Homeಕರ್ನಾಟಕ‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

- Advertisement -
- Advertisement -

ವರುಣ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿ ಸಮೀಪ ನಡೆದ ಪ್ರಕರಣದ ವರದಿ ಪ್ರಕಟಿಸಿರುವ ಸಂಬಂಧ ಮೈಸೂರಿನ ಪ್ರಾದೇಶಿಕ ದಿನಪತ್ರಿಕೆ ‘ಆಂದೋಲನ’ ಕುರಿತು ಸಂಸದ ಪ್ರತಾಪ್‌ ಸಿಂಹ ಅವರು ನೀಡಿರುವ ಅಸಂಬದ್ಧ ಹೇಳಿಕೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ. ಪ್ರತಾಪ್ ಸಿಂಹ ಕ್ಷಮೆಯಾಚಿಸಬೇಕು ಆಗ್ರಹಿಸಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಪ್ರತಿಕ್ರಿಯೆ ಪಡೆದು ವರದಿ ಮಾಡಿದ ‘ಆಂದೋಲನ’ ದಿನಪತ್ರಿಕೆಯನ್ನು ಉಲ್ಲೇಖಿಸಿ ಪ್ರತಾಪ್‌ ಸಿಂಹ ಅವರು ಸುದ್ದಿಗೋಷ್ಠಿಯಲ್ಲಿ ‘ಪತ್ರಿಕೆ’ಯನ್ನು ಟಾರ್ಗೆಟ್ ಮಾಡಿ ಮಾತನಾಡಿರುವುದು ಖಂಡನೀಯ. ಈ ಬಗ್ಗೆ ಪ್ರತಾಪ್‌ ಸಿಂಹ ಅವರು ಕೂಡಲೇ ‘ಪತ್ರಿಕೆ’ಯ ಕ್ಷಮೆಯಾಚಿಸಬೇಕು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಟ್ವೀಟ್ ಮಾಡಿದ್ದಾರೆ.

ಏನಿದು ವಿವಾದ?

ಸಿದ್ದರಾಮನಹುಂಡಿಯಲ್ಲಿ ಗುರುವಾರ ಸಂಜೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದಿದೆ ಎನ್ನಲಾದ ಘರ್ಷಣೆ ಕುರಿತು ‘ಆಂದೋಲನ’ ವರದಿ ಪ್ರಕಟಿಸಿತ್ತು. ಪತ್ರಿಕೆಯು ವಾಸ್ತವಾಂಶಗಳನ್ನು ತಿರುಚಿ ಸುದ್ದಿ ಪ್ರಕಟಿಸಿದೆ ಎಂದು ಪ್ರತಾಪ್‌ ಆರೋಪಿಸಿದ್ದರು. ಸಂಸದರ ಹೇಳಿಕೆಯನ್ನು ಖಂಡಿಸಿ ‘ಆಂದೋಲನ’ ಮತ್ತೊಂದು ಟಿಪ್ಪಣಿಯನ್ನು ಪ್ರಕಟಿಸಿತ್ತು. ಜೊತೆಗೆ ತನ್ನ ವರದಿಗೆ ಬದ್ಧ ಎಂದು ಸ್ಪಷ್ಟಪಡಿಸಿತ್ತು.

‘ಆಂದೋಲನ’ ಹೇಳಿದ್ದೇನು?

“ಚುನಾವಣೆ ಸಂದರ್ಭದಲ್ಲಿ ವಿವಾದಗಳು, ವಾಗ್ವಾದಗಳು ಸಹಜ. ಆರೋಪಗಳು, ಆಪಾದನೆಗಳು, ಕೆಲವೊಮ್ಮೆ ಗಲಾಟೆಗಳು ಕೂಡ ನಡೆಯುತ್ತಿರುತ್ತವೆ. ಇಂಥ ಸಂದರ್ಭಗಳಲ್ಲಿ ಸಮಾಜದ ಸಾಮರಸ್ಯ ಕೆಡದಂತೆ ಕರ್ತವ್ಯ ನಿರ್ವಹಿಸಬೇಕಾಗಿರುವುದು ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾಧ್ಯಮಗಳ ಹೊಣೆ. ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿ, ದಾಖಲಾತಿಗಳನ್ನು ಪರಿಶೀಲಿಸಿ, ಅಧಿಕಾರಿಗಳ ಹೇಳಿಕೆಗಳನ್ನು ತೆಗೆದುಕೊಂಡು ವಸ್ತುನಿಷ್ಠ ವರದಿಗಳನ್ನು ಪ್ರಕಟಿಸಬೇಕು.”

“ಈ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಂಡೇ ಸಿದ್ದರಾಮನಹುಂಡಿ ಘಟನೆ ವರದಿಯನ್ನು ‘ಆಂದೋಲನ’ ಪ್ರಕಟಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರ ಹೇಳಿಕೆ ಹಾಗೂ ಘಟನಾವಳಿಯನ್ನು ಆಧರಿಸಿಯೇ ಈ ವರದಿ ಮಾಡಲಾಗಿದೆ.”

“ಆದರೆ, ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಈ ಸುದ್ದಿಯ ಜತೆ ಪ್ರಕಟವಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹೇಳಿಕೆಯು ಅವರು ಕೊಟ್ಟಿರುವುದಿಲ್ಲ, ಅವರನ್ನು ಕೋಟ್ ಮಾಡಿ ‘ಆಂದೋಲನ’ ಸುಳ್ಳು ಸುದ್ದಿ ಮಾಡಿದೆ. ಇದನ್ನು ನೇರವಾಗಿ ಹೇಳುತ್ತಿದ್ದೇನೆ. ಐ ಡೋಂಟ್ ಕೇರ್ ಎಂದು ಪತ್ರಿಕೆಯ ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ.”

“’ಆಂದೋಲನ’ ಮಾತ್ರವಲ್ಲ, ಬೇರೆ ಪತ್ರಿಕೆಗಳಲ್ಲೂ ಈ ವರದಿ ಪ್ರಕಟವಾಗಿದೆ. ಆದರೆ, ‘ಆಂದೋಲನ’ ದಿನಪತ್ರಿಕೆಯನ್ನು ಮಾತ್ರ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಗುರಿ ಮಾಡಿದ್ದಾರೆ. ಇದು ಸಂಸದರಿಗೆ ಶೋಭೆ ತರುವುದಿಲ್ಲ.”

‘ಆಂದೋಲನ’ ದಿನಪತ್ರಿಕೆ ನೀಡಿರುವ ಪ್ರತಿಕ್ರಿಯೆ

ಪ್ರತಾಪ್ ಸಿಂಹ ಹೇಳಿದ್ದೇನು?

“ನಾನು ನಿಮಗೆ ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ಮೊದಲು ಪೊಲೀಸ್ ಇಲಾಖೆಯವರನ್ನು ಕೇಳಿ, ಎಸ್ಪಿ ಅವರು ಮಾತನಾಡಿಯೇ ಇಲ್ಲ. ‘ಆಂದೋಲನ’ದಲ್ಲಿ ಬಂದಿರುವ ಸತ್ಯಕ್ಕೆ ದೂರವಾದ ಸುದ್ದಿಯನ್ನು ನೋಡಿ ಮಾತನಾಡಬೇಡಿ. ‘ಆಂದೋಲನ’ ಪತ್ರಿಕೆಯವರು ಆಗಾಗ ಪೊಲೀಸರನ್ನು ಕೋಟ್ ಮಾಡಿಕೊಂಡು ಈ ರೀತಿ ಸುಳ್ಳು ಸುದ್ದಿ ಬರೆಯುವುದನ್ನು ನಿಲ್ಲಿಸಬೇಕು. ನಾನು ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ನಾನು ಬೆಳಿಗ್ಗೆ ಎಸ್ಪಿ ಬಳಿ ಯಾಕೆ ಈ ರೀತಿ ಸ್ಟೇಟ್‌ಮೆಂಟ್ ಕೊಟ್ಟಿದ್ದೀರಿ ಎಂದು ಮಾತಾಡ್ಡೆ. ನಾನು ಸ್ಟೇಟ್‌ಮೆಂಟ್ ಕೊಟ್ಟಿಲ್ಲ. ಹಿಂದೇನೂ ‘ಆಂದೋಲನ’ದಲ್ಲಿ ಒಂದು ವರದಿ ಇದೇ ರೀತಿ ಆಗಿದೆ ಎಂದು ತಿಳಿಸಿದ್ದಾರೆ. ಸೋ ಐ ಪರ್ಟಿಕ್ಯುಲರ್ಲಿ ನೇಮಿಂಗ್ ದಿ ನ್ಯೂಸ್ ಪೇಪರ್, ಅಂಡ್ ಐ ಡೋಂಟ್ ಕೇರ್” ಎಂದು ಸಂಸದ ಪ್ರತಾಪ ಸಿಂಹ ಪತ್ರಿಕೆಯನ್ನು ಟೀಕಿಸಿದ್ದರು.

ಶುಕ್ರವಾರ ಆಂದೋಲನ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿ

ದಿವಂಗತ ರಾಜಶೇಖರ ಕೋಟಿಯವರು ಸ್ಥಾಪಿಸಿದ ಆಂದೋಲನ ದಿನಪತ್ರಿಕೆಗೆ ಐವತ್ತು ವರ್ಷಗಳ ಇತಿಹಾಸವಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆಯಲ್ಲಿ ಪ್ರಸರಣವನ್ನು ಹೊಂದಿರುವ ‘ಆಂದೋಲನ’, ದಲಿತ, ಆದಿವಾಸಿ, ರೈತ, ಕೂಲಿಕಾರ್ಮಿಕ ಮತ್ತು ಭಾಷಾ ಚಳವಳಿಗಳಿಗೆ ಬೆನ್ನೆಲುಬಾಗಿ ನಿಂತ ಇತಿಹಾಸವನ್ನು ಹೊಂದಿದೆ. ಪ್ರಗತಿಪರ ವಿಚಾರಧಾರೆ ಹಾಗೂ ಸೌಹಾರ್ದ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಆಂದೋಲನ ಮಹತ್ತರವಾದ ಕೆಲಸಗಳನ್ನು ಮಾಡುತ್ತಾ ಬಂದಿದೆ.

ಇದನ್ನೂ ಓದಿರಿ: ಜೆಡಿಎಸ್ ಅಭ್ಯರ್ಥಿಗೆ ಆಮಿಷ: ನಾಮಪತ್ರ ಅನರ್ಹತೆ ಭೀತಿಯಲ್ಲಿ ವಿ.ಸೋಮಣ್ಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...