Homeಮುಖಪುಟಆರೋಪಿ ಬ್ರಿಜ್‌ಭೂಷಣ್‌ಗೆ ಮಾಧ್ಯಮಗಳು ಸಹಕರಿಸುತ್ತಿವೆ: ಪ್ರತಿಭಟನಾನಿರತ ಕುಸ್ತಿಪಟುಗಳ ಆರೋಪ

ಆರೋಪಿ ಬ್ರಿಜ್‌ಭೂಷಣ್‌ಗೆ ಮಾಧ್ಯಮಗಳು ಸಹಕರಿಸುತ್ತಿವೆ: ಪ್ರತಿಭಟನಾನಿರತ ಕುಸ್ತಿಪಟುಗಳ ಆರೋಪ

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ ವಿರುದ್ಧ ದೇಶದ ಅಗ್ರ ಕುಸ್ತಿಪಟುಗಳು ಪ್ರತಿಭಟನೆ ನಡೆಸುತ್ತಿದ್ದಾರೆ

- Advertisement -
- Advertisement -

ಭಾರತೀಯ ಕುಸ್ತಿ ಫೆಡರೇಷನ್‌ (ಡಬ್ಲ್ಯುಎಫ್‌ಐ) ಮುಖ್ಯಸ್ಥ, ಲೈಂಗಿಕ ಕಿರುಕುಳದ ಆರೋಪಿ, ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್‌ಗೆ ಮಾಧ್ಯಮಗಳು ಸಹಾಯ ಮಾಡುತ್ತಿವೆ; ನಮಗಿಂತ ಹೆಚ್ಚಾಗಿ ಆತನಿಗೆ ಸಹಕರಿಸುತ್ತಿವೆ ಎಂದು ಪ್ರತಿಭಟನಾನಿರತ ಕುಸ್ತಿಪಟುಗಳು ಭಾನುವಾರ ಆರೋಪಿಸಿದ್ದಾರೆ. “ಆರೋಪಿ ಬ್ರಿಜ್‌ ಭೂಷಣ್‌ ಮಾತನಾಡಲು ವೇದಿಕೆ ಕಲ್ಪಿಸಬಾರದು” ಎಂದು ಅವರು ಮನವಿ ಮಾಡಿದ್ದಾರೆ.

ಲೈಂಗಿಕ ಕಿರುಕುಳದ ಆರೋಪವನ್ನು ಬ್ರಿಜ್ ಭೂಷಣ್ ಮೇಲೆ ಮಹಿಳಾ ಕುಸ್ತಿಪಟುಗಳು ಮಾಡಿದ್ದಾರೆ. “ಈ ಆರೋಪಗಳ ವಿರುದ್ಧ ಹೋರಾಡಲು ಪ್ರತಿಜ್ಞೆ ಮಾಡಿದ್ದೇನೆ, ಕ್ರೀಡಾಪಟುಗಳ ಪ್ರತಿಭಟನೆಯು ರಾಜಕೀಯ ಪ್ರೇರಿತವಾಗಿದೆ” ಎಂದು ಬ್ರಿಜ್ ಭೂಷಣ್‌ ಹೇಳಿಕೆ ನೀಡಿದ್ದಾರೆ.

ಡಬ್ಲ್ಯುಎಫ್‌ಐ ಅಧ್ಯಕ್ಷರಾಗಿ 12 ವರ್ಷ ಪೂರೈಸಿರುವ, ಮತ್ತೆ ಪದಾಧಿಕಾರಿಯಾಗಲು ಅನರ್ಹರಾಗಿರುವ ಬಿಜೆಪಿ ಸಂಸದನ ವಿರುದ್ಧ ದೆಹಲಿ ಪೊಲೀಸರು ಪೋಕ್ಸೊ ಕಾಯ್ದೆ ಮತ್ತು ಐಪಿಸಿ ಸೆಕ್ಷನ್‌ಗಳ ಅಡಿಯಲ್ಲಿ ಎರಡು ಪ್ರಕರಣ ದಾಖಲಿಸಿದ್ದಾರೆ.

“ಮಾಧ್ಯಮವು ಆಟಗಾರರಿಗಿಂತ ಹೆಚ್ಚಾಗಿ ಬ್ರಿಜ್ ಭೂಷಣ್ ಅವರನ್ನು ಬೆಂಬಲಿಸುತ್ತಿದೆ. ನೀವು ಅವರ ಕ್ರಿಮಿನಲ್ ದಾಖಲೆಗಳನ್ನು ನೋಡುತ್ತೀರಿ. ಇಲ್ಲಿ ಕುಳಿತಿರುವ ಯಾವುದೇ ಆಟಗಾರ ಅಥವಾ ಇತರ ಕ್ರೀಡೆಗಳ ಆಟಗಾರರು ಕ್ರಿಮಿನಲ್ ದಾಖಲೆಯನ್ನು ಹೊಂದಿದ್ದಾರೆಯೇ?” ಎಂದು ಮಾಧ್ಯಮ ಸಂವಾದದ ವೇಳೆ ಕುಸ್ತಿಪಟು ಬಜರಂಗ್ ಪುನಿಯಾ ಪ್ರಶ್ನಿಸಿದ್ದಾರೆ.

ಟೋಕಿಯೊ ಕ್ರೀಡಾಕೂಟದ ಕಂಚಿನ ಪದಕ ವಿಜೇತರಾದ ಅವರು, “ಈ ದೇಶದಲ್ಲಿ ಸಂಸದರಾಗುವುದಕ್ಕಿಂತ ಒಲಿಂಪಿಕ್ ಪದಕವನ್ನು ಗೆಲ್ಲುವುದು ಹೆಚ್ಚು ಕಷ್ಟ” ಎಂಬ ಸಂದೇಶವನ್ನು ರವಾನಿಸಲು ಪ್ರಯತ್ನಿಸಿದ್ದಾರೆ.

“ಆಟಗಾರರು ದೇಶಕ್ಕಾಗಿ ಪದಕಗಳನ್ನು ಗೆಲ್ಲುತ್ತಾರೆ, ಆದರೆ ಇವರು (ಬ್ರಿಜ್ ಭೂಷಣ್) ಪದಕ ವಿಜೇತರನ್ನು ಪ್ರಶ್ನಿಸುತ್ತಿದ್ದಾರೆ. ಈ ದೇಶದಲ್ಲಿ ಎಷ್ಟು ಜನರು ಸಂಸದರಾಗುತ್ತಾರೆ ಮತ್ತು ಎಷ್ಟು ಜನರು ಒಲಿಂಪಿಕ್ ಪದಕಗಳನ್ನು ಗೆದ್ದಿದ್ದಾರೆ? ಇಲ್ಲಿಯವರೆಗೆ, ಒಲಿಂಪಿಕ್ ಪದಕ ವಿಜೇತರು ಅಷ್ಟೇನೂ ಇಲ್ಲ, ಆದರೆ ಸಾವಿರಾರು ಜನರು ಸಂಸದರಾಗಿದ್ದಾರೆ” ಎಂದು ತಿರುಗೇಟು ನೀಡಿದ್ದಾರೆ.

ಕುಸ್ತಿಪಟುಗಳು ರಾಜಕೀಯದಲ್ಲಿ ತೊಡಗಿಸಿಕೊಂಡಿದ್ದಾರೆ ಎಂಬ ಬ್ರಿಜ್ ಭೂಷಣ್ ಆರೋಪ ನಿರಾಧಾರ ಎಂದು ಡಬಲ್ ವರ್ಲ್ಡ್ ಚಾಂಪಿಯನ್‌ಶಿಪ್ ಪದಕ ವಿಜೇತ ವಿನೇಶ್ ಫೋಗಟ್ ತಿಳಿಸಿದ್ದಾರೆ.

“ನಾವು ಯಾವುದೇ ರಾಜಕೀಯದಲ್ಲಿ ತೊಡಗಿಸಿಕೊಂಡಿಲ್ಲ, ನಾವು ಹೃದಯದಿಂದ ನೇರವಾಗಿ ಮಾತನಾಡುತ್ತೇವೆ ಮತ್ತು ಅದು ಬೆಸೆಯುತ್ತಿದೆ, ಅದಕ್ಕಾಗಿಯೇ ಇಲ್ಲಿ ಅನೇಕ ಜನರು ನಮ್ಮ ಬೆಂಬಲಕ್ಕೆ ಕುಳಿತಿದ್ದಾರೆ. ಬ್ರಿಜ್ ಭೂಷಣ್ ಮಾತನಾಡಲು ವೇದಿಕೆಯನ್ನು ನೀಡಬೇಡಿ” ಎಂದು ಅವರು ಮಾಧ್ಯಮಗಳಿಗೆ ಮನವಿ ಮಾಡಿದ್ದಾರೆ.

“ಅಂತಹ ಕ್ರಿಮಿನಲ್‌ಗೆ ನೀವು ವೇದಿಕೆಯನ್ನು ಹೇಗೆ ನೀಡುತ್ತೀರಿ ಎಂದು ನಾನು ಪ್ರಶ್ನಿಸುತ್ತೇನೆ. ನೀವೇ ಕೇಳಿಕೊಳ್ಳಿ. ನೀವು ಅದನ್ನು ಮಾಡದಿದ್ದರೆ ಅರ್ಧದಷ್ಟು ಸಮಸ್ಯೆಗಳು ಪರಿಹಾರವಾಗುತ್ತವೆ. ಆ ವ್ಯಕ್ತಿ ಇನ್ನೂ ನಗು ಮುಖದಿಂದ ಹೇಳುತ್ತಿದ್ದಾನೆ. ಅವನ ಅಹಂಕಾರವು ದೊಡ್ಡದಾಗಿದೆ. ರಾವಣನಿಗಿಂತ ಬ್ರಿಜ್‌ ಭೂಷಣ್ ಅಹಂಕಾರ ದೊಡ್ಡದಾಗಿದೆ” ಎಂದು ಟೀಕಿಸಿದ್ದಾರೆ.

“ಸುಪ್ರೀಂ ಕೋರ್ಟ್ ಆದೇಶದ ಮೂಲಕ ಅವರು ಕಳಂಕ ರಹಿತರಾಗಿ ಹೊರಬಂದರೆ, ನೀವು ಅವರಿಗೆ ಹಾರ ಹಾಕಬಹುದು. ಆದರೆ ಈಗಲೂ ಹಾರ ಹಾಕುತ್ತಿದ್ದಾರೆ, ಅವರು ಏನು ಮಾಡಿದ್ದಾರೆ?” ಎಂದು ಪ್ರಶ್ನಿಸಿದ್ದಾರೆ.

“ನಾವು ಪದಕಗಳನ್ನು ಗೆದ್ದಾಗ, ನಮಗೆ ಹಾರ ಹಾಕಲಾಗುತ್ತದೆ. ಅವರು ಮಹಿಳಾ ಕ್ರೀಡಾಪಟುಗಳನ್ನು ಶೋಷಿಸಿದ್ದಾರೆ, ಆದರೆ ಅವರನ್ನು ಸನ್ಮಾನಿಸಲಾಗುತ್ತಿದೆ” ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿರಿ: ಪ್ರತಿಭಟನೆ ಪರ ನಿಲ್ಲದಿದ್ದರೂ ಪರವಾಗಿಲ್ಲ ದುರ್ಬಲಗೊಳಿಸದಿರು: ಬಬಿತಾ ಫೋಗಟ್‌ಗೆ ವಿನೇಶ್ ಫೋಗಟ್ ತಾಕೀತು

“ಕುಸ್ತಿಪಟುಗಳು ಡಬ್ಲ್ಯುಎಫ್‌ಐ ಅನ್ನು ವಶಪಡಿಸಿಕೊಳ್ಳಲು ಬಯಸುತ್ತಿದ್ದಾರೆ. ಹೀಗಾಗಿ ಪ್ರತಿಭಟನೆ ನಡೆಯುತ್ತಿದೆ. ಈ ಪ್ರತಿಭಟನೆಯ ಹಿಂದೆ ಒಂದೇ ಕುಟುಂಬ (ಫೋಗಟ್ಸ್) ಇದೆ” ಎಂದು ಬ್ರಿಜ್ ಭೂಷಣ್ ದೂರಿದ್ದಾರೆ.

ಒಲಂಪಿಕ್‌ ಪದಕ ವಿಜೇತ ಕುಸ್ತಿಪಟು ಭಜರಂಗ್ ಪೂನಿಯಾ ಇದಕ್ಕೆ ಪ್ರತಿಕ್ರಿಯಿಸಿ, “ನೀವು ಡಬ್ಲ್ಯುಎಫ್‌ಐನಲ್ಲಿ ಇರಬೇಕಾದರೆ, ನೀವು ರಾಜ್ಯ ಅಸೋಸಿಯೇಷನ್‌ನ ಸದಸ್ಯರಾಗಿರಬೇಕು. ನಮಗೆ ಡಬ್ಲ್ಯುಎಫ್‌ಐ ನಿಯಂತ್ರಣ ಬೇಡ. ಅವರ ಮಗ ಯುಪಿ ಅಸೋಸಿಯೇಷನ್‌ನ ಅಧ್ಯಕ್ಷರಾಗಿದ್ದಾರೆ. ಅವರ ಅಳಿಯ ಕೂಡ ರಾಜ್ಯ ಸಂಘದ ಸದಸ್ಯರಾಗಿದ್ದಾರೆ. ಅವರು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ” ಎಂದು ತೀಕ್ಷ್ಣವಾಗಿ ಹೇಳಿದ್ದಾರೆ.

ಅಧಿಕಾರಿಗಳು ಸಹಕಾರ ನೀಡುತ್ತಿಲ್ಲ ಎಂದು ಕುಸ್ತಿಪಟುಗಳು ದೂರಿದ್ದು, ರಾತ್ರಿ ವೇಳೆ ವಿದ್ಯುತ್, ನೀರು ಪೂರೈಕೆ ಸ್ಥಗಿತಗೊಳಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...