HomeಮುಖಪುಟNCERT ಪುಸ್ತಕದಿಂದ 'ಡಾರ್ವಿನ್‌ನ ವಿಕಾಸದ ಸಿದ್ಧಾಂತ' ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

NCERT ಪುಸ್ತಕದಿಂದ ‘ಡಾರ್ವಿನ್‌ನ ವಿಕಾಸದ ಸಿದ್ಧಾಂತ’ ಕೈಬಿಡುವುದನ್ನು ಸಮರ್ಥಿಸಿಕೊಂಡ ಶಿಕ್ಷಣ ಸಚಿವ

- Advertisement -
- Advertisement -

ಎನ್‌ಸಿಇಆರ್‌ಟಿ ಪ್ರಕಟಿಸಿದ 10ನೇ ತರಗತಿಯ ಪಠ್ಯಪುಸ್ತಕದಿಂದ ‘ಚಾರ್ಲ್ಸ್ ಡಾರ್ವಿನ್ ಅವರ ವಿಕಾಸದ ಸಿದ್ಧಾಂತ’ವನ್ನು ತೆಗೆದುಹಾಕಿರುವುದನ್ನು ಪ್ರಚಾರಕ್ಕಾಗಿ ವಿವಾದ ಮಾಡಲಾಗುತ್ತಿದೆ ಎಂದು ಕೇಂದ್ರ ಶಿಕ್ಷಣ ರಾಜ್ಯ ಖಾತೆ ಸಚಿವ ಸುಭಾಸ್ ಸರ್ಕಾರ್ ಶನಿವಾರ ಹೇಳಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.

NCERT ಕಳೆದ ವರ್ಷ 10ನೇ ತರಗತಿಯ ವಿಜ್ಞಾನ ಪಠ್ಯಪುಸ್ತಕದಲ್ಲಿ “ಆನುವಂಶಿಕತೆ ಮತ್ತು ವಿಕಸನ” ಅಧ್ಯಾಯವನ್ನು “ಆನುವಂಶಿಕತೆ” ಎಂದು ಬದಲಾಯಿಸಲಾಗುವುದು ಎಂದು ಘೋಷಿಸಿತು.

ಏಪ್ರಿಲ್ 20ರಂದು, ದೇಶಾದ್ಯಂತ 1,800 ಕ್ಕೂ ಹೆಚ್ಚು ವಿಜ್ಞಾನಿಗಳು, ಶಿಕ್ಷಕರು ಹಾಗೂ ಶಿಕ್ಷಣತಜ್ಞರು ಆ ವಿಷಯವನ್ನು ತೆಗೆದುಹಾಕುವ ಬಗ್ಗೆ NCERT ಗೆ ಮುಕ್ತ ಪತ್ರವನ್ನು ಬರೆದಿದ್ದರು.

ವಿಕಸನದ ಸಿದ್ದಾಂತವು ವಿಜ್ಞಾನದ ಮೂಲಭೂತ ಆವಿಷ್ಕಾರಕ್ಕೆ ಒಡ್ಡಿಕೊಳ್ಳುವುದಾಗಿದೆ. ಅದನ್ನೇ ನೀವು ಕೈ ಬಿಟ್ಟರೆ ವಿದ್ಯಾರ್ಥಿಗಳು ತಮ್ಮ ಆಲೋಚನಾ ಪ್ರಕ್ರಿಯೆಗಳಲ್ಲಿ ”ಅಂಗವಿಕಲರಾಗಿ” ಉಳಿಯುತ್ತಾರೆ ಎಂದು ವೈಜ್ಞಾನಿಕ ಸಮುದಾಯವು ಭಾವಿಸುತ್ತದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ಕಂಗೆಡುತ್ತಿರುವ ಪ್ರಜಾಪ್ರಭುತ್ವ ಮತ್ತು ಬೆದರಿದ ರಾಜಕೀಯಕ್ಕೆ ಬಲಿಪಶುಗಳಾದ ಪಠ್ಯಪುಸ್ತಕಗಳು

”ವೈಜ್ಞಾನಿಕ ಮನೋಭಾವ ಮತ್ತು ತರ್ಕಬದ್ಧ ದೃಷ್ಟಿಕೋನ ನಿರ್ಮಿಸುವಲ್ಲಿ ವಿಕಾಸದ ಪ್ರಕ್ರಿಯೆಯ ತಿಳುವಳಿಕೆಯು ನಿರ್ಣಾಯಕವಾಗಿದೆ. ಡಾರ್ವಿನ್‌ನ ಶ್ರಮದಾಯಕ ಅವಲೋಕನಗಳು ಮತ್ತು ಅವನ ತೀಕ್ಷ್ಣವಾದ ಒಳನೋಟಗಳು ಅವನನ್ನು ನೈಸರ್ಗಿಕ ಆಯ್ಕೆಯ ಸಿದ್ಧಾಂತದ ಕಡೆಗೆ ಕರೆದೊಯ್ದವು, ವಿಜ್ಞಾನದ ಪ್ರಕ್ರಿಯೆ ಮತ್ತು ವಿಮರ್ಶಾತ್ಮಕ ಚಿಂತನೆಯ ಪ್ರಾಮುಖ್ಯತೆಯ ಬಗ್ಗೆ ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುತ್ತದೆ” ಎಂದು ಅವರು ಪತ್ರದಲ್ಲಿ ಹೇಳಿದ್ದಾರೆ.

ಕೋವಿಡ್ -19 ಸಾಂಕ್ರಾಮಿಕ ರೋಗದ ನಂತರ ವಿದ್ಯಾರ್ಥಿಗಳಿಗೆ ಪಠ್ಯಕ್ರಮವನ್ನು ಕಡಿಮೆ ಮಾಡಲು ಎನ್‌ಸಿಇಆರ್‌ಟಿಯ ಕೆಲವು ಭಾಗಗಳನ್ನು ಕೈಬಿಡಲಾಗಿದೆ ಎಂದು ಶನಿವಾರ ಸರ್ಕಾರ್ ಹೇಳಿದರು.

ಮಕ್ಕಳು ಅಧ್ಯಯನ ಮಾಡಲು ಬಯಸಿದರೆ, ಡಾರ್ವಿನ್ ಸಿದ್ಧಾಂತವು ಎಲ್ಲಾ ವೆಬ್‌ಸೈಟ್‌ಗಳಲ್ಲಿ ಲಭ್ಯವಿದೆ. 12ನೇ ತರಗತಿಯಲ್ಲಿ, ಪಠ್ಯಕ್ರಮದಲ್ಲಿ ಈಗಾಗಲೇ ಡಾರ್ವಿನ್ ಸಿದ್ಧಾಂತವಿದೆ, ಆದ್ದರಿಂದ ಅಂತಹ ಸುಳ್ಳು ಪ್ರಚಾರ ಮಾಡಬಾರದು ಎಂದು ಸರ್ಕಾರ್ ಹೇಳಿರುವುದಾಗಿ ANI ವರದಿ ಮಾಡಿದೆ.

2018ರಲ್ಲಿ, ಬಿಜೆಪಿ ನಾಯಕ ಮತ್ತು ಮಾಜಿ ಕೇಂದ್ರ ಸಚಿವ ಸತ್ಯಪಾಲ್ ಸಿಂಗ್ ಅವರು, ”ಡಾರ್ವಿನ್ ಅವರ ಮನುಷ್ಯನ ವಿಕಾಸದ ಸಿದ್ಧಾಂತವು ‘ವೈಜ್ಞಾನಿಕವಾಗಿ ತಪ್ಪು’ ಮತ್ತು ಅದನ್ನು ಬದಲಾಯಿಸಬೇಕು” ಎಂದು ಹೇಳಿದ್ದರು.

”ಮನುಷ್ಯನು ಭೂಮಿಯ ಮೇಲೆ ಕಾಣಿಸಿಕೊಂಡಾಗಿನಿಂದ ಅವನು ಯಾವಾಗಲೂ ಮನುಷ್ಯನಾಗಿದ್ದಾನೆ. ನಮ್ಮ ಪೂರ್ವಜರು ಸೇರಿದಂತೆ ಯಾರೂ ಲಿಖಿತ ಅಥವಾ ಮೌಖಿಕವಾಗಿ, ಮಂಗವು ಮನುಷ್ಯನಾಗುವುದನ್ನು ನೋಡಿದ್ದೇವೆ ಎಂದು ಹೇಳಿಲ್ಲ. ನಾವು ಓದಿದ ಯಾವುದೇ ಪುಸ್ತಕಗಳು ಅಥವಾ ನಮ್ಮ ಅಜ್ಜಿಯರು ನಮಗೆ ಹೇಳಿದ ಕಥೆಗಳು ಅಂತಹ ಉಲ್ಲೇಖವನ್ನು ಹೊಂದಿಲ್ಲ” ಎಂದು ಅವರು ಹೇಳಿದ್ದರು.”

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ – ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯ ಪ್ರಕರಣ: ಸ್ವಯಂ ಘೋಷಿತ ದೇವಮಾನವ ಅಸಾರಾಂ ಖುಲಾಸೆ

ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪು ಅವರನ್ನು ಭಾರತೀಯ ದಂಡ ಸಂಹಿತೆ, ಪೋಕ್ಸೋ ಕಾಯ್ದೆಯಡಿಯಲ್ಲಿ ಸಾಮೂಹಿಕ ಅತ್ಯಾಚಾರ ಮತ್ತು ಮಕ್ಕಳ ಮೇಲಿನ ಸಾಮೂಹಿಕ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದ ಆರೋಪಗಳಿಂದ ಖುಲಾಸೆಗೊಳಿಸಲಾಗಿದೆ. ಮೇ 27...

ಸಿದ್ದರಾಮಯ್ಯ ಅವರ ಮನವೊಲಿಸಿದ ಕಾಂಗ್ರೆಸ್‌ ಹೈಕಮಾಂಡ್; ಮುಖ್ಯಮಂತ್ರಿ ಸ್ಥಾನಕ್ಕೆ ನಾಳೆ ರಾಜೀನಾಮೆ?

ಕರ್ನಾಟಕದ ಮುಖ್ಯಮಂತ್ರಿ ಹುದ್ದೆಯ ಸುತ್ತಲಿನ ತೀವ್ರ ರಾಜಕೀಯ ನಾಟಕವು ಅಂತಿಮವಾಗಿ ನಿರ್ಣಾಯಕ ಹಂತ ತಲುಪಿದೆ. ನವದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್‌ನ ನಿರಂತರ ಒತ್ತಡ ಮತ್ತು ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲು...

“ಎಚ್.ಎಸ್. ದೊರೆಸ್ವಾಮಿ ಭೌತಿಕವಾಗಿ ಇಲ್ಲದಿದ್ದರೂ ನಮ್ಮನ್ನು ಸದಾ ಪ್ರೇರೇಪಿಸುತ್ತಾರೆ”: ತೀಸ್ತಾ ಸೆಟಲ್ವಾಡ್

ಬೆಂಗಳೂರು: "ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ದಿ. ಎಚ್.ಎಸ್. ದೊರೆಸ್ವಾಮಿ ಅವರು ದೈಹಿಕವಾಗಿ ನಮ್ಮೊಂದಿಗಿಲ್ಲದಿದ್ದರೂ, ಅವರ ಹೋರಾಟದ ಹಾದಿ ಮತ್ತು ಆದರ್ಶಗಳು ನಮ್ಮನ್ನು ಸದಾ ಪ್ರೇರೇಪಿಸುತ್ತಲೇ ಇರುತ್ತವೆ" ಎಂದು ಪ್ರಮುಖ ಮಾನವ ಹಕ್ಕುಗಳ ಹೋರಾಟಗಾರ್ತಿ...

ಕೇರಳ | ಆದಿವಾಸಿ ಯುವಕ ಮಧು ಗುಂಪು ಹತ್ಯೆ ಪ್ರಕರಣ : 12 ಮಂದಿ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಹೈಕೋರ್ಟ್

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಕೇರಳದ ಆದಿವಾಸಿ ಯುವಕ ಮಧು ಗುಂಪು ಹಲ್ಲೆ ಮತ್ತು ಹತ್ಯೆ ಪ್ರಕರಣದ 12 ಜನ ಅಪರಾಧಿಗಳಿಗೆ ಹೈಕೋರ್ಟ್ ಸೋಮವಾರ (ಮೇ.25) ಜೀವಾವಧಿ ಶಿಕ್ಷೆ ಮತ್ತು ತಲಾ 2...

“ನನ್ನ ಅನುಮತಿ ಇಲ್ಲದೆ ನನ್ನ ಮಗುವನ್ನು ಸುಡಲಾಗಿದೆ”: ಕೊಲೆಯಾದ ಕೊಯಮತ್ತೂರು ಬಾಲಕಿಯ ತಾಯಿ ಅಳಲು

ಕೊಯಮತ್ತೂರು ಬಳಿ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕೊಲೆಯಾದ 10 ವರ್ಷದ ಬಾಲಕಿಯ ತಾಯಿ, ತನ್ನ ಮಗಳ ಮೃತದೇಹದ ಅಂತ್ಯಸಂಸ್ಕಾರಕ್ಕೆ ತಾನು ಅನುಮತಿ ನೀಡಿರಲಿಲ್ಲ ಎಂದು ಹೇಳಿದ್ದಾರೆ. ಮಗುವಿನ ಮರಣೋತ್ತರ ಪರೀಕ್ಷೆಯ ನಂತರ, ತನ್ನ ಪತಿ...

ಅಷ್ಟೊಂದು ‘ಸೆಂಟಿಮೆಂಟ್’ ಬೇಡ: ‘ಕಾಕ್ರೋಚ್ ಅಭಿಯಾನ’ದ ವಿರುದ್ಧದ ಅರ್ಜಿಗೆ ಸಿಜೆಐ ಪ್ರತಿಕ್ರಿಯೆ

"ವ್ಯವಸ್ಥೆಯ ಮೇಲೆ ದಾಳಿ ಮಾಡುವವರ" ಕುರಿತು ತಾವು ನೀಡಿದ್ದ ಹೇಳಿಕೆಗೆ ವ್ಯಂಗ್ಯದ ರೂಪದಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ಸೃಷ್ಟಿಯಾಗಿರುವ ‘ಕಾಕ್ರೋಚ್ ಜನತಾ ಪಾರ್ಟಿ’  ವಿವಾದವನ್ನು ಅಷ್ಟೊಂದು "ಭಾವನಾತ್ಮಕವಾಗಿ ತೆಗೆದುಕೊಳ್ಳಬೇಡಿ" ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ...

ನಾಳೆ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ ‘ಕರ್ನಾಟಕದ ಗೌರವಾರ್ಪಣೆ’

ಸ್ವಾತಂತ್ರ್ಯ ಸೇನಾನಿ ದಿ. ಎಚ್.ಎಸ್ ದೊರೆಸ್ವಾಮಿ ಅವರಿಗೆ 'ಕರ್ನಾಟಕದ ಗೌರವಾರ್ಪಣೆ' ಕಾರ್ಯಕ್ರಮವನ್ನು ನಾಳೆ, ಅಂದರೆ 2026 ಮೇ 26 ರಂದು ಬೆಳಿಗ್ಗೆ 10.30ಕ್ಕೆ ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಎಚ್.ಎಸ್‌ ದೊರೆಸ್ವಾಮಿ ಸ್ಮಾರಕ ಪ್ರತಿಷ್ಠಾನ,...

FACT CHECK : ಕಾಕ್ರೋಚ್ ಜನತಾ ಪಾರ್ಟಿಯ ಹೆಚ್ಚಿನ ಫಾಲೋವರ್ಸ್ ಪಾಕಿಸ್ತಾನದವರಾ?

ಇತ್ತೀಚೆಗೆ ಹುಟ್ಟಿಕೊಂಡ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಇನ್‌ಸ್ಟಾಗ್ರಾಮ್ ಪೇಜ್ ಕಾಂಗ್ರೆಸ್‌ನ 13 ಮಿಲಿಯನ್ ಮತ್ತು ಬಿಜೆಪಿಯ 9 ಮಿಲಿಯನ್ ಫಾಲೋವರ್ಸ್‌ಗಳ ಗಡಿಯನ್ನು ದಾಟಿದ್ದು, ಬರೋಬ್ಬರಿ 23 ಮಿಲಿಯನ್ (ಮೇ 24ರಂತೆ) ಫಾಲೋವರ್ಸ್‌...

ಬಾಂಗ್ಲಾ ಗಡಿಯಾಚೆಗೆ ತಳ್ಳಿದವರ ವಾಪಸಾತಿ: ಭಾರತೀಯರನ್ನೇ ಗಡಿಪಾರು ಮಾಡುತ್ತಿರುವ ಕೇಂದ್ರ?

ದಾಖಲೆರಹಿತ ವಲಸಿಗರೆಂದು ಆರೋಪಿಸಿ ಅಧಿಕಾರಿಗಳು ಬಾಂಗ್ಲಾದೇಶದ ಗಡಿಯಾಚೆಗೆ 'ತಳ್ಳಿದ್ದ' ಪಶ್ಚಿಮ ಬಂಗಾಳದ ನಿವಾಸಿಗಳನ್ನು ವಾಪಸ್ ಕರೆ ತರುವುದಾಗಿ ಕೇಂದ್ರ ಸರ್ಕಾರ ಶುಕ್ರವಾರ (ಮೇ 22,2026) ಸುಪ್ರೀಂ ಕೋರ್ಟ್‌ಗೆ ವಾಗ್ದಾನ ಮಾಡಿದೆ ಎಂದು ವರದಿಯಾಗಿದೆ....

SIR ಜಾರಿಯಾದ್ರೆ ಗ್ಯಾರಂಟಿಯನ್ನು ಕಳೆದುಕೊಳ್ತೀರಿ!

"ಬಡವರ ಮತಗಳನ್ನು ಪಟ್ಟಿಯಿಂದ ತೆಗೆಯಲು ಎಸ್‌ಐಆರ್ (SIR) ಮೂಲಕ ದೊಡ್ಡ ಸಂಚು ರೂಪಿಸಲಾಗಿದೆ. ನಾವೆಲ್ಲರೂ ಬಹಳ ಎಚ್ಚರಿಕೆಯಿಂದ ಇರಬೇಕು, ಇಲ್ಲದಿದ್ದರೆ ಮತ ಹಕ್ಕಿನ ಜೊತೆಗೆ ಶಕ್ತಿ, ಗೃಹಲಕ್ಷ್ಮಿಯಂತಹ ಗ್ಯಾರೆಂಟಿ ಯೋಜನೆಯನ್ನು ಕಳೆದುಕೊಳ್ಳಬೇಕಾಗುತ್ತದೆ" ಎಂದು...