Homeಕರ್ನಾಟಕಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ರಾಜ್ಯದಲ್ಲಿ ಯುಪಿ ಮಾದರಿ ಎನ್‌ಕೌಂಟರ್ ನಿಶ್ಚಿತ: ಯತ್ನಾಳ್ ವಿವಾದಾತ್ಮಕ ಹೇಳಿಕೆ

ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ರಾಜ್ಯದಲ್ಲಿ ಯುಪಿ ಮಾದರಿ ಎನ್‌ಕೌಂಟರ್ ನಿಶ್ಚಿತ: ಯತ್ನಾಳ್ ವಿವಾದಾತ್ಮಕ ಹೇಳಿಕೆ

- Advertisement -
- Advertisement -

ಹಿಂದುತ್ವ ವಿಚಾರವಾಗಿ ಆಗಾಗ ವಿವಾದಾತ್ಮಕ ಹೇಳಿಕೆ ಮೂಲಕ ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಇದೀಗ ‘ಕರ್ನಾಟಕದಲ್ಲಿ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮಾದರಿಯನ್ನು ಜಾರಿ ಮಾಡುತ್ತೇವೆ. ಯಾರಾದರೂ ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ ಅವರನ್ನು ಎನ್‌ಕೌಂಟರ್ ಮಾಡುತ್ತೇವೆ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಧಾರವಾಡ ಜಿಲ್ಲೆಯ ಕುಂದಗೋಳ ಕ್ಷೇತ್ರದ ಹಿರೇಹರಕುಣಿ ಗ್ರಾಮದಲ್ಲಿ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಮಾತನಾಡಿದ ಅವರು, ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಯೋಗಿ ಮಾದರಿಯ ಆಡಳಿತ ಜಾರಿಗೆ ಬರುತ್ತದೆ ಎಂದು ಹೇಳಿದ್ದಾರೆ. ಮುಂದುವರೆದು, ”ಹಿಂದೂ ಮತ್ತು ದೇಶದ ವಿರುದ್ಧ ಯಾರಾದರು ಮಾತಾಡಿದರೆ ಶೂಟ್ ಮಾಡುವುದು ಖಚಿತ, ಯಾರಾದರೂ ಹಿಂದೂ ಧರ್ಮದ ಬಗ್ಗೆ ಮಾತನಾಡಿದರೆ​ ಎನ್​ಕೌಂಟರ್ ನಿಶ್ಚಿತ, ರಸ್ತೆ ಮಧ್ಯೆಯೇ ನಿಲ್ಲಿಸಿ ಗುಂಡು ಹಾರಿಸಲಾಗುತ್ತದೆ ಎಂದು ವಿವಾದ ಎಬ್ಬಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಅಣ್ಣತಮ್ಮಂದಿರ (ಮುಸ್ಲಿಂ ಮಾಫಿಯಾ) ಎನ್​ಕೌಂಟರ್ ಆಯ್ತು. ಹೀಗಾಗಿ ಕೆಲವರು ಜೈಲಿನಿಂದ ಹೊರಬರಲು ಹೆದರುತ್ತಿದ್ದಾರೆ ಎಂದು ಗ್ಯಾಂಗ್‌ಸ್ಟರ್‌, ಮಾಜಿ ಸಂಸದ ಅತೀಕ್‌ ಅಹ್ಮದ್‌ ಹಾಗೂ ಆತನ ಸಹೋದರ ಅಶ್ರಫ್‌ ಅಹ್ಮದ್‌ ಪೊಲೀಸರ ಬಿಗಿ ಭದ್ರತೆಯಲ್ಲಿ ದುಷ್ಕರ್ಮಿಗಳು ಗುಂಡುಹಾರಿಸಿ ಕೊಂದ ಘಟನೆಯನ್ನು ನೆನಪಿಸಿದ್ದಾರೆ.

ಇದನ್ನೂ ಓದಿ: ‘ಸೋನಿಯಾ ಗಾಂಧಿ ವಿಷಕನ್ಯೆ, ರಾಹುಲ್ ಒಬ್ಬ ಹುಚ್ಚ’ ಎಂದು ನಾಲಿಗೆ ಹರಿಬಿಟ್ಟ ಯತ್ನಾಳ್: ಕಾಂಗ್ರೆಸ್ ಖಂಡನೆ

ಉತ್ತರ ಪ್ರದೇಶದಲ್ಲಿ ವಾಹನಗಳು ಪಲ್ಟಿಯಾಗುತ್ತಲೇ ಇರುತ್ತದೆ. ಹಾದಿಬೀದಿಯಲ್ಲಿ ರೌಡಿಗಳ ಹೆಣಗಳು ಉರುಳುತ್ತಲೇ ಇರುತ್ತದೆ ಎಂದು ಹೇಳುವ ಮೂಲಕ ಸರ್ಕಾರವೇ ಆ ಅಪಘಾತಗಳನ್ನು ಮಾಡಿಸುತ್ತದೆ ಎನ್ನುವ ಅನುಮಾನ ಹುಟ್ಟುಹಾಕಿದ್ದಾರೆ. ಕರ್ನಾಟಕದಲ್ಲಿ ಯಾರಾದರು ಹಾರಾಡಿದರೆ ಎನ್​ಕೌಂಟರ್ ಖಚಿತ ಎಂದಿದ್ದಾರೆ.

”ಟಿಪ್ಪು ಸುಲ್ತಾನ ಹರಾಂ ಕೋರ್”: ಯತ್ನಾಳ್ ಹೇಳಿಕೆ

ಟಿಪ್ಪು ಸುಲ್ತಾನ್ ಲಕ್ಷಾಂತರ ಹಿಂದೂಗಳನ್ನು ಕೊಂದಿದ್ದಾನೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಸರ್ಕಾರ ಬಂದರೆ ಟಿಪ್ಪು ಫೋಟೋ ತೆಗೆದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಡಾ. ಬಾಬಾ ಸಾಹೇಬ್ ಅಂಬೇಡ್ಕರ್​ ಫೋಟೋ ಹಾಕುತ್ತೇವೆ ಎಂದು ಹೇಳಿದ್ದಾರೆ.

ಈ ವೇಳೆ ಕಾಂಗ್ರೆಸ್ ವಿರುದ್ಧವೂ ವಾಗ್ದಾಳಿ ನಡೆಸಿದ್ದು, ”ಮೂರು ಬಿಟ್ಟವರು ಕಾಂಗ್ರೆಸ್​ ಪಕ್ಷದಲ್ಲಿ ಇದ್ದಾರೆ. ಇವತ್ತು ಪ್ರಧಾನಿ ಮೋದಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಮಗ ಮಾತನಾಡಿದ್ದಾನೆ. ಎಲ್ಲ ಬಿಟ್ಟು ನಿಂತ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಕಾಂಗ್ರೆಸ್​ನಲ್ಲಿದ್ದಾರೆ. ದೇಶದ ಜನರ ಆಶೀರ್ವಾದದಿಂದ ಮೋದಿ ಪ್ರಧಾನಿಯಾಗಿದ್ದಾರೆ. ಇಂತಹ ಮೋದಿ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ, ಈ ಬಗ್ಗೆ ಯೋಚನೆ ಮಾಡಿ” ಎಂದು ಕಿಡಿಕಾರಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Mooru bittu commission hodedu jailinalli irabekadavaru eega BJP yolage serikondiddare,addarinda mooru bittavaru bere pakshadalli siguvudilla.

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....