Homeಮುಖಪುಟಅದಾನಿ ಹಗರಣ: ತನಿಖೆ ಪೂರ್ವಗೊಳಿಸಲು ಹೆಚ್ಚುವರಿ 6 ತಿಂಗಳ ಅವಕಾಶ ಕೋರಿ ಸುಪ್ರೀಂಕೋರ್ಟ್‌‌ಗೆ ಸೆಬಿ ಮನವಿ

ಅದಾನಿ ಹಗರಣ: ತನಿಖೆ ಪೂರ್ವಗೊಳಿಸಲು ಹೆಚ್ಚುವರಿ 6 ತಿಂಗಳ ಅವಕಾಶ ಕೋರಿ ಸುಪ್ರೀಂಕೋರ್ಟ್‌‌ಗೆ ಸೆಬಿ ಮನವಿ

- Advertisement -
- Advertisement -

ಅದಾನಿ ಗ್ರೂಪ್ ವಿರುದ್ಧ ಬಂದಿರುವ ಸ್ಟಾಕ್ ಮ್ಯಾನಿಪುಲೇಷನ್ ಆರೋಪಗಳ ತನಿಖೆಯನ್ನು ಪೂರ್ಣಗೊಳಿಸಲು ಇನ್ನೂ ಆರು ತಿಂಗಳ ಕಾಲಾವಕಾಶ ನೀಡಬೇಕೆಂದು ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ (ಸೆಬಿ) ಶನಿವಾರ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.

ಗೌತಮ್ ಅದಾನಿ ನೇತೃತ್ವದ ಈ ಸಂಸ್ಥೆಯು ಸಾರ್ವಜನಿಕ ಷೇರುಗಳನ್ನು ನಿರ್ವಹಿಸುವ ಕನಿಷ್ಠ ನಿಯಮಗಳನ್ನು ಉಲ್ಲಂಘಿಸಿದೆಯೇ, ಸಂಬಂಧಿತ ಪಾರ್ಟಿಗಳೊಂದಿಗೆ ವಹಿವಾಟುಗಳನ್ನು ಬಹಿರಂಗಪಡಿಸಲು ವಿಫಲವಾಗಿದೆಯೇ ಮತ್ತು ಷೇರುಗಳ ಬೆಲೆಗಳಲ್ಲಿ ಯಾವುದೇ ತಿರುಚುವಿಕೆ ನಡೆದಿದೆಯೇ ಎಂದು ಪರಿಶೀಲಿಸಲು ಸೆಬಿಗೆ ನ್ಯಾಯಾಲಯ ಮಾರ್ಚ್ 2ರಂದು ಸೂಚಿಸಿತ್ತು. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಪೀಠವು, ಎರಡು ತಿಂಗಳೊಳಗೆ ತನಿಖೆ ಪೂರ್ಣಗೊಳಿಸಿ ಸ್ಥಿತಿಗತಿ ವರದಿ ಸಲ್ಲಿಸುವಂತೆ ನಿರ್ದೇಶಿಸಿತ್ತು.

ಅಮೆರಿಕ ಮೂಲದ ಹಿಂಡನ್‌ಬರ್ಗ್ ರಿಸರ್ಚ್ ಸಂಸ್ಥೆಯು ಜನವರಿ 24ರಂದು ಪ್ರಕಟಿಸಿದ ವರದಿಯು ಅದಾನಿ ಗ್ರೂಪ್‌ನ ಹಗರಣಗಳತ್ತ ಬೊಟ್ಟು ಮಾಡಿತ್ತು. ಸ್ಟಾಕ್ ಮ್ಯಾನಿಪ್ಯುಲೇಷನ್ ಮಾಡಲಾಗಿದೆ, ಕೃತಕವಾಗಿ ಷೇರುಗಳ ಬೇಲೆ ಏರಿಕೆ ಮಾಡಲಾಗಿದೆ, ಕಡಲಾಚೆಯ ತೆರಿಗೆ ಸ್ವರ್ಗಗಳನ್ನು ಅಸಮರ್ಪಕವಾಗಿ ಬಳಸಾಗಿದೆ ಎಂದು ವರದಿ ಆರೋಪಿಸಿತ್ತು. ಈ ಹಿನ್ನೆಲೆಯಲ್ಲಿ ಹೂಡಿಕೆದಾರರ ಸಂರಕ್ಷಣಾ ಕಾರ್ಯವಿಧಾನಗಳನ್ನು ಪರಿಶೀಲಿಸಲು ನ್ಯಾಯಾಲಯವು ತಜ್ಞರ ಸಮಿತಿಯನ್ನು ರಚಿಸಿತ್ತು.

ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಸಲ್ಲಿಸಿರುವ ಮನವಿಯಲ್ಲಿ, ಏಪ್ರಿಲ್‌ನಲ್ಲಿ ತಜ್ಞರ ಸಮಿತಿಯೊಂದಿಗೆ ಎರಡು ಸಭೆಗಳಲ್ಲಿ ಭಾಗವಹಿಸಿರುವುದಾಗಿ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ತನಿಖೆಯ ಸ್ಥಿತಿ ಮತ್ತು ಮಧ್ಯಂತರ ಸಂಶೋಧನೆಗಳ ಬಗ್ಗೆ ಸಮಿತಿಗೆ ತಿಳಿಸಲಾಗಿದೆ ಎಂದು ಸೆಬಿ ಹೇಳಿಕೊಂಡಿದೆ.

ಹಿಂಡೆನ್‌ಬರ್ಗ್ ರಿಸರ್ಚ್‌ನ ವರದಿಯಲ್ಲಿ ಉಲ್ಲೇಖಿಸಲಾದ 12 ಸಂಶಯಾಸ್ಪದ ವಹಿವಾಟುಗಳಿಗೆ ಸಂಬಂಧಿಸಿದಂತೆ ತನಿಖೆ ಮಾಡಲು ಕನಿಷ್ಠ 15 ತಿಂಗಳ ಕಾಲಾವಕಾಶ ಬೇಕಿದೆ ಎಂದು ಮಾರುಕಟ್ಟೆ ನಿಯಂತ್ರಕ ಸೆಬಿ ಅಭಿಪ್ರಾಯಪಟ್ಟಿದೆ.

“ಏಕೆಂದರೆ ವಹಿವಾಟುಗಳು ಸಂಕೀರ್ಣವಾಗಿವೆ. ಹಲವಾರು ದೇಶೀಯ ಮತ್ತು ಅಂತರರಾಷ್ಟ್ರೀಯ ಬ್ಯಾಂಕ್‌ಗಳಿಂದ ಬ್ಯಾಂಕ್ ಸ್ಟೇಟ್‌ಮೆಂಟ್‌ಗಳನ್ನು ಪಡೆಯಬೇಕಾಗುತ್ತದೆ” ಎಂದು ಸೆಬಿ ವಿವರಿಸಿದೆ.

“ವಿದೇಶಿ ಬ್ಯಾಂಕ್‌ಗಳಿಂದ ಬ್ಯಾಂಕ್ ಸ್ಟೇಟ್‌ಮೆಂಟ್‌ಗಳನ್ನು ಪಡೆಯುವ ಈ ಪ್ರಕ್ರಿಯೆಯು ವಿದೇಶಿ ನಿಯಂತ್ರಕರಿಂದ ಸಹಾಯವನ್ನು ಬೇಡುತ್ತದೆ. ಇದಕ್ಕೆ ಸಮಯ ಬೇಕಾಗುತ್ತದೆ. ಅಲ್ಲದೆ ಇದು ಸವಾಲಿನ ಕೆಲಸವಾಗಿದೆ” ಎಂದು ತಿಳಿಸಿದೆ.

ತನ್ನ ತನಿಖೆಯನ್ನು ಆರು ತಿಂಗಳೊಳಗೆ ಪೂರ್ಣಗೊಳಿಸಲು ‘ಸಮಂಜಸವಾದ ಪ್ರಯತ್ನಗಳನ್ನು’ ಮಾಡುವುದಾಗಿ ಸೆಬಿ ಹೇಳಿದೆ.

ಇದನ್ನೂ ಓದಿರಿ: ಲಿಂಗಾಯತರನ್ನು ಕಳ್ಳರೆಂದು ಬಿಜೆಪಿ ನಿಂದಿಸಿದೆ: ಮೋದಿ ಹೇಳಿರುವುದಾಗಿ ರಾಜ್ಯ ಬಿಜೆಪಿ ಟ್ವೀಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...