Homeಮುಖಪುಟಮೋದಿ 100ನೇ 'ಮನ್ ಕಿ ಬಾತ್‌'ಗೆ ಸಂಸದೆ ಮೊಯಿತ್ರಾಯಿಂದ ಎರಡು ಪ್ರಶ್ನೆ

ಮೋದಿ 100ನೇ ‘ಮನ್ ಕಿ ಬಾತ್‌’ಗೆ ಸಂಸದೆ ಮೊಯಿತ್ರಾಯಿಂದ ಎರಡು ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರ ಮಾಸಿಕ ರೇಡಿಯೋ ಕಾರ್ಯಕ್ರಮ ”ಮನ್ ಕಿ ಬಾತ್”ನ 100ನೇ ಸಂಚಿಕೆಯು ಇಂದು (ಏಪ್ರಿಲ್ 30ರ ಭಾನುವಾರದಂದು) ಪ್ರಸಾರವಾಗಲಿದೆ. ಈ 100ನೇ ಸಂಚಿಕೆಯು ನ್ಯೂಯಾರ್ಕ್‌ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಛೇರಿಯಲ್ಲಿ ನೇರ ಪ್ರಸಾರವಾಗಲಿದೆ, ಈ ನಡುವೆ ತೃಣಮೂಲ ಕಾಂಗ್ರೆಸ್ ಸಂಸದೆ ಮಹುವಾ ಮೊಯಿತ್ರಾ ಅವರು ಒಂದೆರಡು ಪ್ರಶ್ನೆಗಳಿಗೆ ಉತ್ತರಿಸುವಂತೆ ಪ್ರಧಾನಿ ಮೋದಿ ಅವರನ್ನು ಕೇಳಿದ್ದಾರೆ.

”ಭಾರತದ ಮಹಿಳಾ ಕ್ರಿಡಾಪಟುಗಳನ್ನು ”ಬಿಜೆಪಿಯ ಪರಭಕ್ಷಕರಿಂದ” ಏಕೆ ರಕ್ಷಿಸಲು ಸಾಧ್ಯವಿಲ್ಲ?, ಸೆಬಿ ಅದಾನಿ ಅವರ ತನಿಖೆಯನ್ನು ಸುಪ್ರೀಂ ಕೋರ್ಟ್‌ನ ಕಾಲಮಿತಿ ಅಂದರೆ ಎರಡು ತಿಂಗಳೊಳಗೆ ಏಕೆ ಪೂರ್ಣಗೊಳಿಸಲು ಸಾಧ್ಯವಿಲ್ಲ?” ಎಂದು ಟ್ವಿಟರ್‌ನಲ್ಲಿ ಮೊಯಿತ್ರಾ ಪ್ರಧಾನಿ ಮೋದಿಗೆ ಕೇಳಿದ್ದಾರೆ.

ಈ ವಿಷಯದ ಬಗ್ಗೆ ಸೆಬಿಗೆ ಪತ್ರ ಬರೆದಿದ್ದೆ, ಅವರು ತನಿಖೆ ಮಾಡುತ್ತಿದೆ ಎಂದು ಈ ಹಿಂದೆ ಸೂಚಿಸಿದರು. ಅದಾನಿಗೆ ತನ್ನ ಕಾರ್ಯಗಳನ್ನು ಮುಚ್ಚಿಡಲು ಸೆಬಿ ಆರು ತಿಂಗಳು ಸಮಯ ನೀಡಲು ಬಯಸುತ್ತಿದೆ” ಎಂದು ಹೇಳಿದ್ದಾರೆ.

ಮೊಯಿತ್ರಾ ಅವರ ಮೊದಲ ಪ್ರಶ್ನೆಯು ಭಾರತೀಯ ಕುಸ್ತಿ ಫೆಡರೇಶನ್ ಮುಖ್ಯಸ್ಥ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಲೈಂಗಿಕ ಕಿರುಕುಳ ಆರೋಪಗಳನ್ನು ಉಲ್ಲೇಖಿಸುತ್ತದೆ. ಸಿಂಗ್ ವಿರುದ್ಧದ ಆರೋಪಗಳನ್ನು ಏಪ್ರಿಲ್ 25ರಂದು ಸುಪ್ರೀಂ ಕೋರ್ಟ್ “ಗಂಭೀರ” ಎಂದು ಪರಿಗಣಿಸಿತು ಮತ್ತು ಡಬ್ಲ್ಯುಎಫ್‌ಐ ಮುಖ್ಯಸ್ಥರ ವಿರುದ್ಧ ಎಫ್‌ಐಆರ್ ನೋಂದಾಯಿಸದ ಪ್ರಕರಣವನ್ನು ಏಪ್ರಿಲ್ 28ರಂದು ವಿಚಾರಣೆಗೆ ನಿಗದಿಪಡಿಸಲಾಗಿತ್ತು.

ಇದನ್ನೂ ಓದಿ: ನಮ್ಮ ಉಡುಗೆ ಕೊಳಕಲ್ಲ, ನಿಮ್ಮ ಆಲೋಚನೆ ಕೊಳಕು: ಬಿಜೆಪಿ ನಾಯಕನಿಗೆ ಮೋಯಿತ್ರಾ ತಿರುಗೇಟು

ಎರಡನೇ ಪ್ರಶ್ನೆಯಾಗಿ, ಅದಾನಿ ಗ್ರೂಪ್‌ನ ಭದ್ರತಾ ಮಾರುಕಟ್ಟೆ ಕಾನೂನುಗಳು ಮತ್ತು ಅದರ ನಿಯಂತ್ರಣದ ಬಗ್ಗೆ ಬಹಿರಂಗಪಡಿಸುವಿಕೆಗಳಲ್ಲಿನ ಸಂಭವನೀಯ ಲೋಪದೋಷಗಳ ತನಿಖೆಯನ್ನು ಪೂರ್ಣಗೊಳಿಸಲು ಸುಪ್ರೀಂ ಕೋರ್ಟ್‌ನಿಂದ ಆರು ತಿಂಗಳ ಅವಧಿ ಕೇಳಿರುವುದನ್ನು ಸೆಬಿಯನ್ನು ಮೊಯಿತ್ರಾ ಟೀಕಿಸಿದ್ದಾರೆ. ಸೆಬಿ ತನ್ನ ನೆಚ್ಚಿನ ಉದ್ಯಮಿ ಗೌತಮ್ ಅದಾನಿಗೆ ತನ್ನ ಕಾರ್ಯಗಳನ್ನು ಮುಚ್ಚಿಡಲು ಸಮಯ ನೀಡುವ ಮೂಲಕ ಅವರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಮೊಯಿತ್ರಾ ಆರೋಪಿಸಿದ್ದಾರೆ.

ಅದಾನಿ ಕಂಪನಿಯ ಲೋಪಗಳನ್ನು ಬಹಿರಂಗಪಡಿಸುವ ವಿಚಾರಕ್ಕೆ ಆರು ತಿಂಗಳ ವಿಸ್ತರಣೆಗಾಗಿ ಸೆಬಿಯು ಸುಪ್ರೀಂ ಬಳಿ ಕೇಳಿರುವುದಕ್ಕೆ ಇತರ ವಲಯಗಳಿಂದ ಟೀಕೆಗಳು ಬರುತ್ತಿವೆ. ನಿಗದಿತ ಕಾಲಮಿತಿಯೊಳಗೆ ತನಿಖೆ ಪೂರ್ಣಗೊಳಿಸಲು ಸೆಬಿ ಅಸಮರ್ಥರಾಗಿರುವುದನ್ನು ಹಲವರು ಪ್ರಶ್ನಿಸುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...