Homeಮುಖಪುಟಆರೋಪಿ ಬ್ರಿಜ್‌ಭೂಷಣ್‌ಗೆ ಮಾಧ್ಯಮಗಳು ಸಹಕರಿಸುತ್ತಿವೆ: ಪ್ರತಿಭಟನಾನಿರತ ಕುಸ್ತಿಪಟುಗಳ ಆರೋಪ

ಆರೋಪಿ ಬ್ರಿಜ್‌ಭೂಷಣ್‌ಗೆ ಮಾಧ್ಯಮಗಳು ಸಹಕರಿಸುತ್ತಿವೆ: ಪ್ರತಿಭಟನಾನಿರತ ಕುಸ್ತಿಪಟುಗಳ ಆರೋಪ

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ ವಿರುದ್ಧ ದೇಶದ ಅಗ್ರ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಮುಖ್ಯಸ್ಥ, ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ಮಾಧ್ಯಮಗಳು ಸಹಾಯ ಮಾಡುತ್ತಿವೆ; ನಮಗಿಂತ ಹೆಚ್ಚಾಗಿ ಆತನಿಗೆ ಸಹಕರಿಸುತ್ತಿವೆ ಎಂದು ಪ್ರತಿಭಟನಾನಿರತ ಕುಸ್ತಿಪಟುಗಳು ಭಾನುವಾರ ಆರೋಪಿಸಿದ್ದಾರೆ. “ಆರೋಪಿ ಬ್ರಿಜ್‌ ಭೂಷಣ್‌ ಮಾತನಾಡಲು ವೇದಿಕೆ ಕಲ್ಪಿಸಬಾರದು” ಎಂದು ಅವರು ಮನವಿ ಮಾಡಿದ್ದಾರೆ.

ಲೈಂಗಿಕ ಕಿರುಕುಳದ ಆರೋಪವನ್ನು ಬ್ರಿಜ್ ಭೂಷಣ್ ಮೇಲೆ ಮಹಿಳಾ ಕುಸ್ತಿಪಟುಗಳು ಮಾಡಿದ್ದಾರೆ. “ಈ ಆರೋಪಗಳ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದೇನೆ, ಕ್ರೀಡಾಪಟುಗಳ ಪ್ರತಿಭಟನೆಯು ರಾಜಕೀಯ ಪ್ರೇರಿತವಾಗಿದೆ” ಎಂದು ಬ್ರಿಜ್ ಭೂಷಣ್‌ ಹೇಳಿಕೆ ನೀಡಿದ್ದಾರೆ.

ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ 12 ವರ್ಷ ಪೂರೈಸಿರುವ, ಮತ್ತೆ ಪದಾಧಿಕಾರಿಯಾಗಲು ಅನರ್ಹರಾಗಿರುವ ಬಿಜೆಪಿ ಸಂಸದನ ವಿರುದ್ಧ ದೆಹಲಿ ಪೊಲೀಸರು ಪೋಕ್ಸೊ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎರಡು ಪ್ರಕರಣ ದಾಖಲಿಸಿದ್ದಾರೆ.

“ಮಾಧ್ಯಮವು ಆಟಗಾರರಿಗಿಂತ ಹೆಚ್ಚಾಗಿ ಬ್ರಿಜ್ ಭೂಷಣ್ ಅವರನ್ನು ಬೆಂಬಲಿಸುತ್ತಿದೆ. ನೀವು ಅವರ ಕ್ರಿಮಿನಲ್ ದಾಖಲೆಗಳನ್ನು ನೋಡುತ್ತೀರಿ. ಇಲ್ಲಿ ಕುಳಿತಿರುವ ಯಾವುದೇ ಆಟಗಾರ ಅಥವಾ ಇತರ ಕ್ರೀಡೆಗಳ ಆಟಗಾರರು ಕ್ರಿಮಿನಲ್ ದಾಖಲೆಯನ್ನು ಹೊಂದಿದ್ದಾರೆಯೇ?” ಎಂದು ಮಾಧ್ಯಮ ಸಂವಾದದ ವೇಳೆ ಕುಸ್ತಿಪಟು ಬಜರಂಗ್ ಪುನಿಯಾ ಪ್ರಶ್ನಿಸಿದ್ದಾರೆ.

ಟೋಕಿಯೊ ಕ್ರೀಡಾಕೂಟದ ಕಂಚಿನ ಪದಕ ವಿಜೇತರಾದ ಅವರು, “ಈ ದೇಶದಲ್ಲಿ ಸಂಸದರಾಗುವುದಕ್ಕಿಂತ ಒಲಿಂಪಿಕ್ ಪದಕವನ್ನು ಗೆಲ್ಲುವುದು ಹೆಚ್ಚು ಕಷ್ಟ” ಎಂಬ ಸಂದೇಶವನ್ನು ರವಾನಿಸಲು ಪ್ರಯತ್ನಿಸಿದ್ದಾರೆ.

“ಆಟಗಾರರು ದೇಶಕ್ಕಾಗಿ ಪದಕಗಳನ್ನು ಗೆಲ್ಲುತ್ತಾರೆ, ಆದರೆ ಇವರು (ಬ್ರಿಜ್ ಭೂಷಣ್) ಪದಕ ವಿಜೇತರನ್ನು ಪ್ರಶ್ನಿಸುತ್ತಿದ್ದಾರೆ. ಈ ದೇಶದಲ್ಲಿ ಎಷ್ಟು ಜನರು ಸಂಸದರಾಗುತ್ತಾರೆ ಮತ್ತು ಎಷ್ಟು ಜನರು ಒಲಿಂಪಿಕ್ ಪದಕಗಳನ್ನು ಗೆದ್ದಿದ್ದಾರೆ? ಇಲ್ಲಿಯವರೆಗೆ, ಒಲಿಂಪಿಕ್ ಪದಕ ವಿಜೇತರು ಅಷ್ಟೇನೂ ಇಲ್ಲ, ಆದರೆ ಸಾವಿರಾರು ಜನರು ಸಂಸದರಾಗಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ಕುಸ್ತಿಪಟುಗಳು ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಬ್ರಿಜ್ ಭೂಷಣ್ ಆರೋಪ ನಿರಾಧಾರ ಎಂದು ಡಬಲ್ ವರ್ಲ್ಡ್ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ತಿಳಿಸಿದ್ದಾರೆ.

“ನಾವು ಯಾವುದೇ ರಾಜಕೀಯದಲ್ಲಿ ತೊಡಗಿಸಿಕೊಂಡಿಲ್ಲ, ನಾವು ಹೃದಯದಿಂದ ನೇರವಾಗಿ ಮಾತನಾಡುತ್ತೇವೆ ಮತ್ತು ಅದು ಬೆಸೆಯುತ್ತಿದೆ, ಅದಕ್ಕಾಗಿಯೇ ಇಲ್ಲಿ ಅನೇಕ ಜನರು ನಮ್ಮ ಬೆಂಬಲಕ್ಕೆ ಕುಳಿತಿದ್ದಾರೆ. ಬ್ರಿಜ್ ಭೂಷಣ್ ಮಾತನಾಡಲು ವೇದಿಕೆಯನ್ನು ನೀಡಬೇಡಿ” ಎಂದು ಅವರು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

“ಅಂತಹ ಕ್ರಿಮಿನಲ್‌ಗೆ ನೀವು ವೇದಿಕೆಯನ್ನು ಹೇಗೆ ನೀಡುತ್ತೀರಿ ಎಂದು ನಾನು ಪ್ರಶ್ನಿಸುತ್ತೇನೆ. ನೀವೇ ಕೇಳಿಕೊಳ್ಳಿ. ನೀವು ಅದನ್ನು ಮಾಡದಿದ್ದರೆ ಅರ್ಧದಷ್ಟು ಸಮಸ್ಯೆಗಳು ಪರಿಹಾರವಾಗುತ್ತವೆ. ಆ ವ್ಯಕ್ತಿ ಇನ್ನೂ ನಗು ಮುಖದಿಂದ ಹೇಳುತ್ತಿದ್ದಾನೆ. ಅವನ ಅಹಂಕಾರವು ದೊಡ್ಡದಾಗಿದೆ. ರಾವಣನಿಗಿಂತ ಬ್ರಿಜ್‌ ಭೂಷಣ್ ಅಹಂಕಾರ ದೊಡ್ಡದಾಗಿದೆ” ಎಂದು ಟೀಕಿಸಿದ್ದಾರೆ.

“ಸುಪ್ರೀಂ ಕೋರ್ಟ್ ಆದೇಶದ ಮೂಲಕ ಅವರು ಕಳಂಕ ರಹಿತರಾಗಿ ಹೊರಬಂದರೆ, ನೀವು ಅವರಿಗೆ ಹಾರ ಹಾಕಬಹುದು. ಆದರೆ ಈಗಲೂ ಹಾರ ಹಾಕುತ್ತಿದ್ದಾರೆ, ಅವರು ಏನು ಮಾಡಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

“ನಾವು ಪದಕಗಳನ್ನು ಗೆದ್ದಾಗ, ನಮಗೆ ಹಾರ ಹಾಕಲಾಗುತ್ತದೆ. ಅವರು ಮಹಿಳಾ ಕ್ರೀಡಾಪಟುಗಳನ್ನು ಶೋಷಿಸಿದ್ದಾರೆ, ಆದರೆ ಅವರನ್ನು ಸನ್ಮಾನಿಸಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪ್ರತಿಭಟನೆ ಪರ ನಿಲ್ಲದಿದ್ದರೂ ಪರವಾಗಿಲ್ಲ ದುರ್ಬಲಗೊಳಿಸದಿರು: ಬಬಿತಾ ಫೋಗಟ್‌ಗೆ ವಿನೇಶ್ ಫೋಗಟ್ ತಾಕೀತು

“ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಅನ್ನು ವಶಪಡಿಸಿಕೊಳ್ಳಲು ಬಯಸುತ್ತಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಯ ಹಿಂದೆ ಒಂದೇ ಕುಟುಂಬ (ಫೋಗಟ್ಸ್) ಇದೆ” ಎಂದು ಬ್ರಿಜ್ ಭೂಷಣ್ ದೂರಿದ್ದಾರೆ.

ಒಲಂಪಿಕ್‌ ಪದಕ ವಿಜೇತ ಕುಸ್ತಿಪಟು ಭಜರಂಗ್ ಪೂನಿಯಾ ಇದಕ್ಕೆ ಪ್ರತಿಕ್ರಿಯಿಸಿ, “ನೀವು ಡಬ್ಲ್ಯುಎಫ್‌ಐನಲ್ಲಿ ಇರಬೇಕಾದರೆ, ನೀವು ರಾಜ್ಯ ಅಸೋಸಿಯೇಷನ್‌ನ ಸದಸ್ಯರಾಗಿರಬೇಕು. ನಮಗೆ ಡಬ್ಲ್ಯುಎಫ್‌ಐ ನಿಯಂತ್ರಣ ಬೇಡ. ಅವರ ಮಗ ಯುಪಿ ಅಸೋಸಿಯೇಷನ್‌ನ ಅಧ್ಯಕ್ಷರಾಗಿದ್ದಾರೆ. ಅವರ ಅಳಿಯ ಕೂಡ ರಾಜ್ಯ ಸಂಘದ ಸದಸ್ಯರಾಗಿದ್ದಾರೆ. ಅವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಅಧಿಕಾರಿಗಳು ಸಹಕಾರ ನೀಡುತ್ತಿಲ್ಲ ಎಂದು ಕುಸ್ತಿಪಟುಗಳು ದೂರಿದ್ದು, ರಾತ್ರಿ ವೇಳೆ ವಿದ್ಯುತ್, ನೀರು ಪೂರೈಕೆ ಸ್ಥಗಿತಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...