Homeಕರ್ನಾಟಕಲಿಂಗಾಯತ ಮತಬ್ಯಾಂಕ್‌ಗಾಗಿ ಬಿಜೆಪಿ- ಕಾಂಗ್ರೆಸ್‌ ನಡುವೆ ಜಟಾಪಟಿ

ಲಿಂಗಾಯತ ಮತಬ್ಯಾಂಕ್‌ಗಾಗಿ ಬಿಜೆಪಿ- ಕಾಂಗ್ರೆಸ್‌ ನಡುವೆ ಜಟಾಪಟಿ

- Advertisement -
- Advertisement -

ಲಿಂಗಾಯತ ಸಮುದಾಯದ ಮತಬ್ಯಾಂಕ್‌ಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳೆರಡೂ ಜಟಾಪಟಿ ನಡೆಸಲು ಆರಂಭಿಸಿವೆ. ಉಭಯ ಪಕ್ಷಗಳ ಟ್ವೀಟ್‌ ವಾರ್‌ ಲಿಂಗಾಯತ ಸಮುದಾಯವನ್ನು ಕೇಂದ್ರವಾಗಿಸಿಕೊಂಡಿದೆ.

ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯನವರು, ಮುಖ್ಯಮಂತ್ರಿ ಬೊಮ್ಮಾಯಿವರನ್ನು ಭ್ರಷ್ಟ ಮುಖ್ಯಮಂತ್ರಿ ಎಂದಿದ್ದರು. ಲಿಂಗಾಯತರು ಭ್ರಷ್ಟರು ಎಂದು ಸಿದ್ದರಾಮಯ್ಯ ಹೇಳಿದ್ದಾರೆಂದು ಬಿಜೆಪಿ ಟ್ವೀಟ್ ಮಾಡಿತ್ತು. ನಂತರ ಸಿದ್ದರಾಮಯ್ಯನವರು ಸ್ಪಷ್ಟನೆ ನೀಡಿ, “ಕೇವಲ ಬೊಮ್ಮಾಯಿಯವರನ್ನು ಭ್ರಷ್ಟ ಎಂದಿದ್ದೇನೆ ಹೊರತು, ಇಡೀ ಲಿಂಗಾಯತ ಸಮುದಾಯವನ್ನಲ್ಲ” ಎಂದಿದ್ದರು.

ಈಗ ಪ್ರಧಾನಿ ನರೇಂದ್ರ ಮೋದಿಯವರು ಇದೇ ಮಾತನ್ನು ಪುನರುಚ್ಚರಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿರುವ ಅವರು, “ಸ್ವಲ್ಪ ಸಮಯದ ಹಿಂದೆ ನಾನು ಶ್ರೀ ಬಸವೇಶ್ವರರ ಕರ್ಮ ಭೂಮಿಯಲ್ಲಿದ್ದೆ, ಈಗ ಶ್ರೀ ಬಸವೇಶ್ವರರ ಜನ್ಮಭೂಮಿಯಲ್ಲಿ ನಿಂತಿದ್ದೇನೆ” ಎಂದಿದ್ದಾರೆ.

“ದೇಶ ವಿದೇಶಗಳಲ್ಲಿ ಬಸವಣ್ಣನವರ ಆದರ್ಶಗಳನ್ನು ಪಸರಿಸುವ ಸೌಭಾಗ್ಯ ನನಗೆ ದೊರತಿದೆ. ಲಂಡನ್‌ನ ಥೇಮ್ಸ್ ನದಿ ತೀರದಲ್ಲಿ ಬಸವಣ್ಣನವರ ಪುತ್ಥಳಿ ಅನಾವರಣ ಮಾಡಿದ್ದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ” ಎಂದು ತಿಳಿಸಿದ್ದಾರೆ.

“ಲಿಂಗಾಯತರನ್ನು ಕರ್ನಾಟಕ ಕಾಂಗ್ರೆಸ್ ಕಳ್ಳರು ಎಂದು ದೂರುತ್ತದೆ. ಅದೂ ಕಾಂಗ್ರೆಸ್‌ನಲ್ಲಿ ದೊಡ್ಡ ನಾಯಕರು ಅನಿಸಿಕೊಂಡವರೇ ಹೀಗೆ ಮಾಡುತ್ತಾರೆ” ಎಂದು ಆರೋಪಿಸಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ಕೂಡ ಸರಣಿ ಟ್ವೀಟ್‌ಗಳ ಮೂಲಕ ಮರುದಾಳಿ ನಡೆಸಿದೆ. ರಾಜ್ಯ ಬಿಜೆಪಿಯಲ್ಲಿ ಆಗಿರುವ ಪಲ್ಲಟಗಳನ್ನು ಮುಖ್ಯವಾಗಿಟ್ಟುಕೊಂಡು ಪ್ರತಿಕ್ರಿಯೆ ನೀಡುತ್ತಿದೆ.

“ಬಸವಣ್ಣನ ತತ್ವಗಳಿಗೂ ಬಿಜೆಪಿ ನಂಬಿರುವ ಮನುವಾದಕ್ಕೂ ವೈರುದ್ಯಗಳಿವೆ. ಹೀಗಾಗಿಯೇ ಪಠ್ಯದಲ್ಲಿ ಬಸವಣ್ಣನವರನ್ನು ಅವಮಾನಿಸಿದ ಬಿಜೆಪಿ ಈಗ ಲಿಂಗಾಯತ ನಾಯಕರನ್ನೇ ಮುಗಿಸಲು ಹೊರಟಿದೆ. ಬಿ.ಎಸ್.ಯುಡಿಯೂರಪ್ಪ, ಶೆಟ್ಟರ್, ಸವದಿಯಂತಹ ನಾಯಕರನ್ನು ರಾಜಕಾರಣದಿಂದಲೇ ಹೊರದಬ್ಬುವ ಬಿಜೆಪಿ ಪ್ರಯತ್ನಕ್ಕೆ ಲಿಂಗಾಯತರು ಪಾಠ ಕಲಿಸುವುದು ನಿಶ್ಚಿತ” ಎಂದು ಕಾಂಗ್ರೆಸ್ ಎಚ್ಚರಿಸಿದೆ.

ಇದನ್ನೂ ಓದಿರಿ: ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ಬಿಜೆಪಿ ಡಿಲೀಟ್ ಮಾಡಿರುವ ಟ್ವೀಟ್‌ಅನ್ನು ಉಲ್ಲೇಖಿಸಿರುವ ಕಾಂಗ್ರೆಸ್, “ಹೌದು ಮೋದಿ ಹೇಳಿದ್ದು ನಿಜವೇ. ಕರ್ನಾಟಕದಲ್ಲಿ ಬಿಜೆಪಿ ಲಿಂಗಾಯತರಿಗೆ ಅಪಮಾನಿಸಿದೆ. ಯಡಿಯೂರಪ್ಪರನ್ನು ಮೂಲೆಗುಂಪು ಮಾಡಿತು ಶೆಟ್ಟರ್ – ಸವದಿಯವರನ್ನು ಕಿಕ್ ಔಟ್ ಮಾಡಿತು. ಸೋಮಣ್ಣರನ್ನು ಬಲಿಪಶು ಮಾಡುತ್ತಿದೆ ಒಪ್ಪಿಕೊಂಡಿದ್ದಕ್ಕೆ ಧನ್ಯವಾದಗಳು” ಎಂದಿದೆ.

“ಹಾಗೆಯೇ ಮೋದಿಯವರನ್ನೂ ನಿಮ್ಮ ಶಾಸಕ ಶಿವರಾಜ್ ಪಾಟೀಲ್ ಅವಮಾನಿಸಿದ್ದಾರೆ. ಈ ಸತ್ಯವನ್ನು ಒಪ್ಪಿಕೊಂಡಿದ್ದಕ್ಕೆ ಮೋದಿಗೂ ಹಾಗೂ ಬಿಜೆಪಿಗೂ ಧನ್ಯವಾದಗಳು” ಎಂದು ತಿರುಗೇಟು ನೀಡಿದೆ.

“ಜಗದೀಶ್ ಶೆಟ್ಟರ್ ಸಾಯಲಿ ಎಂದು ಈಶ್ವರಪ್ಪನವರ ಬಾಯಲ್ಲಿ ಹೇಳಿಸಿರುವ ಬಿಜೆಪಿ ಲಿಂಗಾಯತರ ನಾಯಕತ್ವದ ನಾಶವನ್ನಷ್ಟೇ ಅಲ್ಲ, ಲಿಂಗಾಯತ ಸಮುದಾಯವು ಬದುಕಿಯೇ ಇರಬಾರದು ಎನ್ನುವ ಧೋರಣೆ ಹೊಂದಿದೆಯೇ? ನರೇಂದ್ರಮೋದಿಯವರೇ, ತಾವು ಲಿಂಗಾಯತ ನಾಯಕರ ಸಾವನ್ನು ಬಯಸುತ್ತಿದ್ದೀರಾ? ತಮ್ಮ ಪಕ್ಷ ಲಿಂಗಾಯತರನ್ನು ಮುಗಿಸಲು ಹೊಂಚು ಹಾಕಿದೆಯೇ?” ಎಂದು ಪ್ರಶ್ನಿಸಿದೆ.

“ಹಿಂದೆ ಬಿ.ಎಸ್.ಯಡಿಯೂರಪ್ಪನವರ ರಾಜೀನಾಮೆ ಪಡೆದು, ಜೈಲಿಗೆ ಕಳಿಸಿದ್ದು ಬಿಜೆಪಿಯೇ. ನಂತರವೂ ಅವರನ್ನು ಕಣ್ಣೀರು ಹಾಕಿಸಿ, ಅಧಿಕಾರ ಕಸಿದಿದ್ದೂ ಬಿಜೆಪಿಯೇ. ಸಂತೋಷ (ಬಿ.ಎಲ್.ಸಂತೋಷ್) ಕೂಟದ ಆಟಕ್ಕೆ ಲಿಂಗಾಯತರು ಬಲಿಯಾಗಿದ್ದು ಸುಳ್ಳೇ? ಲಿಂಗಾಯತರ ಮತ ಬೇಡ ಎಂಬ ಸಂದೇಶವಲ್ಲವೇ ಇದು. ಯಡಿಯೂರಪ್ಪನವರ ರಾಜೀನಾಮೆ ಪಡೆದಿದ್ದೇಕೆ ಎಂಬ ಒಂದೇ ಪ್ರಶ್ನೆಗೆ ಮೋದಿ ಉತ್ತರಿಸಲಿ ಸಾಕು” ಎಂದು ಆಗ್ರಹಿಸಿದೆ.

ಇದನ್ನೂ ಓದಿರಿ: ‘ಈದಿನ’ ಚುನಾವಣಾ ಸಮೀಕ್ಷೆ: ಯೋಗೇಂದ್ರ ಯಾದವ್‌- ಬಿ.ಎಲ್.ಸಂತೋಷ್ ನಡುವೆ ಟ್ವೀಟ್ ವಾರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...