Homeಮುಖಪುಟಮನ್ ಕಿ ಬಾತ್ ಕಾರ್ಯಕ್ರಮಕ್ಕೆ 830 ಕೋಟಿ ರೂ. ಖರ್ಚು ಮಾಡಿದೆ ಎಂದು ಟ್ವೀಟ್ ಮಾಡಿದ...

ಮನ್ ಕಿ ಬಾತ್ ಕಾರ್ಯಕ್ರಮಕ್ಕೆ 830 ಕೋಟಿ ರೂ. ಖರ್ಚು ಮಾಡಿದೆ ಎಂದು ಟ್ವೀಟ್ ಮಾಡಿದ ಎಎಪಿ ನಾಯಕನ ವಿರುದ್ಧ FIR

- Advertisement -
- Advertisement -

‘ಮನ್ ಕಿ ಬಾತ್’ ರೇಡಿಯೋ ಕಾರ್ಯಕ್ರಮಕ್ಕೆ ಕೇಂದ್ರ ಸರ್ಕಾರ 830 ಕೋಟಿ ರೂಪಾಯಿ ಖರ್ಚು ಮಾಡಿದೆ ಎಂದು ಆಮ್ ಆದ್ಮಿ ಪಕ್ಷದ ಗುಜರಾತ್ ಮುಖ್ಯಸ್ಥ ಇಸುದನ್ ಗಧ್ವಿ ಅವರು ಟ್ವೀಟ್ ಮಾಡಿದ್ದಕ್ಕೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಸೋಮವಾರ ಪಿಟಿಐ ವರದಿ ಮಾಡಿದೆ.

2014ಅಕ್ಟೋಬರ್ 3ರಂದು ಪ್ರಧಾನಿ ಮೋದಿ ಅವರು ಈ ಮನ್ ಕಿ ಬಾತ್ ರೇಡಿಯೋ ಕಾರ್ಯಕ್ರಮ ಆರಂಭಿಸಿದ್ದರು.ಇದು ಪ್ರತಿ ತಿಂಗಳ ಕೊನೆಯ ಭಾನುವಾರದಂದು ಆಕಾಶವಾಣಿಯಲ್ಲಿ ಪ್ರಸಾರವಾಗುತ್ತದೆ. ಏಪ್ರಿಲ್ 30ರಂದು 100ನೇ ಸಂಚಿಕೆ ಪ್ರಸಾರವಾಗಿತ್ತು.

”ಮನ್ ಕಿ ಬಾತ್‌ನ ಒಂದು ಸಂಚಿಕೆಗೆ 8.3 ಕೋಟಿ ರೂಪಾಯಿ ವೆಚ್ಚವಾಗಿದೆ. ಅಂದರೆ ಕೇಂದ್ರವು ಇದುವರೆಗೆ 100 ಸಂಚಿಕೆಗಳಿಗೆ 830 ಕೋಟಿ ರೂ. ಖರ್ಚು ಮಾಡಿದೆ” ಎಂದು ಇಸುದನ್ ಗಧ್ವಿ ಟ್ವೀಟ್‌ನಲ್ಲಿ ಹೇಳಿಕೊಂಡಿದ್ದರು, ಆದರೆ ಆನಂತರ ಅದನ್ನು ಈಗ ಅಳಿಸಲಾಗಿದೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ.

ಈ ಬಗ್ಗೆ ಪ್ರೆಸ್ ಬ್ಯೂರೋ ಆಫ್ ಇನ್ಫಾರ್ಮೇಶನ್‌ನ ಸತ್ಯ-ಪರಿಶೀಲನಾ ಘಟಕವು, ಗಧ್ವಿ ಅವರು ಟ್ವೀಟ್‌ನ ಮಾಹಿತಿಯು ತಪ್ಪುದಾರಿಗೆಳೆಯುವಂತಿದೆ ಎಂದು ಆರೋಪ ಮಾಡಿದೆ.

ಇದನ್ನೂ ಓದಿ: ‘ನೂರು ‘ಮನ್ ಕಿ ಬಾತ್’ ಮುಗಿಸಿದ್ದಕ್ಕೆ ಅಭಿನಂದನೆಗಳು, ಈಗಲಾದರೂ ‘ಜನ್ ಕಿ ಬಾತ್’ ಕೇಳುತ್ತಿರಾ?’: ಮೋದಿಗೆ ಸಿದ್ದರಾಮಯ್ಯ ಪ್ರಶ್ನೆ

”8.3 ಕೋಟಿ ರೂ.ಗಳು ಇಲ್ಲಿಯವರೆಗಿನ ಮನ್ ಕಿ ಬಾತ್‌ ಕಾರ್ಯಕ್ರಮದ ಒಟ್ಟು ಜಾಹೀರಾತುಗಳಿಂದ ಬಂದಿರುವ ಹಣವಾಗಿದೆ. ಅದು ಒಂದು ಸಂಚಿಕೆಯ ಹಣ ಅಲ್ಲ. ಗಧ್ವಿ ಅವರ ಟ್ವೀಟ್‌ನ ಮಾಹಿತಿ ಸುಳ್ಳು ಎಂದು ಎಂದು ಬ್ಯೂರೋ ಭಾನುವಾರ ಟ್ವೀಟ್ ಮಾಡಿದೆ.

ಅಹಮದಾಬಾದ್ ಸೈಬರ್ ಕ್ರೈಂ ಬ್ರಾಂಚ್ ಗಧ್ವಿಯ ವಿರುದ್ಧ ಏಪ್ರಿಲ್ 29ರಂದು ಪ್ರಕರಣ ದಾಖಲಿಸಿಕೊಂಡಿದ್ದು, ಸೆಕ್ಷನ್ 153 (ಗಲಭೆ ಉಂಟುಮಾಡುವ ಉದ್ದೇಶದಿಂದ ಪ್ರಚೋದನೆಯನ್ನು ನೀಡುವುದು), 500 (ಮಾನನಷ್ಟ), 505(1)(ಬಿ) ಮತ್ತು (ಸಿ) (ವದಂತಿಯನ್ನು ಪ್ರಕಟಿಸುವುದು ಅಥವಾ ಸಾರ್ವಜನಿಕರಿಗೆ ಭಯ ಅಥವಾ ಎಚ್ಚರಿಕೆಯನ್ನು ಉಂಟುಮಾಡುವ ಉದ್ದೇಶದಿಂದ ವರದಿ ಮಾಡಿ, ಅಥವಾ ರಾಜ್ಯದ ವಿರುದ್ಧ ಅಥವಾ ಸಾರ್ವಜನಿಕ ನೆಮ್ಮದಿಯ ವಿರುದ್ಧ ಅಪರಾಧ ಮಾಡಲು ಜನರನ್ನು ಪ್ರೇರೇಪಿಸುವುದು) ಮತ್ತು 505 (2) (ವರ್ಗಗಳ ನಡುವೆ ದ್ವೇಷ, ದ್ವೇಷ ಅಥವಾ ಕೆಟ್ಟ ಇಚ್ಛೆಯನ್ನು ಸೃಷ್ಟಿಸುವ ಅಥವಾ ಉತ್ತೇಜಿಸುವ ಹೇಳಿಕೆಗಳು), ಭಾರತೀಯ ದಂಡ ಸಂಹಿತೆ ಅಡಿ ಪ್ರಕರಣ ದಾಖಲಿಸಲಾಗಿದೆ.

ಗಧ್ವಿ ಅವರ ವಿರುದ್ಧ ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿಯೂ ಪ್ರಕರಣ ದಾಖಲಿಸಲಾಗಿದೆ ಎಂದು ಸಹಾಯಕ ಪೊಲೀಸ್ ಆಯುಕ್ತ (ಸೈಬರ್ ಕ್ರೈಂ) ಜೆಎಂ ಯಾದವ್ ಪಿಟಿಐಗೆ ತಿಳಿಸಿದ್ದಾರೆ.

ಈ ಬಗ್ಗೆ ಆಮ್ ಆದ್ಮಿ ಪಕ್ಷವು ಪ್ರತಿಕ್ರಿಯಿಸಿದ್ದು, ”ಗಧ್ವಿ ವಿರುದ್ಧದ ಎಫ್‌ಐಆರ್ ದಾಖಲಿಸುವ ಮೂಲಕ ಆಡಳಿತಾರೂಢ ಬಿಜೆಪಿಯು ಪ್ರತಿಪಕ್ಷಗಳ ಮೇಲೆ ಮತ್ತೊಂದು ದಾಳಿ ನಡೆಸಿದೆ” ಎಂದು ಹೇಳಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...