Homeಕರ್ನಾಟಕನಮ್ಮ 'ನಾಥ ಪರಂಪರೆ' ನಕಲಿ ಎನ್‌ಕೌಂಟರ್‌ ಮಾಡುವಂಥದ್ದಲ್ಲ: ಆದಿತ್ಯ'ನಾಥ್' ಗುರಿಯಾಗಿಸಿ ಎಚ್‌ಡಿಕೆ ವಾಗ್ದಾಳಿ

ನಮ್ಮ ‘ನಾಥ ಪರಂಪರೆ’ ನಕಲಿ ಎನ್‌ಕೌಂಟರ್‌ ಮಾಡುವಂಥದ್ದಲ್ಲ: ಆದಿತ್ಯ’ನಾಥ್’ ಗುರಿಯಾಗಿಸಿ ಎಚ್‌ಡಿಕೆ ವಾಗ್ದಾಳಿ

- Advertisement -
- Advertisement -

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ನಾಥ ಪರಂಪರೆಗೆ ಸೇರಿದವರೆಂದು ಅವರನ್ನು ತೋರಿಸಿ ಒಕ್ಕಲಿಗರ ಮತ ಸೆಳೆಯಲು ಬಿಜೆಪಿ ಯತ್ನಿಸುತ್ತಿದೆ. ಆದರೆ, ಕರ್ನಾಟಕದ ನಾಥ ಪರಂಪರೆಗೂ, ಉತ್ತರಪ್ರದೇಶದ ನಾಥ ಪರಂಪರೆಗೂ ವ್ಯತ್ಯಾಸವಿದೆ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಭಾನುವಾರ ಸುದ್ದಿಗಾರರೋಂದಿಗೆ ಮಾತನಾಡಿದ ಅವರು, ”ನಮ್ಮ ನಾಥ ಪರಂಪರೆ ಬುಲ್ಡೋಜರ್‌ (ನಾಶ) ಮಾಡುವಂಥದ್ದಲ್ಲ, ನಕಲಿ ಎನ್‌ಕೌಂಟರ್‌ ಮಾಡುವಂಥದ್ದಲ್ಲ” ಎಂದು ಆದಿತ್ಯನಾಥ್‌ ಅವರನ್ನು ಗುರಿಯಾಗಿಸಿಕೊಂಡು ಹೇಳಿದರು.

”ಕರ್ನಾಟಕದಲ್ಲಿ ನಾಥ ಪರಂಪರೆಯ ರಾಜಕೀಯ ಆದಿಚುಂಚನಗಿರಿ ಮಠಕ್ಕೆ ಮಾತ್ರ ಸೀಮಿತವಾದುದು. ಜನರು ಉತ್ತರ ಪ್ರದೇಶದ ನಾಥ ಪರಂಪರೆ ನೋಡಿಕೊಂಡು ಮತ ಹಾಕುವುದಿಲ್ಲ. ಇಲ್ಲಿ ನಮ್ಮ ಸ್ವಾಮೀಜಿಗಳು ನಾಥಪರಂಪರೆಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಿಕೊಂಡು ಬರುತ್ತಿದ್ದಾರೆ. ಉತ್ತರಪ್ರದೇಶದ ನಾಥ ಪರಂಪರೆ ನಮಗೆ ಬೇಕಾಗಿಲ್ಲ” ಎಂದರು.

”ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಬಿಜೆಪಿಯ ರಾಷ್ಟ್ರೀಯ ನಾಯಕರು ಹಾಗೂ ಕಾಂಗ್ರೆಸ್‌ ರಾಷ್ಟ್ರೀಯ ಮುಖಂಡರು ರಾಜ್ಯದಲ್ಲಿ ಠಿಕಾಣಿ ಹೂಡಿದ್ದಾರೆ. ಆರೋಪ–ಪ್ರತ್ಯಾರೋಪದಲ್ಲಿ ತೊಡಗಿದ್ದಾರೆ. ಯಾರೂ ಕರ್ನಾಟಕದ ಸಮಸ್ಯೆಗಳ ಬಗ್ಗೆ ಮಾತನಾಡುತ್ತಿಲ್ಲ. ಕನ್ನಡ ಭಾಷೆ, ಬೆಳಗಾವಿ ಗಡಿ ಸಮಸ್ಯೆ ಬಗ್ಗೆ ಚಕಾರ ಎತ್ತುತ್ತಿಲ್ಲ” ಎಂದು ಕಿಡಿಕಾರಿದರು.

”ಚುನಾವಣೆ ವೇಳೆ ಇ.ಡಿ, ಐ.ಟಿಯನ್ನು ಜಾಗೃತಗೊಳಿಸಿದ್ದಾರೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಹೇಳಿರುವುದು ನಿಜ. ಬಿಜೆಪಿಯಲ್ಲಿ ಇ.ಡಿ ಮೋರ್ಚಾ, ಐ.ಟಿ ಮೋರ್ಚಾ ಎಂಬ ವಿಭಾಗಗಳಿವೆ. ಈ ಮೋರ್ಚಾಗಳನ್ನು ಚುನಾವಣೆ ಸಂದರ್ಭದಲ್ಲಿ ಹೊರಗೆ ಬಿಡುತ್ತಿದ್ದಾರೆ” ಎಂದು ದೂರಿದರು.

”ಈ ಹಿಂದಿನ ಅವಧಿಯಲ್ಲಿ ಕುಮಾರಸ್ವಾಮಿಗೆ ಬೆಂಬಲ ನೀಡಿದ್ದೆವು, ಮುಖ್ಯಮಂತ್ರಿ ಮಾಡಿದ್ದೆವು ಎಂದೆಲ್ಲಾ ಕಾಂಗ್ರೆಸ್‌ ಮುಖಂಡರು ಹೇಳುತ್ತಿದ್ದಾರೆ. ಹಾಗಾದರೆ 17 ಶಾಸಕರು ಹೊರಗೆ ಹೋಗಿದ್ದು ಏಕೆ? ಎಂದು ತಾವು ಉತ್ತರ ನೀಡಬೇಕು. ರೈತರ ಸಾಲ ಮನ್ನಾ ಮಾಡಿದ್ದೇ ತಪ್ಪಾ? ಕಾಂಗ್ರೆಸ್‌ ಶಾಸಕರಿಗೆ 19 ಸಾವಿರ ಕೋಟಿ ರೂ. ಅನುದಾನ ಕೊಟ್ಟಿದ್ದೆ. ಕಾಂಗ್ರೆಸ್‌ನ ಎಲ್ಲಾ ಕಾರ್ಯಕ್ರಮಗಳನ್ನೂ ಮುಂದುವರಿಸಿದ್ದೆ. ಸಿದ್ದರಾಮಯ್ಯ ಕೊಟ್ಟ ಭಾಗ್ಯಗಳಿಂದ ಜನರು ಸಂಪತ್ಭರಿತರಾಗಿದ್ದಾರಾ?” ಎಂದು ಕಾಂಗ್ರೆಸ್ ಪಕ್ಷದ ನಾಯಕರಿಗೆ ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....