Homeಕರ್ನಾಟಕನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ: ಬಿಜೆಪಿ ಹೈಕಮಾಂಡ್‌ಗೆ ಶೆಟ್ಟರ್ ಟಕ್ಕರ್

ನನ್ನನ್ನು ಸೋಲಿಸಲು ಇದು ಗುಜರಾತ್ ಅಲ್ಲ: ಬಿಜೆಪಿ ಹೈಕಮಾಂಡ್‌ಗೆ ಶೆಟ್ಟರ್ ಟಕ್ಕರ್

- Advertisement -
- Advertisement -

ಬಿಜೆಪಿ ತೊರೆದು ಕಾಂಗ್ರೆಸ್ ಸೇರಿರುವ ಲಿಂಗಾಯತ ಸಮುದಾಯದ ಪ್ರಬಲ ನಾಯಕ ಜಗದೀಶ್ ಶೆಟ್ಟರ್ ಅವರು ಈ ಬಾರಿ ಹುಬ್ಬಳ್ಳಿ–ಧಾರವಾಡ ಸೆಂಟ್ರಲ್‌ ಕ್ಷೇತ್ರದಲ್ಲೇ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡುತ್ತಿದ್ದು, ಅವರನ್ನು ಸೋಲಿಸುವುದಾಗಿ ಬಿಜೆಪಿ ನಾಯಕರು ಹೇಳುತ್ತಿದ್ದಾರೆ. ಇದಕ್ಕೆ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದ್ದಾರೆ.

ಈ ಬಗ್ಗೆ ಸೋಮವಾರ ಕೊಪ್ಪಳ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ರಾಘವೇಂದ್ರ ಹಿಟ್ನಾಳ ಪರ ಪ್ರಚಾರ ಮಾಡಲು ತೆರಳಿದ್ದಾಗ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ”ಅಮಿತ್‌ ಶಾ ಸೇರಿದಂತೆ ಅನೇಕ ನಾಯಕರು ನನ್ನನ್ನು ಸೋಲಿಸುತ್ತೇವೆ ಎಂದು ಹೇಳುತ್ತಿದ್ದಾರೆ. ಆದರೆ, ಇದು ಗುಜರಾತ್‌ ಅಲ್ಲ. ಇಲ್ಲಿಯ ರಾಜಕಾರಣ ಹಾಗೂ ಜನರ ಪ್ರೀತಿ ಎಂಥದ್ದು ಎಂಬುದು ನನಗೆ ಗೊತ್ತಿದೆ. ಹೆಚ್ಚು ಮತಗಳ ಅಂತರದಲ್ಲಿ ಗೆದ್ದು ಬರುತ್ತೇನೆ ಎಂದು ಬಿಜೆಪಿಯ ಹೈಕಮಾಂಡ್ ನಾಯಕರಿಗೆ ಶೆಟ್ಟರ್ ಖಡಕ್ ಉತ್ತರ ನೀಡಿದ್ದಾರೆ.

”ನನಗೆ ಕರ್ನಾಟಕದ ರಾಜಕಾರಣ, ಇಲ್ಲಿನ ಬಿಜೆಪಿ ಮತ್ತು ಹುಬ್ಬಳ್ಳಿ ಜನರ ಪ್ರೀತಿಯ ಬಗ್ಗೆ ಚೆನ್ನಾಗಿ ಗೊತ್ತಿದೆ. ಮತದಾರರ ಹೃದಯದಲ್ಲಿ ಭದ್ರವಾಗಿದ್ದೇನೆ. ಹಿಂದಿನ ಯಾವ ಚುನಾವಣೆಗಳಲ್ಲಿಯೂ ಸೋತಿಲ್ಲ. ಎಲ್ಲ ಮತದಾರರ ಜೊತೆ ಉತ್ತಮ ಬಾಂಧವ್ಯ ಹೊಂದಿದ್ದೇನೆ” ಎಂದು ತಮ್ಮ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದರು.

”ಈಗಾಗಲೇ ನಾನು ಮುಖ್ಯಮಂತ್ರಿಯಾಗಿದ್ದೇನೆ ಮತ್ತೆ ಮುಖ್ಯಮಂತ್ರಿಯಾಗುವ ಆಸೆ ಇಲ್ಲ. ಶಾಸಕನಾಗಿ ಕ್ಷೇತ್ರದ ಅಭಿವೃದ್ಧಿ ಕೆಲಸಗಳನ್ನು ಮಾಡಿಕೊಂಡು ಹೋಗುವೆ. ಬಿಜೆಪಿಯವರು ಗೌರವಯುತವಾಗಿ ನಡೆಸಿಕೊಂಡಿದ್ದರೆ ನಾನು ಪಕ್ಷ ಬಿಡುವ ಪ್ರಶ್ನೆಯೇ ಉದ್ಭವಿಸುತ್ತಿರಲಿಲ್ಲ. ಬಿಜೆಪಿಯಲ್ಲಿದ್ದಾಗ ಆ ಪಕ್ಷವನ್ನು ಕಟ್ಟಿ ಬೆಳೆಸಲು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಆದರೆ ಬಿಜೆಪಿಯಲ್ಲಿ ಹಿರಿಯ ಲಿಂಗಾಯತ ನಾಯಕರು ಯಾರೂ ಇರಬಾರದು ಎನ್ನುವ ಕಾರಣಕ್ಕೆ ಬಿಜೆಪಿ ನನಗೆ ಟಿಕೆಟ್‌ ನೀಡಿಲ್ಲ” ಎಂದು ಬಿಜಿಪಿಯಿಂದ ತಮಗಾದ ನೋವು ಹೊರಹಾಕಿದರು.

ಇದನ್ನೂ ಓದಿ: ಬಿಜೆಪಿಯಲ್ಲಿಯೇ ಗುಲಾಮರಾಗಿ ಇರಬೇಕಿತ್ತಾ?: ಶೆಟ್ಟರ್‌ ವಾಗ್ದಾಳಿ

”ಈಗ ಕಾಂಗ್ರೆಸ್‌ ಪಕ್ಷವನ್ನು ಎತ್ತರಕ್ಕೆ ತೆಗೆದುಕೊಂಡು ಹೋಗುವೆ. ನಾನು ಯಾವ ಪಕ್ಷದಲ್ಲಿ ಇರುತ್ತೇನೋ ಆ ಪಕ್ಷಕ್ಕೆ ಬದ್ಧತೆಯಿಂದ ನಡೆದುಕೊಳ್ಳುವೆ” ಎಂದರು.

ಇದೇ ವೇಳೆ ಬಿಜೆಪಿ ಪ್ರಣಾಳಿಕೆ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ”ಕಾಂಗ್ರೆಸ್‌ ಈಗಾಗಲೇ ಘೋಷಣೆ ಮಾಡಿರುವ ಗ್ಯಾರಂಟಿಗಳ ಮುಂದೆ ಬಿಜೆಪಿಯದ್ದು ಏನೂ ಅಲ್ಲ. ಅವುಗಳಲ್ಲಿ ವಿಶೇಷವೇನೂ ಅಲ್ಲ. ಜನರಿಗೆ ಅನುಕೂಲವಾಗುವ ಹೆಚ್ಚು ಸೌಲಭ್ಯಗಳನ್ನು ಕಾಂಗ್ರೆಸ್‌ ಈಗಾಗಲೇ ಘೋಷಣೆ ಮಾಡಿದೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....