿದ್ದು ದಕ್ಷಿಣ ಕರ್ನಾಟಕದಲ್ಲೂ ಮುನ್ನಡೆ ಗಳಿಸಲಿದೆ ಎಂದಿದೆ.

“ಕಾಂಗ್ರೆಸ್‌ಗೆ ಸ್ಪಷ್ಟವಾದ ಮತ್ತು ಯಾವುದೇ ಆತಂಕಕ್ಕೆ ಎಡೆಯಿಲ್ಲದ ರೀತಿಯ ಬಹುಮತ ಲಭ್ಯವಾಗಲಿದೆ ಎಂದು ಈ ಸಮೀಕ್ಷೆಯ ಅಂಕಿ-ಅಂಶಗಳು ತಿಳಿಸುತ್ತಿವೆ. ಇನ್ನೊಂದು ಆಪರೇಷನ್‌ ಕಮಲದ ಸಾಧ್ಯತೆಯನ್ನೂ ಇಲ್ಲವಾಗಿಸುವ ಹಾಗೆ 113ಅನ್ನು ಸಲೀಸಾಗಿ ದಾಟಲಿದೆ ಎಂದು ತೋರುತ್ತಿದೆ” ಎಂದು ‘ಈದಿನ’ ವರದಿ ಪ್ರಕಟಿಸಿದೆ.

“ಈ ಹಿಂದೆ ಇಂತಹ ಬಹುಮತವನ್ನು ಪಡೆದುಕೊಂಡಿದ್ದದ್ದು 2013 ಮತ್ತು 1999ರಲ್ಲಿ. ಈ ಸಾರಿ ಅವೆರಡನ್ನೂ ದಾಟಲಿದ್ದು, 1989ರ ನಂತರ ಮೂರು ದಶಕಗಳಲ್ಲಿ ಇದೇ ಅತಿ ದೊಡ್ಡ ಸಾಧನೆಯಾಗಬಹುದು ಎಂದು ಸಮೀಕ್ಷೆಯಿಂದ ಸಿಕ್ಕಿರುವ ಸಂಖ್ಯೆಗಳು ಹೇಳುತ್ತಿವೆ” ಎಂದು ‘ಈದಿನ’ ಸುದ್ದಿ ತಿಳಿಸಿದೆ.

“ಬಿಜೆಪಿಯ ಮಟ್ಟಿಗೆ ಹೇಳುವುದಾದರೆ, 2013ರಲ್ಲಿ ಆ ಪಕ್ಷ ಒಡೆದು ಹೋಗಿದ್ದಾಗ ಉದ್ಭವವಾಗಿದ್ದ ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಹೊರತುಪಡಿಸಿದರೆ, ಇದು ಅದರ ಅತ್ಯಂತ ಹೀನಾಯ ಸ್ಥಿತಿಯಾಗಿರಲಿದೆ” ಎಂದು ಅಭಿಪ್ರಾಯ ತಾಳಿದೆ.

2018ರಲ್ಲಿ ಕಾಂಗ್ರೆಸ್‌ 38.1% ಮತದಾರರನ್ನು ಸೆಳೆದಿತ್ತು, ಬಿಜೆಪಿ 36.3%, ಜೆಡಿಎಸ್‌ 18.3%, ಇತರರು 7.4% ಮತಗಳನ್ನು ಪಡೆದಿದ್ದರು. ಈ ಬಾರಿ ಕಾಂಗ್ರೆಸ್‌ 43%, ಬಿಜೆಪಿ 33%, ಜೆಡಿಎಸ್‌ 16%, ಇತರರು 8% ಮತಗಳನ್ನು ಪಡೆಯಲಿದ್ದಾರೆ ಎಂದು ಸಮೀಕ್ಷೆ ನುಡಿದಿದೆ.

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ-2023ಕ್ಕೆ ಸಂಬಂಧಿಸಿದಂತೆ ನಡೆಸಲಾದ ಅತಿ ದೊಡ್ಡ ಸಮೀಕ್ಷೆ ಇದಾಗಿದ್ದು 41,169 ಮತದಾರರನ್ನು ಮಾತನಾಡಿಸಲಾಗಿದೆ ಎಂದು ‘ಈದಿನ’ ತಿಳಿಸಿದೆ. ಇದರ ವಿವರಗಳನ್ನು ಯೋಗೇಂದ್ರ ಯಾದವ್ ಟ್ವೀಟ್ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್‌ ಅವರು ಕಾಂಗ್ರೆಸ್‌ ನಾಯಕರ ರಾಹುಲ್ ಗಾಂಧಿ ಮತ್ತು ಯೋಗೇಂದ್ರ ಯಾದವ್ ಅವರ ನಡುವಿನ ಸೌಹಾರ್ದತೆಯನ್ನು ಥಳುಕು ಹಾಕಿದ್ದಾರೆ. ದೇಶವನ್ನು ಒಗ್ಗೂಡಿಸುವ ನಿಟ್ಟಿನಲ್ಲಿ ರಾಹುಲ್ ಅವರು ಮಾಡಿದ ಭಾರತ್ ಜೋಡೋ ಯಾತ್ರೆಗೆ ಅನೇಕ ಕಾಂಗ್ರೆಸ್ಸೇತರರು ಬೆಂಬಲ ನೀಡಿದ್ದರು. ಅದರಲ್ಲಿ ಯೋಗೇಂದ್ರ ಯಾದವ್ ಕೂಡ ಒಬ್ಬರಾಗಿದ್ದು, ಸಂತೋಷ್ ಅವರು ತಮ್ಮ ಟ್ವೀಟ್‌ನಲ್ಲಿ ಅದನ್ನು ಪ್ರಸ್ತಾಪಿಸಿದ್ದಂತಿದೆ.

“ತನ್ನ ಯಜಮಾನರನ್ನು ಮೆಚ್ಚಿಸಲು ಪಾದಯಾತ್ರೆಗಳು ಮತ್ತು ಆಂದೋಲನಗಳ ನಡುವೆ ಸಮೀಕ್ಷೆಗಳಿಗೆ ಅವರು ಸಮಯ ಕಂಡುಕೊಂಡಿರುವುದು ನಿಜಕ್ಕೂ ಆಶ್ಚರ್ಯಕರ” ಎಂದು ಯೋಗೇಂದ್ರ ಅವರ ಹೆಸರನ್ನು ಟ್ಯಾಗ್ ಮಾಡಿ ಬಿ ಎಲ್ ಸಂತೊಷ್ ಟ್ವೀಟ್ ಮಾಡಿದ್ದಾರೆ.

ಅದಕ್ಕೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಯೋಗೇಂದ್ರ ಯಾದವ್‌, “ಸತ್ಯವನ್ನು ಸ್ವಾರಸ್ಯಕರವಾಗಿ ಕಾಣದವರು ಅಡುಗೆಯವರನ್ನೇ (ಈ ಸಂದರ್ಭದಲ್ಲಿ ಕಲ್ಪಿಸಿಕೊಂಡವರು) ದೂಷಿಸುವುದರಲ್ಲಿ ಆಶ್ಚರ್ಯವೇನಿಲ್ಲ. ಆದರೆ ಶಾಸಕರನ್ನು ಖರೀದಿಸಿ ಬಹುಮತದ ಬೇಳೆ ಬೇಯಿಸಿಕೊಳ್ಳುತ್ತಿದ್ದ ಯಾರೋ ಒಬ್ಬರು ಸಮೀಕ್ಷೆಯಿಂದ ತೊಂದರೆಗೀಡಾಗಿರುವುದು ಅಚ್ಚರಿ ಮೂಡಿಸಿದೆ. ಬಿಜೆಪಿಯ ಆಂತರಿಕ ಸಮೀಕ್ಷೆಗಳಿಗೆ ಈದಿನ ಸಮೀಕ್ಷೆ ಅನುರಣಿಸುತ್ತಿದೆಯೇ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿರಿ: ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....