Homeಮುಖಪುಟಧರ್ಮ ಪ್ರಚಾರ ಮಾಡುವ ಹಕ್ಕನ್ನು ಮಿಷನರಿಗಳು ಹೊಂದಿವೆ: ಸುಪ್ರೀಂಗೆ ತಮಿಳುನಾಡು ಸರ್ಕಾರ ಅಫಿಡವಿಟ್

ಧರ್ಮ ಪ್ರಚಾರ ಮಾಡುವ ಹಕ್ಕನ್ನು ಮಿಷನರಿಗಳು ಹೊಂದಿವೆ: ಸುಪ್ರೀಂಗೆ ತಮಿಳುನಾಡು ಸರ್ಕಾರ ಅಫಿಡವಿಟ್

- Advertisement -
- Advertisement -

ಮಿಷನರಿಗಳು ತಮ್ಮ ಚಟುವಟಿಕೆಗಳನ್ನು ನಡೆಸಲು ಕಾನೂನುಬಾಹಿರ ವಿಧಾನಗಳನ್ನು ಬಳಸದ ಹೊರತು ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುವ ಕಾನೂನುಬದ್ಧ ಹಕ್ಕನ್ನು ಅವುಗಳು ಹೊಂದಿರುತ್ತವೆ ಎಂದು ತಮಿಳುನಾಡು ಸರ್ಕಾರವು ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.

ಈ ಕುರಿತು ‘ಹಿಂದೂಸ್ತಾನ್ ಟೈಮ್ಸ್’ ವರದಿ ಮಾಡಿದ್ದು, “ಭಾರತದ ಸಂವಿಧಾನದ 25 ನೇ ವಿಧಿಯು ಪ್ರತಿಯೊಬ್ಬ ಪ್ರಜೆಗೂ ತನ್ನ ಧರ್ಮವನ್ನು ಪ್ರಚಾರ ಮಾಡುವ ಹಕ್ಕನ್ನು ಖಾತರಿಪಡಿಸುತ್ತದೆ” ಎಂದು ರಾಜ್ಯ ಸರ್ಕಾರ ಸಲ್ಲಿಸಿದ ಅಫಿಡವಿಟ್ ಹೇಳಿದೆ. “ಆದ್ದರಿಂದ, ಕ್ರಿಶ್ಚಿಯನ್ ಧರ್ಮವನ್ನು ಪ್ರಚಾರ ಮಾಡುವ ಮಿಷನರಿಗಳ ಕೆಲಸಗಳನ್ನು ಕಾನೂನಿಗೆ ವಿರುದ್ಧವಾಗಿ ನೋಡಲಾಗುವುದಿಲ್ಲ” ಎಂದು ಅಭಿಪ್ರಾಯಪಟ್ಟಿದೆ.

ಬಲವಂತದ ಮತಾಂತರದ ಆರೋಪದ ಪ್ರಕರಣಗಳ ಬಗ್ಗೆ ಕೇಂದ್ರೀಯ ತನಿಖಾ ದಳದಿಂದ ತನಿಖೆ ನಡೆಸಬೇಕೆಂದು ಭಾರತೀಯ ಜನತಾ ಪಕ್ಷದ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸಿದ ಮನವಿಗೆ ಪ್ರತಿಕ್ರಿಯೆಯಾಗಿ ಆಡಳಿತಾರೂಢ ಡಿಎಂಕೆ ಸರ್ಕಾರವು ಅಫಿಡವಿಟ್ ಸಲ್ಲಿಸಿದೆ.

ಮತಾಂತರ ವಿರೋಧಿ ಕಾನೂನಿನ ಕರಡನ್ನು ತಯಾರಿಸಲು ಭಾರತದ ಕಾನೂನು ಆಯೋಗಕ್ಕೆ ನಿರ್ದೇಶನವನ್ನು ನೀಡಬೇಕೆಂದು ಉಪಾಧ್ಯಾಯ ಅವರು ಕೋರಿದ್ದಾರೆ.

ತನ್ನ ಅಫಿಡವಿಟ್‌ನಲ್ಲಿ ತಮಿಳುನಾಡು ಸರ್ಕಾರವು, “ಅಲ್ಪಸಂಖ್ಯಾತರ ವಿರುದ್ಧ ಮತಾಂತರ ವಿರೋಧಿ ಕಾನೂನುಗಳನ್ನು ದುರುಪಯೋಗಪಡಿಸಿಕೊಳ್ಳುವ ಸಾಧ್ಯತೆಯಿದೆ” ಎಂದು ಆತಂಕ ವ್ಯಕ್ತಪಡಿಸಿದೆ. “ವ್ಯಕ್ತಿಗಳು ತಮ್ಮ ಧರ್ಮವನ್ನು ಮುಕ್ತವಾಗಿ ಆಯ್ಕೆ ಮಾಡಲು ಅವಕಾಶ ನೀಡಬೇಕು” ಎಂದು ಸರ್ಕಾರ ತಿಳಿಸಿರುವುದಾಗಿ ‘ಹಿಂದೂಸ್ತಾನ್ ಟೈಮ್ಸ್’ ವರದಿ ಹೇಳಿದೆ.

ಕಳೆದ ಕೆಲವು ವರ್ಷಗಳಲ್ಲಿ ರಾಜ್ಯದಲ್ಲಿ ಯಾವುದೇ ಬಲವಂತದ ಮತಾಂತರದ ಘಟನೆ ವರದಿಯಾಗಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿದೆ.

“ದೇಶದ ನಾಗರಿಕರಿಗೆ ಅವರ ಧರ್ಮವನ್ನು ಆಯ್ಕೆ ಮಾಡಲು ಮುಕ್ತವಾಗಿ ಅವಕಾಶ ನೀಡಬೇಕು ಮತ್ತು ಅವರ ವೈಯಕ್ತಿಕ ನಂಬಿಕೆ, ಗೌಪ್ಯತೆ ವಿಚಾರವಾಗಿ ಸರ್ಕಾರವು ಮಾತನಾಡುವುದು ಸೂಕ್ತವಲ್ಲ” ಎಂದು ಡಿಎಂಕೆ ಸರ್ಕಾರ ಅಭಿಪ್ರಾಯಪಟ್ಟಿದೆ.

ಯಾವುದೇ ವ್ಯಕ್ತಿಗೆ ಇತರರನ್ನು ತಮ್ಮ ಧರ್ಮಕ್ಕೆ ಮತಾಂತರಿಸುವ ಮೂಲಭೂತ ಹಕ್ಕನ್ನು ನೀಡಲಾಗಿಲ್ಲ ಎಂದೂ ಸರ್ಕಾರ ಹೇಳಿದೆ. ಆದರೆ ಇದು ಯಾವುದೇ ವ್ಯಕ್ತಿಗೆ ತನ್ನ ಧರ್ಮವನ್ನು ಪ್ರಚಾರ ಮಾಡುವ ಹಕ್ಕನ್ನು ನೀಡುತ್ತದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ. “ಅಂತೆಯೇ, ಸಂವಿಧಾನವು ಯಾವುದೇ ವ್ಯಕ್ತಿಯು ತನ್ನ ಆಯ್ಕೆಯ ಧರ್ಮಕ್ಕೆ ಮತಾಂತರಗೊಳ್ಳುವುದನ್ನು ತಡೆಯುವುದಿಲ್ಲ” ಎಂದಿದೆ.

ಕಳೆದ ಜನವರಿಯಲ್ಲಿ ಸುಪ್ರೀಂ ಕೋರ್ಟ್ ಉಪಾಧ್ಯಾಯ ಅವರಿಗೆ ಎಚ್ಚರಿಕೆ ನೀಡಿತ್ತು. ‘ಬಲವಂತದ ಧಾರ್ಮಿಕ ಮತಾಂತರ’ ಆರೋಪಿಸಿ ಉನ್ನತ ನ್ಯಾಯಾಲಯ ಮತ್ತು ದೆಹಲಿ ಹೈಕೋರ್ಟ್‌ನ ವಿವಿಧ ಪೀಠಗಳ ಮುಂದೆ ಅನೇಕ ಅರ್ಜಿಗಳನ್ನು ಸಲ್ಲಿಸಿರುವುದರ ವಿರುದ್ಧ ಈ ಎಚ್ಚರಿಕೆ ಇತ್ತು.

“ನೀವು ಹೊಸ ಅರ್ಜಿಗಳನ್ನು ಹಿಂಪಡೆಯಲು ಮತ್ತು ಸಲ್ಲಿಸುವುದನ್ನು ಮುಂದುವರಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಅವರಿಗೆ ಸ್ಪಷ್ಟವಾಗಿ ನಿರ್ದೇಶನ ನೀಡಿದೆ.

ಇದನ್ನೂ ಓದಿರಿ: ‘ಆಂದೋಲನ’ ಪತ್ರಿಕೆ ವಿರುದ್ಧ ಪ್ರತಾಪ್ ಸಿಂಹ ಆರೋಪ; ಕ್ಷಮೆಯಾಚಿಸಲು ಪತ್ರಕರ್ತರ ಸಂಘ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...