Homeಕರ್ನಾಟಕ'ನೂರು 'ಮನ್ ಕಿ ಬಾತ್' ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ 'ಜನ್ ಕಿ ಬಾತ್' ಕೇಳುತ್ತಿರಾ?': ಮೋದಿಗೆ...

‘ನೂರು ‘ಮನ್ ಕಿ ಬಾತ್’ ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ ‘ಜನ್ ಕಿ ಬಾತ್’ ಕೇಳುತ್ತಿರಾ?’: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ‘ಮನ್‌ ಕೀ ಬಾತ್‌‘ ರೆಡಿಯೊ ಕಾರ್ಯಕ್ರಮ ಇಂದು (ರವಿವಾರ) ನೂರು ಸಂಚಿಕೆ ಪೂರ್ಣಗೊಳಿಸಿದೆ. ಈ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು, ಮೋದಿ ಅವರಿಗೆ ಅಭಿನಂದನೆ ತಿಳಿಸಿ, ಈಗಲಾದರೂ ”ಜನ್‌ ಕಿ ಬಾತ್” ಕೇಳುತ್ತಿರಾ? ಎಂದು ಪ್ರಶ್ನೆ ಮಾಡಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಜನಸಾಮಾನ್ಯರ ಎದುರಿಸುತ್ತಿರುವ ಸಂಕಷ್ಟಗಳ ಕುರಿತು ಪ್ರಶ್ನೆ ಮಾಡಿದ್ದಾರೆ.

”ಮಾನ್ಯ ನರೇಂದ್ರ ಮೋದಿ ಅವರೇ ನೀವು ನೂರು ‘‘ಮನ್ ಕಿ ಬಾತ್” ಕಾರ್ಯಕ್ರಮವನ್ನು ಮುಗಿಸಿದ್ದಕ್ಕೆ ಅಭಿನಂದನೆಗಳು. ಈಗಲಾದರೂ ‘‘ಜನ್ ಕಿ ಬಾತ್” ಕೇಳುತ್ತಿರಾ?”

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ ಗೆ 125 ಡಾಲರ್ ಇದ್ದಾಗ ದೇಶದಲ್ಲಿ ಪೆಟ್ರೋಲ್ ಬೆಲೆ ರೂ. 57 ಇತ್ತು, ಈಗ ಕಚ್ಚಾ ತೈಲದ ಬೆಲೆ ಬ್ಯಾರಲ್ ಗೆ 54.77 ಡಾಲರ್ ಇರುವಾಗ ಪೆಟ್ರೋಲ್ ಬೆಲೆ ರೂ. 102 ರೂಪಾಯಿ ಆಗಿರುವುದು ಯಾಕೆ?

ನಾ ಖಾವುಂಗಾ ನಾ ಖಾನೆ ದೂಂಗಾ ಎಂದು ನೀವು ಹೇಳಿದರೂ, ನಿಮ್ಮ ಪಕ್ಷದ ಸಚಿವರೇ ಕಮಿಷನ್ ಹಣ ತಿಂದು ಜೈಲಿಗೆ ಹೋಗುತ್ತಿರುವುದೇಕೆ?

ರಾಜ್ಯದ ಸಚಿವರು ಸರ್ಕಾರಿ ಗುತ್ತಿಗೆಗಳಲ್ಲಿ 40% ಕಮಿಷನ್ ಕೇಳುತ್ತಿದ್ದಾರೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರೇ ನಿಮಗೆ ಪತ್ರ ಬರೆದಿದ್ದರೂ ಅದಕ್ಕೆ ಉತ್ತರಿಸುವ ಧೈರ್ಯ ತೋರಿಲ್ಲ ಯಾಕೆ?

ರಾಷ್ಟ್ರೀಕೃತ ಬ್ಯಾಂಕುಗಳು ಸೇರಿದಂತೆ ಒಂದು ಲಕ್ಷದ ವರೆಗಿನ ರೈತರ ಸಾಲವನ್ನು ಅಧಿಕಾರಕ್ಕೆ ಬಂದ ಮೊದಲ ಸಚಿವ ಸಂಪುಟದಲ್ಲಿಯೇ ಮನ್ನಾ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿದ್ದರೂ ಮನ್ನಾ ಮಾಡದೆ ಇರುವುದು ಯಾಕೆ?

ಇದನ್ನೂ ಓದಿ: ಮೋದಿ 100ನೇ ‘ಮನ್ ಕಿ ಬಾತ್‌’ಗೆ ಸಂಸದೆ ಮೊಯಿತ್ರಾಯಿಂದ ಎರಡು ಪ್ರಶ್ನೆ

ರೈತರ ಸಾಲ ಮನ್ನಾ ಮಾಡಲು ನಿರಾಕರಿಸುತ್ತಿರುವ ನಿಮ್ಮ ಸರ್ಕಾರ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿರುವುದೇಕೆ?

ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ತೆರಿಗೆ ಮತ್ತು ಸುಂಕಗಳ ರೂಪದಲ್ಲಿ 4 ಲಕ್ಷದ 75 ಸಾವಿರ ಕೋಟಿ ರೂಪಾಯಿ ನೀಡಿದರೂ ಕೇಂದ್ರ ಸರ್ಕಾರದ ತೆರಿಗೆ ಹಂಚಿಕೆ ರೂಪದಲ್ಲಿ ರೂ.50,257 ಕೋಟಿ ಮಾತ್ರ ಕರ್ನಾಟಕ ರಾಜ್ಯಕ್ಕೆ ನೀಡುತ್ತಿರುವುದು ಯಾಕೆ?

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಸಿಗಬೇಕಾಗಿರುವ ತೆರಿಗೆ ಹಂಚಿಕೆಯ ಪಾಲು ಶೇಕಡಾ 4.72ರಿಂದ ಶೇಕಡಾ 3.64ಕ್ಕೆ ಇಳಿದದ್ದು ಯಾಕೆ?

ಕೇಂದ್ರ ಹಣಕಾಸು ಆಯೋಗ ಕರ್ನಾಟಕಕ್ಕೆ ಪರಿಹಾರ ರೂಪದಲ್ಲಿ ರೂ.5,495 ಕೋಟಿ ವಿಶೇಷ ಅನುದಾನ ನೀಡಬೇಕೆಂದು ಶಿಫಾರಸು ಮಾಡಿದ್ದರೂ ಕೇಂದ್ರ ಹಣಕಾಸು ಸಚಿವರು ನಿರಾಕರಿಸಿದ್ದು ಯಾಕೆ? 2013ರಲ್ಲಿ ಕೇಂದ್ರ ಅನುದಾನಿತ ಯೋಜನೆಗಳಲ್ಲಿ ಶೇಕಡಾ 25ರಷ್ಟು ಮಾತ್ರ ಇದ್ದ ರಾಜ್ಯದ ಪಾಲು 2021-22ರಲ್ಲಿ ಶೇಕಡಾ 55ಕ್ಕೆ ಹೆಚ್ಚಿದ್ದು ಯಾಕೆ?

ಮಳೆ ಹಾನಿಗಾಗಿ ರಾಜ್ಯ ಸರ್ಕಾರ ರೂ.35,000 ಕೋಟಿ ಪರಿಹಾರ ಕೇಳಿದ್ದರೂ ಡಬಲ್ ಎಂಜಿನ್ ಸರ್ಕಾರ ಕೇವಲ ರೂ.1,895 ಕೋಟಿ ನೀಡಿದ್ದು ಯಾಕೆ?

ರೈತರ ಬೆಳೆಗಳ ಬೆಲೆ ಕುಸಿತ ತಡೆಯಲು ಬೆಂಬಲ ಬೆಲೆಯ ಮೂಲಕ ಮಾರುಕಟ್ಟೆ ಮಧ್ಯಪ್ರವೇಶಕ್ಕೆ ನೀಡಲಾಗುತ್ತಿದ್ದ ಅನುದಾನವನ್ನು ರೂ.1,500 ಕೋಟಿ ಗಳಿಂದ ಒಂದು ಲಕ್ಷ ರೂಪಾಯಿಗಳಿಗೆ ಇಳಿಸಿದ್ದು ಯಾಕೆ?

ಪಿಎಸ್ ಐ ನೇಮಕದಲ್ಲಿ ಅಂದಾಜು ರೂ.300 ಕೋಟಿಗೂ ಮೀರಿ ಲಂಚದ ಅವ್ಯವಹಾರ ನಡೆದು ಉದ್ಯೋಗದ ಅವಕಾಶ ಕಳೆದುಕೊಂಡಿರುವ ಸುಮಾರು 54 ಸಾವಿರ ಯುವಜನರ ಮನದ ಮಾತಿಗೆ ನೀವು ಪ್ರತಿಕ್ರಿಯಿಸದೆ ಮೌನವಾಗಿರುವುದು ಯಾಕೆ?

ಪ್ರಧಾನಿ ಅವರೇ ನೀವು ರೋಡ್ ಶೋ ನಡೆಸಿರುವ ಬೆಂಗಳೂರು ರಸ್ತೆಗಳಲ್ಲಿರುವ 25,000 ಗುಂಡಿಗಳನ್ನು ಮುಚ್ಚಲು ರೂ.7200 ಕೋಟಿ, ಅಂದರೆ ಒಂದು ಗುಂಡಿಗೆ ತಲಾ ರೂ.9.20 ಲಕ್ಷ ಖರ್ಚು ಮಾಡಿದರೂ ಗುಂಡಿಗಳು ಉಳಿದುಕೊಂಡಿರುವುದು ಯಾಕೆ?

ಗ್ರಾಮೀಣ ಭಾಗಗಳಲ್ಲಿ ಉದ್ಯೋಗ ಸಂಜೀವಿನಿಯಾಗಿರುವ ಯುಪಿಎ ಸರ್ಕಾರದ ಹೆಮ್ಮೆಯ ಕಾರ್ಯಕ್ರಮವಾಗಿರುವ ನರೇಗಾ ಯೋಜನೆಗೆ ಈ ಸಾಲಿನ ಬಜೆಟ್ ನಲ್ಲಿ ಶೇಕಡಾ 21.66ರಷ್ಟು ಅಂದರೆ ರೂ.60,000 ಕೋಟಿಯಷ್ಟು ಅನುದಾನವನ್ನು ಡಬಲ್ ಎಂಜಿನ್ ಸರ್ಕಾರ ಕಡಿತಗೊಳಿಸಿದ್ದು ಯಾಕೆ?

ನಮ್ಮ ಸರ್ಕಾರದ ಐದು ವರ್ಷಗಳ ಆಡಳಿತದಲ್ಲಿ ಮಾಡಿದ್ದ ಒಟ್ಟು ಸಾಲ ರೂ.1,16,512 ಕೋಟಿ, ಕಳೆದ ನಾಲ್ಕು ವರ್ಷಗಳಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಒಟ್ಟು ಸಾಲ ರೂ.3,22,000 ಕೋಟಿ. ಡಬಲ್ ಎಂಜಿನ್ ಸರ್ಕಾರ ಕರ್ನಾಟಕ ರಾಜ್ಯವನ್ನು ಸಾಲಗಾರ ರಾಜ್ಯ ಮಾಡಿದ್ದು ಯಾಕೆ? ಎಂದು #ಕರ್ನಾಟಕದ_ಜನ್‌ಕಿಬಾತ್ ಎಂದು ಹ್ಯಾಶ್‌ಟ್ಯಾಗ್ ಬಳಸಿ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ದಿಶಾ ಸಾಲ್ಯಾನ್ ಸಾವು ಪ್ರಕರಣ: ಸಿಬಿಐ ತನಿಖೆಗೆ ಬಾಂಬೆ ಹೈಕೋರ್ಟ್ ಆದೇಶ

ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ಆಗಿದ್ದ ದಿಶಾ ಸಾಲಿಯಾನ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಬುಧವಾರ (ಸೆಪ್ಟೆಂಬರ್ 2) ಸಿಬಿಐ ತನಿಖೆಗೆ ಆದೇಶಿಸಿದೆ. ಜೂನ್...

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...