Homeಕರ್ನಾಟಕ‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

- Advertisement -
- Advertisement -

ವರುಣ ವಿಧಾನಸಭಾ ಕ್ಷೇತ್ರದ ಸಿದ್ದರಾಮನಹುಂಡಿ ಸಮೀಪ ನಡೆದ ಪ್ರಕರಣದ ವರದಿ ಪ್ರಕಟಿಸಿರುವ ಸಂಬಂಧ ಮೈಸೂರಿನ ಪ್ರಾದೇಶಿಕ ದಿನಪತ್ರಿಕೆ ‘ಆಂದೋಲನ’ ಕುರಿತು ಸಂಸದ ಪ್ರತಾಪ್‌ ಸಿಂಹ ಅವರು ನೀಡಿರುವ ಅಸಂಬದ್ಧ ಹೇಳಿಕೆಯನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಖಂಡಿಸಿದೆ. ಪ್ರತಾಪ್ ಸಿಂಹ ಕ್ಷಮೆಯಾಚಿಸಬೇಕು ಆಗ್ರಹಿಸಿದೆ.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಯವರ ಪ್ರತಿಕ್ರಿಯೆ ಪಡೆದು ವರದಿ ಮಾಡಿದ ‘ಆಂದೋಲನ’ ದಿನಪತ್ರಿಕೆಯನ್ನು ಉಲ್ಲೇಖಿಸಿ ಪ್ರತಾಪ್‌ ಸಿಂಹ ಅವರು ಸುದ್ದಿಗೋಷ್ಠಿಯಲ್ಲಿ ‘ಪತ್ರಿಕೆ’ಯನ್ನು ಟಾರ್ಗೆಟ್ ಮಾಡಿ ಮಾತನಾಡಿರುವುದು ಖಂಡನೀಯ. ಈ ಬಗ್ಗೆ ಪ್ರತಾಪ್‌ ಸಿಂಹ ಅವರು ಕೂಡಲೇ ‘ಪತ್ರಿಕೆ’ಯ ಕ್ಷಮೆಯಾಚಿಸಬೇಕು ಎಂದು ಸಂಘದ ಅಧ್ಯಕ್ಷ ಶಿವಾನಂದ ತಗಡೂರು ಟ್ವೀಟ್ ಮಾಡಿದ್ದಾರೆ.

ಏನಿದು ವಿವಾದ?

ಸಿದ್ದರಾಮನಹುಂಡಿಯಲ್ಲಿ ಗುರುವಾರ ಸಂಜೆ ಬಿಜೆಪಿ ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ನಡೆದಿದೆ ಎನ್ನಲಾದ ಘರ್ಷಣೆ ಕುರಿತು ‘ಆಂದೋಲನ’ ವರದಿ ಪ್ರಕಟಿಸಿತ್ತು. ಪತ್ರಿಕೆಯು ವಾಸ್ತವಾಂಶಗಳನ್ನು ತಿರುಚಿ ಸುದ್ದಿ ಪ್ರಕಟಿಸಿದೆ ಎಂದು ಪ್ರತಾಪ್‌ ಆರೋಪಿಸಿದ್ದರು. ಸಂಸದರ ಹೇಳಿಕೆಯನ್ನು ಖಂಡಿಸಿ ‘ಆಂದೋಲನ’ ಮತ್ತೊಂದು ಟಿಪ್ಪಣಿಯನ್ನು ಪ್ರಕಟಿಸಿತ್ತು. ಜೊತೆಗೆ ತನ್ನ ವರದಿಗೆ ಬದ್ಧ ಎಂದು ಸ್ಪಷ್ಟಪಡಿಸಿತ್ತು.

‘ಆಂದೋಲನ’ ಹೇಳಿದ್ದೇನು?

“ಚುನಾವಣೆ ಸಂದರ್ಭದಲ್ಲಿ ವಿವಾದಗಳು, ವಾಗ್ವಾದಗಳು ಸಹಜ. ಆರೋಪಗಳು, ಆಪಾದನೆಗಳು, ಕೆಲವೊಮ್ಮೆ ಗಲಾಟೆಗಳು ಕೂಡ ನಡೆಯುತ್ತಿರುತ್ತವೆ. ಇಂಥ ಸಂದರ್ಭಗಳಲ್ಲಿ ಸಮಾಜದ ಸಾಮರಸ್ಯ ಕೆಡದಂತೆ ಕರ್ತವ್ಯ ನಿರ್ವಹಿಸಬೇಕಾಗಿರುವುದು ಜವಾಬ್ದಾರಿಯುತ ಸ್ಥಾನದಲ್ಲಿರುವ ಮಾಧ್ಯಮಗಳ ಹೊಣೆ. ಘಟನೆ ಬಗ್ಗೆ ಮಾಹಿತಿ ಕಲೆ ಹಾಕಿ, ದಾಖಲಾತಿಗಳನ್ನು ಪರಿಶೀಲಿಸಿ, ಅಧಿಕಾರಿಗಳ ಹೇಳಿಕೆಗಳನ್ನು ತೆಗೆದುಕೊಂಡು ವಸ್ತುನಿಷ್ಠ ವರದಿಗಳನ್ನು ಪ್ರಕಟಿಸಬೇಕು.”

“ಈ ಸಾಮಾಜಿಕ ಹೊಣೆಗಾರಿಕೆಯನ್ನು ಅರಿತುಕೊಂಡೇ ಸಿದ್ದರಾಮನಹುಂಡಿ ಘಟನೆ ವರದಿಯನ್ನು ‘ಆಂದೋಲನ’ ಪ್ರಕಟಿಸಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಅವರ ಹೇಳಿಕೆ ಹಾಗೂ ಘಟನಾವಳಿಯನ್ನು ಆಧರಿಸಿಯೇ ಈ ವರದಿ ಮಾಡಲಾಗಿದೆ.”

“ಆದರೆ, ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರತಾಪ್ ಸಿಂಹ, ಈ ಸುದ್ದಿಯ ಜತೆ ಪ್ರಕಟವಾದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಹೇಳಿಕೆಯು ಅವರು ಕೊಟ್ಟಿರುವುದಿಲ್ಲ, ಅವರನ್ನು ಕೋಟ್ ಮಾಡಿ ‘ಆಂದೋಲನ’ ಸುಳ್ಳು ಸುದ್ದಿ ಮಾಡಿದೆ. ಇದನ್ನು ನೇರವಾಗಿ ಹೇಳುತ್ತಿದ್ದೇನೆ. ಐ ಡೋಂಟ್ ಕೇರ್ ಎಂದು ಪತ್ರಿಕೆಯ ಹೆಸರನ್ನು ಉಲ್ಲೇಖಿಸಿ ಆರೋಪ ಮಾಡಿದ್ದಾರೆ.”

“’ಆಂದೋಲನ’ ಮಾತ್ರವಲ್ಲ, ಬೇರೆ ಪತ್ರಿಕೆಗಳಲ್ಲೂ ಈ ವರದಿ ಪ್ರಕಟವಾಗಿದೆ. ಆದರೆ, ‘ಆಂದೋಲನ’ ದಿನಪತ್ರಿಕೆಯನ್ನು ಮಾತ್ರ ಜವಾಬ್ದಾರಿಯುತ ಸ್ಥಾನದಲ್ಲಿರುವ ಸಂಸದರು ಗುರಿ ಮಾಡಿದ್ದಾರೆ. ಇದು ಸಂಸದರಿಗೆ ಶೋಭೆ ತರುವುದಿಲ್ಲ.”

‘ಆಂದೋಲನ’ ದಿನಪತ್ರಿಕೆ ನೀಡಿರುವ ಪ್ರತಿಕ್ರಿಯೆ

ಪ್ರತಾಪ್ ಸಿಂಹ ಹೇಳಿದ್ದೇನು?

“ನಾನು ನಿಮಗೆ ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ಮೊದಲು ಪೊಲೀಸ್ ಇಲಾಖೆಯವರನ್ನು ಕೇಳಿ, ಎಸ್ಪಿ ಅವರು ಮಾತನಾಡಿಯೇ ಇಲ್ಲ. ‘ಆಂದೋಲನ’ದಲ್ಲಿ ಬಂದಿರುವ ಸತ್ಯಕ್ಕೆ ದೂರವಾದ ಸುದ್ದಿಯನ್ನು ನೋಡಿ ಮಾತನಾಡಬೇಡಿ. ‘ಆಂದೋಲನ’ ಪತ್ರಿಕೆಯವರು ಆಗಾಗ ಪೊಲೀಸರನ್ನು ಕೋಟ್ ಮಾಡಿಕೊಂಡು ಈ ರೀತಿ ಸುಳ್ಳು ಸುದ್ದಿ ಬರೆಯುವುದನ್ನು ನಿಲ್ಲಿಸಬೇಕು. ನಾನು ಡೈರೆಕ್ಟ್ ಆಗಿ ಹೇಳ್ತಾ ಇದ್ದೇನೆ. ನಾನು ಬೆಳಿಗ್ಗೆ ಎಸ್ಪಿ ಬಳಿ ಯಾಕೆ ಈ ರೀತಿ ಸ್ಟೇಟ್‌ಮೆಂಟ್ ಕೊಟ್ಟಿದ್ದೀರಿ ಎಂದು ಮಾತಾಡ್ಡೆ. ನಾನು ಸ್ಟೇಟ್‌ಮೆಂಟ್ ಕೊಟ್ಟಿಲ್ಲ. ಹಿಂದೇನೂ ‘ಆಂದೋಲನ’ದಲ್ಲಿ ಒಂದು ವರದಿ ಇದೇ ರೀತಿ ಆಗಿದೆ ಎಂದು ತಿಳಿಸಿದ್ದಾರೆ. ಸೋ ಐ ಪರ್ಟಿಕ್ಯುಲರ್ಲಿ ನೇಮಿಂಗ್ ದಿ ನ್ಯೂಸ್ ಪೇಪರ್, ಅಂಡ್ ಐ ಡೋಂಟ್ ಕೇರ್” ಎಂದು ಸಂಸದ ಪ್ರತಾಪ ಸಿಂಹ ಪತ್ರಿಕೆಯನ್ನು ಟೀಕಿಸಿದ್ದರು.

ಶುಕ್ರವಾರ ಆಂದೋಲನ ದಿನಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿ

ದಿವಂಗತ ರಾಜಶೇಖರ ಕೋಟಿಯವರು ಸ್ಥಾಪಿಸಿದ ಆಂದೋಲನ ದಿನಪತ್ರಿಕೆಗೆ ಐವತ್ತು ವರ್ಷಗಳ ಇತಿಹಾಸವಿದೆ. ಮೈಸೂರು, ಚಾಮರಾಜನಗರ, ಮಂಡ್ಯ, ಕೊಡಗು ಜಿಲ್ಲೆಯಲ್ಲಿ ಪ್ರಸರಣವನ್ನು ಹೊಂದಿರುವ ‘ಆಂದೋಲನ’, ದಲಿತ, ಆದಿವಾಸಿ, ರೈತ, ಕೂಲಿಕಾರ್ಮಿಕ ಮತ್ತು ಭಾಷಾ ಚಳವಳಿಗಳಿಗೆ ಬೆನ್ನೆಲುಬಾಗಿ ನಿಂತ ಇತಿಹಾಸವನ್ನು ಹೊಂದಿದೆ. ಪ್ರಗತಿಪರ ವಿಚಾರಧಾರೆ ಹಾಗೂ ಸೌಹಾರ್ದ ಪರಂಪರೆಯನ್ನು ಉಳಿಸುವ ನಿಟ್ಟಿನಲ್ಲಿ ಆಂದೋಲನ ಮಹತ್ತರವಾದ ಕೆಲಸಗಳನ್ನು ಮಾಡುತ್ತಾ ಬಂದಿದೆ.

ಇದನ್ನೂ ಓದಿರಿ: ಜೆಡಿಎಸ್ ಅಭ್ಯರ್ಥಿಗೆ ಆಮಿಷ: ನಾಮಪತ್ರ ಅನರ್ಹತೆ ಭೀತಿಯಲ್ಲಿ ವಿ.ಸೋಮಣ್ಣ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿದ್ದ KPSC ಅಧ್ಯಕ್ಷರ ಭೇಟಿಯಾಗಿದ್ದೇಕೆ HDK? ಪ್ರಿಯಾಂಕ್ ಖರ್ಗೆ ಪ್ರಶ್ನೆ

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿ ವಿಚಾರವಾಗಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಕೇಳಿಬಂದಿರುವ ಗಂಭೀರ ಆರೋಪಗಳಿಗೆ ಅವರು ತಾರ್ಕಿಕ ಸ್ಪಷ್ಟನೆ ನೀಡುವ ಬದಲು, ಜಾರಿಕೊಳ್ಳುವ ರೀತಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ ಎಂದು...

ನೇಪಾಳ: ಶಿಕ್ಷಕನ ಸಮಯಪ್ರಜ್ಞೆಯಿಂದ ಉಳಿಯಿತು 1643 ಮಕ್ಕಳ ಪ್ರಾಣ

ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಜಲಪ್ರಳಯಕ್ಕೆ ಬಲಿಯಾದವರ ಸಂಖ್ಯೆ 700ರ ಗಡಿ ದಾಟಿದೆ. 2,000ಕ್ಕೂ ಹೆಚ್ಚು ಜನರು ಇಂದಿಗೂ ನಾಪತ್ತೆಯಾಗಿದ್ದು, ರಕ್ಷಣಾ ಪಡೆಗಳು ಅವಿಶ್ರಾಂತವಾಗಿ ಶೋಧ ಕಾರ್ಯ ನಡೆಸುತ್ತಿವೆ. ಪ್ರಕೃತಿ ತನ್ನ...

ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳ ಹಿಂಪಡೆಯುವಿಕೆ ಪರಿಶೀಲನೆ: ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಂಪುಟ ಉಪಸಮಿತಿ ರಚನೆ

ರಾಜ್ಯದ ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣೆಗೆ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳನ್ನು ಪರಿಶೀಲಿಸಿ, ಅವುಗಳನ್ನು ಹಿಂಪಡೆಯುವ ಕುರಿತು ಸರ್ಕಾರಕ್ಕೆ ಶಿಫಾರಸು ಮಾಡಲು ಕರ್ನಾಟಕ ಸರ್ಕಾರವು ಆರು ಮಂದಿ ಸಚಿವರನ್ನೊಳಗೊಂಡ ಸಂಪುಟ ಉಪಸಮಿತಿಯನ್ನು ರಚಿಸಿದೆ. ಸರ್ಕಾರದ ಅಧಿಕೃತ...

ಉದ್ಯಾನವನ ನುಂಗುವ ಕಾಯ್ದೆ ತಿದ್ದುಪಡಿ : ಸರ್ಕಾರದ ವಿರುದ್ಧ ಸಿಡಿದೆದ್ದ ಬೆಂಗಳೂರಿಗರು

ಕರ್ನಾಟಕ ವಿಧಾನಮಂಡಲವು ಸರ್ಕಾರಿ ಉದ್ಯಾನವನಗಳು ಮತ್ತು ತೋಟಗಳ ಕೆಲವು ಭಾಗಗಳನ್ನು ಸಾರ್ವಜನಿಕ ಮೂಲಸೌಕರ್ಯ ಯೋಜನೆಗಳಿಗಾಗಿ ಬಳಸಲು ಅನುಮತಿಸುವ ಕಾಯ್ದೆ ತಿದ್ದುಪಡಿಯನ್ನು ಅಂಗೀಕರಿಸಿದ ನಂತರ, ಬೆಂಗಳೂರಿನ ಉದ್ಯಾನವನಗಳು ಹೊಸ ರಾಜಕೀಯ ಮತ್ತು ಪರಿಸರ ವಿವಾದದ...

ನೇಪಾಳ–ಟಿಬೆಟ್ ಭೀಕರ ಪ್ರವಾಹ: ನೇಪಾಳದಲ್ಲಿ 734 ಸಾವು, 2,498 ಮಂದಿ ನಾಪತ್ತೆ; ಒಟ್ಟು ಸಾವಿನ ಸಂಖ್ಯೆ 750ಕ್ಕೆ ಏರಿಕೆ!

ನೇಪಾಳ–ಚೀನಾ ಗಡಿ ಪ್ರದೇಶದಲ್ಲಿ ಹಿಮನದಿ ಕುಸಿತದಿಂದ ಉಂಟಾದ ಭೀಕರ ಪ್ರವಾಹ ಮತ್ತು ಅವಶೇಷ ಪ್ರವಾಹದಲ್ಲಿ ನೇಪಾಳದಲ್ಲಿ ಇದುವರೆಗೆ 734 ಮಂದಿ ಮೃತಪಟ್ಟಿದ್ದು, 2,498 ಮಂದಿ ನಾಪತ್ತೆಯಾಗಿದ್ದಾರೆ. ಚೀನಾದ ಟಿಬೆಟ್ ಪ್ರದೇಶದಲ್ಲಿ 16 ಮಂದಿ...

“ಇಂತಹ ಸೌಹಾರ್ದತೆಯ ಮಾತುಗಳನ್ನು ಅಮೆರಿಕಾದಲ್ಲಲ್ಲ, ಭಾರತಕ್ಕೆ ಬಂದು ಇಲ್ಲಿನ ಜನರಿಗೆ ಹೇಳಿ!” – ಭಾಗವತ್‌ಗೆ ವಿರೋಧ ಪಕ್ಷಗಳ ಸವಾಲು

ನ್ಯೂಯಾರ್ಕ್/ಮುಂಬೈ: ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಅಮೆರಿಕಾದ ನ್ಯೂಯಾರ್ಕ್‌ನಲ್ಲಿ ನೀಡಿರುವ ಸೌಹಾರ್ದತೆಯ ಹೇಳಿಕೆ ಈಗ ಭಾರತೀಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ವಿದೇಶಿ ಮಣ್ಣಿನಲ್ಲಿ ಮುಸ್ಲಿಂ ಸಮುದಾಯದ ಪರವಾಗಿ...

ಸ್ವದೇಶದಲ್ಲಿ ಹಿಂದೂ ರಾಷ್ಟ್ರ, ವಿದೇಶದಲ್ಲಿ ಒಳಗೊಳ್ಳುವಿಕೆ ಮಂತ್ರ : ಆರ್‌ಎಸ್‌ಎಸ್‌ ದ್ವಂದ್ವ ನಿಲುವು ಪ್ರಶ್ನಿಸಿದ ಪ್ರಿಯಾಂಕ್ ಖರ್ಗೆ

"ಭಾರತದಲ್ಲಿ ಮುಸ್ಲಿಮರು ಇರಬಾರದು ಎನ್ನುವವನು ಹಿಂದೂ ಅಲ್ಲ" ಎಂದು ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಅಮೆರಿದಲ್ಲಿ ನೀಡಿರುವ ಹೇಳಿಕೆಯ ಸುತ್ತ ಭಾರೀ ಚರ್ಚೆಗಳು ನಡೆಯುತ್ತಿವೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರತಿಕ್ರಿಯಿಸಿರುವ...

ಮಹಾರಾಷ್ಟ್ರ | ಬುಡಕಟ್ಟು ವಿದ್ಯಾರ್ಥಿಗಳ ಹೋರಾಟಕ್ಕೆ ಜಯ : ಎಲ್ಲಾ ಬೇಡಿಕೆಗಳ ಈಡೇರಿಕೆಗೆ ಒಪ್ಪಿದ ಸರ್ಕಾರ

ಮಹಾರಾಷ್ಟ್ರದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಪರಿಶಿಷ್ಟ ಪಂಗಡದ (ಎಸ್‌ಟಿ) ಅಭ್ಯರ್ಥಿಗಳಿಗೆ ಆದ್ಯತೆ ಹಾಗೂ ವಸತಿ ಶಾಲೆಗಳ ಮೂಲಸೌಕರ್ಯ ಸುಧಾರಣೆಗೆ ಆಗ್ರಹಿಸಿ ಕಳೆದ 16 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಬುಡಕಟ್ಟು ವಿದ್ಯಾರ್ಥಿಗಳ ಸುದೀರ್ಘ ಹೋರಾಟಕ್ಕೆ...

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...